ಕೈ ಕೊಟ್ಟು ಕಮಲಕ್ಕೆ ಜೈ ಎಂದವರ ಸದಸ್ಯತ್ವ ರದ್ದು


Team Udayavani, May 12, 2022, 3:00 PM IST

16

ಕುಷ್ಟಗಿ: ಕಾಂಗ್ರೆಸ್‌ ಪಕ್ಷದಿಂದ ಬಿಜೆಪಿಗೆ ಪಕ್ಷಾಂತರ ಮಾಡಿದ್ದ ಪುರಸಭೆಯ ಇಬ್ಬರು ಸದಸ್ಯರ ಸದಸ್ಯತ್ವ ಪಕ್ಷಾಂತರ ಕಾಯ್ದೆ ಅಡಿ ಅನರ್ಹಗೊಂಡಿದೆ. 23 ಸದಸ್ಯ ಬಲದ ಕುಷ್ಟಗಿ ಪುರಸಭೆಗೆ ನಡೆದಿದ್ದ ಚುನಾವಣೆಯಲ್ಲಿ ಕಾಂಗ್ರೆಸ್‌ 12, ಬಿಜೆಪಿ 8 ಹಾಗೂ ಇಬ್ಬರು ಪಕ್ಷೇತರರು ಹಾಗೂ ಓರ್ವ ಅಭ್ಯರ್ಥಿ ಅವಿರೋಧ ಆಯ್ಕೆಯಾಗಿದ್ದರು.

ಕಾಂಗ್ರೆಸ್‌ಗೆ ಅಧಿಕಾರ ಹಿಡಿಯುವ ಅರ್ಹತೆ ಇದ್ದರೂ ಕಾಂಗ್ರೆಸ್‌ನ ಇಬ್ಬರು ಸದಸ್ಯರಾದ 17ನೇ ವಾರ್ಡ್‌ ಸದಸ್ಯ ವೀರೇಶಗೌಡ ಬೆದವಟ್ಟಿ ಹಾಗೂ 3ನೇ ವಾರ್ಡ್‌ ಸದಸ್ಯೆ ಗೀತಾ ತುರಕಾಣಿ ಬಿಜೆಪಿಯನ್ನು ಬೆಂಬಲಿಸಿದ್ದರು.

ಈ ಬೆಳವಣಿಗೆಯಿಂದ ಬಿಜೆಪಿ ತನ್ನ 8 ಜನ ಸದಸ್ಯರು, ಇಬ್ಬರು ಪಕ್ಷೇತರರು ಹಾಗೂ ಅವಿರೋಧ ಆಯ್ಕೆಯಾಗಿರುವ ಒಬ್ಬ ಸದಸ್ಯ ಸೇರಿದಂತೆ ಮೂವರು ಹಾಗೂ ಇಬ್ಬರು ಕಾಂಗ್ರೆಸ್‌ ಬೆಂಬಲಿತರೊಂದಿಗೆ 13 ಸದಸ್ಯ ಬಲದೊಂದಿಗೆ ಗಂಗಾಧರಸ್ವಾಮಿ ಹಿರೇಮಠ ಪುರಸಭೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.

ಈ ವೇಳೆ ಕಾಂಗ್ರೆಸ್‌ ಪಕ್ಷದ ವಿಪ್‌ ಉಲ್ಲಂಘಿಸಿ, ಸ್ವ ಪಕ್ಷೀಯರಿಗೆ ಮುಖಭಂಗ ಮಾಡಿದ್ದ ಪಕ್ಷಾಂತರಿ ಸದಸ್ಯರ ವಿರುದ್ಧ 6ನೇ ವಾರ್ಡ್‌ ಸದಸ್ಯ ರಾಮಣ್ಣ ಬಿನ್ನಾಳ ಅವರು, ಜಿಲ್ಲಾಧಿಕಾರಿಗಳ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು.

ಈ ವಿಷಯವಾಗಿ ನಡೆದ ಸುದೀರ್ಘ‌ ವಿಚಾರಣೆ ಬಳಿಕ ಜಿಲ್ಲಾಧಿಕಾರಿ ವಿಕಾಸ್‌ ಕಿಶೋರ ಸುರಾಳ್ಕರ್‌ ಅವರು ಸದಸ್ಯರ ಸದಸ್ಯತ್ವದ ರದ್ದತಿಯ ಆದೇಶ ನೀಡಿದ್ದಾರೆ. ವೀರೇಗೌಡ ಬೆದವಟ್ಟಿ ಹಾಗೂ ಗೀತಾ ತುರಕಾಣಿ ಅವರ ಸದಸ್ಯತ್ವ ಅನರ್ಹಗೊಂಡಿದ್ದರಿಂದ ಸದ್ಯದ ಬಿಜೆಪಿ ಸದಸ್ಯ ಬಲ 11ಕ್ಕೆ ಕುಗ್ಗಿದಂತಾಗಿದೆ. ಹೀಗಾಗಿ ಕಾಂಗ್ರೆಸ್‌ ಸದಸ್ಯ ಬಲಕ್ಕಿಂತ ಬಿಜೆಪಿ 1 ಸ್ಥಾನದ ಅಲ್ಪ ಮುನ್ನಡೆ ಕಾಯ್ದುಕೊಂಡಿದ್ದು, ಸದ್ಯಕ್ಕೆ ಪುರಸಭೆ ಅಧ್ಯಕ್ಷ ಗಂಗಾಧರಸ್ವಾಮಿ ಹಿರೇಮಠ ಅವರ ಸ್ಥಾನ ಅಬಾದೀತವಾಗಿದೆ.

