ಕುಷ್ಟಗಿ: ಕುಷ್ಠರೋಗದ ಸಂಕಟ ಅನುಭವಿಸಿದ್ದ ಯಲ್ಲಪ್ಪಜ್ಜನ ನೆರವಿಗೆ ಬಂತು ನರೇಗಾ


Team Udayavani, Jun 22, 2022, 3:11 PM IST

ಕುಷ್ಟಗಿ: ಕುಷ್ಠರೋಗದ ಸಂಕಟ ಅನುಭವಿಸಿದ್ದ ಯಲ್ಲಪ್ಪಜ್ಜನ ನೆರವಿಗೆ ಬಂತು ನರೇಗಾ

ಕುಷ್ಟಗಿ: ಬಾಳಿ ಬದುಕಬೇಕಾದ ಹೊತ್ತಲ್ಲಿ ಜೀವನವನ್ನೇ ಹಿಂಡಿತು ಮಹಾಮಾರಿ ಹ್ಯಾನ್ಸನ್ (ಕುಷ್ಠರೋಗ). ಆದರೂ ಎದೆಗುಂದದೇ ರೋಗದ ಜೊತೆಗೆ ಹೋರಾಟದ ಮೂಲಕ ಬದುಕು ಕಟ್ಟಿಕೊಂಡ ವ್ಯಕ್ತಿಗೆ ಆಸರೆಯಾಗಿದ್ದು, ನರೇಗಾ ಯೋಜನೆ.!

ಹೌದು, ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಹಿರೇನಂದಿಹಾಳ ಗ್ರಾಮ ಪಂಚಾಯತಿಯ ಹಿರೇನಂದಿಹಾಳ ಗ್ರಾಮದ ಯಲ್ಲಪ್ಪ ರಾಮಣ್ಣ ಕರಡಿ ಎನ್ನುವವರೇ ಹ್ಯಾನ್ಸನ್ ಖಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿ. ತನಗಿರುವ ಖಾಯಿಲೆಯನ್ನು ಲೆಕ್ಕಿಸದೇ, 2019 ರಿಂದ ಕೆರೆ, ನಾಲಾ ಹೂಳೆತ್ತುವ ಕಾಮಗಾರಿಯಲ್ಲಿ ಕೂಲಿ ಕೆಲಸ ನಿರ್ವಹಿಸುತ್ತಿರುವ ಅವರ ಛಲ ಮೆಚ್ಚುವಂತದ್ದು. ದುಡಿಯೋಣ ಬಾ ಅಭಿಯಾನದಲ್ಲಿ ನಿರಂತರವಾಗಿ 90 ದಿನಗಳ ಕಾಲ ಕೂಲಿ ಕೆಲಸವನ್ನು ಮಾಡುವ ಮೂಲಕ ನರೇಗಾ ಯೋಜನೆಯ ಸದುಪಯೋಗ ಪಡೆದುಕೊಂಡು, ತಮ್ಮ ಖಾಯಿಲೆಯ ಖಿನ್ನತೆಯಿಂದ ಹೊರಬಂದಿದ್ದಾರೆ.

ಔಷಧಿಗೆ ಬಳಕೆಯಾಯ್ತು ಖಾತ್ರಿ ಹಣ :-

ಚಿಕ್ಕಂದಿನಿಂದಲೇ ಕುಷ್ಠರೋಗಕ್ಕೆ ತುತ್ತಾಗಿರುವ ಯಲ್ಲಪ್ಪ ಅವರಿಗೆ ಜೀವನ ನಡೆಸುವುದೇ ದೊಡ್ಡ ಸವಾಲಾಗಿತ್ತು. ಕೂಲಿ ಮಾಡಿದರೆ ಮಾತ್ರ ಜೀವನ ಸಾಗಿಸುವಂತಹ ಮಟ್ಟಕ್ಕೆ ತಲುಪಿದ ಯಲ್ಲಪ್ಪ ಅವರಿಗೆ ಗ್ರಾಮದಲ್ಲಿರುವ ಎಲ್ಲಾ ಕೂಲಿಕಾರರು ಕೂಲಿ ಕೆಲಸಕ್ಕೆ ಹೋಗುತ್ತಿರುವುದನ್ನು ಕಂಡು, ತಾನು ಕೂಡ ಉದ್ಯೋಗ ಖಾತ್ರಿಯಲ್ಲಿ ಕೆಲಸ ನಿರ್ವಹಿಸಿ ಜೀವನ ಸಾಗಿಸಬೇಕೆಂಬ ಪಣತೊಟ್ಟರು. ಗ್ರಾ.ಪಂಯಿಂದ ಇಂತಹ ವ್ಯಕ್ತಿಗೆ ನರೇಗಾದಡಿ ಕೂಲಿ ಕೆಲಸ ನೀಡಿರುವುದರಿಂದ ಸಮಾಜದ ಮುಖ್ಯ ವಾಹಿನಿಗೆ ತರಲು ಸಹಕಾರಿಯಾಗಿದೆ. ಇಲ್ಲಿಯವರೆಗೆ 39,168/- ಕೂಲಿ ಹಣ ಪಡೆದಿದ್ದು, ತಮ್ಮ ಚಿಕಿತ್ಸೆ, ಔಷಧಿಗೆ ಯಲ್ಲಪ್ಪ ಖಾತ್ರಿ ಹಣವನ್ನು ಭರಿಸಿದ್ದಾರೆ.

