ಮಾವು ಖರೀದಿಗೆ ಮುಗಿಬಿದ್ದ ಜನ
Team Udayavani, May 9, 2019, 3:16 PM IST
ಕೊಪ್ಪಳ: ನಗರದ ತೋಟಗಾರಿಕೆ ಇಲಾಖೆಯ ಆವರಣದಲ್ಲಿ ಬುಧವಾರ ನಡೆದ ಮಾವುಗಳ ಪ್ರದರ್ಶನ ಹಾಗೂ ಮಾರಾಟ ಮೇಳಕ್ಕೆ ಮೊದಲ ದಿನವೇ ಉತ್ತಮ ಸ್ಪಂದನೆ ದೊರೆಯಿತು. ನೈಸರ್ಗಿಕವಾಗಿ ಮಾಗಿದ ಹಣ್ಣುಗಳನ್ನು ರೈತನಿಂದ ನೇರವಾಗಿ ಗ್ರಾಹಕನಿಗೆ ಎಟುಕುವಂತೆ ಮಾಡಿದ್ದು, ಮೇಳಕ್ಕೆ ಜಿಲ್ಲಾಧಿಕಾರಿ ಸುನೀಲ್ ಕುಮಾರ ಮೇಳಕ್ಕೆ ಚಾಲನೆ ನೀಡಿದರು.
ಮೂರು ವರ್ಷಗಳಿಂದ ತೋಟಗಾರಿಕೆ ಇಲಾಖೆಯು ವಿವಿಧ ಮೇಳ ಆಯೋಜನೆ ಮಾಡುವ ಮೂಲಕ ರೈತ ಹಾಗೂ ಗ್ರಾಹಕರನ್ನು ಆಕರ್ಷಣೆ ಮಾಡಿ ಮಾರುಕಟ್ಟೆಯ ವ್ಯವಸ್ಥೆ ಕಲ್ಪಿಸಲು ಪ್ರಯತ್ನಿಸುತ್ತಿದೆ. ಹಣ್ಣುಗಳ ರಾಜ ಎಂದೇ ಕರೆಯಲ್ಪಡುವ ಮಾವಿನ ಹಣ್ಣಿಗಳ ಸೀಜನ್ ಈಗಾಗಲೇ ಶುರುವಾಗಿದ್ದು, ಜಿಲ್ಲೆಯ ಗ್ರಾಹಕರಿಗೆ ಉತ್ತಮ ಗುಣಮಟ್ಟದ ಮತ್ತು ನೈಸರ್ಗಿಕವಾಗಿ ಮಾಗಿಸಿದ ಹಣ್ಣುಗಳನ್ನು ಯೋಗ್ಯ ಬೆಲೆಯಲ್ಲಿ ಒದಗಿಸುವ ನಿಟ್ಟಿನಲ್ಲಿ ತೋಟಗಾರಿಕೆ ಇಲಾಖೆ ಮಾವು ಮೇಳವನ್ನು ಆಯೋಜಿಸಿದೆ. ಮೇಳದಲ್ಲಿ ವಿವಿಧ ತಳಿಗಳ ಮಾವಿನ ಹಣ್ಣುಗಳು ಎಲ್ಲರ ಮನಸ್ಸನ್ನು ಆಕರ್ಷಿಸುತ್ತಿವೆ. ರಸಭರಿತ, ಸಿಹಿ-ಸಿಹಿಯಾದ ಮಾವಿನ ಹಣ್ಣುಗಳು ಮಾವು ಪ್ರೀಯರಿಗೆ ಕಡಿಮೆ ದರದಲ್ಲಿ ದೊರೆಯುತ್ತಿವೆ.
ಯಾವ ತಳಿಯ ಹಣ್ಣುಗಳಿವೆ?: ಮೇಳದಲ್ಲಿ ಕೊಪ್ಪಳ ಜಿಲ್ಲೆಯಲ್ಲಿಯೇ ಬೆಳೆಯುವ ತಳಿಗಳಾದ ಬೇನೆಷಾನ್, ಕೇಸರ್, ದಶಹರಿ, ಆಫೂಸ್, ಮಲ್ಲಿಕಾ, ರಸಪುರಿ, ಸುವರ್ಣರೇಖ, ಇಮಾಮ್ ಪಸಂದ್ ಇದಲ್ಲದೇ ಮುಂತಾದ ತಳಿಗಳ ಹಣ್ಣುಗಳು ಲಭ್ಯ ಇವೆ. ಒಂದೊಂದು ತಳಿಯ ಹಣ್ಣುಗಳಿಗೆ ಒಂದೊಂದು ಬೆಲೆ ನಿಗದಿ ಮಾಡಿದ್ದು, ರೈತ ಹಾಗೂ ಗ್ರಾಹಕನಿಗೆ ಯಾವುದೇ ರೀತಿಯ ಹೊರೆಯಾಗದಂತೆ ಇಲಾಖೆಯು ನಿಗಾ ವಹಿಸಿದೆ. 1 ಕೆಜಿ 50 ರಿಂದ 70 ರೂ. ವರೆಗೆ ಮಾವಿನ ಹಣ್ಣು ದೊರೆಯುತ್ತಿವೆ.
ಸಂಸ್ಕರಿಸಿದ ಚಟ್ನಿಯೂ ಮೇಳದಲ್ಲಿ ಲಭ್ಯ: ಮಾವಿನ ಹಣ್ಣುಗಳ ಜೊತೆ ಮಾವಿನ ಸಂಸ್ಕರಿಸಿದ ಚಟ್ನಿ, ಉಪ್ಪಿನಕಾಯಿ, ಮಾವಿನ ರಸ, ಜಾಮ್ ಹಾಗೂ ಇತರೆ ಉತ್ಪನ್ನಗಳು ಮೇಳದಲ್ಲಿ ಗ್ರಾಹಕರಿಗೆ ಸಿಗಲಿವೆ. ಈ ಬಾರಿ ಮಾವು ಮೇಳದಲ್ಲಿ ಮಾವು ಬೆಳೆದ ರೈತ ಮಹಿಳೆಯರು ಸಹ ಭಾಗಿಯಾಗಿದ್ದಾರೆ.
ಮೇಳದಲ್ಲಿ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್, ಎಸ್ಪಿ ರೇಣುಕಾ ಕೆ. ಸುಕುಮಾರ್, ಜಿಪಂ ಸಿಇಒ ಆರ್.ಎಸ್. ಪೆದ್ದಪ್ಪಯ್ಯ ಅವರು ಪಾಲ್ಗೊಂಡು ಮಾವಿನ ವಿವಿಧ ಬಗೆಯ ಹಣ್ಣುಗಳು ಹಾಗೂ ಅವುಗಳ ಗುಣಮಟ್ಟವನ್ನು ಪರೀಕ್ಷಿಸಿ, ಹಣ್ಣುಗಳ ರುಚಿ ಸವಿದರು. ತೋಟಗಾರಿಕೆ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavati: ಜೈ ಶ್ರೀರಾಮ್ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
MUST WATCH
ಹೊಸ ಸೇರ್ಪಡೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!