ಸರ್ಕಾರದಿಂದ ಕಲ್ಯಾಣ ಕರ್ನಾಟಕ ನಿರ್ಲಕ್ಷ್ಯ: ಶಾಸಕ ಬಯ್ಯಾಪೂರ

ಮಂಡಳಿಗೆ ಅಧ್ಯಕ್ಷರ ನೇಮಕ ನಿಯಮ ಬಾಹಿರ ; ಕಲ್ಯಾಣ ಕರ್ನಾಟಕ ಭಾಗದಲ್ಲಿ ನೇಮಕ ಪ್ರಕ್ರಿಯೆ ನಿಲ್ಲಿಸುವಂತಿಲ್ಲ

Team Udayavani, Aug 24, 2020, 7:58 PM IST

ಸರ್ಕಾರದಿಂದ ಕಲ್ಯಾಣ ಕರ್ನಾಟಕ ನಿರ್ಲಕ್ಷ್ಯ: ಶಾಸಕ ಬಯ್ಯಾಪೂರ

ಕೊಪ್ಪಳ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಶ್ರಮಿಸಬೇಕಾದ ರಾಜ್ಯ ಸರ್ಕಾರದಿಂದ ಪ್ರಸಕ್ತ ವರ್ಷದಲ್ಲಿ ಅನುದಾನವನ್ನೇ ಕೊಟ್ಟಿಲ್ಲ.

ಈ ಕುರಿತಾಗಿ ಕಾರ್ಯದರ್ಶಿಯವರನ್ನು ಕೇಳಿದರೆ ಸರ್ಕಾರದಿಂದ ಅನುಮತಿಯೇ ಸಿಕ್ಕಲ್ಲವೆಂದು ಹೇಳುತ್ತಿದ್ದಾರೆ. ಇದೊಂದು ದುರ್ದೈವದ ಸಂಗತಿ. ಕಲ್ಯಾಣ ಕರ್ನಾಟಕ ಭಾಗವನ್ನು ಸರ್ಕಾರ ಸಂಪೂರ್ಣ ನಿರ್ಲಕ್ಷ್ಯ ಮಾಡಿದೆ ಎಂದು ಕುಷ್ಟಗಿ ಶಾಸಕ ಅಮರೆಗೌಡ ಬಯ್ಯಾಪೂರ ಆರೋಪಿಸಿದರು.

ಕಲ್ಯಾಣ ಕರ್ನಾಟಕ ಮಂಡಳಿಗೆ ಪ್ರತಿ ವರ್ಷ 1500 ಕೋಟಿ ರೂ. ಅನುದಾನ ಕೊಡಬೇಕು. ಆದರೆ ಈ ವರ್ಷ ಕೋವಿಡ್ ಇದೆ ಎಂಬ ಕಾರಣ ನೀಡಿ ಸರ್ಕಾರ ಇದನ್ನು 1100 ಕೋಟಿ ರೂ.ಗೆ ಕಡಿತ ಮಾಡಿದೆ ಎಂದು ಹೇಳಿತ್ತು ಮಾತ್ರವಲ್ಲದೇ ಈ ಕುರಿತಾಗಿ ನಮ್ಮಿಂದ ಪ್ರಸ್ತಾವನೆಗಳನ್ನೂ ಪಡೆದಿಕೊಂಡಿದೆ.

ಆದರೆ ಆರ್ಥಿಕ ವರ್ಷವು ಆರು ತಿಂಗಳು ಕಳೆಯುತ್ತಾ ಬಂದರೂ ಅನುದಾನವನ್ನೇ ಕೊಟ್ಟಿಲ್ಲ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಶಾಸಕರೂ ಇದ್ದಾರೆ. ಅವರ ಹಕ್ಕನ್ನೇ ಮೊಟಕುಗೊಳಿಸುವ ಕೆಲಸವನ್ನು ಈ ಸರಕಾರ ಮಾಡುತ್ತಿದೆ ಎಂದು ಶಾಸಕ ಬಯ್ಯಾಪುರ ಅವರು ಕೊಪ್ಪಳದ ಪ್ರವಾಸಿ ಮಂದಿರದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಇನ್ನು ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರಾದೇಶಿಕ ನಿಧಿ ಇರುತ್ತದೆ. ಶೇ.6ರಷ್ಟು ಅನುದಾನ ಮೀಸಲಿರುತ್ತೆ. ಅದನ್ನು ಹೇಗೆ ವೆಚ್ಚ ಮಾಡುತ್ತಾರೆ ಎನ್ನುವುದೇ ಗೊತ್ತಾಗುತ್ತಿಲ್ಲ. ಆಡಳಿತದ ವೆಚ್ಚವನ್ನು ಕೇವಲ ಕಲಬುರ್ಗಿ ಕೇಂದ್ರಿಕೃತವಾಗಿದೆ. ಬೇರೆ ಜಿಲ್ಲೆಗಳಲ್ಲಿ ಕಲ್ಯಾಣ ಕರ್ನಾಟಕ ಮಂಡಳಿಗೆ ಪತ್ರ ವ್ಯವಹಾರ ವೆಚ್ಚಕ್ಕೆ ಅನುದಾನ ಇಲ್ಲದಂತಾಗಿದೆ ಎಂದರು.

