ಲಿಂಗಾಯತಕ್ಕೆ ಅಲ್ಪಸಂಖ್ಯಾತ ಸ್ಥಾನಮಾನ ಸಿಗಲಿ: ರಾಯರಡ್ಡಿ
Team Udayavani, Aug 16, 2017, 8:05 AM IST
ಕೊಪ್ಪಳ: ಲಿಂಗಾಯತಕ್ಕೆ ಪ್ರತ್ಯೇಕ ಧರ್ಮದ ಸ್ಥಾನಮಾನ ಕಲ್ಪಿಸುವ ಕುರಿತು ಸಂವಿಧಾನದಲ್ಲಿ ಅವಕಾಶವಿಲ್ಲ. ಹಾಗಾಗಿ ಅಲ್ಪಸಂಖ್ಯಾತರ ಸ್ಥಾನ-ಮಾನ ಕಲ್ಪಿಸುವುದು ಸೂಕ್ತ. ಲಿಂಗಾಯತ ಪ್ರತ್ಯೇಕ ಧರ್ಮ ಆಗಬೇಕೆನ್ನುವ ನಿಲುವು ನನ್ನದೂ
ಆಗಿದೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಿಂಗಾಯತಕ್ಕೆ ಪ್ರತ್ಯೇಕ ಧರ್ಮ ಕಲ್ಪಿಸಲು ಆಗ್ರಹಿಸಿ ನೂರಾರು ವರ್ಷಗಳಿಂದ ಹೋರಾಟ ನಡೆಯುತ್ತಿದೆ. ಆದರೆ, ಇತ್ತೀಚೆಗೆ ಲಿಂಗಾಯತ-ವೀರಶೈವದ ನಡುವೆ ಸಮಾಜದಲ್ಲಿ ಗೊಂದಲ, ಭಿನ್ನಾಭಿಪ್ರಾಯ ವ್ಯಕ್ತವಾಗುತ್ತಿವೆ. ವಿರಕ್ತ ಮಠ- ಪಂಚಪೀಠಗಳು ತಮ್ಮದೇ ನಿಲವು ವ್ಯಕ್ತಪಡಿಸಿವೆ. ಲಿಂಗಾಯತರು ಹಿಂದೂ ಸಮುದಾಯಕ್ಕಿಂತಲೂ ಭಿನ್ನರು. ವೀರಶೈವ ಹಾಗೂ ಲಿಂಗಾಯತ ಒಂದು ನಿಲುವು ಪ್ರಕಟಿಸಬೇಕು ಎಂದರು. ಯಾರ ವಿರುದಟಛಿವೂ ಮಾತನಾಡಬೇಡಿ ಎಂದು ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪನವರಿಗೆ ಮನವಿ ಮಾಡಿದ್ದೇನೆ. ಆ.23ರಂದು ಬೆಂಗಳೂರಿನಲ್ಲಿ ಕರೆದಿರುವ ಲಿಂಗಾಯತ -ವೀರಶೈವ ಸಮುದಾಯದ ಮುಖಂಡರು ಹಾಗೂ ಸ್ವಾಮೀಜಿಗಳ ಸಭೆಯಲ್ಲಿ ಒಂದು ನಿರ್ಣಯಕ್ಕೆ ಬರಲು ಕೋರಿದ್ದೇನೆ ಎಂದರು.
ಮೋಡ ಬಿತ್ತನೆ: ಆ.18 ರಿಂದ ಗದಗ ಜಿಲ್ಲೆಯಿಂದ ಕೊಪ್ಪಳ ಜಿಲ್ಲೆ ಮಾರ್ಗ ವಾಗಿ ಮೋಡ ಬಿತ್ತನೆ ಪ್ರಕ್ರಿಯೆ ಆರಂಭವಾಗಲಿದೆ. ಸಚಿವ ಎಚ್.ಕೆ. ಪಾಟೀಲರು 3 ಕೇಂದ್ರಗಳ ಮೂಲಕ ಮೋಡ ಬಿತ್ತನೆಯ ಯೋಜನೆ ರೂಪಿಸಿದ್ದಾರೆ. ವೈಜ್ಞಾನಿಕವಾಗಿಯೇ ಮೋಡ ಬಿತ್ತನೆ ಪ್ರಕ್ರಿಯೆ ನಡೆಯಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…