ರಸಗೊಬ್ಬರ ಕೊರತೆ: ನಕಲಿ ರಸಗೊಬ್ಬರ ಮಾರಾಟ ತಡೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
Team Udayavani, Jul 26, 2022, 3:10 PM IST
ಗಂಗಾವತಿ : ಮುಂಗಾರು ಹಂಗಾಮಿನ ಹಿನ್ನೆಲೆಯಲ್ಲಿ ಬಿತ್ತನೆ ಕಾರ್ಯ ಭರದಿಂದ ನಡೆಯುತ್ತಿದೆ ಈ ಮಧ್ಯೆ ರಸಗೊಬ್ಬರಗಳ ಕೊರತೆ ಮತ್ತು ನಕಲಿ ರಸಗೊಬ್ಬರ ಮಾರಾಟ ದಂಧೆ ವ್ಯಾಪಕವಾಗಿದೆ.
ಸರಕಾರ ಕೂಡಲೇ ಸಮರ್ಪಕ ರಸಗೊಬ್ಬರ ಪೂರೈಕೆ ಮಾಡಬೇಕು ರಸಗೊಬ್ಬರ ನಕಲಿ ದಂಧೆ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಕರ್ನಾಟಕ ಪ್ರಾಂತ ರೈತ ಸಂಘ ಮತ್ತು ಸಿಐಟಿಯು ಕಾರ್ಯಕರ್ತರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಕೃಷಿ ಇಲಾಖೆಯ ಕಾರ್ಯಾಲಯದ ಎದುರು ಧರಣಿ ಸತ್ಯಾಗ್ರಹ ನಡೆಸಿದರು .
ಈ ಸಂದರ್ಭದಲ್ಲಿ ಶಿವಣ್ಣ ಬೆಣಕಲ್ ಮತ್ತು ನಿರುಪಾದಿ ಬೆಣಕಲ್ ಮಾತನಾಡಿ, ಮಳೆಗಾಲ ಪ್ರಾರಂಭವಾಗಿ ಕೃಷಿ ಚಟುವಟಿಕೆಗಳು ಪ್ರಾರಂಭವಾಗಿವೆ ಉಳುಮೆ ಮತ್ತು ಭತ್ತನಾಟಿ ಮಾಡಿದ ರೈತರಿಗೆ ಸರಿಯಾಗಿ ಗೊಬ್ಬರ ಸಿಗುತ್ತಿಲ್ಲ ರಸಗೊಬ್ಬರ ಕಾಳಸಂತೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ರೈತರಿಗೆ ಮೋಸ ಮಾಡಿ ಲೂಟಿಮಾಡಲಾಗುತ್ತಿದೆ. ಮಾರುಕಟ್ಟೆನಲ್ಲಿ ಕಳಪೆ ಮಟ್ಟದ ಗೊಬ್ಬರ ಮಾರಾಟಮಾಡಲಾಗುತ್ತದೆ ಮತ್ತು ಅಕ್ರಮ ದಾಸ್ತಾನುದಾರರ ಗೋಡೌನ್ ಗಳಲ್ಲಿ ದಾಸ್ತಾನು ಮಾಡಿ ರೈತರಿಗೆ ಮೋಸ ಮಾಡುತ್ತಿದ್ದಾರೆ.
ಅಂತವರ ವಿರುದ್ಧ ಮೇಲೆ ಕ್ರಿಮಿನಲ್ ಪ್ರಕರಣ ಕೇಸ್ ದಾಖಲು ಮಾಡಬೇಕು. ಎಲ್ಲಾ ರೈತರಿಗೆ ಸಮಯಕ್ಕೆ ಸರಿಯಾಗಿ ರಸಗೊಬ್ಬರವನ್ನು ರೈತ ಸಂಪರ್ಕ ಕೇಂದ್ರಗಳಲ್ಲಿ ಮತ್ತು ಸಹಕಾರಿ ಕೃಷಿ ಪತ್ತಿನ ಸೋಸೈಟಿಗಳಿಗೆ ಪೂರೈಕೆ ಮಾಡಿ ರೈತರಿಗೆ ಅನುಕೂಲ ಮಾಡಿಕೊಡಬೇಕು. ಕಾಳಸಂತೆಕಾರರನ್ನು ಪತ್ತೆ ಮಾಡಿ, ಅಕ್ರಮ ಸಂಗ್ರಹ ಮುಟ್ಟುಗೋಲು ಹಾಕಿಕೊಂಡು ರೈತರಿಗೆ ಪೂರೈಕೆ ಮಾಡಬೇಕು .
ಕಳಪೆ ಅಕ್ರಮ ರಸಗೊಬ್ಬರ ಪೂರೈಕೆ ಮಾಡುವವರ ಮೇಲೆ ಕ್ರಮ ಜರುಗಿಸಬೇಕು.ಎಲ್ಲಾ ರೈತರಿಗೆ ರಸಾಯನಿಕ ರಸಗೊಬ್ಬರ ಸಿಗುವಂತೆ ವ್ಯವಸ್ಥೆ ಮಾಡಬೇಕು. ರೈತಸಂರ್ಪಕೇಂದ್ರ ಮತ್ತು ಸೊಸೈಟಿಗಳಿಗೆ ಹೆಚ್ಚಿನ ರಸಗೊಬ್ಬರ ಪೂರೈಕೆ ಮಾಡಿ ರೈತರ ನೆರವಿಗೆ ಸರಕಾರ ಬರಬೇಕು.ರಸಗೊಬ್ಬರ ದರಗಳನ್ನು ಕಡಿಮೆ ಮಾಡಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಎಮ್.ಬಸವರಾಜ, ಶಿವಣ್ಣ ಬೆಣಕಲ್, ಹುಸೇನಪ್ಪ ಕೆ. ಶ್ರೀನಿವಾಸ, ಮರಿನಾಗ ಡಗ್ಗಿ, ಮುತ್ತಣ್ಣ ದಾಸನಾಳ ಕೆ.ಪಿ.ಆರ್.ಎಸ್. ಬಾಳಪ್ಪ ಹುಲಿಹೈದರ, ನಿರುಪಾದಿ ಬೆಣಕಲ್ ‘ಕೃಷ್ಣಪ್ಪ, ಟಿ.ನಬಿಸಾಬ, ಹನುಮಂತ ಹೊಸ್ಕೇರಾ, ಮುಂತಾದವರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ
MUST WATCH
ಹೊಸ ಸೇರ್ಪಡೆ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್