ಅಂಜನಾದ್ರಿಗೆ ಮೈಸೂರು ಒಡೆಯರ್ ಕುಟುಂಬ ಭೇಟಿ; ದೇವರ ದರ್ಶನ
Team Udayavani, Jun 27, 2022, 9:06 AM IST
ಕೊಪ್ಪಳ: ಕಿಷ್ಕಿಂದಾ ಅಂಜನಾದ್ರಿ ಹನುಮಂತ ಜನಿಸಿದ ಸ್ಥಳವಾಗಿದೆ ಇದಕ್ಕೆ ಅನ್ಯರು ಯಾವುದೇ ಆಕ್ಷೇಪ ವ್ಯಕ್ತಪಡಿಸಬಾರದು. ಗ್ರಂಥ ಮತ್ತು ಶಿಲಾಶಾಸನಗಳಲ್ಲಿ ಪ್ರಾಕೃತಿಕವಾಗಿ ಇದನ್ನು ದಾಖಲೆ ಸಮೇತ ತೋರಿಸಲಾಗಿದೆ ಎಂದು ಮೈಸೂರು ಮಹಾರಾಜ ಯದುವೀರ್ ಒಡೆಯರ್ ಅಭಿಪ್ರಾಯಪಟ್ಟರು.
ಅವರು ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಕಿಷ್ಕಿಂದಾ ಅಂಜನಾದ್ರಿ ಗೆ ಸೋಮವಾರ ಕುಟುಂಬ ಸಮೇತ ಭೇಟಿಯಾಗಿ ಆಂಜನೇಯನ ದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಸಹಸ್ರಾರು ವರ್ಷಗಳ ಹಿಂದೆ ಕಿಷ್ಕಿಂದಾ ಅಂಜನಾದ್ರಿ ಮತ್ತು ಇಲ್ಲಿನ ಈಗಿನ ತುಂಗಭದ್ರಾ ಹಿಂದೆ ಪಂಪಾ ನದಿ ಎಂದು ಕರೆಯಲ್ಪಡುತ್ತಿತ್ತು ವಾಲ್ಮೀಕಿ ರಾಮಾಯಣ ಸೇರಿದಂತೆ ಅನೇಕ ರಾಮಾಯಣದಲ್ಲಿ ಕಿಷ್ಕಿಂದಾ ಅಂಜನಾದ್ರಿ ಪರ್ವತ, ಆನೆಗೊಂದಿ ಬಗ್ಗೆ ಚಿಂತಾಮಣಿ, ಪಂಪಾಸರೋವರದ ಬಗ್ಗೆ ಉಲ್ಲೇಖವಿದೆ.
ಆದ್ದರಿಂದ ಹನಮಂತ ಕಿಷ್ಕಿಂದಾ ಅಂಜನಾದ್ರಿ ಜನ್ಮ ತಾಳಿದ. ಇತ್ತೀಚಿನ ವರ್ಷಗಳಲ್ಲಿ ಈ ಕ್ಷೇತ್ರ ಶಕ್ತಿಯುತವಾಗಿ ಬೆಳೆದಿದ್ದು ಇದನ್ನು ಕೆಲವು ಹನುಮಂತ ನಮ್ಮಲ್ಲಿ ಜನಿಸಿದ ಎಂದು ಹೇಳುತ್ತಿರುವುದು ಸರಿಯಲ್ಲ. ಸರಕಾರ ಪ್ರವಾಸೋದ್ಯಮ ದೃಷ್ಟಿಯಿಂದ ಈ ಕ್ಷೇತ್ರವನ್ನು ಇನ್ನಷ್ಟು ಅಭಿವೃದ್ಧಿಪಡಿಸಬೇಕಿದೆ ಎಂದರು.
ಸ್ಥಳೀಯ ಯುವಕರಿಗೆ ಅಂಜನಾದ್ರಿ ಬೆಟ್ಟ ಸುತ್ತಮುತ್ತಲ ಪ್ರದೇಶಗಳ ಬಗ್ಗೆ ಪ್ರವಾಸೋದ್ಯಮ, ಕನ್ನಡ ಸಂಸ್ಕೃತಿ ಮತ್ತು ಪುರಾತತ್ವ ಇಲಾಖೆ ವಿಶೇಷ ತರಬೇತಿ ನೀಡಿ ಪ್ರವಾಸಿಗರಿಗೆ ಸ್ಥಳ ಮಹಿಮೆ ಬಗ್ಗೆ ಪ್ರವಾಸಿ ಗೈಡ್ ಗಳು ಮಾರ್ಗದರ್ಶನ ನೀಡಲು ಸರ್ಕಾರ ಕ್ರಮ ಕೈಗೊಳ್ಳಬೇಕು. ಮುಖ್ಯಮಂತ್ರಿಗಳು ವಿಶೇಷ ಆಸಕ್ತಿ ಹೊಂದಿದ್ದು ಈ ಕ್ಷೇತ್ರ ಇನ್ನೂ ಅಭಿವೃದ್ಧಿ ಯಾಗುತ್ತದೆ ಸ್ಥಳೀಯರು ಸೇರಿದಂತೆ ಎಲ್ಲರನ್ನು ಸೇರಿಸಿಕೊಂಡು ಕಿಷ್ಕಿಂದಾ ಅಂಜನಾದ್ರಿಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪರಿಚಯಿಸಬೇಕಿದೆ ಎಂದರು.
