ದೀಪಾವಳಿ ಹಬ್ಬದಲ್ಲಿ ಟನ್‌ಗಟ್ಟಲೇ ತ್ಯಾಜ್ಯ ಸಂಗ್ರಹ


Team Udayavani, Nov 9, 2018, 4:08 PM IST

9-november-18.gif

ಕೊಪ್ಪಳ: ಎರಡು ದಿನದ ಹಬ್ಬಕ್ಕಾಗಿ ನಗರದಲ್ಲಿ ಟನ್‌ಗಟ್ಟಲೇ ತ್ಯಾಜ್ಯ ಸಂಗ್ರಹವಾಗಿದೆ. ಬಾಳೆದಿಂಡು, ಅಡಕೆ ಸೇರಿದಂತೆ ಚಂಡುಹೂವುಗಳನ್ನು ವ್ಯಾಪಾರಿಗಳು ಎಲ್ಲೆಂದರಲ್ಲಿ ಬಿಸಾಡಿ ತೆರಳಿದ್ದು, ಗುರುವಾರ ನಗರಸಭೆಯಿಂದ ತ್ಯಾಜ್ಯ ವಿಲೇವಾರಿಗೆ ಹರಸಾಹಸ ಮಾಡಬೇಕಾಯಿತು. ಇಂತಹ ಸಂದರ್ಭದಲ್ಲಿ ನಗರಸಭೆಯಿಂದ ವ್ಯಾಪಾರಿಗಳಿಗೆ ಖಡಕ್‌ ಸೂಚನೆ ನೀಡುವುದು ಅವಶ್ಯವಾಗಿದೆ.

ಹೌದು. ಕೊಪ್ಪಳವನ್ನು ಸುಂದರ ನಗರವನ್ನು ಮಾಡುತ್ತೇವೆ ಎನ್ನುವ ಮಾತಿನ ಜೊತೆಗೆ ಜನರಲ್ಲಿ ಜಾಗೃತಿ ಮೂಡಿಸುವುದು ಅವಶ್ಯವಾಗಿದೆ. ದೀಪಾವಳಿ ಹಬ್ಬ ಕೇವಲ ಎರಡು ದಿನ ಮಾತ್ರ ನಡೆದಿದೆ. ಆದರೆ ಎಲ್ಲಿ ನೋಡಿದರಲ್ಲಿ ಕಸದ ರಾಶಿಯೇ ಕಣ್ಣಿಗೆ ಗೋಚರವಾಗುತ್ತಿದೆ. ಬಾಳೆ ಎಲೆ, ಬಾಳೆ ದಿಂಡು, ಹೂವಿನ ಕೊಂಬೆ ಸೇರಿದಂತೆ ಪ್ಲಾಸ್ಟಿಕ್‌ ಹಾಳೆಗಳನ್ನು ಎಲ್ಲೆಂದರಲ್ಲಿ ಬಿಸಾಡಲಾಗಿದೆ. ಇದು ನಗರದ ಸೌಂಧರ್ಯವನ್ನೇ ಹಾಳು ಮಾಡಿದೆ.

ದೀಪಾವಳಿ ಪ್ರಯುಕ್ತ ವ್ಯಾಪಾರ ವಹಿವಾಹಿಟಿಗೆ ಬರುವ ವ್ಯಾಪಾರಿಗಳು ತಂದ ಮಾಲು ಸಕಾಲಕ್ಕೆ ವಹಿವಾಟು ನಡೆಯದ ಹಿನ್ನೆಲೆಯಲ್ಲಿ ವ್ಯಾಪಾರ ಮಾಡಿದ ಸ್ಥಳದಲ್ಲೇ ಬಿಟ್ಟು ತೆರಳುತ್ತಿದ್ದಾರೆ. ಇನ್ನೂ ಹಬ್ಬ ಆಚರಣೆ ಮಾಡುವ ಜನರು ಮನೆ, ಅಂಗಡಿ ಮುಂಗಟ್ಟಿ ಮುಂದಿಟ್ಟ ಬಾಳೆ ದಿಂಡು ಹಾಗೂ ಕಸವನ್ನು ಎಲ್ಲೆಂದರಲ್ಲಿ ಬಿಸಾಡುತ್ತಿರುವುದು ಬೆಳಕಿಗೆ ಬರುತ್ತಿದೆ.

ಕಾರ್ಮಿಕರಿಗೆ ಪುರುಸೊತ್ತಿಲ್ಲ: ಹಬ್ಬ ಆರಂಭವಾದ ದಿನದಿಂದ ನಗರಸಭೆಗೆ ತಲೆ ಬಿಸಿ ಶುರುವಾಗಿದೆ. ದಿನವೂ ಎಲ್ಲೆಂದರಲ್ಲಿ ಬಿಸಾಡಿದ ಕಸವನ್ನು ಮಿನಿ ಟಿಪ್ಪರ್‌ಗಳಲ್ಲಿ ಘನ ತ್ಯಾಜ್ಯ ಘಟಕಕ್ಕೆ ಸಾಗಾಟ ಮಾಡಲಾಗುತ್ತಿದೆ.

ಅದರಲ್ಲೂ ಜವಾಹರ ರಸ್ತೆ, ಮಾರ್ಕೆಟ್‌, ಸಾರ್ವಜನಿಕ ಮೈದಾನ, ಕೇಂದ್ರಿಯ ಬಸ್‌ ನಿಲ್ದಾಣ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಜೆಸಿಬಿ ಮೂಲಕ ಕಸದ ವಿಲೇವಾರಿ ನಡೆದಿತ್ತು. ಕಾರ್ಮಿಕರಿಗೆ ಹಬ್ಬ ಮಾಡಲೂ ಪುರುಸೊತ್ತಿಲ್ಲದಂತಹ ಪರಿಸ್ಥಿತಿ ಎದುರಾಗಿತ್ತು.

ವ್ಯಾಪಾರಿಗಳಿಗೆ ಸೂಚನೆ ಅವಶ್ಯ: ಹಬ್ಬದಂತಹ ಸಂದರ್ಭದಲ್ಲಿ ನಗರಸಭೆಯು ವ್ಯಾಪಾರಿಗಳಿಗೆ, ವ್ಯಾಪಾರ ನಡೆಸುವ ಜನರಿಗೆ ಕಸ ಎಲ್ಲೆಂದರಲ್ಲಿ ಬಿಸಾಡುವ ಕುರಿತು ಜಾಗೃತಿ ಮೂಡಿಸುವುದು ಅವಶ್ಯವಾಗಿದೆ. ಅಲ್ಲದೇ, ಆಟೋ ಮೂಲಕ ಧ್ವನಿವರ್ಧಕದಲ್ಲಿ ಜಾಗೃತಿ ಮೂಡಿಸಿ ಕಸ ಎಲ್ಲೆಂದರಲ್ಲಿ ಬಿಸಾಡಿದರೆ ದಂಡದ ಬಗ್ಗೆ ಖಡಕ್‌ ಸೂಚನೆ ನೀಡುವುದು ಅವಶ್ಯವಾಗಿದೆ. ಆದರೆ ಈ ಬಾರಿ ಅಷ್ಟೊಂದು ಪ್ರಮಾಣದಲ್ಲಿ ನಗರಸಭೆ ತನ್ನ ಕೆಲಸ ಮಾಡಿಲ್ಲ. ಆದರೂ ಕಸ ವಿಲೇವಾರಿ ಪ್ರಕ್ರಿಯೆ ಮಾತ್ರ ನಡೆದಿತ್ತು.

ಟಾಪ್ ನ್ಯೂಸ್

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.