ಬರಗಾಲದಲ್ಲೂ ಕ್ಷೀರಕ್ರಾಂತಿ

•ಹಾಲು ನಂಬಿ ಬರ ಮೆಟ್ಟಿನಿಂತ ರೈತರು•ಹಾಲು ಉತ್ಪಾದನೆ ಶೇ.13 ಹೆಚ್ಚಳ

Team Udayavani, May 10, 2019, 3:09 PM IST

kopala-tdy-04

ಕುಷ್ಟಗಿ: ಹೈನುಗಾರಿಕೆ ಬರಗಾಲದಲ್ಲೂ ರೈತರ ಕೈ ಹಿಡಿದಿದ್ದು, ಕುಷ್ಟಗಿ-ಯಲಬುರ್ಗಾ ತಾಲೂಕುಗಳ ಹಾಲು ಉತ್ಪಾದಕರ ಸಹಕಾರಿ ಸಂಘಗಳು ಗ್ರಾಮೀಣ ಭಾಗದ ರೈತರಿಗೆ ಲಾಭದಾಯಕ ಹೈನುಗಾರಿಕೆಯ ಹಾದಿ ತೋರಿಸಿದೆ. ರೈತರು ಬರವನ್ನು ಮೆಟ್ಟಿ ನಿಂತಿದ್ದು, ಕ್ಷೀರಕ್ರಾಂತಿಗೆ ಮುನ್ನುಡಿಯಾಗಿದೆ.

ರಾಯಚೂರು, ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ವ್ಯಾಪ್ತಿಯಲ್ಲಿರುವ ಜಿಲ್ಲೆಯ ಕುಷ್ಟಗಿ ಹಾಗೂ ಯಲಬುರ್ಗಾ ತಾಲೂಕುಗಳು ಬರಗಾಲದಲ್ಲಿಯೂ ಹಾಲಿನ ಉತ್ಪಾದನೆಯನ್ನು ಹೆಚ್ಚಿಸಿಕೊಂಡಿವೆ. ಈ ಉಭಯ ತಾಲೂಕುಗಳಲ್ಲಿ ಕಳೆದ ವರ್ಷ ಏಪ್ರಿಲ್ 30ಕ್ಕೆ 21,060 ಲೀಟರ್‌ ಹಾಲು ಉತ್ಪಾದನೆಯಾಗಿದ್ದರೆ, ಪ್ರಸಕ್ತ ವರ್ಷ ಏಪ್ರಿಲ್ 30ರಂದು 23,300 ಲೀಟರ್‌ ಹಾಲು ಉತ್ಪಾದನೆಯಾಗಿದೆ. ಕಳೆದ ವರ್ಷಕ್ಕಿಂತ ಶೇ. 13ರಷ್ಟು ಹೆಚ್ಚಳವಾಗಿದ್ದು, ಬರಗಾಲದಲ್ಲೂ ಹಾಲಿನ ಉತ್ಪಾದನೆ ಹೆಚ್ಚಾಗಿದೆ.

