ನಿರುದ್ಯೋಗ ಅಳಿಸಲು ನರೇಗಾ ಸಹಕಾರಿ
ಉದ್ಯೋಗ ಖಾತ್ರಿ ಜಾರಿಗೆ ಬಂದು 15 ವರ್ಷ! ಇದ್ದೂರಲ್ಲೇ ಉದ್ಯೋಗ ಪಡೆದಿವೆ ಕುಟುಂಬಗಳು
Team Udayavani, Feb 4, 2021, 6:12 PM IST
ಗಂಗಾವತಿ: ತಾಲೂಕಿನ ಆಗೋಲಿ ಗ್ರಾಪಂ ವ್ಯಾಪ್ತಿಯ ಹಂಪಸದುರ್ಗಾ ಗ್ರಾಮದಲ್ಲಿ ನರೇಗಾ ದಿವಸ್ ಆಚರಿಸಲಾಯಿತು. ನರೇಗಾ ದಿವಸ್ ಹಿನ್ನೆಲೆಯಲ್ಲಿ ಮಹಾತ್ಮ ಗಾಂಧಿಧೀಜಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಪಣೆ ಮಾಡಲಾಯಿತು.
ತಾಲೂಕು ನರೇಗಾ ತಾಂತ್ರಿಕ ಸಂಯೋಜಕ ಸಯ್ಯದ್ ತನ್ವೀರ್ ಮಾತನಾಡಿ, ಗ್ರಾಮೀಣ ಭಾಗದ ಜನರಿಗೆ ಕೆಲಸ ನೀಡಲು ಉದ್ಯೋಗ ಖಾತ್ರಿ ಯೋಜನೆ ಜಾರಿ ತರಲಾಗಿದೆ. ಯೋಜನೆ ಜಾರಿ ಬಂದು ಹದಿನೈದು ವರ್ಷಗಳಾಗಿವೆ. ಈ ಅವಧಿಯಲ್ಲಿ ಹಳ್ಳಿಗಳಲ್ಲಿನ ಸಹಸ್ರಾರು ಕುಟುಂಬಗಳು ಇದ್ದೂರಲ್ಲೇ ಉದ್ಯೋಗ ಪಡೆದಿವೆ. ನರೇಗಾದಡಿ ಹಲವಾರು ವಿಭಿನ್ನ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಯೋಜನೆ ಎಲ್ಲರ ಮನೆ ಮಾತಾಗಿದೆ ಎಂದರು.
ಗ್ರಾಮೀಣ ಭಾಗದಲ್ಲಿ ನಿರುದ್ಯೋಗ ಸಮಸ್ಯೆ ಅಳಿಸಲು ನರೇಗಾ ಸಹಕಾರಿಯಾಗಿದೆ. ಜಾಬ್ ಕಾರ್ಡ್ ಹೊಂದಿದ ಕುಟುಂಬಗಳಿಗೆ ವರ್ಷದಲ್ಲಿ 100 ದಿನ ಕೆಲಸ ಕೊಡಲಾಗುತ್ತಿದೆ. ವೈಯಕ್ತಿಕ ಹಾಗೂ ಸಮುದಾಯಿಕ ಕಾಮಗಾರಿಗಳನ್ನು ಕೈಗೊಳ್ಳಬಹುದು ಎಂದು ತಿಳಿಸಿದರು.
ನರೇಗಾದಡಿ ಹಳ್ಳ, ನಾಲಾ, ಕೆರೆ ಹೂಳೆತ್ತುವುದರಿಂದ ಅಂತರ್ಜಲ ವೃದ್ಧಿಗೊಂಡು ಬೋರ್ವೆಲ್ಗಳು ರಿಚಾರ್ಜ್ ಆಗುತ್ತವೆ. ದನಕರಗಳಿಗೆ ಕುಡಿಯಲು ನೀರು ಸಹ ದೊರೆಯುತ್ತದೆ. ಹೀಗೆ ಗ್ರಾಮೀಣ ಭಾಗದ ಸರ್ವತೋಮುಖ ಅಭಿವೃದ್ಧಿಗೆ ನರೇಗಾ ಅನುಕೂಲವಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ :ಉಡುಪಿ: ತಪೋವನಿ ಮಾತಾಜಿ ನಿಧನ; ಪೇಜಾವರ ಶ್ರೀ ಸಂತಾಪ
ಗ್ರಾಪಂ ಕಾರ್ಯದರ್ಶಿ ಉಮೇಶ, ತಾಲೂಕು ನರೇಗಾ ಐಇಸಿ ಸಂಯೋಜಕ ಬಾಳಪ್ಪ ತಾಳಕೇರಿ, ತಾಂತ್ರಿಕ ಸಹಾಯಕ ಗ್ಯಾನಪ್ಪ, ಮೇಟಿಗಳಾದ ಅಮರೇಶ, ದುರುಗಪ್ಪ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
MUST WATCH
ಹೊಸ ಸೇರ್ಪಡೆ
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