ಪಂಚಮಿ ಹಬ್ಬದ ಪ್ರಯುಕ್ತ ನಾಗದೇವತೆಗೆ ವಿಶೇಷ ಪೂಜೆ
Team Udayavani, Aug 1, 2022, 5:42 PM IST
ದೋಟಿಹಾಳ: ನಾಡಿಗೆ ದೊಡ್ಡ ಹಬ್ಬ ಎಂಬ ಖ್ಯಾತಿ ಪಡೆದ ನಾಗರ ಪಂಚಮಿ ಹಬ್ಬವನ್ನು ರಾಜ್ಯದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತದೆ.
ಶ್ರಾವಣ ಮಾಸದ ಮೊದಲ ಹಬ್ಬವಾದ ನಾಗರಪಂಚಮಿ ಹಬ್ಬದಿಂದ ಸಾಲ ಸಾಲು ಹಬ್ಬಗಳು ಆರಂಭವಾಗುತ್ತವೆ. ನಾಗರಪಂಚಮಿ ನಂತರ ರಕ್ಷಾಬಂಧನ, ಕೃಷ್ಣ ಜನ್ಮಾಷ್ಟಮಿ, ಗಣೇಶ ಚತುರ್ಥಿ, ದಸರಾ, ದೀಪಾವಳಿ ಹೀಗೆ ಹಬ್ಬಗಳು ಒಂದರ ಹಿಂದೊಂದರಂತೆ ಹಬ್ಬಗಳು ಆರಂಭವಾಗುತ್ತವೆ. ಹೀಗಾಗಿ ಸೋಮವಾರ ಕೇಸೂರ ದೋಟಿಹಾಳ ಅವಳಿ ಗ್ರಾಮದಲ್ಲಿ ನಾನಾ ಕಡೆಗಳಲ್ಲಿ ನಾಗರಪಂಚಮಿ ಹಬ್ಬದ ಪ್ರಯುಕ್ತ ನಾಗದೇವತೆ ವಿಗ್ರಹಕ್ಕೆ ಸುಮಂಗಲಿಯರು ಹಾಲನ್ನು ಎರೆದರು.
ಶ್ರಾವಣ ಮಾಸದ ಪಂಚಮಿ ದಿನದಂದು ನಾಗ ದೇವತೆಗೆ ಹಾಲನ್ನು ಎರೆಯುವುದು ಪದ್ದತಿ, ದೋಟಿಹಾಳ ಗ್ರಾಮದ ಶುಖಮುನಿಸ್ವಾಮಿ ಮಠದ ಹತ್ತಿರ, ರುದ್ರಮುನಿ ಸ್ವಾಮಿ ಮಠದ ಹತ್ತಿರ, ಕಾಳೀನ ಸಂತೆ ಬಾಜರದ ಅಶ್ವಥನಾರಾಯಣ ಕಟ್ಟೆಯಲ್ಲಿ, ಹನುಮಂತನ ದೇವಸ್ಥಾನದ ಹತ್ತಿರ, ಶುಖಮುನಿಸ್ವಾಮಿ ಪಾಧಗಟ್ಟಿ ಹತ್ತಿರ, ಕೇಸೂರ ಗ್ರಾಮದ ಮಹಾಂತೇಶ್ವರ ಸ್ವಾಮಿ ಮಠದ ಹತ್ತಿರ, ಮರಳೀಮಠ ಅವರ ಕಟ್ಟೆಯ ಹತ್ತಿರ ಮತ್ತು ಬಸವಣ್ಣನ ದೇವಸ್ಥಾನದಲ್ಲಿ ಹೆಂಗಳೆಯರು ನಾಗ ದೇವತೆಗೆ ಹಾಲೆರದು ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.
ಹಬ್ಬದ ಪ್ರಯುಕ್ತ ಗ್ರಾಮದ ಪ್ರತಿಮನೆಗಳಲ್ಲಿ ಹಲವಾರು ಬಗೆಯ ಲಾಡೂಗಳು(ಉಂಡಿ) ಎಳ್ಳು, ಶೇಂಗಾ, ಕಡಲೆ, ಹೆಸರು ಹಾಗೂ ರವೆಯ ಉಂಡೆಗಳನ್ನು ಮತ್ತು ಉಪ್ಪು ಗಾರಿಗೆ, ಸಿಹಿ ಗಾರಿಗೆ ತಯಾರು ಮಾಡಿ ನಾಗದೇವತೆಗೆ ಪೂಜೆ ಸಲ್ಲಿಸಿ ಹಾಲನ್ನು ಎರೆದು ನಂತರ ಗ್ರಾಮದ ನಾನಾ ಭಾಗಗಳಲ್ಲಿ ಗಿಡಗಳಿಗೆ ಹಗ್ಗವನ್ನು ಕಟ್ಟಿ ಮಕ್ಕಳು ಜೋಕಾಲಿಯನ್ನು ಆಡುತ್ತಿರುವುದು ಕಂಡುಬಂತು.
ಕೆಲವು ಕಡೆಗಳಲ್ಲಿ ಹೊಸದಾಗಿ ಮದುವೆಯಾದ ನವಜೋಡಿಗಳು ನಾಗರಪಂಚಮಿ ಹಬ್ಬದ ಪ್ರಯುಕ್ತ ನಾಗದೇವತೆ ವಿಗ್ರಹಕ್ಕೆ ಹಾಲನ್ನು ಎರೆಯುತ್ತಿರುವುದು ಕಂಡು ಬಂತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavati: ಜೈ ಶ್ರೀರಾಮ್ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
MUST WATCH
ಹೊಸ ಸೇರ್ಪಡೆ
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು