ಮುಸ್ಲಿಮರಿಲ್ಲದ ಊರಲ್ಲಿ ಮೊಹರಂ ಸಂಭ್ರಮ

ಕುರಬನಾಳದಲ್ಲಿ ಹಿಂದೂಗಳೇ ಆಚರಿಸುತ್ತಾರೆ ಮೊಹರಂ |ಹಳ್ಳಿಯಲ್ಲಿ ನೆಲೆಸಿಲ್ಲ ಒಂದೇ ಒಂದು ಮುಸ್ಲಿಂ ಕುಟುಂಬ

Team Udayavani, Aug 20, 2021, 9:34 PM IST

cfdff

ಕುಷ್ಟಗಿ: ಮೊಹರಂ ಮುಸ್ಲಿಮರ ಪಾಲಿಗೆ ಪವಿತ್ರ ಹಬ್ಬ ಎನ್ನುವುದು ಜನಜನಿತ. ತಾಲೂಕಿನ ಕುರಬನಾಳ ಗ್ರಾಮದಲ್ಲಿ ಒಂದೇ ಒಂದು ಮುಸ್ಲಿಂ ಕುಟುಂಬ ನೆಲೆಸಿಲ್ಲ. ಹೀಗಿದ್ದರೂ ಮೊಹರಂ ಹಬ್ಬವನ್ನು ಹಿಂದೂಗಳೇ ಆಚರಿಸುತ್ತಿರುವುದು ವಿಶೇಷ.

ಕುರಬನಾಳ ಗ್ರಾಮದಲ್ಲಿ ಮುಸ್ಲಿಂ ಕುಟುಂಬಗಳು ಇಲ್ಲದೇ ಇದ್ದರೂ, ಮೊಹರಂ ಆಚರಣೆ ನಿಂತಿಲ್ಲ. ವರ್ಷದಿಂದ ವರ್ಷಕ್ಕೆ ಶ್ರದ್ಧೆ ಭಕ್ತಿಯಿಂದ ಹಾಗೂ ವೈಭವದಿಂದ ಜರುಗುತ್ತದೆ. ಈ ಅಲಾಯಿ ದೇವರನ್ನು ಹಿಡಿಯುವವರು ಹಿಂದೂಗಳೇ ಆಗಿದ್ದು, ಆರಾಧಿ ಸುವ ಭಕ್ತಾದಿಗಳೂ ಹಿಂದೂಗಳೇ ಆಗಿರುವುದು ವಿಶೇಷ.

ಭಕ್ತಾದಿಗಳು ಮಸೀದಿ ನಿರ್ಮಿಸಿದ್ದು, ಪ್ರತಿ ವರ್ಷವೂ ಭಕ್ತಿ ಭಾವದಿಂದ ಯಮನೂರ ದೇವರ ಮೊಹರಂ ಹಬ್ಬ ಆಚರಿಸಲಾಗುತ್ತಿದೆ. ಗ್ರಾಮದಲ್ಲಿ ಲಿಂಗಾಯತ, ಕುರುಬರು, ವಾಲ್ಮೀಕಿ, ಗಾಣಗೇರ, ಹರಿಜನ ಜನಾಂಗದವರಿದ್ದಾರೆ. ಒಂದೇ ಒಂದು ಕುಟುಂಬ ಮುಸ್ಲಿಮರು ಇಲ್ಲ. ಇಲ್ಲಿನ ವಿಶೇಷತೆ ಏನೆಂದರೆ, ಮೊಹರಂ ಆಚರಣೆ ಹಿನ್ನೆಲೆಯಲ್ಲಿ ನಡೆಯುವ ಈ ಆಚರಣೆಯಲ್ಲಿ ಓದುಸುವಿಕೆ, ದೇವರ ಕೆಂಡದ ಸೇವೆ, ದೇವರು, ಡೋಣಿ ಹೊರುವುದು ಈ ಎಲ್ಲ ಆಚರಣೆಗಳು ಹಿಂದೂಗಳಿಂದಲೇ ನಡೆಯುತ್ತಿವೆ.

ಪಾಂಜಾಗಳು ಬೇಡಿದ ವರವನ್ನು ಪಾಲಿಸುತ್ತವೆ ಎನ್ನುವ ಧಾರ್ಮಿಕ ನಂಬಿಕೆ ಹಿನ್ನೆಲೆಯಲ್ಲಿ ಗುದ್ದಲಿ ಹಾಕುವ ದಿನದಿಂದ ಮೊಹರಂ ಕೊನೆಯವರೆಗೂ ಆಚರಣೆಗಳು ಭಕ್ತಿ ಶ್ರದ್ಧೆಯಿಂದ ನಡೆಯುತ್ತವೆ. ದೇವರ ಪ್ರತಿಷ್ಠಾಪನೆ ವೇಳೆಯಲ್ಲಿ ಹರಕೆ ತೀರಿಸುವುದು ಹಿಂದಿನಿಂದ ನಡೆದುಕೊಂಡ ಸಂಪ್ರದಾಯ. ಗುರುವಾರ ನಡೆದ ಅಲಾಯಿ ದೇವರನ್ನು ಶರಣಪ್ಪ ಬಡಿಗೇರ, ರಮೇಶ ಜೂಲಕಟ್ಟಿ, ಬಸವರಾಜ್‌ ಬಡಿಗೇರ, ಹನುಮಂತ ತರಲಕಟ್ಟಿ, ಮೌನೆಶ ಬಡಿಗೇರ, ಯಮನೂರಪ್ಪ ತೆಮ್ಮಿನಾಳ, ನಾಗರಾಜ್‌ ಪವಾಡೆಪ್ಪನವರ, ಹನುಮಂತ ಪೂಜಾರಿ, ಬಸವರಾಜ್‌ ಕುರಗೋಡ್‌ ಅವರು, ಅಲಾಯಿ ದೇವರು ಹಿಡಿದು ಗ್ರಾಮದಲ್ಲಿ ಸವಾರಿ ನಡೆಸಿದರು.

ಟಾಪ್ ನ್ಯೂಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.