ಕುಷ್ಟಗಿ ತಾಲೂಕಿನಲ್ಲಿ 58, ಯಲಬುರ್ಗಾ ತಾಲೂಕಿನಲ್ಲಿ 54 ಹಾಲು ಉತ್ಪಾದಕರ ಸಹಕಾರ ಸಂಘಗಳು ಸಕ್ರಿಯವಾಗಿವೆ. ಅಲ್ಲದೇ ಮೇ 23ರ ನಂತರ ಕುಷ್ಟಗಿ, ಯಲಬುರ್ಗಾ ತಾಲೂಕಿನಲ್ಲಿ ತಲಾ ಮೂರು ಸಂಘಗಳು ಕಾಯಾರಂಭಗೊಳಿಸಲಿದ್ದು, ಒಟ್ಟು 118 ಸಂಘಗಳಾಗಲಿವೆ. ಕುಷ್ಟಗಿಯಲ್ಲಿ 10 ಸಾವಿರ ಲೀಟರ್‌ ಸಂಗ್ರಹ ಸಾಮಾರ್ಥ್ಯದ ಹಾಲು ಶೀತಲೀಕರಣ ಘಟಕ, ತಾವರಗೇರಾದಲ್ಲಿ 3 ಸಾವಿರ ಲೀಟರ್‌ ಸಂಗ್ರಹ ಬಲ್ಕ ಮಿಲ್ಕ್ ಕೂಲರ್‌ (ಬಿಎಂಸಿ) ಹಾಗೂ ಯಲಬುರ್ಗಾ ತಾಲೂಕಿನ ಬೇವೂರು ಗ್ರಾಮದಲ್ಲಿ 10 ಸಾವಿರ ಲೀಟರ್‌ ಸಾಮಾರ್ಥ್ಯದ ಹಾಲು ಶೀತಲೀಕರಣ ಘಟಕವಿದೆ. 3.5 ಫ್ಯಾಟ್, 8.5 ಎಸ್‌ಎನ್‌ಎಫ್‌ ಅಂಶವಿರುವ ಪ್ರತಿ ಲೀಟರ್‌ ಹಾಲಿಗೆ 22.50 ರೂ. ದರದಲ್ಲಿ ಸುಮಾರು 4 ಸಾವಿರಕ್ಕೂ ಅಧಿಕ ರೈತರು ಈ ಸಂಘಗಳಿಗೆ ಹಾಲು ಪೂರೈಸುತ್ತಿದ್ದಾರೆ. ಈ ರೈತರಿಗೆ ಕಳೆದ ಏಪ್ರಿಲ್ 1ರಿಂದ ಪ್ರೋತ್ಸಾಹಧನ 6 ರೂ.ಗೆ ಹೆಚ್ಚಿದ್ದು, ಕಳೆದ ಜನವರಿಯ ಪ್ರೋತ್ಸಾಹ ಧನ ಪಾವತಿಸಲಾಗಿದೆ. ಆಧಾರ್‌ ಲಿಂಕ್‌ ಇರುವ ಬ್ಯಾಂಕ್‌ ಖಾತೆಗೆ, ಪ್ರೋತ್ಸಾಹ ಧನ ಹಾಗೂ ಹಾಲಿನ ದರವನ್ನು ಆನ್‌ಲೈನ್‌ ಮೂಲಕ ಪಾವತಿಸುವ ವ್ಯವಸ್ಥೆಯಿದೆ ಎಂದು ವಿಸ್ತೀರ್ಣಾಧಿಕಾರಿ ಬಸವರಾಜ್‌ ಯರದೊಡ್ಡಿ ಮಾಹಿತಿ ನೀಡಿದರು.

