ಬದುಕಿಗೆ ಬೇವಿನ ಬೀಜ ಆಸರೆ

•ದಿನವಿಡಿ ಆಯ್ದು ಮಾರುಕಟ್ಟೆಯಲ್ಲಿ ಮಾರಾಟ•ಬರುವ ಹಣದಲ್ಲೇ ಉಪ ಜೀವನ ನಿರ್ವಹಣೆ

Team Udayavani, Jun 10, 2019, 10:24 AM IST

kopala-tdy-1..

ಕೊಪ್ಪಳ: ತಾಲೂಕಿನ ಕಾತರಕಿ-ನಿಲೋಗಿಪುರ ಗ್ರಾಮದ ಮಧ್ಯದಲ್ಲಿ ಬೇವಿನ ಬೀಜ ಆಯುವ ಕೆಲಸದಲ್ಲಿ ನಿರತರಾಗಿರುವ ಮಹಿಳೆಯರು.

ಕೊಪ್ಪಳ: ಜಿಲ್ಲೆಯಲ್ಲಿ ಸತತ ಬರದಿಂದ ಕಂಗೆಟ್ಟ ರೈತ ಸಮೂಹ ವರುಣನ ಆಗಮನಕ್ಕಾಗಿ ಜಾತಕ ಪಕ್ಷಿಯಂತೆ ಕಾಯುತ್ತ ಕುಳಿತಿದ್ದರೆ, ಇತ್ತ ರೈತ ಮಹಿಳೆಯರು ದುಡಿಮೆ ಇಲ್ಲದೆ ಉಪ ಜೀವನ ನಡೆಸಲು ಬಿರು ಬಿಸಿಲಲ್ಲಿ ಹೊಲ, ಗುಡ್ಡಗಾಡು ಪ್ರದೇಶದಲ್ಲಿ ಸುತ್ತಾಡಿ ಬೇವಿನ ಬೀಜ ಆರಿಸಿ ನಿತ್ಯದ ಬದುಕಿಗೆ ದಾರಿ ಕಂಡುಕೊಳ್ಳುತ್ತಿದ್ದಾರೆ.

ಜಮೀನಿನಲ್ಲಿ ದುಡಿಮೆ ಮಾಡಿ ಜೀವನ ನಡೆಸೋಣವೆಂದರೂ ಮಳೆ ಕೊರತೆಯಿಂದ ದುಡಿಮೆ ಇಲ್ಲದಂತಹ ಸ್ಥಿತಿ ಎದುರಾಗಿದೆ. ಸರ್ಕಾರದಿಂದ ಕೊಡುವ ಉದ್ಯೋಗ ಖಾತ್ರಿ ಕೆಲಸ ಹಸಿದ ಹೊಟ್ಟೆಗೆ ಅರೆಕಾಸಿನ ಗಂಜಿ ಸಿಕ್ಕಂತೆ ಎನ್ನುವಂತಿದೆ. ಇದರ ಮಧ್ಯೆ ನಿತ್ಯವೂ ಉಪ ಜೀವನ ನಡೆಸಲೇಬೇಕಿದ್ದು, ಬೇವಿನಬೀಜವೇ ಇವರ ಬದುಕಿಗಾಸರೆಯಾಗಿದೆ.

