ಇಂದರಗಿ ಕೆರೆಗೆ ನಾಲಾ ಜೋಡಣಾ ಕಾರ್ಯ


Team Udayavani, Apr 23, 2019, 2:34 PM IST

kopp-2

ಕೊಪ್ಪಳ: ಜಿಲ್ಲೆಯಲ್ಲಿ ಹೂಳೆತ್ತುವ ಕ್ರಾಂತಿ ಜೋರಾಗಿ ಸಾಗುತ್ತಿದೆ. ಗವಿಸಿದ್ದೇಶ್ವರ ಸ್ವಾಮೀಜಿಗಳ ಸಾರಥ್ಯದಲ್ಲಿ ಹಿರೇಹಳ್ಳ, ನಿಡಶೇಷಿ, ಕಲ್ಲಬಾವಿ ಸೇರಿದಂತೆ ಎಲ್ಲೆಡೆಯೂ ಜಲಕ್ರಾಂತಿ ಮೊಳಗುತ್ತಿದೆ. ಇದರೊಟ್ಟಿಗೆ ತಾಲೂಕಿನ ಇಂದರಿ ಗ್ರಾಮದಲ್ಲೂ ಕೆರೆಗೆ ನಾಲಾ ಜೋಡಣೆಯ ಕ್ರಾಂತಿಯೂ ಸದ್ದಿಲ್ಲದೇ ನಡೆಯುತ್ತಿದ್ದು ಗ್ರಾಮಸ್ಥರೇ ಮುಂದೆ ನಿಂತು ನಾಲಾ ಜೋಡಣೆಗೆ ಜೈ ಎಂದಿದ್ದಾರೆ.

ಹೌದು, ಸದಾ ಬರಗಾಲ ಪೀಡಿತ ಪ್ರದೇಶವೆಂದು ಹಣೆಪಟ್ಟಿ ಹೊತ್ತಿರುವ ಕೊಪ್ಪಳ ಜಿಲ್ಲೆಯಲ್ಲಿ ಈ ವರ್ಷ ಜಲಕ್ರಾಂತಿಯ ಕಹಳೆ ಮೊಳಗುತ್ತಿದೆ. ಅದರಲ್ಲೂ ಇಂದರಗಿ ಗ್ರಾಮದ ಸೀಮಾದಲ್ಲಿ ಹೊಸ ಕೆರೆಗೆ ಗುಡ್ಡದಿಂದ ನಾಲಾ ಜೋಡಣೆ ಕಾರ್ಯ ಭರ್ಜರಿಯಾಗಿ ನಡೆದಿದೆ.

ನಾಲಾ ಜೋಡಣೆಗೆ ಪ್ರೇರಣೆ ಹೇಗಾಯ್ತು?: ಗವಿಸಿದ್ದೇಶ್ವರ ಸ್ವಾಮೀಜಿಗಳು ಇತ್ತೀಚೆಗೆ ಇಂದರಗಿ ಗ್ರಾಮಕ್ಕೆ ಲಕ್ಷ ದೀಪೋತ್ಸವ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಜಲಕ್ರಾಂತಿಯ ಬಗ್ಗೆ ಮಾತನಾಡಿದ್ದಾರೆ. ಆಗ ಸ್ಥಳೀಯ ಗ್ರಾಮಸ್ಥರು ತಮ್ಮಲ್ಲಿನ ಕೆರೆಯ ಬಗ್ಗೆ, ನೀರು ಬತ್ತಿ ಹೋಗಿರುವ ಬಗ್ಗೆ ನಾಲಾ ಮುಚ್ಚಿ ಹೋಗಿರುವ ಬಗ್ಗೆ ಶ್ರೀಗಳ ಗಮನಕ್ಕೆ ತಂದಿದ್ದಾರೆ. ಇದನ್ನರಿತ ಶ್ರೀಗಳು ಕೂಡಲೇ ಜನರೊಟ್ಟಿಗೆ ಅಲ್ಲಿಗೆ ತೆರಳಿ ಕೆರೆ ಸೇರಿದಂತೆ ನಾಲಾ ಮುಚ್ಚಿರುವುದನ್ನು ವೀಕ್ಷಣೆ ಮಾಡಿದ್ದಾರೆ. ಪ್ರತಿ ವರ್ಷ ಮಳೆಗಾಲದಲ್ಲಿ ಇಂದರಗಿ-ಬೊಮ್ಮಸಾಗರ ತಾಂಡಾ ಗ್ರಾಮಗಳ ಅರಣ್ಯ ಪ್ರದೇಶದ ನೀರು ಹೊಟ್ಟೆಬೆನಕನ ನಾಲೆಯ ಮೂಲಕ ವ್ಯರ್ಥವಾಗಿ ಹರಿಯುವುದನ್ನು ಜನತೆ ಶ್ರೀಗಳ ಗಮನಕ್ಕೆ ತಂದಿದ್ದಾರೆ. ಅಲ್ಲದೇ, ಈ ನಾಲೆಯನ್ನು ಇಂದರಗಿಯ ಹೊಸಕೆರೆಗೆ ಸಂಪರ್ಕಿಸಲು 15 ವರ್ಷಗಳ ಹಿಂದೆಯೇ ಸರಕಾರ ಕಾಮಗಾರಿ ರೂಪಿಸಿದ್ದರೂ ಹಲವು ಕಾರಣಗಳಿಂದ ಕಾಮಗಾರಿ ಸ್ಥಗಿತವಾದ ಕುರಿತು ಶ್ರೀಗಳ ಗಮನಕ್ಕೆ ತಂದಿದ್ದಾರೆ.

