ಗೋಶಾಲೆಗಳ ನಿರ್ವಹಣೆಗೆ ಬೇಕಿದೆ ನೆರವು

ಟ್ರಸ್ಟ್‌ನಡಿ ಮುನ್ನಡೆದಿವೆ ನಾಲ್ಕು ಗೋ ಶಾಲೆ

Team Udayavani, Jan 11, 2021, 3:36 PM IST

Need assistance for maintenance

ಕೊಪ್ಪಳ: ಜಿಲ್ಲೆಯಲ್ಲಿ ಸಂಘ-ಸಂಸ್ಥೆಗಳ ನೇತೃತ್ವದಲ್ಲಿ ನಾಲ್ಕು ಗೋ ಶಾಲೆಗಳು ಮುನ್ನಡೆಯುತ್ತಿದ್ದು, ಅವುಗಳ ನಿರ್ವಹಣೆಗೆ ಟ್ರಸ್ಟ್‌ಗಳು ಹರಸಾಹಸ ಪಡುವಂತಹ ಸ್ಥಿತಿ ಎದುರಾಗಿದೆ. ಗೋ ಶಾಲೆಗಳು ಸರ್ಕಾರದಿಂದ ಹೆಚ್ಚಿನ ನೆರವಿನ ನಿರೀಕ್ಷೆಯಲ್ಲಿವೆ. ಜಿಲ್ಲೆಯಲ್ಲಿ ಮಹಾವೀರ ಜೈನ ಗೋ ಶಾಲೆ, ಯಲಬುರ್ಗಾದ ಶ್ರೀ ಬಸವಲಿಂಗೇಶ್ವರ ಶ್ರೀಧರ ಮುರಡಿ ಹಿರೇಮಠ ಗೋಶಾಲೆ, ಕುಷ್ಟಗಿಯ ಜಯಮಾಲ ಜೈನ ಗೋ ಶಾಲೆ ಹಾಗೂ ಗಂಗಾವತಿ ತಾಲೂಕಿನ ಆನೆಗೊಂದಿಯ ದುರ್ಗಾಮಾತಾ ಗೋ ಶಾಲೆ ಟ್ರಸ್ಟ್‌ನಡಿ ಒಟ್ಟು 1625 ಗೋವುಗಳ ರಕ್ಷಣೆ ಮಾಡಿ ಸಾಕಾಣಿಕೆ ಮಾಡಲಾಗುತ್ತಿದೆ.

ಈ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಪ್ರತಿವರ್ಷ ಗೋ ಶಾಲೆಯ ನಿರ್ವಹಣೆಗೆ ತಾವೇ ಹಣ ವಿನಿಯೋಗ ಮಾಡುತ್ತಿದ್ದಾರೆ. ನಿರ್ವಹಣೆಗೆ ಹೆಚ್ಚಿನ ಹೊರೆಯಾಗಿದ್ದರೂ ಟ್ರಸ್ಟ್‌ ಹಾಗೂ ಮಠಮಾನ್ಯಗಳು ದನಕರುಗಳ ಸಾಕಾಣಿಕೆ ಮುಂದುವರಿಸಿವೆ. ಪ್ರತಿ ಬೇಸಿಗೆ ವೇಳೆ ಗೋ ಶಾಲೆಗಳು ಮೇವಿಗೆ ತುಂಬ ತೊಂದರೆ ಎದುರಿಸುತ್ತವೆ. ಹಾಗಾಗಿ ಪೂರ್ವದಲ್ಲಿಯೇ ರೈತರಿಂದ ಮೇವಿನ ಗೂಡುಗಳನ್ನು ಖರೀದಿಸಿ ದನಗಳಿಗೆ ಸಂಗ್ರಹಣೆ ಮಾಡಿಟ್ಟುಕೊಳ್ಳುತ್ತಿವೆ. ಗೋವುಗಳ ನಿರ್ವಹಣೆಗೆ ಟ್ರಸ್ಟ್‌ ಹಾಗೂ ಮಠದ ಆಸ್ತಿಯು ವಿಶಾಲವಾಗಿವೆ.

