ಬರಗಾಲದಲ್ಲೂ ಕ್ಷೀರಕ್ರಾಂತಿ

•ಹಾಲು ನಂಬಿ ಬರ ಮೆಟ್ಟಿನಿಂತ ರೈತರು•ಹಾಲು ಉತ್ಪಾದನೆ ಶೇ.13 ಹೆಚ್ಚಳ

Team Udayavani, May 10, 2019, 3:09 PM IST

kopala-tdy-04

ಕುಷ್ಟಗಿ: ಹೈನುಗಾರಿಕೆ ಬರಗಾಲದಲ್ಲೂ ರೈತರ ಕೈ ಹಿಡಿದಿದ್ದು, ಕುಷ್ಟಗಿ-ಯಲಬುರ್ಗಾ ತಾಲೂಕುಗಳ ಹಾಲು ಉತ್ಪಾದಕರ ಸಹಕಾರಿ ಸಂಘಗಳು ಗ್ರಾಮೀಣ ಭಾಗದ ರೈತರಿಗೆ ಲಾಭದಾಯಕ ಹೈನುಗಾರಿಕೆಯ ಹಾದಿ ತೋರಿಸಿದೆ. ರೈತರು ಬರವನ್ನು ಮೆಟ್ಟಿ ನಿಂತಿದ್ದು, ಕ್ಷೀರಕ್ರಾಂತಿಗೆ ಮುನ್ನುಡಿಯಾಗಿದೆ.

ರಾಯಚೂರು, ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ವ್ಯಾಪ್ತಿಯಲ್ಲಿರುವ ಜಿಲ್ಲೆಯ ಕುಷ್ಟಗಿ ಹಾಗೂ ಯಲಬುರ್ಗಾ ತಾಲೂಕುಗಳು ಬರಗಾಲದಲ್ಲಿಯೂ ಹಾಲಿನ ಉತ್ಪಾದನೆಯನ್ನು ಹೆಚ್ಚಿಸಿಕೊಂಡಿವೆ. ಈ ಉಭಯ ತಾಲೂಕುಗಳಲ್ಲಿ ಕಳೆದ ವರ್ಷ ಏಪ್ರಿಲ್ 30ಕ್ಕೆ 21,060 ಲೀಟರ್‌ ಹಾಲು ಉತ್ಪಾದನೆಯಾಗಿದ್ದರೆ, ಪ್ರಸಕ್ತ ವರ್ಷ ಏಪ್ರಿಲ್ 30ರಂದು 23,300 ಲೀಟರ್‌ ಹಾಲು ಉತ್ಪಾದನೆಯಾಗಿದೆ. ಕಳೆದ ವರ್ಷಕ್ಕಿಂತ ಶೇ. 13ರಷ್ಟು ಹೆಚ್ಚಳವಾಗಿದ್ದು, ಬರಗಾಲದಲ್ಲೂ ಹಾಲಿನ ಉತ್ಪಾದನೆ ಹೆಚ್ಚಾಗಿದೆ.

ಕುಷ್ಟಗಿ ತಾಲೂಕಿನಲ್ಲಿ 58, ಯಲಬುರ್ಗಾ ತಾಲೂಕಿನಲ್ಲಿ 54 ಹಾಲು ಉತ್ಪಾದಕರ ಸಹಕಾರ ಸಂಘಗಳು ಸಕ್ರಿಯವಾಗಿವೆ. ಅಲ್ಲದೇ ಮೇ 23ರ ನಂತರ ಕುಷ್ಟಗಿ, ಯಲಬುರ್ಗಾ ತಾಲೂಕಿನಲ್ಲಿ ತಲಾ ಮೂರು ಸಂಘಗಳು ಕಾಯಾರಂಭಗೊಳಿಸಲಿದ್ದು, ಒಟ್ಟು 118 ಸಂಘಗಳಾಗಲಿವೆ. ಕುಷ್ಟಗಿಯಲ್ಲಿ 10 ಸಾವಿರ ಲೀಟರ್‌ ಸಂಗ್ರಹ ಸಾಮಾರ್ಥ್ಯದ ಹಾಲು ಶೀತಲೀಕರಣ ಘಟಕ, ತಾವರಗೇರಾದಲ್ಲಿ 3 ಸಾವಿರ ಲೀಟರ್‌ ಸಂಗ್ರಹ ಬಲ್ಕ ಮಿಲ್ಕ್ ಕೂಲರ್‌ (ಬಿಎಂಸಿ) ಹಾಗೂ ಯಲಬುರ್ಗಾ ತಾಲೂಕಿನ ಬೇವೂರು ಗ್ರಾಮದಲ್ಲಿ 10 ಸಾವಿರ ಲೀಟರ್‌ ಸಾಮಾರ್ಥ್ಯದ ಹಾಲು ಶೀತಲೀಕರಣ ಘಟಕವಿದೆ. 3.5 ಫ್ಯಾಟ್, 8.5 ಎಸ್‌ಎನ್‌ಎಫ್‌ ಅಂಶವಿರುವ ಪ್ರತಿ ಲೀಟರ್‌ ಹಾಲಿಗೆ 22.50 ರೂ. ದರದಲ್ಲಿ ಸುಮಾರು 4 ಸಾವಿರಕ್ಕೂ ಅಧಿಕ ರೈತರು ಈ ಸಂಘಗಳಿಗೆ ಹಾಲು ಪೂರೈಸುತ್ತಿದ್ದಾರೆ. ಈ ರೈತರಿಗೆ ಕಳೆದ ಏಪ್ರಿಲ್ 1ರಿಂದ ಪ್ರೋತ್ಸಾಹಧನ 6 ರೂ.ಗೆ ಹೆಚ್ಚಿದ್ದು, ಕಳೆದ ಜನವರಿಯ ಪ್ರೋತ್ಸಾಹ ಧನ ಪಾವತಿಸಲಾಗಿದೆ. ಆಧಾರ್‌ ಲಿಂಕ್‌ ಇರುವ ಬ್ಯಾಂಕ್‌ ಖಾತೆಗೆ, ಪ್ರೋತ್ಸಾಹ ಧನ ಹಾಗೂ ಹಾಲಿನ ದರವನ್ನು ಆನ್‌ಲೈನ್‌ ಮೂಲಕ ಪಾವತಿಸುವ ವ್ಯವಸ್ಥೆಯಿದೆ ಎಂದು ವಿಸ್ತೀರ್ಣಾಧಿಕಾರಿ ಬಸವರಾಜ್‌ ಯರದೊಡ್ಡಿ ಮಾಹಿತಿ ನೀಡಿದರು.

