ನಿಮ್ಮದೇ ಹಣ ನಿಮ್ಮ ಮನೆಬಾಗಿಲಿಗೆ ತಲುಪಿಸುವುದು ನನ್ನ ಜೀವನದ ಸವಾಲು : ಹೆಚ್ ಡಿಕೆ

ಕೆಲವೇ ಕೆಲವು ಜನ ದೋಚುತ್ತಿದ್ದು,ಇದಕ್ಕೆ ಕಡಿವಾಣ ಹಾಕುವೆ...

Team Udayavani, Jan 30, 2023, 7:42 PM IST

1–dssdsad

ಕುಷ್ಟಗಿ: ನಾಡಿನ ಆರೂವರೆ ಕೋಟಿ ಜನತೆ, ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಪ್ರತಿ ದಿನ ತೆರಿಗೆ ರೂಪದಲ್ಲಿ ಪಾವತಿಸುವ ಹಣವನ್ನು ವಿವಿಧ ಯೋಜನೆಗಳ ಮೂಲಕ ನಿಮ್ಮ ಮನೆಬಾಗಿಲಿಗೆ ತಲುಪಿಸುವುದೇ ನನ್ನ ಜೀವನದ ಸವಾಲು ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಇಲ್ಲಿನ ಹಸನಸಾಬ್ ದೋಟಿಹಾಳ ಜಾಗೆಯಲ್ಲಿ ಪಂಚರತ್ನ ಯೋಜನೆಗಳ ರಥ ಯಾತ್ರೆ ಹಾಗೂ ಜೆಡಿಎಸ್ ಪಕ್ಷದ ಸಮಾವೇಶ ಉದ್ಘಾಟಿಸಿ ಮಾತನಾಡಿ, ಯೋಜನೆಗಳಿಗೆ ಸಾಲ ಮಾಡುವುದಿಲ್ಲ, ಹೊರಗಿನಿಂದಲೂ ಸಾಲ ತರುವುದಿಲ್ಲ. ನಿಮ್ಮ ತೆರಿಗೆಯ ಹಣದಲ್ಲಿಯೇ ಖಜಾನೆ ತುಂಬಿಸುವೆ. ಖಜಾನೆಗೆ ತುಂಬಿಸಿದ ಹಣದಲ್ಲಿ ವಿವಿಧ ಯೋಜನೆಗಳ ಹೆಸರಿನಲ್ಲಿ ಕೆಲವೇ ಕೆಲವು ಜನ ದೋಚುತ್ತಿದ್ದು ಇದಕ್ಕೆ ಕಡಿವಾಣ ಹಾಕುವೆ ಎಂದರು.

ಇದಕ್ಕಾಗಿ 22 ಜಿಲ್ಲೆಗಳ ಪಂಚರತ್ನ ಯಾತ್ರೆ ಹಮ್ಮಿಕೊಂಡಿರುವುದಾಗಿ ವಿವರಿಸಿದ ಅವರು ಒಂದು ಬಾರಿ ಪರೀಕ್ಷಿಸಿ ಐದು ವರ್ಷದ ಬಹುಮತದ ಸರ್ಕಾರ ನೀಡಬೇಕೆಂದು ಮನವಿ ಮಾಡಿದರು. ಈ ಐದು ವರ್ಷದ ಮೇಲೆ ಒಂದು ದಿನ ಹೆಚ್ಚಿಗೆ ಕೇಳುವುದಿಲ್ಲ. ರೈತರಿಗೆ ಭೂಮಿ ಇರಲಿ ಇಲ್ಲದೇ ಇರಲಿ ಪ್ರತಿ ಕುಟುಂಬದ ಮಾಸಿಕ ಕನಿಷ್ಠ ಆದಾಯ 15ಸಾವಿರ ರೂ. ಬಾರದೇ ಇದ್ದಲ್ಲಿ ಪಕ್ಷವನ್ನೇ ವಿಸರ್ಜಿಸುವುದಾಗಿ ಸಾರ್ವಜನಿಕವಾಗಿ ಘೋಷಣೆ ಮಾಡಿದ್ದು, ಇನ್ನು ಮುಂದೆ ಮತ ಕೇಳಲು ಬರುವುದೇ ಇಲ್ಲ ಎಂದರು.

