ಮುಧೋಳ ಕೆರೆ ಹೂಳೆತ್ತಲು ಇಂದು ಚಾಲನೆ


Team Udayavani, May 26, 2019, 12:05 PM IST

kopala-tdy-1..

ಮುಧೋಳ ಗ್ರಾಮ ಕೆರೆಯ ವಿಹಂಗನ ನೋಟ.

ಯಲಬುರ್ಗಾ: ನಾಲ್ಕು ಗ್ರಾಮಗಳಿಗೆ ಅಂರ್ತಜಲ ಮೂಲವಾಗಿರುವ ತಾಲೂಕಿನ ಮುಧೋಳ ಗ್ರಾಮದ ಕೆರೆ ಹೂಳೆತ್ತುವ ಕಾರ್ಯ ಗ್ರಾಪಂ ಹಾಗೂ ಸಾರ್ವಜನಿಕರ ಸಹಭಾಗಿತ್ವದಲ್ಲಿ ಮೇ 26ರಂದು ಆರಂಭವಾಗಲಿದೆ.

ಸಾರ್ವಜನಿಕರ ಸಹಭಾಗಿತ್ವದಲ್ಲಿ ಆರಂಭಗೊಳ್ಳಲಿರುವ ಕಾಮಗಾರಿಗೆ ಎರಡು ಜೆಸಿಬಿ ಯಂತ್ರಗಳನ್ನು ಬಳಸಲಾಗುತ್ತದೆ. ಗ್ರಾಮಸ್ಥರು ಸ್ವಯಂ ಪ್ರೇರಿತರಾಗಿ ಟಿಪ್ಪರ್‌, ಟ್ರ್ಯಾಕ್ಟರ್‌ಗಳನ್ನು ಕೆಲಸಕ್ಕೆ ಬಿಡಲು ಒಪ್ಪಿಕೊಂಡಿದ್ದಾರೆ. ಈ ಕಾಮಗಾರಿ 25 ದಿನಗಳವರೆಗೆ ನಡೆಯಲಿದೆ.

ನಾಲ್ಕು ಗ್ರಾಮಗಳಿಗೆ ಅನುಕೂಲ: ಈ ಕೆರೆ ಒಟ್ಟು 14 ಎಕರೆ ವ್ಯಾಪ್ತಿ ಹೊಂದಿದೆ. ಮುಧೋಳ ಕೆರೆಯು 4 ಗ್ರಾಮಗಳಿಗೆ ಅಂರ್ತಜಲ ಮೂಲವಾಗಿದೆ. ಮುಧೋಳ, ಕರಮುಡಿ, ಹಿರೇಮ್ಯಾಗೇರಿ ಮತ್ತು ಝಲಜೇರಿ ಸೇರಿದಂತೆ ಇನ್ನಿತರ ಗ್ರಾಮಗಳು ಕೆರೆಯ ಪ್ರಯೋಜನೆ ಪಡೆಯಲಿವೆ.

ಜಾಗೃತಿ: ಕೆರೆ ಹೂಳೆತ್ತುವ ಕಾರ್ಯ ನಿಮಿತ್ತ ಈಗಾಗಲೇ ಗ್ರಾಮಸ್ಥರು ಹಲವಾರು ಪೂರ್ವಭಾವಿ ಸಭೆಗಳನ್ನು ಮಾಡಿದ್ದಾರೆ. ಕೆರೆ ಪುನರುಜ್ಜೀವನ ನಮ್ಮ ಆಶಯ ಎಂಬ ಧ್ಯೇಯ ವಾಖ್ಯೆದೊಂದಿಗೆ ಗ್ರಾಮದಲ್ಲಿ ಜಾಗೃತಿ ಮೂಡಿಸಲಾಗಿದೆ. ಗ್ರಾಮದ ಶಾಲಾ ಶಿಕ್ಷಕರು, ಆರೋಗ್ಯ ಇಲಾಖೆ, ಸಿಬ್ಬಂದಿಗಳು, ಗ್ರಾಮದ ಸರಕಾರಿ ನೌಕರರು, ಗ್ರಾಪಂ ಸಿಬ್ಬಂದಿಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಕೆರೆ ಅಭಿವೃದ್ಧಿಗೆ ದೇಣಿಗೆ ನೀಡುತ್ತಿದ್ದಾರೆ.

