ಕೊಪ್ಪಳ ನಗರಸಭೆಯಲ್ಲಿ ಕುಣಿದ ಕುರುಡು ಕಾಂಚಾಣ?


Team Udayavani, Aug 31, 2018, 3:38 PM IST

31-agust-17.jpg

ಕೊಪ್ಪಳ: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಭರ್ಜರಿ ರಂಗೇರಿದ್ದು, ಮತದಾನಕ್ಕೆ ಕ್ಷಣಗಣನೆ ಶುರುವಾಗಿದೆ. ಅಭ್ಯರ್ಥಿಗಳ ಮಧ್ಯೆ ಕುರುಡು ಕಾಂಚಾಣ ಕುಣಿದಾಡುತ್ತಿದೆ ಎನ್ನುವ ಆಪಾದನೆ ಕೇಳಿ ಬಂದಿದೆ. ನಗರದ 26ನೇ ವಾರ್ಡ್‌ನ ಪಕ್ಷೇತರ ಅಭ್ಯರ್ಥಿ ಜನರನ್ನು ಗುಂಪು ಗುಂಪಾಗಿ ನಿಲ್ಲಿಸಿಕೊಂಡು ಗುಸುಗುಸು ಚರ್ಚೆ ನಡೆಸಿದ್ದು, ಕ್ಯಾಮರಾ, ಪೊಲೀಸರು ಕಣ್ಣಿಗೆ ಬೀಳುತ್ತಿದ್ದಂತೆ ದಿಕ್ಕಾಪಾಲಾಗಿ ಓಡಾಡಿದ ಪ್ರಸಂಗ ಗುರುವಾರ ನಡೆದಿದೆ.

ಸ್ಥಳೀಯ ಚುನಾವಣೆಗಳು ಮುಂದೆ ಲೋಕಸಭಾ ಚುನಾವಣೆಗೆ ತಳಪಾಯವಾಗಲಿವೆ ಎಂದು ಅರಿತ ಶಾಸಕ ಹಾಗೂ ಸಂಸದರು ಪ್ರತಿಷ್ಠೆಯನ್ನಾಗಿ ತಗೆದುಕೊಂಡಿದ್ದಾರೆ. ಅದರಲ್ಲೂ ಕೊಪ್ಪಳ ನಗರಸಭೆ ಕೈ ವಶ ಮಾಡಿಕೊಳ್ಳಬೇಕೆಂದು ಪಣ ತೊಟ್ಟಿದ್ದ ಶಾಸಕ ರಾಘವೇಂದ್ರ ಹಿಟ್ನಾಳ ವಾರ್ಡ್‌, ವಾರ್ಡ್‌ನಲ್ಲೂ ಸುತ್ತಾಟ ನಡೆಸಿ ಮತ ಕೇಳಿದ್ದರು. ಕೈ ಅಭಿವೃದ್ಧಿ ನೋಡಿ ಬೆಂಬಲಿಸಿ ಎಂದಿದ್ದರು. ಶಾಸಕರಾಗಿದ್ದೂ ನಗರಸಭೆಯಲ್ಲಿ ಅಧಿಕಾರ ಕಳೆದುಕೊಂಡರೆ ಆಡಳಿತ ಪಕ್ಷಕ್ಕೆ ಮುಜುಗುರ ಉಂಟಾಗಲಿದೆ ಎನ್ನುವುದನ್ನು ಅರಿತು ತಾವೇ ಚುನಾವಣೆಗೆ ನಿಂತವರಂತೆ ಭರ್ಜರಿ ಯೋಜನೆ ಹಾಕಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದಾರೆ.

