ಜೀವ ಉಳಿಸಿದ ಲೈಫ್‌ ಜಾಕೆಟ್


Team Udayavani, Aug 13, 2019, 12:52 PM IST

kopala-tdy-2

ಕೊಪ್ಪಳ: ತುಂಗಭದ್ರಾ ನದಿಯಲ್ಲಿ ಸಿಲುಕಿದ್ದ ರಕ್ಷಣಾ ತಂಡದ ಗೌತಮ್‌ ಅವರನ್ನು ಹೆಲಿಕಾಪ್ಟರ್‌ ಮೂಲಕ ರಕ್ಷಿಸಲಾಯಿತು.

ಕೊಪ್ಪಳ: ವಿರುಪಾಪೂರಗಡ್ಡೆಯಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಜನರ ರಕ್ಷಣೆಗೆ ಮುಂದಾಗಿದ್ದ ರಕ್ಷಣಾ ತಂಡವನ್ನು ಅವರು ಧರಿಸಿದ್ದ ಕವಚವೇ ಕಾಪಾಡಿ ಅವರಿಗೆ ಮರು ಜನ್ಮ ನೀಡಿದೆ. ಎಂತಹ ಸಂದಿಗ್ಧ ಸ್ಥಿತಿಯಲ್ಲೂ ನಮ್ಮ ಜೀವ ಪಣಕ್ಕಿಟ್ಟು ಜನರ ಜೀವ ಕಾಪಾಡುವುದು ನಮ್ಮ ಮುಖ್ಯ ಉದ್ದೇಶವಾಗಿತ್ತು ಎಂದು ರಕ್ಷಣಾ ತಂಡದಲ್ಲಿ ನೀರುಪಾಲಾಗಿ ರಕ್ಷಣೆಯಾದ ಅಗ್ನಿ ಶಾಮಕ ದಳದ ಸಿಬ್ಬಂದಿ ಸೂಗನಗೌಡ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎನ್‌ಡಿಆರ್‌ಎಫ್‌ನ ಒಂದು ತಂಡ ಮೊದಲೇ ಜನರ ರಕ್ಷಣಾ ಕಾರ್ಯದಲ್ಲಿ ತೊಡಗಿತ್ತು. ಆದರೆ ವಿರುಪಾಪೂರಗಡ್ಡೆಯಲ್ಲಿ ತುಂಬಾ ಜನರಿದ್ದಾರೆ. ವಿದೇಶಿಗರು, ಪ್ರವಾಸಿಗರು ಹೆಚ್ಚಿದ್ದಾರೆ ಎಂಬ ಮಾಹಿತಿ ನಮ್ಮ ತಂಡಕ್ಕೆ ಲಭ್ಯವಾದ ಹಿನ್ನೆಲೆಯಲ್ಲಿ ನಾನು ಸೇರಿದಂತೆ ಐವರು ಮತ್ತೂಂದು ಬೋಟ್‌ನಲ್ಲಿ ಗಡ್ಡೆಗೆ ತೆರಳು ಸಿದ್ಧರಾದೆವು. ನಾವೆಲ್ಲರೂ ರಕ್ಷಣಾ ಕವಚ ಕಟ್ಟಿಕೊಂಡೇ ಬೋಟ್ ಮೂಲಕ ತೆರಳಿದೆವು. ನೀರಿನ ಸೆಳೆತ ದಾಟುವ ವೇಳೆ ನೀರಿನ ರಭಸ ಹೆಚ್ಚಾಗಿದ್ದರಿಂದ ನಮ್ಮ ಬೋಟ್ ಹೊಯ್ದಾಡ ತೊಡಗಿತು. ಆದರೂ ಬೋಟ್ ಮುಂದೆ ನಡೆಸುತ್ತಿದ್ದಂತೆ ಅಲೆಗಳು ಹೆಚ್ಚಾಗಿದ್ದರಿಂದ ಏಕಾ ಏಕಿ ನಮ್ಮ ಬೋಟ್ ನಿಯಂತ್ರಣ ತಪ್ಪಿತು. ಇದರಿಂದ ಅದರೊಳಗಿದ್ದ ಐವರು ನೀರುಪಾಲಾದೆವು ಎಂದು ನೀರಿನಲ್ಲಿ ಮುಳುಗಿದ ಪರಿಸ್ಥಿತಿಯನ್ನು ವಿವರಿಸಿದರು.

