ರಾಜಕೀಯದಿಂದ ನಿವೃತ್ತನಾಗುತ್ತೇನೆ ಹೊರತು, ಕುಷ್ಟಗಿ ವಿಧಾನಸಭಾ ಕ್ಷೇತ್ರ ಬದಲಾವಣೆ ಮಾಡಲಾರೆ; ಶಾಸಕ ಅಮರೇಗೌಡ ಪಾಟೀಲ
Team Udayavani, Dec 3, 2022, 10:38 AM IST
ಕುಷ್ಟಗಿ: ರಾಜಕೀಯದಿಂದ ನಿವೃತ್ತನಾಗುತ್ತೇನೆ ಹೊರತು, ಯಾವುದೇ ಕಾರಣಕ್ಕೂ ಕುಷ್ಟಗಿ ವಿಧಾನಸಭಾ ಕ್ಷೇತ್ರ ಬದಲಾವಣೆ ಮಾಡಲಾರೆ. ಕುಷ್ಟಗಿಯಿಂದಲೇ ಸ್ಪರ್ಧಿಸುವೆ ಎಂದು ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ಸ್ಪಷ್ಟಪಡಿಸಿದರು.
ಈ ಕುರಿತು ಉದಯವಾಣಿ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು, ಈ ಬಾರಿಯೂ ಕುಷ್ಟಗಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವೆ, ಕ್ಷೇತ್ರ ಬದಲಾವಣೆ ಮಾಡಲಾರೆ ಎಂದರು.
ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಕುಷ್ಟಗಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ನನಗೆ ಮಾಹಿತಿ ಇಲ್ಲ. ಅವರು ರಾಜ್ಯದ ಮುಖ್ಯಮಂತ್ರಿಯಾದವರು, ರಾಜ್ಯದ 224 ಕ್ಷೇತ್ರಗಳಲ್ಲಿ ಎಲ್ಲಿಯಾದರೂ ಸ್ಪರ್ಧಿಸುವ ವಿಚಾರ ಅವರ ವಿವೇಚನೆಗೆ ಬಿಟ್ಟಿದ್ದು. ಅವರು ಒಂದು ಕ್ಷೇತ್ರ ಅಥವಾ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಬಹುದಾಗಿದೆ.
ಕುಷ್ಟಗಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಬಯಸಿದರೆ ನಾನು ಹಾರ್ಧಿಕವಾಗಿ ಸ್ವಾಗತಿಸುವೆ ಎಂದರು. ಸಿದ್ದರಾಮಯ್ಯ ಅವರು ತಮ್ಮ ಸ್ಪರ್ಧೆಯ ಬಗ್ಗೆ ಬಿಜೆಪಿ, ಆರ್.ಎಸ್.ಎಸ್ ನವರಿಗೆ ದಾರಿ ತಪ್ಪಿಸುದ್ದಾರೆಯೇ? ಪ್ರಶ್ನೆಗೆ ಪ್ರತಿಕಿಯಿಸಿದ ಶಾಸಕ ಬಯ್ಯಾಪೂರ ಅವರು, ಯಾರಿಗೆ ಯಾರೂ ತಪ್ಪಿಸುವುದಿಲ್ಲ ಎಂದರು.
ಕುಷ್ಟಗಿ ವಿಧಾನಸಭಾ ಕ್ಷೇತ್ರಕ್ಕೆ ಅರ್ಜಿ ಸಲ್ಲಿಸಿರುವ ಕೆಬಿಜೆಎನ್ ಎಲ್ ನಿವೃತ್ತ ಪ್ರಧಾನ ಇಂಜಿನೀಯರ ಅವರು, ಕುಷ್ಟಗಿ ವಕ್ಕಂದುರ್ಗಾದೇವಿಗೆ ಕಾಯಿ ಮೀಸಲಿಟ್ಟಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಶಾಸಕ ಬಯ್ಯಾಪೂರ ಅವರು, ಇರಬಹುದು ಪ್ರಭಾಕರ್ ಚಿಣಿ ನಮ್ಮ ( ಕಾಂಗ್ರೆಸ್) ಪಕ್ಷದವರು ಅವರೂ ಆಕಾಂಕ್ಷಿ ಎಂದು ಅರ್ಜಿ ಸಲ್ಲಿಸಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು
ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