ಗುಂಡಿಗೆ ಬಿದ್ದು ಯುವತಿ ಸಾವು : ಕಾಂಗ್ರೆಸ್ ಕಾರ್ಯಕರ್ತೆಯ ಟೀಕೆಗೆ ಸಚಿವ ಸಿ.ಟಿ.ರವಿ ಖಂಡನೆ
Team Udayavani, Nov 5, 2019, 7:17 PM IST
ಗಂಗಾವತಿ: ರಸ್ತೆಯಲ್ಲಿದ್ದ ಗುಂಡಿಯಿಂದ ಅಪಘಾತಕ್ಕಿಡಾಗಿ ಯುವತಿ ಮೃತಪಟ್ಟ ಘಟನೆ ಅತ್ಯಂತ ದುಃಖ್ಖಕರವಾಗಿದ್ದು ಇದನ್ನೆ ಇಟ್ಟುಕೊಂಡು ಸಂಬಂಧವಿಲ್ಲದ ದೂರದ ರಾಮನಗರ ಕಾಂಗ್ರೆಸ್ ಕಾರ್ಯಕರ್ತೆಯೊಬ್ಬರು ತಮ್ಮ ಬಗ್ಗೆ ಟೀಕೆ ಮಾಡಿದ್ದಕ್ಕೆ ಸಚಿವ ಸಿ.ಟಿ.ರವಿ ಖಂಡಿಸಿದ್ದಾರೆ. ಅವರು ತಾಲೂಕಿನ ಕಿಷ್ಕಿಂದಾ ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಉದಯವಾಣಿ ಜತೆ ಮಾತನಾಡಿದರು.
ರಾಜಕೀಯಕ್ಕಾಗಿ ಟೀಕೆ ಮಾಡದೇ ಸಂವೇದನೆಯಿಂದ ಟೀಕಿಸಿದ್ದರೆ ಹೌದು ಎನ್ನಬಹುದು. ಈಗಾಗಲೇ ದುರಂತ ಜರುಗಿದ ಚಿಕ್ಕಮಗಳೂರಿನ ರಸ್ತೆ ದುರಸ್ಥಿಗೆ 297 ಕೋಟಿ ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದೆ. ಕಾಮಗಾರಿ ನಡೆಯುತ್ತಿದ್ದರೂ ಸೋಶಿಯಲ್ ಮೀಡಿಯಾ ದಲ್ಲಿ ಕಾಂಗ್ರೆಸ್ ಸಹೋದರಿ ಪ್ರಚಾರಕ್ಕಾಗಿ ಟೀಕೆ ಮಾಡಿರುವುದು ಸರಿಯಲ್ಲ. ವಾಸ್ತವ ತಿಳಿದು ಮಾತನಾಡಬೇಕು.
ತಾವು ಕೊಪ್ಪಳ ಜಿಲ್ಲಾ ಪ್ರವಾಸದಲ್ಲಿರುವುದರಿಂದ ರಸ್ತೆ ದುರಂತದಲ್ಲಿ ಮಡಿದ ಕುಟುಂಬಕ್ಕೆ ಸಾಂತ್ವನ ಹೇಳಲು ಟ್ವಿಟರ್ ಮೂಲಕ ಸಂದೇಶ ಹಾಕಿದರೆ ಅದನ್ನು ಕಾಂಗ್ರೆಸ್ ಕಾರ್ಯಕರ್ತೆ ದೊಡ್ಡ ವಿಷಯ ಮಾಡಿದ್ದಾರೆ. ನಮ್ಮ ಕ್ಷೇತ್ರ ನಮ್ಮ ಜನ ಅವರ ಕಷ್ಟ ಸುಖದಲ್ಲಿ ತಾವು ಪಾಲ್ಗೊಂಡಿದ್ದರಿಂದಲೇ ಸತತವಾಗಿ ಗೆದ್ದು ಬರುತ್ತಿರುವುದು. ಕಾಂಗ್ರೆಸ್ ನವರು ಬರೀ ಗೊಂದಲ ಸೃಷ್ಟಿ ಮಾಡುವುದರಲ್ಲಿ ಶೂರರಾಗಿದ್ದಾರೆ ಎಂದು ರವಿ ಟೀಕಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್
ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು
ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…
MUST WATCH
ಹೊಸ ಸೇರ್ಪಡೆ
OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್ ರೋಲ್ ನಲ್ಲಿ ಫಾಫಾ
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