ಇನ್ನೂ ಮುಂದೆ ಲೋಕಸಭೆ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಸಂಸದ ಸಂಗಣ್ಣ ಕರಡಿ ಅವರಂತೂ ಪ್ರತಿ ವಾರ್ಡ್‌ನಲ್ಲೂ ಸುತ್ತಾಟ ನಡೆಸಿ ಪಕ್ಕಾ ಅಭ್ಯರ್ಥಿಗಳನ್ನು ಹುಡುಕಿ ಕಣಕ್ಕಿಳಿಸಿದ್ದು ಬಿಜೆಪಿ ಬಾವುಟ ಹಾರಿಸಲೇಬೇಕೆಂದು ಶಪಥ ಮಾಡಿದ್ದಾರೆ. ಉಳಿದಂತೆ ಗಂಗಾವತಿ, ಕುಷ್ಟಗಿ ಹಾಗೂ ಯಲಬುರ್ಗಾದಲ್ಲೂ ಕೈ-ಕಮಲವೇ ನೇರ ಹಣಾಹಣಿಯಲ್ಲಿವೆ. ಈ ಎಲ್ಲ ಅಭ್ಯರ್ಥಿಗಳ ಸುತ್ತಲೂ ಮಧ್ಯವರ್ತಿಗಳ ಮೂಲಕ ಕುರುಡ ಕಾಂಚಾಣ ಕುಣಿಯುತ್ತಿದೆ ಎನ್ನುವ ಆಪಾದನೆ ಜೋರಾಗಿ ಕೇಳಿ ಬಂದಿದೆ. 

ಅದರಲ್ಲೂ ಕೊಪ್ಪಳದಲ್ಲಿ ಪಕ್ಷೇತರ ಅಭ್ಯರ್ಥಿ ಲಲಿತಾ ಮಾಲಗಿತ್ತಿ ಅವರು 26ನೇ ವಾರ್ಡ್‌ನಲ್ಲಿ ಮತದಾರರನ್ನು ಸೆಳೆಯಲು ಗುರುವಾರ ನಾನಾ ಪ್ರಯತ್ನ ನಡೆಸಿದ್ದಾರೆ ಎನ್ನುವ ಮಾಹಿತಿ ದೊರೆತ ಬೆನ್ನಲ್ಲೇ ಪೊಲೀಸರು ದಿಢೀರ್‌ ಭೇಟಿ ನೀಡಿದರು. ಜೊತೆಗೆ ಮಾಧ್ಯಮಗಳ ಕಣ್ಣು ಅತ್ತ ಬೀಳುತ್ತಿದ್ದಂತೆ ವಾಹನದಲ್ಲಿ ಅಭ್ಯರ್ಥಿಗಳ ಬೆಂಬಲಿಗರು ಪಲಾಯನ ಮಾಡಿದರು. ಇನ್ನೂ ಮಹಿಳೆಯರ ಹೆಸರು ಪಟ್ಟಿ ಮಾಡುತ್ತಿದ್ದು ಕ್ಯಾಮರಾದಲ್ಲಿ ಸೆರೆಯಾಯಿತು. ಅಲ್ಲದೇ, ಕ್ಯಾಮರಾ ಕಂಡ ತಕ್ಷಣ ಟಾಟಾ ಏಸ್‌ ವಾಹನ ಏರಿ ಕಾಲ್ಕಿತ್ತರು.

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅಭ್ಯರ್ಥಿಗಳು ಮಕ್ಕಳನ್ನು ಬಳಕೆ ಮಾಡಿಕೊಂಡು ಪ್ರಚಾರ ನಡೆಸಿದ್ದರೂ ಚುನಾವಣಾ ವೀಕ್ಷಕರು, ಅಧಿಕಾರಿಗಳು ಜಾಣ ಕುರುಡುತನ ಪ್ರದರ್ಶಿಸಿದರು. ಕೆಲ ವಾರ್ಡ್‌ನಲ್ಲಿ ಮಾತ್ರ ನಿಗಾ ವಹಿಸಿದ್ದ ಅಧಿಕಾರಿಗಳ ತಂಡ ಬೆರಳೆಣಿಕೆಯಷ್ಟು ಪ್ರಕರಣ ದಾಖಲಿಸಿ ಜಾರಿಕೊಂಡಿದ್ದು ಕಂಡು ಬಂದಿತು.

ಟಾಪ್ ನ್ಯೂಸ್

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.