ನನ್ನ ಪಕ್ಷಕ್ಕೆ ಮತ ಯಾಕಿಲ್ಲ?
ಜಾತ್ಯತೀತ ಜನತಾದಳ ಹಾಗೂ ಕುಮಾರಸ್ವಾಮಿ ಅವರಿಗೆ ಶಕ್ತಿ ಇರುವುದು ಮೂರ್ನಾಲ್ಕು ಜಿಲ್ಲೆಗಳಿಗೆ ಸೀಮಿತ, ಉತ್ತರ ಕರ್ನಾಟಕದಲ್ಲಿ ಈ ಪಕ್ಷಕ್ಕೆ ಯಾರು ಮತ ಹಾಕುತ್ತಾರೆ ಎಂದು ಕೆಲವರು ಪ್ರಶ್ನಿಸುತ್ತಿದ್ದಾರೆ. ನನ್ನ ಈ ಪ್ರವಾಸದ ಸಂಧರ್ಭದಲ್ಲಿ ನನ್ನನ್ನು ಪ್ರೀತಿಸುತ್ತೀರಿ, ಹಾರೈಸುತ್ತೀರಿ, ಮುಂದಿನ ಸಿಎಂ ಎಂದು ಘೋಷಿಸುತ್ತೀರಿ. ಆದರೆ ಚುನಾವಣೆ ಸಂದರ್ಭದಲ್ಲಿ ಮತ ಯಾರಿಗೆ ಹಾಕುತ್ತೀರಿ? ಅದಕ್ಕೆ ಉತ್ತರವಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಇದರಲ್ಲಿ ನಮ್ಮದೂ ತಪ್ಪಿದ್ದು, ಅಭ್ಯರ್ಥಿಗಳ ಕೊರತೆಯಿಂದ ನನಗೆ ಮತ ಕೊಡುವ ಆಶೆ ಇದ್ದರೂ ಮತ ನೀಡಲು ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಪಂಚರತ್ನ ಯಾತ್ರೆಯಿಂದ ಐದು ವರ್ಷ ಅಧಿಕಾರ ನಿರ್ವಹಿಸುವ ಸಂಕಲ್ಪಕ್ಕಾಗಿ ಈ ಯಾತ್ರೆ ಎಂದರು.

ಜೆಡಿಎಸ್ ಕುಷ್ಟಗಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ತುಕಾರಾಮ್ ಸೂರ್ವೆ ಮಾತನಾಡಿ, 2023ರಲ್ಲಿ ಎಚ್.ಡಿ. ಕುಮಾಸ್ವಾಮಿ ಸಿಎಂ ಆಗುವುದು ಈ ಕ್ಷೇತ್ರದಲ್ಲಿ ನಾನು ಶಾಸಕರಾಗುವುದು ಖಚಿತವಾಗಿದೆ ಎಂದರು. ಕನಕಗಿರಿ ಕ್ಷೇತ್ರದ ಅಭ್ಯರ್ಥಿ ಅಶೋಕ ಉಮಲೂಟಿ, ಯಲಬುರ್ಗಾ ಕ್ಷೇತ್ರದ ಅಭ್ಯರ್ಥಿ ಮಲ್ಲನಗೌಡ ಕೋನಗೌಡ್ರು , ಕೊಪ್ಪಳ ಕ್ಷೇತ್ರದ ವೀರೇಶ ಮಹಾಂತಯ್ಯನಮಠ, ಜೆಡಿಎಸ್ ಜಂಟಿ ಕಾರ್ಯದರ್ಶಿ ಸಿ.ಎಂ. ಹಿರೇಮಠ, ಜೆಡಿಎಸ್ ಮಾಜಿ ಅಧ್ಯಕ್ಷ ಅಮರೇಗೌಡ ಪಾಟೀಲ, ರಾಜ್ಯ ಸಮಿತಿ ಸದಸ್ಯ ಶರಣಪ್ಪ ಕುಂಬಾರ, ಸುವರ್ಣ ಕುಂಬಾರ ಮತ್ತಿತರರಿದ್ದರು.

