ನಿಡಶೇಸಿ ಕೆರೆ ಕೆಲಸ ರಾಜ್ಯಕ್ಕೆ ಮಾದರಿ


Team Udayavani, Nov 30, 2019, 3:29 PM IST

kopala-tdy-2

ಕುಷ್ಟಗಿ: ಸಾರ್ವಜನಿಕರ ಸಹಭಾಗಿತ್ವದಲ್ಲಿ ಕಡಿಮೆ ವೆಚ್ಚದಲ್ಲಿ ನಿಡಶೇಸಿ ಕೆರೆ ಅಭಿವೃದ್ಧಿ ಕಾರ್ಯ ಸರ್ಕಾರಕ್ಕೆ ಮಾದರಿಯಾಗಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲಕುಮಾರ ಹೇಳಿದರು.

ತಾಲೂಕಿನ ನಿಡಶೇಸಿ ಕೆರೆ ಅಭಿವೃದ್ಧಿ ಬಳಿಕ ತುಂಬಿರುವ ಹಿನ್ನೆಲೆಯಲ್ಲಿ ಗಂಗಾಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಈ ಕೆರೆ ಅಭಿವೃದ್ಧಿಯನ್ನು ಕಡಿಮೆ ಹಣದಲ್ಲೂ ಈ ರೀತಿಯಾಗಿ ಮಾಡಬಹುದು ಎಂಬುದು ರಾಜ್ಯಕ್ಕೆ ತೋರಿಸಿಕೊಟ್ಟಿದ್ದಿರಿ. ಸರ್ಕಾರದ ಎಸ್‌.ಆರ್‌ ದರದ ಪ್ರಕಾರ ಅಂದಾಜು ವೆಚ್ಚ ಸಮೀಕರಿಸಿ, ಸಣ್ಣ ನೀರಾವರಿ ಇಲಾಖೆ ಟೆಂಡರ್‌ ನಲ್ಲಿ ಈ ದರದಲ್ಲಿ ಮಾಡಬಹುದಾಗಿದೆ ಎಂದುಉಲ್ಲೇಖೀಸಬಹುದಾಗಿದೆ. ಸಾರ್ವಜನಿಕರಿಂದ ನಿಧಿ ಸಂಗ್ರಹಿಸಿ, ಲೆಕ್ಕ ಪತ್ರ ನಿರ್ವಹಣೆಯ ರೀತಿಯ ನಿಖರ ವಿವರಗಳನ್ನು ತಮಗೆ ನೀಡಿದರೆ ಅದು ಮುಂದಿನ ದಿನಗಳಲ್ಲಿ ರೆಫರೆನ್ಸ್‌ ತರಹ ಆಗಲಿದೆ ಎಂದರು.

ಈ ಮಾದರಿ ಕೆಲಸವನ್ನು ಮುಖ್ಯ ಕಾರ್ಯದರ್ಶಿಯವರ ಗಮನಕ್ಕೂ ತರಲಾಗಿದೆ. ಸಣ್ಣ ನೀರಾವರಿ ಇಲಾಖೆಯ ಮುಖ್ಯ ಕಾರ್ಯದರ್ಶಿಗಳು ಖುದ್ದಾಗಿ ಆಗಮಿಸಿ ಪರಿಶೀಲಿಸಿದ್ದು, ಸಂಬಂಧಿ ಸಿದ ಸಚಿವರು ಈಕೆರೆಯನ್ನು ನೋಡಿ ಹೋಗಿದ್ದಾರೆ. ಮಾದರಿ ಕೆಲಸ ಕುರಿತು ಇತರೇ ಜಿಲ್ಲೆಗಳಿಗೆ ಮಾಹಿತಿ ಹೋಗಿದೆ. ಕೆರೆ ಅಭಿವೃದ್ಧಿ ಸಂತಸ ತಂದಿದ್ದು, ಊರಿಗೆ ಅಷ್ಟೇ ಅಲ್ಲ ದೇಶಕ್ಕೆ ಪ್ರೇರಣೆಯಾಗಿದೆ. ನಿಡಶೇಸಿ ಕೆರೆ ಅಭಿವೃದ್ಧಿಯಿಂದ ಊರಿಗೆ ಹೆಮ್ಮೆ ತಂದಿದೆ. ಈ ಕೆರೆಯ ಅಭಿವೃದ್ಧಿ ಸರ್ಕಾರದಿಂದ ಸಾಧ್ಯವಾಗಿಲ್ಲ