ಇದನ್ನೂ ಓದಿ:ಜು. 1ರಿಂದ ಏಕಬಳಕೆ ಪ್ಲಾಸ್ಟಿಕ್ ನಿಷೇಧ: ರಾಜ್ಯದಲ್ಲೂ ಕಟ್ಟುನಿಟ್ಟಿನ ಜಾರಿಗೆ ಕ್ರಮ
ಬಹುದಿನಗಳಿಂದ ಇಲ್ಲಿಗೆ ಬರಬೇಕೆಂಬ ಆಸೆಯನ್ನು ಕುಟುಂಬ ವರ್ಗದವರು ವ್ಯಕ್ತಪಡಿಸಿದ್ದರು ಇದೀಗ ಕಾಲ ಕೂಡಿ ಬಂದಿದೆ ಕಿಷ್ಕಿಂದಾ ಅಂಜನಾದ್ರಿ ಗೆ ಬಂದು ವಿಶೇಷ ಪೂಜೆ ಮಾಡಿ ಲೋಕ ಕಲ್ಯಾಣಕ್ಕಾಗಿ ಪ್ರಾರ್ಥನೆ ಮಾಡುತ್ತೇವೆ .ಇಲ್ಲಿಯ ಪ್ರಕೃತಿ ಸೌಂದರ್ಯ ಅತ್ಯಂತ ಸೊಗಸಾಗಿದೆ ಪ್ರತಿಯೊಬ್ಬರೂ ಇಲ್ಲಿಗೆ ಆಗಮಿಸಿ ದೇವರ ದರ್ಶನ ಪಡೆಯಬೇಕು. ಇಲ್ಲಿಯ ಪ್ರಕೃತಿಯನ್ನು ಪರಿಸರವನ್ನು ಸಂರಕ್ಷಣೆ ಮಾಡಲು ಪ್ಲಾಸ್ಟಿಕ್ ಸೇರಿದಂತೆ ಪರಿಸರಕ್ಕೆ ವಿರುದ್ಧವಾದ ವಸ್ತುಗಳನ್ನು ಇಲ್ಲಿ ಬಳಸಬಾರದು ಎಂದು ಮನವಿ ಮಾಡಿದರು.
ಮೈಸೂರಿನ ಮಹಾರಾಜ ಯದುವೀರ ಕೃಷ್ಣದತ್ತ ಒಡೆಯರ್ ಅವರನ್ನು ದೇವಾಲಯದ ಸಮಿತಿ ವತಿಯಿಂದ ಬೆಟ್ಟಗಳಿಗೆ ಸ್ವಾಗತ ಮಾಡಿ ಸನ್ಮಾನಿಸಲಾಯಿತು. ನಂತರ ಯದುವೀರ ದತ್ತ ಒಡೆಯರ್ ಹಾಗೂ ಕುಟುಂಬ ಸದಸ್ಯರು 575 ಮೆಟ್ಟಿಲು ಹತ್ತಿ ಆಂಜನೇಯನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು ಮತ್ತು ಕುಟುಂಬದ ಸದಸ್ಯರು ಹಾಗೂ ದೇವಾಲಯಕ್ಕೆ ಆಗಮಿಸಿದ್ದ ಭಕ್ತರೊಂದಿಗೆ ಮೊಬೈಲ್ ಮೂಲಕ ಸೆಲ್ಫಿ ತೆಗೆಸಿಕೊಂಡರು.
ಈ ಸಂದರ್ಭದಲ್ಲಿ ದೇವಾಲಯ ಸಮಿತಿಯ ಸಿಬ್ಬಂದಿ ವರ್ಗದವರು ಪೊಲೀಸರು ಕಂದಾಯ ಇಲಾಖೆ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೋದಿಗೆ ಹೆದರಿ,ಸೋನಿಯಾ,ಖರ್ಗೆ ಸೇರಿ ಹಲವು ಸಚಿವರು ಚುನಾವಣೆಗೆ ಸ್ಪರ್ಧಿಸುತ್ತಿಲ್ಲ: ಸೂಲಿಬೆಲೆ
BJP ಹೈಕಮಾಂಡ್ ವಿರುದ್ದ ಕೆರಳಿದ ಸಂಸದ ಸಂಗಣ್ಣ ಕರಡಿ
Koppal: ತುಂಗಭದ್ರಾ ಕಾಡಾ ಅಧ್ಯಕ್ಷರಾಗಿ ಹಸನ್ಸಾಬ್ ದೋಟಿಹಾಳ ನೇಮಕ
Koppala; ಈಶ್ವರಪ್ಪಗೆ ಲೋಕಸಭಾ ಟಿಕೆಟ್ ನೀಡಲು ಕುರುಬ ಸಮಾಜದ ಒತ್ತಾಯ
ಆನೆಗೊಂದಿ ಉತ್ಸವ:ಉಳಿದ ಆಹಾರ ಪದಾರ್ಥ ತಿಂದು 30 ಕುರಿ-ಮೇಕೆ ಸಾವು; 180ಕ್ಕೂ ಹೆಚ್ಚು ಅಸ್ವಸ್ಥ