ನೀರಿನ ರಭಸ ಜೋರಾಗಿದ್ದರಿಂದ ಐವರು ನೀರಿನಲ್ಲಿ ವೇಗವಾಗಿ ತೇಲುತ್ತಾ ಸಾಗಿದೆವು. ನಾನು ಸಮೀಪದಲ್ಲೇ ಗಿಡದ ಟೊಂಗೆ ಹಿಡಿದು ನಿಂತಿದ್ದೆ. ನನ್ನ ಹಿಂದಿನ ಮತ್ತೋರ್ವ ಸದಸ್ಯ ಟೊಂಗೆ ಸಿಗದೇ ನನ್ನ ಕಾಲು ಹಿಡಿದು ನಿಂತಿದ್ದನು. ಆದರೆ ಟೊಂಗೆ ಸಣ್ಣದ್ದಾಗಿದ್ದರಿಂದ ನನ್ನ ಕೈ ಜಾರಿತು. ಇಬ್ಬರೂ ಮತ್ತೆ ನೀರಿನ ಸೆಳೆತದಲ್ಲಿ ತೇಲಿ ಹೋದೆವು. ಮುಂದೆ ಹೋದಂತೆಲ್ಲ ನನಗೆ ಮತ್ತೂಂದು ಗಿಡದ ಟೊಂಗೆ ಸಿಕ್ಕಿತು. ಅದರ ಆಸರೆಯಲ್ಲೇ ನಾನು ಹಿಡಿದು ನಿಂತಿದ್ದೆ. 20 ನಿಮಿಷಗಳ ಕಾಲ ಅಲ್ಲೆ ನಿಂತಿದ್ದೆನು. ಹರಿಗೋಲಿನ ಅಂಬಿಗ ನನ್ನ ಬಳಿ ಬಂದು ರಕ್ಷಣೆ ಮಾಡಿದ ನಿಜಕ್ಕೂ ನಮ್ಮ ಜೀವ ಉಳಿದಿದೆಯಂದರೆ ನಮ್ಮ ದೇಹದ ರಕ್ಷಾ ಕವಚವೇ ಉಳಿಸಿದೆ. ಇಲ್ಲದಿದ್ದರೆ ನಮ್ಮ ರಕ್ಷಣೆಯಾಗುತ್ತಿರಲಿಲ್ಲ ಎಂದರು.

ನಮಗೆ ಜನರ ರಕ್ಷಣೆಯೇ ಮುಖ್ಯ ಉದ್ದೇಶವಾಗಿತ್ತು. ಎಂತಹ ಅಪಾಯದ ಪರಿಸ್ಥಿತಿಯಲ್ಲೂ ನಾವು ಮುನ್ನುಗ್ಗುವ ಪರಿಸ್ಥಿತಿಯಲ್ಲಿದ್ದೆವು. ನೀರಿನ ರಭಸ ನಮಗೆ ಅಡ್ಡಿಯಾಗುತ್ತಿತ್ತು. ಜೊತೆಗೆ ನಮ್ಮ ಬೋಟಿಗೆ ಕಲ್ಲು ಬಡಿದಿದ್ದರಿಂದ ನಿಯಂತ್ರಣ ತಪ್ಪಿ ಇಷ್ಟೆಲ್ಲ ತೊಂದರೆಯಾಯಿತು. ಆದರೂ ನಮ್ಮ ಇತರೆ ಸದಸ್ಯರು ಬದುಕುಳಿದಿದ್ದಾರೆ. ಯಾವುದೇ ಪ್ರಾಣಾಯ ಸಂಭವಿಸಿಲ್ಲ ಎಂದು ನೆಮ್ಮದಿಯ ನಿಟ್ಟುಸಿರು ಬಿಟ್ಟರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.