ಬದುಕಿಗೆ ದಾರಿಯಾಯ್ತು ನರೇಗಾ:

ಪ್ರತಿ ದಿನ ಜೀವನದ ಹೊಟ್ಟೆಪಾಡಿಗಾಗಿ ಹಾಗೂ ಮಹಾಮಾರಿ ರೋಗದ ಸಲುವಾಗಿ ದವಾಖಾನೆ ಖರ್ಚು ಭರಿಸಲು ಯಲ್ಲಪ್ಪನ ಯೋಚನೆಗೆ ಬಂದಿದ್ದೇ ನರೇಗಾ ಯೋಜನೆ. ಕಳೆದ 3 ವರ್ಷಗಳಿಂದ ಯೋಜನೆಯಡಿ ಕೂಲಿ ಕೆಲಸ ನಿರ್ವಹಿಸುತ್ತಿದ್ದು, ಮಹಾಮಾರಿ ರೋಗಕ್ಕೆ ಎದೆಗುಂದದೇ ಕೂಲಿ ಕೆಲಸಕ್ಕೆ ಹಾಜರಾಗಿ ಜೀವನ ಸಾಗಿಸಬೇಕೆನ್ನುವ ಛಲ ಹೊಂದಿರುವಂತಹ ನನ್ನಂತವರಿಗೆ ಉದ್ಯೋಗ ಖಾತ್ರಿ ಯೋಜನೆಯು ಆಸರೆಯಾಗಿರುವುದು ನಿಜಕ್ಕೂ ಸತ್ಯ. ದುಡಿಯೋಣ ಬಾ ಅಭಿಯಾನದಡಿ ಕೆಲಸ ನೀಡಿರುವುದರಿಂದ ನನಗೆ ಬಹಳ ಸಹಕಾರಿಯಾಗಿದೆ ಎಂದು ಹೆಮ್ಮೆಯಿಂದ ಹೇಳುತ್ತಾರೆ ಯಲ್ಲಪ್ಪ.

ಒಪ್ಪತ್ತಿನ ಊಟಕ್ಕೆ ಅನುಕೂಲ :

ಕಾಯಿಲೆ ಇರುವುದರಿಂದ ನನ್ನನ್ನು ಕುಟುಂಬ ದೂರ ಮಾಡಿದ್ರು, ಉದ್ಯೋಗ ಖಾತ್ರಿ ಮಾತ್ರ ನನ್ನ ಕೈಬಿಡಲಿಲ್ಲ. ಇರೊಷ್ಟು ದಿನ ಯೋಜನೆಯಡಿ ಕೆಲಸ ಮಾಡುವ ಮೂಲಕ ಜೀವನ ಸಾಗಿಸುತ್ತೇನೆ. ಇದರಿಂದ ಒಪ್ಪತ್ತಿನ ಊಟಕ್ಕೆ ಅನುಕೂಲ ಆಗೈತ್ರಿ ಅಂತಾರೆ ಯಲ್ಲಪ್ಪ ಕರಡಿ.

ಮಹಾಮಾರಿ ರೋಗದಿಂದ ಬೇಸತ್ತಿದ್ದ ಯಲ್ಲಪ್ಪ ತಾನು ಕೂಡಾ ಇತರರಂತೆ ಕೂಲಿ ಕೆಲಸ ಮಾಡಿ ಜೀವನ ಸಾಗಿಸಬೇಕು ಎನ್ನುವ ಉದ್ದೇಶದಿಂದ ಯೋಜನೆಯಲ್ಲಿ ಭಾಗವಹಿಸಿರುವುದಕ್ಕೆ ನರೇಗಾ ಕೂಲಿ ಹಣ ಅನುಕೂಲವಾಗಿದೆ. ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಕೈ ಹಿಡಿದಿರುವುದು ಯೋಜನೆಯು ಸಾರ್ಥಕವಾಗಿದ್ದು, ಯಲ್ಲಪ್ಪ ಕರಡಿ ಇತರರಿಗೆ ಮಾದರಿಯಾಗಿದ್ದಾರೆ. -ಶ್ರೀ.ಶಿವಪ್ಪ ಸುಬೇದಾರ್                                              ಕಾರ್ಯನಿರ್ವಾಹಕ ಅಧಿಕಾರಿಗಳು ತಾಲೂಕ ಪಂಚಾಯತ್, ಕುಷ್ಟಗಿ

ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಇಂತಹ ವ್ಯಕ್ತಿಗಳನ್ನು ಹುಡುಕಿ ಕೆಲಸ ನೀಡುತ್ತಿರುವುದು ಶ್ಲಾಘನೀಯ. ಇಂತವರು ಮನೆಯಲ್ಲಿ ಕುಳಿತುಕೊಳ್ಳದೇ ದುಡಿಯೋಣ ಬಾ ಅಭಿಯಾನದಲ್ಲಿ ಭಾಗವಹಿಸಬೇಕಿದೆ. ಜಿಲ್ಲೆಯಲ್ಲಿ ಇಂತವರಿದ್ದರೆ ಅವರಿಗೆ ಆದ್ಯತೆಯಾಗಿ ಕೆಲಸ ನೀಡಲು ಸೂಚಿಸಲಾಗಿದೆ. -ಬಿ.ಫೌಜಿಯಾ ತರನ್ನುಮ್ , ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ್‌ ಕೊಪ್ಪಳ

 

-ಮಂಜುನಾಥ ಮಹಾಲಿಂಗಪುರ ( ಕುಷ್ಟಗಿ)

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.