ಶಿಥಿಲಾವಸ್ಥೆಯಲ್ಲಿ ಮಾದರಿ ಮನೆಗಳು

•1976ರಲ್ಲಿ ಲೋಕೋಪಯೋಗಿ ಇಲಾಖೆ ನಿರ್ಮಿಸಿದ ಮನೆ •ಸುತ್ತಮುತ್ತಲಿನ ಜಾಗೆ ಒತ್ತುವರಿ

Team Udayavani, Aug 4, 2019, 12:23 PM IST

kopala-tdy-2

ಕುಷ್ಟಗಿ: ಲೋಕೋಯೋಗಿ ಇಲಾಖೆ 43 ವರ್ಷಗಳ ಹಿಂದೆ ಮಾದರಿ ಮನೆಗಾಗಿ ನಿರ್ಮಿಸಿದ್ದ ಕಟ್ಟಡಗಳು ಈಗ ಅನಾಥ ಸ್ಥಿತಿಯಲ್ಲಿವೆ. ಸೂಕ್ತ ನಿರ್ವಹಣೆ ಕೊರತೆಯಿಂದಾಗಿ ಕಟ್ಟಡ ಕುಸಿದು ಬೀಳುವ ಹಂತಕ್ಕೆ ತಲುಪಿವೆ.

1976ರಲ್ಲಿ ಪಟ್ಟಣದ ಹನುಮಸಾಗರ ರಸ್ತೆಯ 16ನೇ ವಾರ್ಡ್‌ ವ್ಯಾಪ್ತಿಯ ಗುರುಭವನದ ಪಕ್ಕದಲ್ಲಿ ಎರಡು ಮನೆಗಳು ಶಿಥಿಲಾವಸ್ಥೆಯರುವುದು ಕಾಣಬಹುದಾಗಿದೆ. ಸದ್ಯ ಈ ಮನೆಗಳ ಸುತ್ತ ಮುಳ್ಳು ಕಂಟಿ ಬೆಳೆದಿವೆ. ಮನೆಗಳ ಹೆಂಚು ಕಿತ್ತು ಹೋಗಿದ್ದು, ಮನೆಗಳ ಸುತ್ತಲೂ 35.37 ಚದರ ಮೀಟರ್‌ ಜಾಗೆ ಒತ್ತುವರಿಯಾಗಿದೆ. ಲೋಕೋಪಯೋಗಿ ಇಲಾಖೆಯ ಆಸ್ತಿಯಾಗಿದ್ದರೂ ದುರಸ್ತಿಗೊಳಿಸಿ ಮರು ಬಳಕೆಗೆ ಪ್ರಯತ್ನಿಸಿಲ್ಲ. ಮಾಹಿತಿ ಪ್ರಕಾರ ಏಳೆಂಟು ವರ್ಷಗಳ ಹಿಂದೆ ಇಲಾಖೆಯ ಪರಿಚಾರಕರು ವಾಸವಾಗಿದ್ದರೂ, ಅವರು ಬಿಟ್ಟ ನಂತರ ಮನೆಗಳು ನಿರುಯುಕ್ತವಾಗಿವೆ.