ಕುಡಿಯಲು ನೀರಿನ ತೊಟ್ಟಿಯ ವ್ಯವಸ್ಥೆ ಸೇರಿದಂತೆ ಮೇವು ಕತ್ತರಿಸುವ ಯಂತ್ರವನ್ನೂ ಇಡಲಾಗಿದೆ. ಆದರೆ ನಿತ್ಯವು ಅವುಗಳಿಗೆ ಮೇವು ಹಾಕುವುದು, ಮಕ್ಕಳಂತೆ ಜೋಪಾನ ಮಾಡಬೇಕು. ಕೂಲಿ ಕಾರ್ಮಿಕರಿಂದ ನಿರ್ವಹಣೆ ಮಾಡಬೇಕಾಗಿದೆ.

ಇದನ್ನೂ ಓದಿ:ಗ್ರಾಮಗಳ ಸಮಗ್ರ ಅಭಿವೃದಿಗೆ ಶ್ರಮಿಸಿ: ಸಚಿವ ಪಾಟೀಲ

ತೀವ್ರ ಬರದಂತಹ ಸಂದರ್ಭದಲ್ಲಿ ಈ ಭಾಗದ ರೈತರು ಗೋವುಗಳನ್ನು ಕಸಾಯಿಖಾನೆಗೆ ಕೊಡಲು ಮನಸ್ಸು ಮಾಡದೇ ಇಂತಹ ಗೋ ಶಾಲೆಗಳಿಗೆ ಕೊಡುತ್ತಾರೆ. ಆದರೆ ಇಲ್ಲಿನ ಗೋ ಶಾಲೆಗಳು ಒಮ್ಮೆ ದನಗಳನ್ನು ಪಡೆದರೆ ಅವು ಗೋ ಶಾಲೆ ವಶವಾದಂತೆ, ಮಠಗಳಡಿ ನಡೆಯುವ ಗೋ ಶಾಲೆಗಳಿಂದ ಮಾತ್ರ ರೈತರಿಗೆ ಸಾಕಲು ದನಕರು ಕೊಡುವ ಪದ್ಧತಿ ಇದೆ. ಇನ್ನೂ ಸರ್ಕಾರವು ಈ ಹಿಂದೆಲ್ಲ ಗೋ ಶಾಲೆಗಳಲ್ಲಿ ಮೂಲಸೌಕರ್ಯಕ್ಕೆ ಅಂದಾಜು 10 ಲಕ್ಷ ರೂ. ನೆರವು ನೀಡುತ್ತಿತ್ತು. ಆದರೆ ಇತ್ತೀಚೆಗೆ ಗೋ ಶಾಲೆಗಳಿಗೆ ಅನುದಾನ ನೀಡುವುದು ಕಡಿಮೆಯಾಗಿದೆ. ನಮ್ಮಂತ ಗೋ ಶಾಲೆಗಳಿಗೆ ಸರ್ಕಾರ ನೆರವು ಹೆಚ್ಚು ನೀಡಿದರೆ ನಿರ್ವಹಣೆಗೆ ನೆರವಾಗುತ್ತದೆ. ಇಲ್ಲಿನ ನಿರ್ವಹಣೆಯನ್ನು ನೋಡುವ ರೈತರು ಸಹ ತಮ್ಮ ರಾಸುಗಳನ್ನು ಕಸಾಯಿಖಾನೆಗೆ ಕೊಡದೇ ಇಲ್ಲಿಯೇ ಬಂದು ಬಿಟ್ಟು ಹೋಗುತ್ತಾರೆ ಎಂದೆನ್ನುವ ಮಾತುಗಳು ಗೋ ಶಾಲೆ ನಿರ್ವಹಣೆ ಮಾಡುವವರಿಂದ ಕೇಳಿ ಬಂದಿದೆ.

ದತ್ತು ಕಮ್ಮಾರ

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.