ಗುಂಡಿಗೆ ಬಿದ್ದು ಯುವತಿ ಸಾವು : ಕಾಂಗ್ರೆಸ್ ಕಾರ್ಯಕರ್ತೆಯ ಟೀಕೆಗೆ ಸಚಿವ ಸಿ.ಟಿ.ರವಿ ಖಂಡನೆ
Team Udayavani, Nov 5, 2019, 7:17 PM IST
ಗಂಗಾವತಿ: ರಸ್ತೆಯಲ್ಲಿದ್ದ ಗುಂಡಿಯಿಂದ ಅಪಘಾತಕ್ಕಿಡಾಗಿ ಯುವತಿ ಮೃತಪಟ್ಟ ಘಟನೆ ಅತ್ಯಂತ ದುಃಖ್ಖಕರವಾಗಿದ್ದು ಇದನ್ನೆ ಇಟ್ಟುಕೊಂಡು ಸಂಬಂಧವಿಲ್ಲದ ದೂರದ ರಾಮನಗರ ಕಾಂಗ್ರೆಸ್ ಕಾರ್ಯಕರ್ತೆಯೊಬ್ಬರು ತಮ್ಮ ಬಗ್ಗೆ ಟೀಕೆ ಮಾಡಿದ್ದಕ್ಕೆ ಸಚಿವ ಸಿ.ಟಿ.ರವಿ ಖಂಡಿಸಿದ್ದಾರೆ. ಅವರು ತಾಲೂಕಿನ ಕಿಷ್ಕಿಂದಾ ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಉದಯವಾಣಿ ಜತೆ ಮಾತನಾಡಿದರು.
ರಾಜಕೀಯಕ್ಕಾಗಿ ಟೀಕೆ ಮಾಡದೇ ಸಂವೇದನೆಯಿಂದ ಟೀಕಿಸಿದ್ದರೆ ಹೌದು ಎನ್ನಬಹುದು. ಈಗಾಗಲೇ ದುರಂತ ಜರುಗಿದ ಚಿಕ್ಕಮಗಳೂರಿನ ರಸ್ತೆ ದುರಸ್ಥಿಗೆ 297 ಕೋಟಿ ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದೆ. ಕಾಮಗಾರಿ ನಡೆಯುತ್ತಿದ್ದರೂ ಸೋಶಿಯಲ್ ಮೀಡಿಯಾ ದಲ್ಲಿ ಕಾಂಗ್ರೆಸ್ ಸಹೋದರಿ ಪ್ರಚಾರಕ್ಕಾಗಿ ಟೀಕೆ ಮಾಡಿರುವುದು ಸರಿಯಲ್ಲ. ವಾಸ್ತವ ತಿಳಿದು ಮಾತನಾಡಬೇಕು.
ತಾವು ಕೊಪ್ಪಳ ಜಿಲ್ಲಾ ಪ್ರವಾಸದಲ್ಲಿರುವುದರಿಂದ ರಸ್ತೆ ದುರಂತದಲ್ಲಿ ಮಡಿದ ಕುಟುಂಬಕ್ಕೆ ಸಾಂತ್ವನ ಹೇಳಲು ಟ್ವಿಟರ್ ಮೂಲಕ ಸಂದೇಶ ಹಾಕಿದರೆ ಅದನ್ನು ಕಾಂಗ್ರೆಸ್ ಕಾರ್ಯಕರ್ತೆ ದೊಡ್ಡ ವಿಷಯ ಮಾಡಿದ್ದಾರೆ. ನಮ್ಮ ಕ್ಷೇತ್ರ ನಮ್ಮ ಜನ ಅವರ ಕಷ್ಟ ಸುಖದಲ್ಲಿ ತಾವು ಪಾಲ್ಗೊಂಡಿದ್ದರಿಂದಲೇ ಸತತವಾಗಿ ಗೆದ್ದು ಬರುತ್ತಿರುವುದು. ಕಾಂಗ್ರೆಸ್ ನವರು ಬರೀ ಗೊಂದಲ ಸೃಷ್ಟಿ ಮಾಡುವುದರಲ್ಲಿ ಶೂರರಾಗಿದ್ದಾರೆ ಎಂದು ರವಿ ಟೀಕಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…