ಪೂರ್ಣ ಅಸ್ತಿತ್ವ ಕಾಣದ ಹೊಸ ತಾಲೂಕು

ಕಚೇರಿಗಳಿಗೆ ಸ್ವಂತ ಕಟ್ಟಡವಿಲ್ಲ-ಬಾಡಿಗೆ ಕಟ್ಟಡಲ್ಲೇ ಕಚೇರಿ

Team Udayavani, May 19, 2022, 2:20 PM IST

10

ಕೊಪ್ಪಳ: ಈ ಹಿಂದಿನ ಸರ್ಕಾರವು 2018ರಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಮೂರು ಹೊಸ ತಾಲೂಕುಗಳನ್ನು ಘೋಷಣೆ ಮಾಡಿದೆ. ಆದರೆ 4 ವರ್ಷ ಪೂರೈಸುತ್ತಾ ಬಂದರೂ ಹೊಸ ತಾಲೂಕುಗಳು ಸ್ವಂತ ನೆಲೆಯನ್ನು ಕಂಡಿಲ್ಲ. ಬಾಡಿಗೆಯಲ್ಲೇ ಜನರಿಗೆ ಸೇವೆ ಕೊಡುವಂತಾಗಿದ್ದು, ಕೋವಿಡ್‌ನಿಂದಾಗಿ ಅಭಿವೃದ್ಧಿಗೂ ಅನುದಾನ ಖೋತಾ ಆಗಿದೆ.

ಹೀಗಾಗಿ ಹೆಸರಿಗಷ್ಟೇ ಹೊಸ ತಾಲೂಕು ಎನ್ನುವಂತಾಗಿ, ಹಳೇ ತಾಲೂಕೇ ನಮಗೆ ಗತಿ ಎಂದು ಜನತೆ ತೆರಳುವಂತಾಗಿದೆ.

ಹೌದು. ಈ ಹಿಂದೆ ಜಗದೀಶ್‌ ಶೆಟ್ಟರ್‌ ಸಿಎಂ ಆಗಿದ್ದ ವೇಳೆ ಜಿಲ್ಲೆಗೆ ಮೂರು ಹೊಸ ತಾಲೂಕು ಘೋಷಣೆ ಮಾಡಿದ್ದರು. ಆದರೆ ಅಭಿವೃದ್ಧಿ ಕಾಣಲಿಲ್ಲ. ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೇರಿ 2018ರ ಚುನಾವಣೆಯ ಹೊಸ್ತಿಲಲ್ಲಿ ಜಿಲ್ಲೆಯಲ್ಲಿ ಕಾರಟಗಿ, ಕುಕನೂರು ಹಾಗೂ ಕನಕಗಿರಿ ಹೊಸ ತಾಲೂಕುಗಳೆಂದು ಘೋಷಣೆ ಮಾಡಿತು.

ಸರ್ಕಾರವೇನೋ ಜನರಿಗೆ ಸರ್ಕಾರಿ ಸೇವೆಗಳು ಸುಲಭವಾಗಿ ದೊರೆತು, ಆಡಳಿತಾತ್ಮಕ ಕಾರ್ಯವು ವೇಗವಾಗಿ ನಡೆಯಲಿ, ಜನರು ದೂರದ ಪ್ರದೇಶಕ್ಕೆ ಅಲೆದಾಡುವುದನ್ನು ತಪ್ಪಲಿ ಎನ್ನುವ ಉದ್ದೇಶದಿಂದ ಹೊಸ ತಾಲೂಕುಗಳು ರಚನೆ ಮಾಡಿದೆ. ಆದರೆ ಸರ್ಕಾರದ ಉದ್ದೇಶವು ಈವರೆಗೂ ಸಂಪೂರ್ಣವಾಗಿ ಈಡೇರಿಲ್ಲ.