ಅಲ್ಲಿನ ವಸ್ತುಸ್ಥಿತಿ ಅರಿತ ಶ್ರೀಗಳು ಜನರಿಗೆ ಪ್ರೇರಣೆ ನೀಡಿ ನಿಮ್ಮೂರಿನ ಕೆರೆ, ನಾಲಾ ರಕ್ಷಣೆ ಮಾಡಿ ಜಲಸಂರಕ್ಷಣೆ ಮಾಡಿ ಎನ್ನುವ ಸಂದೇಶ ನೀಡುತ್ತಿದ್ದಂತೆ ಸ್ವಯಂ ಪ್ರೇರೇಪಿತರಾದ ಜನತೆ ಟ್ರ್ಯಾಕ್ಟರ್‌, ಜೆಸಿಬಿಗಳನ್ನು ತಂದು ಹೊಟ್ಟೆಬೆನಕನ ನಾಲೆಯನ್ನು ಹೊಸ ಕೆರೆಗೆ ತಿರುಗಿಸುವ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ.

ಒಟ್ಟಿನಲ್ಲಿ ಜಿಲ್ಲೆಯ ತುಂಬೆಲ್ಲ ಜಲಕ್ರಾಂತಿ ಮೊಳಗುತ್ತಿದ್ದು ಜನತೆ ನೀರಿನ ಜಪ ಮಾಡುತ್ತಿದ್ದಾರೆ. ಕೆರೆ ಹೂಳೆತ್ತುವ ಜೊತೆ ಜೊತೆಗೆ ನೀರು ನಿಲ್ಲಿಸುವ ಕಾಯಕದಲ್ಲೂ ಶ್ರಮಿಸುತ್ತಿದ್ದಾರೆ. ಬರದ ನಾಡಿನಲ್ಲಿ ಗವಿಮಠದ ಗವಿಸಿದ್ದೇಶ್ವರ ಮಹಾ ಸ್ವಾಮೀಜಿಗಳು ಭಗೀರಥನಂತೆ ಶ್ರಮಿಸಿ ಜನರಿಗೆ ಸಲಹೆ-ಸೂಚನೆ ಪ್ರೇರಣೆ ನೀಡುವ ಕಾಯಕದಲ್ಲಿ ತೊಡಗಿದ್ದಾರೆ.

65-70 ಎಕರೆ ವ್ಯಾಪ್ತಿ ಹೊಂದಿರುವ ನಮ್ಮೂರ ಹೊಸಕೆರೆಗೆ ನೀರು ಸಂಗ್ರಹವಾದರೆ ಸುತ್ತಮುತ್ತಲ ಗ್ರಾಮಗಳಾದ ಜಬ್ಬಲಗುಡ್ಡ, ಇಂದಿರಾನಗರ, ಬೂದಗುಂಪಾ, ಕೂಕನಪಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ಅಂತರ್ಜಲ ಹೆಚ್ಚಳವಾಗಲಿದೆ. ಸುಮಾರು 500-600 ಎಕರೆ ಪ್ರದೇಶದಷ್ಟು ಕೃಷಿ ಭೂಮಿಗೆ ನೀರು ಬಳಕೆಯಾಗಲಿದೆ. ಈ ಹಳ್ಳಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ದೊರೆತಂತಾಗಲಿದೆ. -ಭೋಜಪ್ಪ ಕುಂಬಾರ, ಗ್ರಾಮದ ಮುಖಂಡ

ಗ್ರಾಮದಲ್ಲಿ ಬೇಸಿಗೆ ಕಾಲದಲ್ಲಿ ನೀರಿನ ಸಮಸ್ಯೆ ವಿಪರೀತವಾಗುತ್ತಿದೆ. ಈ ಕಾಮಗಾರಿಯಿಂದಾಗಿ ನಮ್ಮೂರಿನ ಜನರಿಗೆ ಹೊಸ ಭರವಸೆ ಹುಟ್ಟಿಕೊಂಡಿದೆ. ಈ ಕ್ರಾಂತಿಗೆ ಗವಿಮಠದ ಶ್ರೀಗಳೇ ಪ್ರೇರಣೆ. ಇಂತಹ ಸ್ವಯಂಪ್ರೇರಿತ ಕಾರ್ಯಗಳು ಎಲ್ಲ ಗ್ರಾಮಗಳಲ್ಲೂ ನಡೆದಾಗ ನೀರಿನ ಸಮಸ್ಯೆಯನ್ನು ಬಹುತೇಕ ನಿವಾರಣೆ ಮಾಡಬಹುದು.
•ಶಿವಣ್ಣ ಭೀಮನೂರ, ರೈತ ಮುಖಂಡ

 

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ

Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ

Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ

Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.