ಮಾವು ಉತ್ಪಾದನೆಯಲ್ಲಿ ಭಾರಿ ಕುಸಿತ


Team Udayavani, May 14, 2019, 2:55 PM IST

kopp-1

ಕೊಪ್ಪಳ: ಹಣ್ಣುಗಳ ರಾಜ ಮಾವಿನ ಹಣ್ಣಿನ ಹಂಗಾಮು ಆರಂಭವಾಗಿದೆ. ಆದರೆ ಜಿಲ್ಲೆಯಲ್ಲಿ ಕೆಲವು ವರ್ಷಗಳಿಂದೀಚೆಗೆ ಮಾವಿನ ಹಣ್ಣಿನ ಉತ್ಪಾದನೆಯಲ್ಲಿ ಭಾರಿ ಕುಸಿತ ಕಾಣುತ್ತಿದೆ. ಹವಾಮಾನ ವೈಪರೀತ್ಯ, ಗಾಳಿ, ರೋಗಭಾದೆ ಸೇರಿ ನಾನಾ ತೊಂದರೆಗಳು ಮಾವಿಗೆ ಕಾಡುತ್ತಿರುವುದರಿಂದ ಉತ್ಪಾದನೆಯಲ್ಲಿ ಇಳಿಮುಖವಾಗುತ್ತಿದೆ.

ಒಂದು ಕಾಲದಲ್ಲಿ ತೋಟಗಾರಿಕೆ ಬೆಳೆಗೆ ಹೆಸರಾಗಿದ್ದ ಕೊಪ್ಪಳ ಜಿಲ್ಲೆಯು ಇತ್ತೀನ ದಿನಗಳಲ್ಲಿ ಇರುವ ಬೆಳೆಗಳನ್ನೇ ಉಳಿಸಿಕೊಳ್ಳುವುದು ಕಷ್ಟವಾಗುತ್ತಿದೆ. ರೈತರು ಸಾಕಷ್ಟು ಶ್ರಮಿಸುತ್ತಿದ್ದರೂ ಉತ್ಪಾದನೆಯಲ್ಲಿ ಹೆಚ್ಚಳವಾಗುತ್ತಿಲ್ಲ. ಅದರಲ್ಲೂ ಹಣ್ಣುಗಳ ರಾಜ ಮಾವಿನ ಹಣ್ಣಿನ ಉತ್ಪಾದನೆ ತೀರಾ ಕುಸಿದಿದೆ. ಜಿಲ್ಲೆಯಲ್ಲಿ ಮಾವಿನ ಗಿಡಗಳ ನಾಟಿ, ಉತ್ಪಾದನೆಯ ಅಂಕಿ-ಅಂಶಗಳನ್ನು ಅವಲೋಕಿಸಿದರೆ ಮೂರು ವರ್ಷಗಳಲ್ಲಿ ಏರಿಕೆಗಿಂತ ಇಳಿಮುಖ ಕಂಡಿದೆ ಹೆಚ್ಚು.

ತೋಟಗಾರಿಕೆ ಇಲಾಖೆಯ ಲೆಕ್ಕಾಚಾರದ ಪ್ರಕಾರ, ಜಿಲ್ಲೆಯಲ್ಲಿ 2017-18ನೇ ಸಾಲಿನಲ್ಲಿ 2766 ಹೆಕ್ಟೇರ್‌ ಪ್ರದೇಶದಲ್ಲಿ 35,140 ಮೆಟ್ರಿಕ್‌ ಟನ್‌ ಮಾವು ಉತ್ಪಾದನೆಯಾಗಿದೆ. 2018-19ನೇ ಸಾಲಿನಲ್ಲಿ 2565 ಹೆಕ್ಟೇರ್‌ನಲ್ಲಿ ಮಾವು ಬೆಳೆಯಲಾಗಿದ್ದು, 31,562 ಮೆಟ್ರಿಕ್‌ನಷ್ಟು ಮಾವು ಉತ್ಪಾದನೆಯಾಗಿದೆ. ಇನ್ನೂ 2019-20ನೇ ಸಾಲಿನಲ್ಲಿ 3,000 ಹೆಕ್ಟೇರ್‌ನಲ್ಲಿ ಮಾವು ಬೆಳೆದಿದ್ದು, 10 ಸಾವಿರ ಮೆಟ್ರಿಕ್‌ ಟನ್‌ನಷ್ಟು ಮಾತ್ರ ಉತ್ಪಾದನೆಯಾಗಿದೆ. ಅಂದರೆ ವರ್ಷದಿಂದ ವರ್ಷಕ್ಕೆ ಮಾವಿನ ಗಿಡಗಳ ನಾಟಿ ಪ್ರದೇಶ ಹೆಚ್ಚುತ್ತಿದ್ದರೂ ಉತ್ಪಾದನೆಯಲ್ಲಿ ಇಳಿಮುಖ ಕಾಣುತ್ತಿದೆ.