ಹೊಸ ತಾಲೂಕಗಳು ಘೋಷಣೆಯಾಗಿ ಬರೊಬ್ಬರಿ 4 ವರ್ಷ ಕಳೆಯುತ್ತಾ ಬಂದಿವೆ. ಆದರೆ ಸರ್ಕಾರವೇ ಅಲ್ಲಿ ಸ್ವಂತ ಕಚೇರಿಗಳಿಗೆ ಅನುದಾನ ನೀಡುತ್ತಿಲ್ಲ. ಜಮೀನುಗಳು ಲಭ್ಯವಾಗುತ್ತಿಲ್ಲ. ಹಲವು ಕಡೆ ಜಾಗಕ್ಕೆ ಹುಡುಕಾಟವೂ ನಡೆದಿದೆ. ಸದ್ಯ ಕೂಕನೂರು ಹೊಸ ತಾಲೂಕು ಕಚೇರಿ ಖಾಸಗಿ ಸಮುದಾಯ ಭವನದಲ್ಲಿ ಆಡಳಿತಾತ್ಮಕ ಕಾರ್ಯ ನಡೆದಿದ್ದರೆ, ತಹಶೀಲ್ದಾರ್‌ ಕಚೇರಿಗೂ ಸ್ವಂತ ನೆಲೆಯಿಲ್ಲ. ಕಾರಟಗಿ ತಾಲೂಕು ಕಚೇರಿಯು ನವಲಿ ರಸ್ತೆಯಲ್ಲಿನ ಸಣ್ಣ ಸರ್ಕಾರಿ ಕಟ್ಟಡದಲ್ಲಿದೆ. ಎಪಿಎಂಸಿಯಲ್ಲಿ ತಹಶೀಲ್ದಾರ್‌ ಕಚೇರಿ ಕಾರ್ಯ ನಿರ್ವಹಿಸುತ್ತಿದೆ. ಇನ್ನು ಕನಕಗಿರಿ ತಾಲೂಕು ಕಚೇರಿ ಸರ್ಕಾರಿ ಹೈಸ್ಕೂಲ್‌ ಕಟ್ಟಡದಲ್ಲಿ ಮುನ್ನಡೆಯುತ್ತಿದ್ದರೆ, ತಹಶೀಲ್ದಾರ್‌ ಕಚೇರಿಯೂ ಕನಕಾಚಲಾಪತಿ ದೇವಸ್ಥಾನದ ಪ್ರವಾಸಿ ಮಂದಿರದಲ್ಲಿ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿದೆ. ಜಿಲ್ಲೆಯಲ್ಲಿನ ಮೂರು ಹೊಸ ತಾಲೂಕುಗಳಲ್ಲಿ ತಾಪಂ ಕಚೇರಿ, ತಹಶೀಲ್ದಾರ್‌ ಗಳ ಕಚೇರಿ ಸ್ಥಾಪನೆಯಾಗಿದ್ದು ಬಿಟ್ಟರೆ ಉಳಿದಂತೆ ಬೇರಾವ ಕಚೇರಿಗಳು ಇಲ್ಲ. ತಾಲೂಕು ಸಹಾಯಕ ಅಧಿಕಾರಿಗಳೂ ಇಲ್ಲ. ಮೂಲ ತಾಲೂಕಿನ ತಾಲೂಕು ಮಟ್ಟದಲ್ಲಿನ ಅಧಿಕಾರಿಗಳೇ ಹೊಸ ತಾಲೂಕುಗಳಿಗೆ ಪ್ರಭಾರದ ನೊಗ ಹೊತ್ತಿದ್ದಾರೆ.

ಮೂಲ ಸೌಲಭ್ಯವೂ ಅಷ್ಟಕ್ಕಷ್ಟೇ: ಹೊಸ ತಾಲೂಕಿನ ಕಟ್ಟಡಗಳಲ್ಲೇ ಬಾಡಿಗೆಯಲ್ಲಿ ನಡೆಯುತ್ತಿವೆ. ಜನರು ಸರ್ಕಾರಿ ಸೇವೆಗೆ ಬಂದರೆ ಅವರಿಗೆ ಸರಿಯಾದ ಮೂಲ ಸೌಕರ್ಯಗಳೇ ಇಲ್ಲ. ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ವಿಶ್ರಾಂತಿಯ ತಾಣಗಳೂ ಇಲ್ಲ. ಹೀಗಾಗಿ ಜನತೆ ವಿಶ್ರಾಂತಿಗೆ ಖಾಸಗಿ ಮಳಿಗೆಗಳ ಆಸರೆ ಪಡೆಯಬೇಕಿದೆ. ಸರ್ಕಾರಿ ಅಧಿಕಾರಿ ವರ್ಗಕ್ಕೂ ಸೌಲಭ್ಯಗಳೇ ಸರಿಯಾಗಿ ದೊರೆಯುತ್ತಿಲ್ಲ. ಸರ್ಕಾರವೂ ನಿರ್ವಹಣೆಗಾಗಿ ಅನುದಾನವನ್ನೂ ಅಷ್ಟಕ್ಕಷ್ಟೆ ಕೊಡುತ್ತಿದೆ. ಇದರಿಂದ ಅಧಿಕಾರಿಗಳೂ ಸಹ ಸ್ವಲ್ಪ ಹಣ ವೆಚ್ಚ ಮಾಡಲು ನೂರೆಂಟು ಬಾರಿ ಆಲೋಚಿಸಬೇಕಿದೆ.