ವಿಶೇಷವೆಂಬಂತೆ, ಕಲ್ಯಾಣ ಕರ್ನಾಟಕ ಮಂಡಳಿಗೆ ಅಧ್ಯಕ್ಷರನ್ನು ಮಾನದಂಡ ಇಲ್ಲದೇ ನೇಮಕ ಮಾಡಲಾಗಿದೆ. ಈ ಭಾಗದ ಶಾಸಕರು ಸದಸ್ಯರಾಗಬೇಕು. ಜಿಲ್ಲಾ ಮಂತ್ರಿಗಳು ಸದಸ್ಯರಾಗಬೇಕು. ಆದರೆ ಅವರ‍್ಯಾರನ್ನು ನೇಮಕ ಮಾಡಿಲ್ಲ. ಕೇವಲ ಅಧ್ಯಕ್ಷರೊಬ್ಬರನ್ನೇ ನೇಮಕ ಮಾಡಿದೆ. ಮಂಡಳಿಯಿಂದ ಒಂದು ಸಭೆಯೂ ಆಗಿಲ್ಲ. ವರ್ಷ ಪೂರೈಸಿ, ಎರಡನೇ ವರ್ಷಕ್ಕೆ ಕಾಲಿರಿಸಿದೆ. ವಿವಿಧ ಇಲಾಖೆಗಳಿಗೆ ಅನುದಾನ ಬಾರದ ಕಾರಣ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಭಿವೃದ್ಧಿ ಕೆಲಸ ಆಗುತ್ತಿಲ್ಲ ಎಂದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ವಿಶೇಷ ಕಾನೂನು ಬಂದ ಬಳಿಕ ನೇಮಕಾತಿಗೆ ಯಾವುದೇ ಆರ್ಥಿಕ ನಿರ್ಬಂಧ ಇಲ್ಲವೇ ಇಲ್ಲ. ಯಾವುದೇ ಸಂದರ್ಭದಲ್ಲಿ ನೇಮಕ ಪ್ರಕ್ರಿಯೆ ನಡೆಸಬಹುದು. ಆದರೆ ಸರ್ಕಾರವು ಅದಕ್ಕೆ ತಡೆಯೊಡ್ಡಿದೆ. ಆದರೆ ಯಾವುದೇ ನೇಮಕವೂ ನಡೆಯುತ್ತಿಲ್ಲ. ಸರ್ಕಾರ ನೇಮಕಾತಿಯಲ್ಲಿ ನಿಯಮ ಉಲ್ಲಂಘಿಸಿದೆ.

ಇಡೀ ರಾಜ್ಯದಲ್ಲಿ ಖಾಲಿ ಇರುವ ಹುದ್ದೆಯ ಶೇ.40ರಷ್ಟು ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ಕೊರತೆಯಿದೆ. ಇದರಿಂದ ಪ್ರಾಥಮಿಕ ಶಿಕ್ಷಣ ಸಂಪೂರ್ಣ ಹದಗೆಟ್ಟು ಹೋಗಿದೆ ಎಂದರು.

ಇನ್ನು ರಾಜ್ಯ ಸರ್ಕಾರವು ಕಕ ಭಾಗಕ್ಕೆ ಸೇಡಂ ಅವರ ಅಧ್ಯಕ್ಷತೆಯಲ್ಲಿ ಸಂಘ ಸ್ಥಾಪನೆ ಮಾಡಿದೆ. ಆದರೆ ಈ ಬಗ್ಗೆ ಮಾಹಿತಿಯೇ ಇಲ್ಲ. ಅದಕ್ಕೊಂದು ನಿಯಮಾವಳಿಯೂ ಇಲ್ಲ. ಸಂಘದ ಕಾರ್ಯವೇನೂ ಎನ್ನುವುದು ನಮಗೆ ಗೊತ್ತಿಲ್ಲ. ಇದರ ಹಿಂದೆ ಯಾವ ಉದ್ದೇಶವಿದೆಯೋ ಗೊತ್ತಿಲ್ಲ. ಅನುದಾನ ಕಡಿತ ಸೇರಿ ಇತರೆ ವಿಷಯಗಳ ಕುರಿತು ಸದನದಲ್ಲಿ ಮಾತನಾಡಲಿದ್ದೇನೆ ಎಂದು ಶಾಸಕರು ಇದೇ ಸಂದರ್ಭದಲ್ಲಿ ನುಡಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.