ಮಾದರಿ ಮನೆಗಳು ಯಾಕೆ: ಈ ಹಿಂದೆ ಲೋಕೋಪಯೋಗಿ ಇಲಾಖೆ ಜನತಾ ಮನೆಗಳನ್ನು ನಿರ್ಮಿಸುತ್ತಿತ್ತು. ತಾಲೂಕಿಗೆ ಮಾದರಿಯಾಗಿರಲಿ ಎಂದು ಮಾದರಿ ಮನೆಗಳನ್ನು ನಿರ್ಮಿಸಿತ್ತು. ಈ ಮನೆಗಳ ಮಾದರಿಯಾಗಿಟ್ಟುಕೊಂಡು ಮನೆ ನಿರ್ಮಿಸುವ ಉದ್ದೇಶ ಹೊಂದಿತ್ತು. ನಂತರ ಸರ್ಕಾರ ಲೋಕೋಪಯೋಗಿ ಇಲಾಖೆಯಿಂದ ವಸತಿ ಇಲಾಖೆಗೆ ಪ್ರತ್ಯೇಕಿಸಿದ್ದರಿಂದ, ಲೋಕೋಪಯೋಗಿ ಜನತಾ ಮನೆ ಕೈ ಬಿಟ್ಟಿದೆ. ಹೀಗಾಗಿ ಈ ಮಾದರಿ ಮನೆಗಳನ್ನು ಸುಸ್ಥಿಯಲ್ಲಿಡಲು ಇಲ್ಲವೇ ತಮ್ಮ ಸಿಬ್ಬಂದಿಗೆ ಬಳಸಿಕೊಳ್ಳದೇ ನಿರ್ಲಕ್ಷವಹಿಸಿದೆ. ಕಚೇರಿಗಳ ಕಟ್ಟಡ, ದುರಸ್ತಿ, ಸುಣ್ಣ ಬಣ್ಣಕ್ಕೆ ಲಕ್ಷಾಂತರ ರೂ. ಖರ್ಚು ಮಾಡುವ ಇಲಾಖೆ ತಮ್ಮದೇ ಆದ ಈ ಮಾದರಿ ಮನೆಗಳ ಮರುದುರಸ್ತಿಗೆ ಮುಂದಾಗಿಲ್ಲ.

ಜಾಗೆಯ ಮೇಲೆ ಕಣ್ಣು: ಸದ್ಯ ಮನೆಗಳ ಮೌಲ್ಯಕ್ಕಿಂತ ಜಾಗೆಯ ಮೌಲ್ಯ ಹೆಚ್ಚಿದೆ. ಈ ಜಾಗೆ ಲಕ್ಷಾಂತರ ರೂ. ಮೌಲ್ಯದ್ದು, ಈಗಾಗಲೇ ಮನೆಯ ಸುತ್ತಲಿನ ಜಾಗೆ ಒತ್ತುವರಿಯಾಗಿದೆ. ತಾಲೂಕಿಗೆ ಮಾದರಿಯಾಗಿದ್ದ ಕಟ್ಟಡಗಳು, ಕಣ್ಮರೆಯಾಗುವ ಆತಂಕ ಸಾರ್ವಜನಿಕವಾಗಿ ವ್ಯಕ್ತವಾಗಿದೆ.

ಲೋಕೋಪಯೋಗಿ ಇಲಾಖೆಯ ಮಾದರಿ ಮನೆಗಳ ಇರುವ ವಿಚಾರಗೊತ್ತಿಲ್ಲ. ಯಾರೂ ಗಮನಕ್ಕೆ ತಂದಿಲ್ಲ. ಖುದ್ದು ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳುವೆ.•ಅಮರೇಗೌಡ ಪಾಟೀಲ ಬಯ್ನಾಪುರ, ಶಾಸಕ

ಈ ಮನೆಗಳು ಲೋಕೋಪಯೋಗಿ ಇಲಾಖೆಯ ಅಧೀನದಲ್ಲಿದ್ದು ಈ ಮೊದಲು ಕಚೇರಿಯ ಇಬ್ಬರು ಪರಿಚಾಲಕರು ಬಳಸಿಕೊಂಡಿದ್ದರು. ನಂತರ ನಿರುಪಯುಕ್ತವಾಗಿವೆ. ಇಲಾಖೆಯ ಮಾದರಿ ಮನೆಗಳ ವಾಸ್ತವ ಸ್ಥಿತಿ ಪರಿಶೀಲಿಸಿ ಮರುದುರಸ್ತಿಗೆ ಕ್ರಮ ಕೈಗೊಳ್ಳಲಾಗುವುದು.•ಭೀಮಶೇನರಾವ್‌ ವಜ್ರಬಂಡಿ ಲೋಕೋಪಯೋಗಿ ಇಲಾಖೆ ಸಹಾಯಕ ಇಂಜನಿಯರ್‌

ಟಾಪ್ ನ್ಯೂಸ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.