ದೋಟಿಹಾಳ: ಬೇವಿನ ಮರದಲ್ಲಿ ಹಾಲು; ಪವಾಡವೆಂದೇ ನಂಬಿ ಗ್ರಾಮಸ್ಥರಿಂದ ವಿಶೇಷ ಪೂಜೆ


Team Udayavani, Dec 11, 2021, 7:33 PM IST

ದೋಟಿಹಾಳ: ಬೇವಿನ ಮರದಲ್ಲಿ ಹಾಲು; ಪವಾಡವೆಂದೇ ನಂಬಿ ಗ್ರಾಮಸ್ಥರಿಂದ ವಿಶೇಷ ಪೂಜೆ

ದೋಟಿಹಾಳ: ಬೇವಿನ ಮರದಿಂದ ಹಾಲು ಸೋರುತ್ತಿದ್ದು, ಜನಮರುಳೋ ಜಾತ್ರೆ ಮರುಳೋ ಎಂಬಂತೆ ಮರಕ್ಕೆ ಪೂಜೆ ಸಲ್ಲಿಸುತ್ತಿರುವ ಘಟನೆ ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಬಿಜಕಲ್ ಗ್ರಾಮದಲ್ಲಿ ನಡೆದಿದೆ. ಬೇವಿನ ಮರದಿಂದ ಬಿಳಿ ಹಾಲು ಜಿನುಗುತ್ತಿರುವುದನ್ನು ಜನತೆ ಪವಾಡವೆಂದೇ ನಂಬುತ್ತಿದ್ದಾರೆ.

ಬಿಜಕಲ್ ಗ್ರಾಮದ ಗೋಪಾಲರಾವ್ ದೇಸಾಯಿ ಅವರ ಹೊಲದಲ್ಲಿ ಇರುವ ಗದ್ದಿ ದ್ಯಾಮಮ್ಮ ಎಂಬುವ ದೊಡ್ಡ ಬೇವಿನ ಮರದಿಂದ ಕಳೆದ ಒಂದು ವಾರದಿಂದ ಬಿಳಿ ಹಾಲು ಹೊರಬರುತ್ತಿದೆ. ಇದನ್ನು ನೋಡಲು ಸುತ್ತಮುತ್ತ ಜನ ಹಾಗೂ ಬಿಜಕಲ್ ಗ್ರಾಮಸ್ಥರು ತಂಡೋಪತಂಡವಾಗಿ 1ಕಿ.ಮೀ. ದೂರದಿಂದ ನಡೆದು ಕೊಂಡು ಬರುತ್ತಿದ್ದಾರೆ. ಇದು ದೈವ ಲೀಲೆ ಎಂದೇ ನಂಬಿ ಗಿಡಕ್ಕೆ ಪೂಜೆ ಸಲ್ಲಿಸುತ್ತಿದ್ದಾರೆ. ಜೊತೆಗೆ ಬೇವಿನ ಗಿಡದ ಬುಡಕ್ಕೆ ಕಲ್ಲುಗಳನ್ನಿಟ್ಟಿ ಗದ್ದಿ ದ್ಯಾಮಮ್ಮ ದೇವಿ ರೂಪದಲ್ಲಿ ಪೂಜಿಸುತ್ತಿದ್ದಾರೆ. ಸುದ್ದಿ ತಿಳಿದು ಸುತ್ತಲಿನ ಗ್ರಾಮಗಳ ಜನ ತಂಡೋಪ ತಂಡವಾಗಿ ಬಂದು ಮರವನ್ನು ವೀಕ್ಷಿಸುತ್ತಿದ್ದಾರೆ. ಹಾಲು ಜಿನುಗುತ್ತಿರುವುದು ಪವಾಡವೆಂದೇ ನಂಬಿ, ಪೂಜೆ ಸಲ್ಲಿಸುತ್ತಿದ್ದಾರೆ. ವಿಶೇಷ ಪೂಜೆ ಮಾಡಿ ಇಷ್ಟಾರ್ಥಸಿದ್ಧಿಗಾಗಿ ಪ್ರಾರ್ಥಿಸುತ್ತಿದ್ದಾರೆ.

ಮತ್ತೊಂದೆಡೆ ಗ್ರಾಮಸ್ಥರು ಜ್ಯೋತಿಷಿಗಳ ಬಳಿ ಶಾಸ್ತ್ರ ಕೇಳಿದ್ದಾನೆ. ನಮ್ಮ ಗ್ರಾಮದ ಗದ್ದಿ ದ್ಯಾಮಮ್ಮ ಬೇವಿನ ಮರದಲ್ಲಿ ಹಾಲು ಜಿನುಗುತ್ತಿರುವುದರಿಂದ ಏನು ಲಾಭವಾಗುತ್ತೆ ಅಂತ ಜ್ಯೋತಿಷಿಗಳನ್ನು ಕೇಳಿದ್ದಾನೆ. ಇದು ದೇವಿ ಪವಾಡವಾಗಿದೆ ಇದಕ್ಕೆ ವಿಶೇಷ ಪೂಜೆ ಮಾಡಿ ನಿಮಗೆ ಒಳ್ಳೆಯದಾಗುತ್ತದೆ ಎಂದು ಹೇಳಿದರು.  ಹೀಗಾಗಿ ಗ್ರಾಮಸ್ಥರು ಬೇವಿನ ಮರಕ್ಕೆ ವಿಶೇಷ ಪೂಜೆ ಮಾಡುತ್ತಿದ್ದಾರೆ. ಇದನ್ನು ನೋಡಲು ಆಗಮಿಸುವ ಭಕ್ತರಿಗೆ ಅನ್ನಪ್ರಸಾದ ವ್ಯವಸ್ಥೆಯನ್ನು ಗ್ರಾಮಸ್ಥರು ಮಾಡಿದ್ದರು.

ವೈಜ್ಞಾನಿಕವಾಗಿ ನೋಡಿದಾಗ ಬೇವಿನ ಮರದಲ್ಲಿ ಬಿಳಿ ದ್ರವ ಸುರಿಯೋದು ಸಹಜ ಪ್ರಕ್ರಿಯೆ ಎಂದಿದ್ದರೂ, ಜನ ಮಾತ್ರ ವಿಸ್ಮಯ ಎನ್ನುವ ರೀತಿಯಲ್ಲಿ ಅದನ್ನು ವೀಕ್ಷಿಸುತ್ತ್ತಿದ್ದಾರೆ. ನಾಳೆ ಅಲ್ಲಿಗೆ ಭೇಟಿ ನೀಡಿ ಪರಿಶೀಲನೆ ಮಾಡುತ್ತೇನೆ.   ಶಿವಶಂಕರ ರ‍್ಯಾವಣಿಕಿ ಅರಣ್ಯ ಇಲಾಖೆ ಕುಷ್ಟಗಿ.

-ಮಲ್ಲಿಕಾರ್ಜುನ ಮೆದಿಕೇರಿ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.