ಟಾಪ್ ನ್ಯೂಸ್

1-sadadasdasd

ನೂತನ ಸಂಸತ್ ಭವನಕ್ಕೆ ಪ್ರಧಾನಿ ದಿಢೀರ್ ಭೇಟಿ; ಕಾಮಗಾರಿಗಳ ಪರಿಶೀಲನೆ

ಬಾಲಾಜಿ ಸಕ್ಕರೆ ಕಾರ್ಖಾನೆ ಮೇಲೆ 2ನೇ ಬಾರಿ ಅಧಿಕಾರಿಗಳ ದಾಳಿ: ಲಕ್ಷಾಂತರ ಮೌಲ್ಯದ ಸೊತ್ತು ವಶ

ಬಾಲಾಜಿ ಸಕ್ಕರೆ ಕಾರ್ಖಾನೆ ಮೇಲೆ 2ನೇ ಬಾರಿ ಅಧಿಕಾರಿಗಳ ದಾಳಿ: ಲಕ್ಷಾಂತರ ಮೌಲ್ಯದ ಸೊತ್ತು ವಶ

ದೆಹಲಿಯಲ್ಲಿ ಗುಡುಗು ಸಹಿತ ಮಳೆ: 17 ವಿಮಾನಗಳ ಮಾರ್ಗ ಬದಲಾವಣೆ

ದೆಹಲಿಯಲ್ಲಿ ಗುಡುಗು ಸಹಿತ ಮಳೆ: 17 ವಿಮಾನಗಳ ಮಾರ್ಗ ಬದಲಾವಣೆ

1-wwqeq3

ಮೇರು ಗಾಯಕ; ಕಿರಾಣಾ ಘರಾಣಾ ಶೈಲಿಯ ಕೊಂಡಿ ಜಯತೀರ್ಥ ಮೇವುಂಡಿ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

shashikala-jolle

ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಎಫ್ ಐಆರ್

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1a-wasa

ವಿಜಯಪುರ: ಮಹಾರಾಷ್ಟ್ರ ಮೂಲದ ವ್ಯಕ್ತಿಯಿಂದ 6 ಲಕ್ಷ ರೂ.,480 ಗ್ರಾಂ ಚಿನ್ನ ವಶ

ಬಾಲಾಜಿ ಸಕ್ಕರೆ ಕಾರ್ಖಾನೆ ಮೇಲೆ 2ನೇ ಬಾರಿ ಅಧಿಕಾರಿಗಳ ದಾಳಿ: ಲಕ್ಷಾಂತರ ಮೌಲ್ಯದ ಸೊತ್ತು ವಶ

ಬಾಲಾಜಿ ಸಕ್ಕರೆ ಕಾರ್ಖಾನೆ ಮೇಲೆ 2ನೇ ಬಾರಿ ಅಧಿಕಾರಿಗಳ ದಾಳಿ: ಲಕ್ಷಾಂತರ ಮೌಲ್ಯದ ಸೊತ್ತು ವಶ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

M P K umar

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸಂಕಷ್ಟ; ಬಂಧಿಸುವಂತೆ ಕೋರ್ಟ್ ಆದೇಶ

ಬಿಜೆಪಿ ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರ ಇರುವಷ್ಟೇ ಸತ್ಯ: ಯಡಿಯೂರಪ್ಪ

ಬಿಜೆಪಿ ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರ ಇರುವಷ್ಟೇ ಸತ್ಯ: ಯಡಿಯೂರಪ್ಪ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1a-wasa

ವಿಜಯಪುರ: ಮಹಾರಾಷ್ಟ್ರ ಮೂಲದ ವ್ಯಕ್ತಿಯಿಂದ 6 ಲಕ್ಷ ರೂ.,480 ಗ್ರಾಂ ಚಿನ್ನ ವಶ

1-sadadasdasd

ನೂತನ ಸಂಸತ್ ಭವನಕ್ಕೆ ಪ್ರಧಾನಿ ದಿಢೀರ್ ಭೇಟಿ; ಕಾಮಗಾರಿಗಳ ಪರಿಶೀಲನೆ

ಬಾಲಾಜಿ ಸಕ್ಕರೆ ಕಾರ್ಖಾನೆ ಮೇಲೆ 2ನೇ ಬಾರಿ ಅಧಿಕಾರಿಗಳ ದಾಳಿ: ಲಕ್ಷಾಂತರ ಮೌಲ್ಯದ ಸೊತ್ತು ವಶ

ಬಾಲಾಜಿ ಸಕ್ಕರೆ ಕಾರ್ಖಾನೆ ಮೇಲೆ 2ನೇ ಬಾರಿ ಅಧಿಕಾರಿಗಳ ದಾಳಿ: ಲಕ್ಷಾಂತರ ಮೌಲ್ಯದ ಸೊತ್ತು ವಶ

ದೆಹಲಿಯಲ್ಲಿ ಗುಡುಗು ಸಹಿತ ಮಳೆ: 17 ವಿಮಾನಗಳ ಮಾರ್ಗ ಬದಲಾವಣೆ

ದೆಹಲಿಯಲ್ಲಿ ಗುಡುಗು ಸಹಿತ ಮಳೆ: 17 ವಿಮಾನಗಳ ಮಾರ್ಗ ಬದಲಾವಣೆ

1-sadsasd

ಹುಣಸೂರು: ರೌಡಿ ಶೀಟರ್ ತನ್ವೀರ್ ಬೇಗ್ ಗಡಿಪಾರು