ಗಂಗಾವತಿ : ಮರಂ ಅಕ್ರಮ ಸಾಗಾಣಿಕೆ; ಮೂರು ಟಿಪ್ಪರ್ ವಶಕ್ಕೆ
Team Udayavani, Jun 9, 2021, 6:36 PM IST
ಗಂಗಾವತಿ: ಮರಂ ಮಣ್ಣನ್ನು ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದ ಮೂರು ಟಿಪ್ಪರ್ ಗಳನ್ನು ಕಂದಾಯ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದ ಘಟನೆ ತಾಲೂಕಿನ ಜಂಗಮರ ಕಲ್ಗುಡಿ ಗ್ರಾಮದ ಬೈಪಾಸ್ ರಸ್ತೆಯಲ್ಲಿ ಬುಧವಾರ ಮಧ್ಯಾನ್ಹ ಜರುಗಿದೆ.
ರಸ್ತೆ ನಿರ್ಮಾಣ ಕಾರ್ಯಕ್ಕೆ ಹಣವಾಳ ಗಾಂಧಿನಗರದ ಬಳಿಯ ಸರಕಾರಿ ಜಾಗದಲ್ಲಿ ಗಣಿಭೂವಿಜ್ಞಾನ ಇಲಾಖೆಯ ಪರವಾನಿಗೆ ಇಲ್ಲದೇ ಸರಕಾರಕ್ಕೆ ರಾಯಲ್ಟಿ ಪಾವತಿಸದೇ ಇದುವರೆಗೂ ಲಕ್ಷಾಂತರ ಮೌಲ್ಯದ ಮರಂ ಮಣ್ಣಿನ್ನು ಹಣವಾಳ ಗ್ರಾಮದಿಂದ ಹೊಸಳ್ಳಿ ಗ್ರಾಮದ ವರೆಗೆ ರಸ್ತೆ ನಿರ್ಮಾಣ ಕಾರ್ಯಕ್ಕೆ ಗುತ್ತಿಗೆದಾರರು ಸಾಗಾಣಿಕೆ ಮಾಡಿರುವ ಆಪಾದನೆ ಇದ್ದು ಜಂಗಮರಕಲ್ಗುಡಿ ಗ್ರಾಮದಲ್ಲಿ ನಡೆದಿರುವ ಕಾಮಗಾರಿ ಮೂರು ಟಿಪ್ಪರ್ ಗಳಲ್ಲಿ ಮರಂ ಮಣ್ಣನ್ನು ಅಕ್ರಮವಾಗಿ ಸಾಗಿಸುವ ಕುರಿತು ಮಾಹಿತಿ ಹಿನ್ನೆಲೆಯಲ್ಲಿ ಉಪ ತಹಸೀಲ್ದಾರ್ ಮಹೆಬೂಬ ಅಲಿ ಹಾಗೂ ಕಂದಾಯ ನಿರೀಕ್ಷಕ ಹನುಮಂತಪ್ಪ ಜಂಗಮರಕಲ್ಗುಡಿ ಗ್ರಾಮಕ್ಕೆ ತೆರಳಿ ಮರಂ ಸಾಗಾಣಿಕೆ ಪರವಾನಿಗೆ ಹಾಗೂ ರಾಯಲ್ಟಿ ಪಾವತಿ ರಸೀದಿ ಕೇಳಿದಾಗ ಮರಂ ಸಾಗಾಣಿಕೆ ಮಾಡುವವರು ಪರವಾನಿಗೆ ಇಲ್ಲದಿರುವ ಕುರಿತು ಮಾಹಿತಿ ನೀಡಿದ್ದಾರೆ.
ಮೇಲಾಧಿಕಾರಿಗಳ ಆದೇಶ ಮೇರೆಗೆ ಮೂರು ಟಿಪ್ಪರ್ ಮರಂ ಮಣ್ಣಿಗೆ ಸುಮಾರು1.50 ಲಕ್ಷ ರೂ.ದಂಡ ಕಟ್ಟಿಸಿಕೊಳ್ಳಲಾಗುತ್ತದೆ. ದಂಡ ಪಾವತಿಸದಿದ್ದರೆ ಮೂರು ಟಿಪ್ಪರ್ ಗಳನ್ನು ಗಣಿಭೂವಿಜ್ಞಾನಿಗಳ ಮೂಲಕ ಪೋಲಿಸ್ ಕೇಸ್ ಮಾಡಲಾಗುತ್ತದೆ ಎಂದು ಕಂದಾಯ ನಿರೀಕ್ಷಕ ಹನುಮಂತಪ್ಪ ಉದಯವಾಣಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ
Udupi: ಅನುಮತಿಯಿಲ್ಲದೆ ಪೋಸ್ಟರ್ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್
MUST WATCH
ಹೊಸ ಸೇರ್ಪಡೆ
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