ಸಮಿತಿ ರಚನೆ: ಕೆರೆಯ ಅಭಿವೃದ್ಧಿಗೋಸ್ಕರವಾಗಿ ಗ್ರಾಮದಲ್ಲಿ ಕೆರೆ ಪುನರುಜ್ಜೀವನ ಸಮಿತಿಯೊಂದನ್ನು ರಚಿಸಲಾಗಿದೆ. ಈ ಸಮಿತಿಯಲ್ಲಿ 21 ಜನ ಪದಾಧಿಕಾರಿಗಳು ಇದ್ದಾರೆ. ಕೆರೆ ಅಭಿವೃದ್ಧಿಗೆ ಗ್ರಾಪಂ ನರೇಗಾ ಯೋಜನೆಯಡಿ 10 ಲಕ್ಷ ರೂ. ಹಾಗೂ 14ನೇ ಹಣಕಾಸು ಯೋಜನೆಯಡಿ 5 ಲಕ್ಷ ರೂ. ನೀಡಿದೆ.

ಮಾದರಿ ಕೆರೆ ನಿರ್ಮಾಣಕ್ಕೆ ಪಣ: ಕೆರೆಯನ್ನು ಸ್ವಚ್ಛಗೊಳಿಸಿ ಮುಳ್ಳು ಕಂಟಿಗಳನ್ನು ತೆರೆವುಗೊಳಿಸಿ ಕೆರೆ ಹೂಳೆತ್ತುವ ಕಾರ್ಯ ನಡೆಯಲಿದೆ. ನಂತರದಲ್ಲಿ ಕೆರೆಗೆ ಸಂಪೂರ್ಣ ಒಡ್ಡು ನಿರ್ಮಿಸಿ ಸುತ್ತಲೂ ತಂತಿಬೇಲಿ ಅಳವಡಿಸಿ ಸಸಿ ನೆಡುವ ಯೋಜನೆಯ ರೂಪರೇಷಗಳನ್ನು ಸಿದ್ಧಪಡಿಸಲಾಗಿದೆೆ.

ಇಂದು ಚಾಲನೆ: ನಿಡಗುಂದಿಕೊಪ್ಪದ ಸಿದ್ದರಾಮ ದೇವರು, ರೋಣದ ಗುಲಗಂಜಿಮಠದ ಗುರುಪಾದ ದೇವರು ಕೆರೆ ಹೂಳೆತ್ತುವ ಕಾರ್ಯಕ್ಕೆ ಮೇ 26ರಂದು ಚಾಲನೆ ನೀಡಲಿದ್ದಾರೆ. ಶಾಸಕ ಹಾಲಪ್ಪ ಆಚಾರ್‌, ಮಾಜಿ ಸಚಿವ ಬಸವರಾಜ ರಾಯರಡ್ಡಿ, ಚುನಾಯಿತ ಪ್ರತಿನಿಧಿಗಳು ಹಾಗೂ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಕೆರೆ ಹೂಳೆತ್ತುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಕೆರೆ ಅಭಿವೃದ್ಧಿ ಪರ್ವ:

ತಾಲೂಕಿನಲ್ಲಿ ಈಗಾಗಲೇ ಕೊಪ್ಪಳ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಕಲಭಾವಿ ಕೆರೆ ಹೂಳೆತ್ತುವ ಕಾರ್ಯ ಶೇ.80ರಷ್ಟು ಕಾಮಗಾರಿ ಪೂರ್ಣಗೊಂಡಿದ್ದು ಯಶಸ್ವಿ ಹಂತಕ್ಕೆ ತಲುಪಿದೆ. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಂಗನಾಳ ಕೆರೆ ಹೂಳೆತ್ತುವ ಕಾರ್ಯ ನಡೆದಿದೆ. ಕಲಭಾವಿ, ಸಂಗನಾಳ ನಂತರ ಇದೀಗ ಮುಧೋಳ ಕೆರೆ ಅಭಿವೃದ್ಧಿಗೊಳಿಸಲು ಸಿದ್ಧತೆ ನಡೆಸಲಾಗಿದೆ. ತಾಲೂಕಿನಲ್ಲಿ ಕೆರೆ ಕಾಯಕ ಮುಂದುವರಿದಿದ್ದು ತಾಲೂಕಿನಲ್ಲಿ ನಡೆಯುತ್ತಿರುವ ಜಲಜಾಗೃತಿ ಕಾರ್ಯ ಸ್ವಾಗತಾರ್ಹ.
•ಮಲ್ಲಪ್ಪ ಮಾಟರಂಗಿ

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ

Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.