ಬಿಜೆಪಿ ಬೆಂಬಲಿಸಿದ ಕಾಂಗ್ರೆಸ್‌ ಸದಸ್ಯರ ಸದಸ್ಯತ್ವ ಅನರ್ಹತೆಯ ಜಿಲ್ಲಾಧಿಕಾರಿ ಆದೇಶ ಏಕಪಕ್ಷೀಯವಾಗಿದೆ ಎನ್ನುವುದು ನನ್ನ ಅನಿಸಿಕೆ. ಈಗಾಗಲೇ ಈ ವಿಚಾರವಾಗಿ ಆದೇಶ ನೀಡಿದ್ದು, ನಮ್ಮ ಮುಂದಿನ ನಡೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿ, ನಮಗೆ ಬೆಂಬಲಿಸಿದ ಇಬ್ಬರ ಸದಸ್ಯತ್ವಕ್ಕೆ ಧಕ್ಕೆ ಆಗದಂತೆ ನ್ಯಾಯಾಲಯದ ಮೂಲಕ ಹೋರಾಟ ಮಾಡಲಾಗುವುದು. -ಗಂಗಾಧರಸ್ವಾಮಿ ಹಿರೇಮಠ, ಅಧ್ಯಕ್ಷರು, ಪುರಸಭೆ ಕುಷ್ಟಗಿ

ಉಪ್ಪು ತಿಂದವರು ನೀರು ಕುಡಿಯಲೇಬೇಕು. ಕಾಂಗ್ರೆಸ್‌ ಪಕ್ಷದಿಂದ ಚುನಾಯಿತರಾಗಿ ಬಿಜೆಪಿ ಬೆಂಬಲಿಸಿದ ಇಬ್ಬರು ಸದಸ್ಯತ್ವ ಅನೂರ್ಜಿತಗೊಂಡಿರುವುದು ಪಕ್ಷಾಂತರ ಮಾಡುವವರಿಗೆ ಎಚ್ಚರಿಕೆ ಗಂಟೆಯಾಗಿದೆ. ಪಕ್ಷದಿಂದ ಬಿ ಫಾರ್ಮ್ ಪಡೆದು ಪಕ್ಷದ ಚಿಹ್ನೆಯಿಂದ ಚುನಾಯಿತರಾಗಿಯೂ ಪಕ್ಷದ ವಿರುದ್ಧ ನಡೆದುಕೊಳ್ಳುವವರಿಗೆ ತಕ್ಕ ಪಾಠವಾಗಿದೆ. ಇನ್ಮುಂದೆ ಯಾರೂ ಈ ರೀತಿ ಮಾಡಬಾರದು. -ದೇವೇಂದ್ರಪ್ಪ ಬಳೂಟಗಿ, ಅಧ್ಯಕ್ಷರು, ಬ್ಲಾಕ್‌ ಕಾಂಗ್ರೆಸ್‌ ಸಮಿತಿ

ಪಕ್ಷಾಂತರ ಮಾಡಿ ನಮ್ಮ ಪಕ್ಷವನ್ನು ಬೆಂಬಲಿಸಿದ ಇಬ್ಬರು ಸದಸ್ಯರ ವಿರುದ್ಧ ಜಿಲ್ಲಾಧಿಕಾರಿಗಳು ಅನರ್ಹ ಆದೇಶವನ್ನು ಹೈಕೋರ್ಟ್‌ ನಲ್ಲಿ ಪ್ರಶ್ನಿಸಲಾಗುವುದು. ಕಷ್ಟಕರ ಪರಿಸ್ಥಿತಿಯಲ್ಲಿ ಕಾಂಗ್ರೆಸ್‌ ಪಕ್ಷದ ಇಬ್ಬರು ಸದಸ್ಯರು ನಮ್ಮ ಪಕ್ಷವನ್ನು ಬೆಂಬಲಿಸಿ ಸಹಾಯ ಮಾಡಿದ್ದಾರೆ. ಅವರ ಸದಸ್ಯತ್ವಕ್ಕೆ ಚ್ಯುತಿ ಬರದಂತೆ ನ್ಯಾಯಲಯದಲ್ಲಿ ಹೋರಾಟ ನಡೆಸಲಾಗುವುದು. ನ್ಯಾಯಾಲಯದ ಮೇಲೆ ವಿಶ್ವಾಸವಿದೆ. –ಬಸವರಾಜ ಹಳ್ಳೂರು, ಅಧ್ಯಕ್ಷರು, ತಾಲೂಕು ಬಿಜೆಪಿ ಮಂಡಳ ಕುಷ್ಟಗಿ

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

crime (2)

Koppal: ಕಾಣೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.