ಪಶು ಆಹಾರ ದರ ಜಾಸ್ತಿ: ಬರಗಾಲದಲ್ಲೂ ಹಾಲು ಉತ್ಪಾದನೆಯಲ್ಲಿ ಸೈ ಎನಿಸಿಕೊಂಡಿದ್ದರೂ, ಪಶು ಅಹಾರ ಪ್ರತಿ ವರ್ಷ ಹೆಚ್ಚುತ್ತಿರುವುದು ಸರ್ಕಾರದ ಧೋರಣೆಗೆ ಹಾಲು ಉತ್ಪಾದಕರಲ್ಲಿ ಬೇಸರ ಮೂಡಿಸಿದೆ. ಸತತ ಬರಗಾಲ ಎದುರಿಸುವ ಈ ತಾಲೂಕುಗಳಲ್ಲಿ ಪಶು ಆಹಾರ ದರ ತಗ್ಗಿಸದೇ ಇರುವುದೇ ಈ ಬಾರಿ ಜನವರಿ, ಫೆಬ್ರವರಿ ತಿಂಗಳಲ್ಲಿ ರೈತರಿಗೆ ಹೆಚ್ಚಿಸಬೇಕಿದ್ದ ಹಾಲಿನ ದರವನ್ನು ಹೆಚ್ಚಿಸಲಾಗಿಲ್ಲ. ಕಳೆದ ವರ್ಷ ಪಶು ಆಹಾರ 890 ರೂ., ಬೈಪಾಸ್‌ 997 ಇತ್ತು. ಇದೀಗ ಪಶು ಅಹಾರ 50 ಕೆ.ಜಿ.ಗೆ 986 ಇದ್ದು, ಶೇ. 90ರಷ್ಟು ಪೌಷ್ಟಿಕಾಂಶವುಳ್ಳ ಬೈಪಾಸ್‌ ಪಶು ಆಹಾರ 1,109 ರೂ. ಇದೆ. ಸದ್ಯ ಶೈಲೇಜ್‌ ಬೇಲ್ (ರಸಮೇವು) ಬೇಡಿಕೆ ಇದ್ದು, ಇದನ್ನು ತೆಲಂಗಾಣದಿಂದ ಖರೀದಿಸಬೇಕಿದ್ದು, ಸಾಗಾಣಿಕೆ ವೆಚ್ಚ ಅಧಿಕವಾಗುತ್ತಿದೆ. ಸರ್ಕಾರ ಮನಸ್ಸು ಮಾಡಿದರೆ ಬರಗಾಲ ಎದುರಿಸುತ್ತಿರುವ ಜಿಲ್ಲೆಯಲ್ಲಿ ಶೈಲೇಜ್‌ ಬೇಲ್ಗಳನ್ನು ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಪೂರೈಸಬಹುದಾಗಿದೆ. ಅಲ್ಲದೇ ಗೋಶಾಲೆಗಳಿಗೂ ಪೂರೈಸಬಹುದಾಗಿದೆ. ಬರಗಾಲದಲ್ಲೂ ಇಷ್ಟು ಪ್ರಮಾಣದಲ್ಲಿ ಹಾಲು ಉತ್ಪಾದನೆಯಾಗುತ್ತಿರುವುದು ರೈತಾಪಿ ವರ್ಗಕ್ಕೆ ಹೈನುಗಾರಿಕೆಯಲ್ಲಿ ವಿಶ್ವಾಸ ಮೂಡಿಸಿದೆ. ತಾಲೂಕು ಕೇಂದ್ರದಲ್ಲಿ ಎರಡು ದಶಕವಾದರೂ ಹಾಲು ಶೀತಲೀಕರಣ ಘಟಕಕ್ಕೆ ಸ್ವಂತ ಕಟ್ಟಡ ಇಲ್ಲ ಎಂಬ ಕೊರಗು ಹಾಗೆಯೇ ಇದೆ.

.ಮಂಜುನಾಥ ಮಹಾಲಿಂಗಪುರ

ಟಾಪ್ ನ್ಯೂಸ್

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala; ಪೊಳ್ಳು ಭರವಸೆಗಳನ್ನು ಮುಂದುವರಿಸಿದ ವಿತ್ತ ಸಚಿವರು: ತಂಗಡಗಿ ಟೀಕೆ

Budget 2024; ಪೊಳ್ಳು ಭರವಸೆಗಳನ್ನು ಮುಂದುವರಿಸಿದ ವಿತ್ತ ಸಚಿವರು: ತಂಗಡಗಿ ಟೀಕೆ

3-koppala

Koppala: ಅಪರಿಚಿತ ವಾಹನ‌ ಡಿಕ್ಕಿಯಾಗಿ ಕರ್ತವ್ಯನಿರತ ಎಎಸ್ಐ ಸ್ಥಳದಲ್ಲೇ ಸಾವು

Gangavathi: ಕುಡಿದ ಮತ್ತಿನಲ್ಲಿ ರೈಲ್ವೇ ಹಳಿ ಮೇಲೆ ಮಲಗಿದ್ದ ಮೂವರು ಯುವಕರ ಮೇಲೆ ಹರಿದ ರೈಲು

Gangavathi: ಹಳಿ ಮೇಲೆ ಕುಳಿತು ಮದ್ಯ ಸೇವಿಸುತ್ತಿದ್ದ ಮೂವರು ಯುವಕರ ಮೇಲೆಯೇ ಹರಿದ ರೈಲು

ಕೊಪ್ಪಳ: ಆಮೆಗತಿಗಿಂತಲೂ ನಿಧಾನ ರಂಗಮಂದಿರ ನಿರ್ಮಾಣ

ಕೊಪ್ಪಳ: ಆಮೆಗತಿಗಿಂತಲೂ ನಿಧಾನ ರಂಗಮಂದಿರ ನಿರ್ಮಾಣ

Tungabhadra Dam: Increased inflows release water to canals from June 19

Tungabhadra Dam: ಹೆಚ್ಚಿದ ಒಳಹರಿವು; ಜು.19 ರಿಂದ ಕಾಲುವೆಗಳಿಗೆ ನೀರು ಬಿಡುಗಡೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.