ಉತ್ಪಾದನೆ ಏಕೆ ಇಳಿಮುಖ?: ಕೊಪ್ಪಳ ಜಿಲ್ಲೆ ಪದೇ ಪದೆ ಬರಕ್ಕೆ ತುತ್ತಾಗುತ್ತಿದೆ. ಮಾವು ದೀರ್ಘ‌ಕಾಲದ ಬೆಳೆಯಾದರೂ ರೈತರ ಜಮೀನಿನಲ್ಲಿ ಅಂತರ್ಜಲಮಟ್ಟ ಕುಸಿತ ಕಾಣುತ್ತಿದೆ. ಗಿಡಗಳಿಗೆ ಬೇಸಿಗೆಯ ವೇಳೆ ಸಕಾಲಕ್ಕೆ ನೀರು ಪೂರೈಕೆ ಮಾಡಲು ಕಷ್ಟ ಸಾಧ್ಯವಾಗುತ್ತಿದೆ. ಅದರಲ್ಲೂ ಹವಾಮಾನ ವೈಪರಿತ್ಯ ಜಿಲ್ಲೆಯಲ್ಲಿ ಕಾಡುತ್ತಿದೆ. ಒಂದೊಮ್ಮೆ ಅತ್ಯಧಿಕ ಬಿಸಿಲಿನ ತಾಪವಿರುತ್ತದೆ. ಇನ್ನೂ ಮೇ ತಿಂಗಳಲ್ಲಿ ಭಾರಿ ಪ್ರಮಾಣದಲ್ಲಿ ಗಾಳಿ ಬೀಸುತ್ತದೆ. ಇದರಿಂದ ಮಾವಿನ ಗಿಡದ ಟೊಂಗೆಗಳು ನೆಲ ಕಚ್ಚುತ್ತಿವೆ. ಜೊತೆಗೆ ಕಾಯಿಗಳು ಉದುರುತ್ತಿವೆ. ಮೊಗ್ಗು ಗಾಳಿಗೆ ಉದುರಿ ಇಳುವರಿ ಕುಂಠಿತವಾಗುತ್ತಿದೆ ಎನ್ನುವ ಮಾತು ಕೇಳಿ ಬರುತ್ತವೆ. ಇನ್ನೂ ರೋಗಗಳ ಬಾಧೆಯೂ ಕಾಡುತ್ತಿದ್ದು, ರೈತರು ಸಕಾಲಕ್ಕೆ ಔಷಧಿ ಸಿಂಪರಣೆ ಮಾಡುವುದು. ಆರೈಕೆ ಮಾಡುವಲ್ಲಿ ಶ್ರಮಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಕೇಸರ್‌, ದಶಹರಿ, ಬೆನೆಶಾನ್‌, ಆಫೂಸ್‌, ಸರ್ವರೇಖಾ ಪ್ರಮುಖವಾಗಿ ಬೆಳೆಯುವ ಮಾವಿನ ತಳಿಗಳಾಗಿದ್ದು, ಇವುಗಳ ಉತ್ಪಾದನೆ ಈ ಬಾರಿ ಕುಸಿತ ಕಂಡಿದೆ. ಮಳೆಯ ಕೊರತೆ ಜೊತೆಗೆ ಮಾವಿನ ಗಿಡಗಳು ಎರಡು ವರ್ಷಕ್ಕೊಮ್ಮೆ ಉತ್ಪಾದನೆಯನ್ನು ಕಡಿಮೆ ಮಾಡುತ್ತವೆ ಎನ್ನುತ್ತಿದ್ದಾರೆ ಅಧಿಕಾರಿಗಳು.

ಒಟ್ಟಿನಲ್ಲಿ ಮಾವಿನ ಹಣ್ಣುಗಳಿಗೆ ಮಾರುಕಟ್ಟೆಯಲ್ಲಿ ಬೇಡಿಕೆಯಿದ್ದರೂ, ಉತ್ಪಾದನೆ ಕುಸಿತದಿಂದ

ಅನ್ಯ ಜಿಲ್ಲೆ, ರಾಜ್ಯಗಳ ಮಾವು ಜಿಲ್ಲೆಗೆ ಲಗ್ಗೆಯಿಟ್ಟಿವೆ. ಮಾವಿನ ಉತ್ಪಾದನೆಯ ಹೆಚ್ಚಳಕ್ಕೆ ತೋಟಗಾರಿಕೆ ಇಲಾಖೆಯು ಪರ್ಯಾಯ ಯೋಜನೆಗಳನ್ನು ಹಾಕಿಕೊಳ್ಳಬೇಕಿದೆ. ರೋಗಬಾಧೆ ನಿಯಂತ್ರಣ ಮಾಡುವ ಜೊತೆಗೆ ಹವಾಮಾನ ವೈಪರಿತ್ಯದ ಮಧ್ಯೆಯೂ ಬೆಳೆ ರಕ್ಷಣೆಗೆ ದಾರಿಗಳನ್ನು ಹುಡುಕಬೇಕಿದೆ.