ಮೂಲ ತಾಲೂಕಿಗೆ ಜನರ ಅಲೆದಾಟ: ಸರ್ಕಾರವೇನೋ ಹೊಸ ತಾಲೂಕು ಸ್ಥಾಪಿಸಿದ್ದೇವೆ ಎಂದು ಹೇಳಿಕೊಂಡು ಬೀಗುತ್ತಿದೆ. ಆದರೆ ಘೋಷಣೆಯಂತೆ ಪೂರ್ಣ ಪ್ರಮಾಣದಲ್ಲಿ ಅವುಗಳು ಅಸ್ತಿತ್ವಕ್ಕೆ ಬಂದಿಲ್ಲ. ಜನತೆ ಅಲೆದಾಟ ಇಂದಿಗೂ ತಪ್ಪಿಲ್ಲ. ಹಳೇಯ ದಾಖಲೆ ಬೇಕೆಂದರೆ ಅವರು ಮತ್ತೆ ಗಂಗಾವತಿ, ಯಲಬುರ್ಗಾ ಹಳೇ ತಾಲೂಕು ಕಚೇರಿಗಳಿಗೆ ಬರಬೇಕಿದೆ. ಕಂದಾಯ, ಕೃಷಿ ಸಂಬಂಧಿತ ಕೆಲವೊಂದು ಸೇವೆ ಬಿಟ್ಟರೆ ಮತ್ಯಾವ ಸೇವೆಗಳು ಜನರಿಗೆ ಸಿಗಲ್ಲ.

ಹೀಗಾಗಿ ಜನರ ಅಲೆದಾಟ ತಪ್ಪುತ್ತಿಲ್ಲ. ಇನ್ನು ತಾಲೂಕು ಮಟ್ಟದ ಅಧಿಕಾರಿಗಳು ತಾಪಂ ಸಭೆ ನಡೆದರೆ, ಜನಪ್ರತಿನಿಧಿಗಳ ಸಭೆ ನಡೆದರೆ ಹಳೇ ಹಾಗೂ ಹೊಸ ತಾಲೂಕು ಕಚೇರಿಗಳ ಸಭೆಗಳಿಗೂ ಹಾಜರಾಗಿ ವರದಿ ಒಪ್ಪಿಸಬೇಕಿದೆ. ಎರಡೆರಡು ಸಭೆಗೆ ಹಾಜರಾಗುವುದು ಅಧಿಕಾರಿಗಳಿಗೂ ಹೊರೆಯಾಗುತ್ತಿದೆ. ಇದೊಂದು ಆಡಳಿತಾತ್ಮಕ ದೊಡ್ಡ ಸಮಸ್ಯೆ ಎದುರಾಗುತ್ತಿದ್ದು, ಸರ್ಕಾರವು ಇಂತಹ ತಾಂತ್ರಿಕ ಸಮಸ್ಯೆ ಇತ್ಯರ್ಥ ಮಾಡುತ್ತಿಲ್ಲ. ಇದಲ್ಲದೇ ಸರ್ಕಾರದ ಆನ್‌ಲೈನ್‌ ಸೇವೆಗಳಲ್ಲಿ, ಪ್ರಗತಿಯ ವರದಿಯಲ್ಲಿ ಮೂಲ 4 ತಾಲೂಕುಗಳೆಂದೇ ಪರಿಗಣನೆ ಮಾಡುತ್ತಿದೆ. ಹೊಸ ತಾಲೂಕುಗಳ ಪ್ರತ್ಯೇಕ ವರದಿ ತಯಾರಾಗುತ್ತಿಲ್ಲ.

ಕೋವಿಡ್‌ನಿಂದಾಗಿ ಅನುದಾನ ಇಲ್ಲ: ಕಳೆದ ಎರಡು ವರ್ಷದಿಂದ ಕೊರೊನಾ ಮಹಾಮಾರಿಯು ಜಗತ್ತಿಗೆ ಆವರಿಸಿದ ಹಿನ್ನೆಲೆಯಲ್ಲಿ ಅಭಿವೃದ್ಧಿಗೆ ದೊಡ್ಡ ಹೊಡೆತ ಬಿದ್ದಿದ್ದು, ಅನುದಾನವೂ ಇಲ್ಲದಂತಾಗಿ ತುಂಬ ತೊಂದರೆ ಎದುರಾಗಿದೆ. ಹೊಸ ತಾಲೂಕುಗಳಿಗೆ ಅನುದಾನವೂ ಅಷ್ಟಕ್ಕಷ್ಟೆ ಬಂದಿದೆ ಎನ್ನುವುದು ಅಧಿಕಾರಿಗಳ ಮಾತು. ಸ್ವಂತ ಕಟ್ಟಡಕ್ಕೆ ಜಾಗವೇ ಅಂತಿಮ ಆಗುತ್ತಿಲ್ಲ. ಅನುದಾನವೂ ಬಂದಿಲ್ಲ. ಸರ್ಕಾರ ಕೇವಲ ನಿರ್ವಹಣೆಗೆ ಮಾತ್ರ ಅನುದಾನ ಕೊಡುತ್ತಿದೆ.

