ಪಟ್ಟಿಯಲ್ಲಿ ಹೆಸರಿಲ್ಲದವರು ನೇಕಾರ ಸಮ್ಮಾನಗೆ ಅರ್ಹ
Team Udayavani, Jun 14, 2020, 7:12 AM IST
ದೋಟಿಹಾಳ: ಕೋವಿಡ್-19 ಸಾಂಕ್ರಾಮಿಕ ರೋಗದ ಸಮಸ್ಯೆಯಿಂದಾಗಿ ಕೈಮಗ್ಗ ನೇಕಾರರು ಸಂಕಷ್ಟದಲ್ಲಿರುವುದರಿಂದ ನೇಕಾರರ ಸಮ್ಮಾನ ಯೋಜನೆ ಜಾರಿಗೊಳಿಸುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಗ್ರಾಮದಲ್ಲಿ ಸುಮಾರು 400ಕ್ಕೂ ಹೆಚ್ಚು ನೇಕಾರರಿದ್ದಾರೆ. ಆದರೆ 4ನೇ ರಾಷ್ಟ್ರೀಯ ಕೈಮಗ್ಗ ಗಣತಿಯ ಸಮೀಕ್ಷೆ ವೇಳೆ ಗ್ರಾಮದ ಅನೇಕ ನೇಕಾರರ ಹೆಸರು ಸೇರ್ಪಡೆಗೊಂಡಿಲ್ಲ. ಗ್ರಾಮದ ಕೈಮಗ್ಗ ನೇಕಾರ ಸಂಘದ ಸುಮಾರು 457 ಸದಸ್ಯರಲ್ಲಿ ಕೇವಲ 150 ಸದಸ್ಯರಿಗೆ ಮಾತ್ರ ಇದರ ಸೌಲಭ್ಯ ಸಿಗುತ್ತದೆ, ಉಳಿದ 300ಕ್ಕೂ ಹೆಚ್ಚು ನೇಕಾರರ ಕುಟುಂಬಗಳಿಗೆ ಇದರಿಂದ ವಂಚಿತರಾಗುತ್ತಿದ್ದಾರೆ ಎಂದು ನೇಕಾರರು ಆರೋಪ ಮಾಡಿದರು.
ಜಿಲ್ಲೆಯ ಅನೇಕ ನೇಕಾರರು ಈ ಯೋಜನೆಯಿಂದ ವಂಚಿತರಾಗುತ್ತಾರೆ ಎಂದು “ಉದಯವಾಣಿ’ ಪತ್ರಿಕೆಯಲ್ಲಿ “ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸಮ್ಮಾನ’ ಎಂಬ ಶೀಷಿರ್ಕೆಯಲ್ಲಿ ಶನಿವಾರ (ಜೂ: 13ರಂದು) ವರದಿ ಪ್ರಕಟಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಜವಳಿ ಇಲಾಖೆಯ ಉಪನಿರ್ದೇಶಕ ಬೆಣಕಲ್ ಅವರು ದೂರವಾಣಿ ಮುಖಾಂತರ ಸಂಪರ್ಕಿಸಿ ಜಿಲ್ಲೆಯಲ್ಲಿ ಯಾರಾದರೂ 4ನೇ ರಾಷ್ಟ್ರೀಯ ಕೈಮಗ್ಗ ಗಣತಿಯ ಸಮೀಕ್ಷೆಯ ಪಟ್ಟಿಯಿಂದ ವಂಚಿತರಾದ ಸದ್ಯ ನೇಕಾರಿಕ ವೃತ್ತಿಯಲ್ಲಿ ಮತ್ತು ನೇಕಾರಿ ಚಟುವಟಿಕೆ ತೊಡಗಿದವರು ಇದರೆ. ಅಂತಹವರು ಖುದ್ದಾಗಿ ಅಥವಾ ಅಂಚೆ ಮುಖಾಂತರ ಜಿಲ್ಲಾ ಜವಳಿ ಇಲಾಖೆಗೆ ಅರ್ಜಿ ಸಲ್ಲಿಸಬಹುದು. ಅಂತಹ ಅರ್ಜಿಗಳನ್ನು ಇಲಾಖೆ ಅಧಿಕಾರಿ ಸ್ಥಳ ಪರಿಶೀಲನೆ ಮಾಡಿ ಅವರಿಗೂ ನೆರವು ನೀಡಲಾಗುತ್ತದೆ ಅವರು ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ
Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು
Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ
Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