ಜಿಲ್ಲೆಯಲ್ಲಿ ಈ ವರ್ಷ ಮಾವಿನ ಉತ್ಪಾದನೆ ಇಳಿಮುಖವಾಗಿದೆ. ಮಳೆಯ ಕೊರತೆ, ಹವಾಮಾನ ವೈಪರಿತ್ಯ ಸೇರಿದಂತೆ ಅಧಿಕ ಗಾಳಿ ಬೀಸುವುದರಿಂದ ಗಿಡದಲ್ಲಿನ ಕಾಯಿಗಳು, ಹೂವು ಉದುರುತ್ತವೆ. ಹೀಗಾಗಿ ಉತ್ಪಾದನೆ ಕಡಿಮೆಯಾಗಿದೆ. ಇನ್ನೂ ಈ ವರ್ಷ ಆಫ್‌ ಸೀಜನ್‌ ಆಗಿದ್ದರಿಂದಲೂ ಉತ್ಪಾದನೆಯ ಕುಸಿತವಾಗಿದೆ.

•ಕೃಷ್ಣ ಉಕ್ಕುಂದ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ

ನಮ್ಮ ಜಮೀನಿನಲ್ಲಿ 260 ಮಾವಿನ ಗಿಡಗಳನ್ನು ನಾಟಿ ಮಾಡಿದ್ದೇನೆ. ಅದರಲ್ಲಿ ಈ ವರ್ಷ 60ಕ್ಕೂ ಹೆಚ್ಚು ಗಿಡಗಳು ಒಣಗಿ ಹೋಗಿವೆ. ಉಳಿದ ಗಿಡಗಳ ಉಳಿವಿಗೆ ಅಲ್ಪ ನೀರನ್ನೇ ಪೂರೈಕೆ ಮಾಡುತ್ತಿದ್ದೇವೆ. ಗಾಳಿಗೆ ಕಾಯಿ ಉದುರುತ್ತವೆ. ಕೆಲವೊ ರೋಗಬಾಧೆಯಿಂದ ಒಣಗಿ ಹೋಗಿವೆ. ಇರುವ ಗಿಡಗಳನ್ನು ಉಳಿಸಿಕೊಳ್ಳುವುದೇ ಕಷ್ಟವಾಗಿದೆ.

•ಯಮನೂರಪ್ಪ ಕುರಿ, ಕಲ್ಲತಾವರಗೇರಾ ರೈತ

ಟಾಪ್ ನ್ಯೂಸ್

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿಗೆ ಹೆದರಿ,ಸೋನಿಯಾ,ಖರ್ಗೆ ಸೇರಿ ಹಲವು ಸಚಿವರು ಚುನಾವಣೆಗೆ ಸ್ಪರ್ಧಿಸುತ್ತಿಲ್ಲ: ಸೂಲಿಬೆಲೆ

ಮೋದಿಗೆ ಹೆದರಿ,ಸೋನಿಯಾ,ಖರ್ಗೆ ಸೇರಿ ಹಲವು ಸಚಿವರು ಚುನಾವಣೆಗೆ ಸ್ಪರ್ಧಿಸುತ್ತಿಲ್ಲ: ಸೂಲಿಬೆಲೆ

Karadi sanganna

BJP ಹೈಕಮಾಂಡ್ ವಿರುದ್ದ ಕೆರಳಿದ ಸಂಸದ ಸಂಗಣ್ಣ ಕರಡಿ

1-weeqwe

Koppal: ತುಂಗಭದ್ರಾ ಕಾಡಾ ಅಧ್ಯಕ್ಷರಾಗಿ ಹಸನ್‌ಸಾಬ್ ದೋಟಿಹಾಳ ನೇಮಕ

Koppala; Kuruba community insists on giving Lok Sabha ticket to Eshwarappa

Koppala; ಈಶ್ವರಪ್ಪಗೆ ಲೋಕಸಭಾ ಟಿಕೆಟ್ ನೀಡಲು ಕುರುಬ ಸಮಾಜದ ಒತ್ತಾಯ

6-koppala

ಆನೆಗೊಂದಿ ಉತ್ಸವ:ಉಳಿದ ಆಹಾರ ಪದಾರ್ಥ ತಿಂದು 30 ಕುರಿ-ಮೇಕೆ ಸಾವು; 180ಕ್ಕೂ ಹೆಚ್ಚು ಅಸ್ವಸ್ಥ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

6-mng

Nandini Brand: 50 ಐಸ್‌ ಕ್ರೀಂ ಮಾರುಕಟ್ಟೆಗೆ

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

5-mng

Mangaluru: ರೋಗಿಗಳಲ್ಲಿ ಭರವಸೆ ತುಂಬುವ ಕೆಲಸವಾಗಲಿ: ರೈ| ರೆ| ಡಾ| ಸಲ್ಡಾನ್ಹಾ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.