ಪಶು ಆಹಾರ ದರ ಜಾಸ್ತಿ: ಬರಗಾಲದಲ್ಲೂ ಹಾಲು ಉತ್ಪಾದನೆಯಲ್ಲಿ ಸೈ ಎನಿಸಿಕೊಂಡಿದ್ದರೂ, ಪಶು ಅಹಾರ ಪ್ರತಿ ವರ್ಷ ಹೆಚ್ಚುತ್ತಿರುವುದು ಸರ್ಕಾರದ ಧೋರಣೆಗೆ ಹಾಲು ಉತ್ಪಾದಕರಲ್ಲಿ ಬೇಸರ ಮೂಡಿಸಿದೆ. ಸತತ ಬರಗಾಲ ಎದುರಿಸುವ ಈ ತಾಲೂಕುಗಳಲ್ಲಿ ಪಶು ಆಹಾರ ದರ ತಗ್ಗಿಸದೇ ಇರುವುದೇ ಈ ಬಾರಿ ಜನವರಿ, ಫೆಬ್ರವರಿ ತಿಂಗಳಲ್ಲಿ ರೈತರಿಗೆ ಹೆಚ್ಚಿಸಬೇಕಿದ್ದ ಹಾಲಿನ ದರವನ್ನು ಹೆಚ್ಚಿಸಲಾಗಿಲ್ಲ. ಕಳೆದ ವರ್ಷ ಪಶು ಆಹಾರ 890 ರೂ., ಬೈಪಾಸ್‌ 997 ಇತ್ತು. ಇದೀಗ ಪಶು ಅಹಾರ 50 ಕೆ.ಜಿ.ಗೆ 986 ಇದ್ದು, ಶೇ. 90ರಷ್ಟು ಪೌಷ್ಟಿಕಾಂಶವುಳ್ಳ ಬೈಪಾಸ್‌ ಪಶು ಆಹಾರ 1,109 ರೂ. ಇದೆ. ಸದ್ಯ ಶೈಲೇಜ್‌ ಬೇಲ್ (ರಸಮೇವು) ಬೇಡಿಕೆ ಇದ್ದು, ಇದನ್ನು ತೆಲಂಗಾಣದಿಂದ ಖರೀದಿಸಬೇಕಿದ್ದು, ಸಾಗಾಣಿಕೆ ವೆಚ್ಚ ಅಧಿಕವಾಗುತ್ತಿದೆ. ಸರ್ಕಾರ ಮನಸ್ಸು ಮಾಡಿದರೆ ಬರಗಾಲ ಎದುರಿಸುತ್ತಿರುವ ಜಿಲ್ಲೆಯಲ್ಲಿ ಶೈಲೇಜ್‌ ಬೇಲ್ಗಳನ್ನು ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಪೂರೈಸಬಹುದಾಗಿದೆ. ಅಲ್ಲದೇ ಗೋಶಾಲೆಗಳಿಗೂ ಪೂರೈಸಬಹುದಾಗಿದೆ. ಬರಗಾಲದಲ್ಲೂ ಇಷ್ಟು ಪ್ರಮಾಣದಲ್ಲಿ ಹಾಲು ಉತ್ಪಾದನೆಯಾಗುತ್ತಿರುವುದು ರೈತಾಪಿ ವರ್ಗಕ್ಕೆ ಹೈನುಗಾರಿಕೆಯಲ್ಲಿ ವಿಶ್ವಾಸ ಮೂಡಿಸಿದೆ. ತಾಲೂಕು ಕೇಂದ್ರದಲ್ಲಿ ಎರಡು ದಶಕವಾದರೂ ಹಾಲು ಶೀತಲೀಕರಣ ಘಟಕಕ್ಕೆ ಸ್ವಂತ ಕಟ್ಟಡ ಇಲ್ಲ ಎಂಬ ಕೊರಗು ಹಾಗೆಯೇ ಇದೆ.

.ಮಂಜುನಾಥ ಮಹಾಲಿಂಗಪುರ

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.