ಒಟ್ಟಿನಲ್ಲಿ ರಾಜ್ಯ ಸರ್ಕಾರ ಜಿಲ್ಲೆಯಲ್ಲಿ ಘೋಷಣೆ ಮಾಡಿದ ಮೂರು ಹೊಸ ತಾಲೂಕುಗಳು ಹೆಸರಿಗೆ ಮಾತ್ರ ಎನ್ನುವಂತಿದ್ದು, ಅನುದಾನ ಇಲ್ಲದೇ ನೂರೆಂಟು ತೊಂದರೆ ಎದುರಿಸುತ್ತಿವೆ. ಬೆರಳೆಣಿಕೆಯ ಕಚೇರಿಗಳು ಬಾಡಿಗೆ ಕಟ್ಟಡದಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿರುವುದು ಬಿಟ್ಟರೆ ಸಂಪೂರ್ಣ ಅಸ್ತಿತ್ವಕ್ಕೆ ಬಂದಿಲ್ಲ. ಇದರಿಂದ ಜನರ ಅಲೆದಾಟಕ್ಕೆ ಇನ್ನೂ ಮುಕ್ತಿಯೇ ಇಲ್ಲದಂತಾಗಿದೆ.

ಜಿಲ್ಲೆಯಲ್ಲಿ ಘೋಷಣೆಯಾಗಿರುವ ಮೂರು ಹೊಸ ತಾಲೂಕುಗಳ ಪೈಕಿ ಕುಕನೂರು ತಾಲೂಕು ಸ್ವಂತ ಕಚೇರಿಗೆ ಜಾಗ ಅಂತಿಮಗೊಂಡಿದ್ದು, ಭೂ ಸ್ವಾಧೀನ, ಕಟ್ಟಡಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. 2 ಕೋಟಿ ರೂ. ಬಂದಿದೆ. ಇನ್ನು 10 ಕೋಟಿ ಬರುವುದು ಬಾಕಿಯಿದೆ. ಕಾರಟಗಿ ಹಾಗೂ ಕನಕಗಿರಿ ತಾಲೂಕು ಕಚೇರಿಗೆ ಜಾಗ ಅಂತಿಮವಾಗಬೇಕಿದ್ದು, ಭೂ ಸ್ವಾಧೀನಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವ ಸಿದ್ಧತೆಯಲ್ಲಿದೆ. ಕಚೇರಿಗಳ ನಿರ್ವಹಣೆಗಾಗಿ ಸರ್ಕಾರದಿಂದ 90 ಲಕ್ಷ ರೂ. ಬಿಡುಗಡೆಯಾಗಿದೆ. ∙ಎಂ.ಪಿ. ಮಾರುತಿ, ಕೊಪ್ಪಳ ಎಡಿಸಿ

-ದತ್ತು ಕಮ್ಮಾರ

ಟಾಪ್ ನ್ಯೂಸ್

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

ಮೋದಿಗೆ ಹೆದರಿ,ಸೋನಿಯಾ,ಖರ್ಗೆ ಸೇರಿ ಹಲವು ಸಚಿವರು ಚುನಾವಣೆಗೆ ಸ್ಪರ್ಧಿಸುತ್ತಿಲ್ಲ: ಸೂಲಿಬೆಲೆ

ಮೋದಿಗೆ ಹೆದರಿ,ಸೋನಿಯಾ,ಖರ್ಗೆ ಸೇರಿ ಹಲವು ಸಚಿವರು ಚುನಾವಣೆಗೆ ಸ್ಪರ್ಧಿಸುತ್ತಿಲ್ಲ: ಸೂಲಿಬೆಲೆ

Karadi sanganna

BJP ಹೈಕಮಾಂಡ್ ವಿರುದ್ದ ಕೆರಳಿದ ಸಂಸದ ಸಂಗಣ್ಣ ಕರಡಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.