ಎನ್ನುವುದು ಎಲ್ಲೋ ನೋವಿತ್ತು, ಆದರೆ ಜನರ, ಊರಿನವರ ಚಿಕ್ಕಚಿಕ್ಕ ಸಹಾಯದಿಂದ ಈ ದೊಡ್ಡ ಕೆಲಸ ನೆರವೇರಿದೆ. ಸರ್ಕಾರದಿಂದ ಉದ್ಯಾನವನ ಅಭಿವೃದ್ಧಿಗೆ 1.50 ಕೋಟಿ ರೂ. ಮಂಜೂರಾಗಿರುವುದು ತೃಪ್ತಿ ತಂದಿದೆ ಎಂದರು. ಶಾಸಕ ಅಮರೇಗೌಡ ಪಾಟೀಲ ಬಯ್ನಾಪೂರ ಮಾತನಾಡಿ, ಯಾವುದೇ ವ್ಯಕ್ತಿ ನಿಷ್ಟುರ, ಹಣಕಾಸುವ್ಯವಹಾರದಲ್ಲಿ 1 ರೂ. ಲೋಪವಾಗದಂತೆ ನಿರ್ವಹಿಸಿದರೆ ಹೆಸರು ಬರುತ್ತದೆ ಎನ್ನುವುದಕ್ಕೆನಿಡಶೇಸಿ ಕೆರೆ ಅಭಿವೃದ್ಧಿ ಕಾರ್ಯ ಸಾಕ್ಷಿಯಾಗಿದೆ.ಯಾವೂದೇ ಸರ್ಕಾರ ಬಂದಿರಬಹುದು ಹಣಕಾಸಿನ ತೊಂದರೆ ಇಲ್ಲ, ಕೆರೆಯ ಮುಂದಿನಅಭಿವೃದ್ಧಿಗೆ ಪೂರಕವಾದ ಕ್ರಿಯಾಯೋಜನೆಯಪ್ರಸ್ತಾವನೆ ಸಲ್ಲಿಸಿದರೆ ಆ ಮೂಲಕ ಕೆರೆಯ ಸರ್ವಾಂಗೀಣ ಅಭಿವೃದ್ಧಿಗೆ ಪ್ರಯತ್ನಿಸುವುದಾಗಿ ಹೇಳಿದರು.

ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಮಾತನಾಡಿ, ವೈಯಕ್ತಿಕ ಕೆಲಸಕ್ಕೆ ತೃಪ್ತಿ, ಸಾರ್ವಜನಿಕರ ಕೆಲಸಕ್ಕೆ ಆತ್ಮಸಂತೃಪ್ತಿ ಆಗುತ್ತದೆ ಎಂಬುದಕ್ಕೆ ನಿಡಶೇಸಿ ಕೆರೆ ಕೆಲಸ ನಿದರ್ಶನವಾಗಿದೆ.ನಿರೀಕ್ಷೆಯಂತೆ ಹಿಂಗಾರು ಮಳೆಯಾಗಿ ಕೆರೆ ತುಂಬಿರುವುದು ಅಕ್ರಮ ಮರಳು ಸಾಗಣೆ ತಪ್ಪಿಸಿದಂತಾಗಿದೆ ಎಂದರು.

ಕೆರೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರಪ್ಪ ಬಳೂಟಗಿ ಮಾತನಾಡಿ, ನೀರಿಲ್ಲದೇ ಸಾಕಷ್ಟು ಸಮಸ್ಯೆ ಅನುಭವಿಸಿದ್ದೇವೆ. ನೀರನ್ನು ದುಡ್ಡುಕೊಟ್ಟು ಖರೀದಿಸುವ ಪರಿಸ್ಥಿತಿ ಎದುರಿಸಿದ್ದೇವೆ. ಬಿಜಕಲ್‌ ಶ್ರೀಗಳಿಗೆ ಮಠ ಇಲ್ಲದಿದ್ದರೂ ನಿಡಶೇಸಿ ಕೆರೆ ಅಭಿವೃದ್ಧಿಗೆ 1 ಲಕ್ಷ ರೂ. ನೀಡಿದ್ದಾರೆ. ಹಲವಾರು ಜನರು ಉದಾರವಾಗಿ ದೇಣಿಗೆ ನೀಡಿರುವುದು ನಮ್ಮಲ್ಲಿ ಶ್ರೀಮಂತರು ಇಲ್ಲದಿದ್ದರೂ, ಹೃದಯವಂತರಿದ್ದಾರೆ ಎನ್ನುವುದಕ್ಕೆ ಹೆಮ್ಮೆ ಇದೆ ಎಂದರು. ಮಾಜಿ ಶಾಸಕ ಕೆ. ಶರಣಪ್ಪ, ತಹಶೀಲ್ದಾರ್‌ ಎಂ.ಸಿದ್ದೇಶ, ಸಿಪಿಐ ಜಿ. ಚಂದ್ರಶೇಖರ, ಕೆರೆ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಪರಸಪ್ಪ ಕತ್ತಿ ಮತ್ತಿತರಿದ್ದರು. ಪ್ರಾ| ಟಿ.ಬಸವರಾಜ್‌ ನಿರೂಪಿಸಿದರು. ಕಲ್ಲೇಶ ತಾಳದ ಸ್ವಾಗತಿಸಿದರು.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.