ರೈತ ಮಹಿಳೆಯರು ಹೊಲ ಹೊಲ ಸುತ್ತಾಡಿ ಬೇವಿನ ಗಿಡ ಇರುವ ಸ್ಥಳದಲ್ಲಿ ಗಾಳಿಗೆ ಬಿದ್ದಿರುವ ಬೀಜಗಳನ್ನು ಆಯ್ದು ಮನೆಗೆ ತಂದು ಕಸ, ಕಡ್ಡಿ ಸ್ವಚ್ಛಗೊಳಿಸಿ ಮಾರುಕಟ್ಟೆಗೆ ಮಾರಾಟ ಮಾಡುತ್ತಿರುವುದು ಎಲ್ಲೆಡೆ ಕಂಡು ಬರುತ್ತಿದೆ. ಒಂದು ಪುಟ್ಟಿ ಬೇವಿನ ಬೀಜಕ್ಕೆ 50-60 ರೂ. ಮಾರಾಟವಾಗುತ್ತಿದ್ದು ದಿನಕ್ಕೆ 2-3 ಪುಟ್ಟಿಯಷ್ಟು ಬೀಜವನ್ನು ಆಯ್ದು ಒಣಗಿಸಿ ಚೀಲಗಳಲ್ಲಿ ತುಂಬಿಕೊಂಡು ಬಂದು ಮಾರುತ್ತಿದ್ದಾರೆ. ಇದು ಈ ವರ್ಷದ ಸ್ಥಿತಿಯಲ್ಲ ಪ್ರತಿ ವರ್ಷವೂ ಇದೇ ಸ್ಥಿತಿ. ಆದರೆ ಜಿಲ್ಲಾಡಳಿತ ಲೆಕ್ಕಾಚಾರ ಪ್ರಕಾರ ಉದ್ಯೋಗ ಖಾತ್ರಿಯಲ್ಲಿ ಗುರಿಗೂ ಮೀರಿ ಸಾಧನೆ ಮಾಡಿದೆ. ಮಳೆ ಸರಿಯಾಗಿ ಬಂದಿದ್ದರೆ ನಾವ್ಯಾಕೆ ಮುಳ್ಳಿನ ಕಂಟೆ, ಪೊದೆ, ಕ್ರಿಮಿ-ಕೀಟ ಇರುವ ಜಾಗದಲ್ಲಿ ಬೇವಿನ ಬೀಜ ಆಯುವ ಕೆಲಸ ಮಾಡುತ್ತಿದ್ದೆವು. ಹೊಲದಲ್ಲಿ ಚೆನ್ನಾಗಿ ದುಡಿಮೆ ಮಾಡಿಕೊಂಡು ಜೀವನ ಸಾಗಿಸುತ್ತಿದ್ದೆವು. ಆ ಮಳೆ ದೇವ ನಮ್ಮ ಮೇಲೆ ಕರುಣೆ ತೋರುತ್ತಿಲ್ಲ. ಯಾರ ಹೊಲದಲ್ಲೂ ದುಡಿಮೆ ಇಲ್ಲ. ನಮಗೆ ಗುಳೆ ಹೋಗಿ ದುಡಿಮೆ ಮಾಡಲು ಶಕ್ತಿಯಿಲ್ಲ. ಇನ್ನೂ ಗ್ರಾಪಂಗೆ ತೆರಳಿ ಉದ್ಯೋಗ ಕೊಡಿ ಎಂದು ಕೇಳಿಕೊಂಡರೆ ಅವರು ನಮ್ಮ ಸಮಸ್ಯೆ ಆಲಿಸುವುದೇ ಇಲ್ಲ. ಮತ್ತೇನು ಮಾಡಬೇಕು. ನಮ್ಮ ಜೀವನ ನಾವೇ ನೋಡಿಕೊಳ್ಳಬೇಕು. ಯಾವ ಸರ್ಕಾರ ಬಂದರೂ ನಮ್ಮಂತವರ ನೋವು ಕಾಣಿಸಲ್ಲ. ಜನಿಸಿದ ಮೇಲೆ ಬದುಕು ಸಾಗಿಸಬೇಕಲ್ಲ. ಮನೆತನ ನಡೆಸಬೇಕಲ್ಲ ಎನ್ನುತ್ತಿದ್ದಾರೆ ರೈತ ಮಹಿಳೆಯರು.

ಬರ ನಿರ್ವಹಣೆಗೆ ಸರ್ಕಾರ ಸಿದ್ಧವಿದೆ ಹೇಳುತ್ತಿದೆ. ಉದ್ಯೋಗ ಖಾತ್ರಿಯಲ್ಲಿ ನಾವು ಗುರಿಗೂ ಮೀರಿ ಸಾಧನೆ ಮಾಡಿದ್ದೇವೆ. ಗ್ರಾಪಂ ಹಂತದಲ್ಲಿ ಜನರಿಗೆ ಕೆಲಸ ಕೊಟ್ಟಿದ್ದೇವೆ ಎನ್ನುತ್ತಿದೆ ಜಿಲ್ಲಾಡಳಿತ. ಆದರೆ ಇಂತಹ ಮಹಿಳೆಯರ ನೈಜ ಸಮಸ್ಯೆ ಆಲಿಸಿ ಜನರಿಗೆ ತಕ್ಕ ಮಟ್ಟಿಗಾದರೂ ಉದ್ಯೋಗ ಕೊಡುವ ಕೆಲಸವಾಗಬೇಕಿದೆ.

•ದತ್ತು ಕಮ್ಮಾರ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.