ಇಂದರಗಿ ಹೊಸಕೆರೆಗೆ ಜೀವಕಳೆ


Team Udayavani, Oct 30, 2019, 2:26 PM IST

kopala-tdy-1

ಕೊಪ್ಪಳ: ಕಳೆದ 12 ವರ್ಷಗಳಿಂದ ನೀರಿಲ್ಲದೇ ಬಿಕೋ ಎನ್ನುತ್ತಿದ್ದ ತಾಲೂಕಿನ ಇಂದರಗಿ ಕೆರೆಗೆ ಈ ವರ್ಷ ಜೀವಕಳೆಬಂದಿದೆ. 70 ಎಕರೆ ವಿಸ್ತಾರ ಹೊಂದಿರುವ ಕೆರೆಗೆ ಗವಿಸಿದ್ದೇಶ್ವರ ಶ್ರೀಗಳ ಪ್ರೇರಣೆಯಿಂದ ಸ್ವಯಂ ಗ್ರಾಮಸ್ಥರೇ ಹೊಟ್ಟೆಬೆನಕನನಾಲ ತಿರುವು ದುರಸ್ತಿ ಮಾಡಿಸಿ ಗುಡ್ಡದ ಪ್ರದೇಶದಲ್ಲಿ ವ್ಯರ್ಥವಾಗಿಹರಿಯುವ ನೀರು ಹಿಡಿದಿಟ್ಟುಕೊಂಡು ಕೆರೆಗೆ ಮರುಜೀವ ಮಾದರಿಯಾಗಿದ್ದಾರೆ.

ತಾಲೂಕಿನ ಕೊನೆಯ ಭಾಗದ ಇಂದರಗಿಗ್ರಾಮಗುಡ್ಡಬೆಟ್ಟಗಳ ಮಧ್ಯದಲ್ಲಿದೆ. ಈ ಪ್ರದೇಶ ನೀರಾವರಿ ವ್ಯಾಪ್ತಿ ಎಂದು ಗುರುತಿಸಲ್ಪಟ್ಟರೂ ಅಲ್ಪ ಸ್ವಲ್ಪ ನೀರಾವರಿ ಪ್ರದೇಶ ಹೊಂದಿದೆ. ಸತತ ಮಳೆಯ ಕೊರತೆ ಎದುರಿಸುತ್ತಿದ್ದ ಈ ಭಾಗದ ಜನತೆ ನೀರಿನ ಮೂಲ ಇಲ್ಲದೆ ತೊಂದರೆ ಅನುಭವಿಸುತ್ತಿದ್ದರು. ಗ್ರಾಮ ಪಕ್ಕದಲ್ಲೇ ಇರುವ ಹೊಸಕೆರೆಯ ಬಗ್ಗೆ ಸಣ್ಣ ನೀರಾವರಿ ಇಲಾಖೆ ಅಭಿವೃದ್ಧಿ ಮಾಡಿರಲಿಲ್ಲ.ಕೆರೆಗೆ ಕಾಯಕಲ್ಪ ಸಿಗಲಿದೆಯೋ ಇಲ್ಲವೋ ಎಂಬುವಂತಾಗಿತ್ತು.

ಶ್ರೀಗಳ ಪ್ರೇರಣೆ: ಇದೇ ವೇಳೆ ಕೊಪ್ಪಳ ಗವಿಸಿದ್ದೇಶ್ವರ ಸ್ವಾಮೀಜಿ ಕಳೆದ ಮಾರ್ಚ್‌ ತಿಂಗಳಲ್ಲಿ 26 ಕಿ.ಮೀ. ಉದ್ದದ ಹಿರೇಹಳ್ಳ ಸ್ವತ್ಛಗೊಳಿಸುವ ಸಂಕಲ್ಪ ಮಾಡಿದ್ದಲ್ಲದೇ ಕಾರ್ಯಾರಂಭ ಮಾಡಿದರು. ಇದರಿಂದ ಪ್ರೇರಿತಗೊಂಡ ಇಂದರಗಿ ಗ್ರಾಮಸ್ಥರು ಶ್ರೀಗಳನ್ನು ಲಕ್ಷ ದೀಪೋತ್ಸವ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದರು. ಶ್ರೀಗಳು ಕಾರ್ಯಕ್ರಮದಲ್ಲಿ ಜಲ ಸಂರಕ್ಷಣೆ ಬಗ್ಗೆ ಮಾತನ್ನಾಡಿದ್ದರಿಂದ, ಇಂದರಗಿ ಹೊಸಕೆರೆಗೆ ನೀರು ಸಂಗ್ರಹವಾಗದೇ ಇರುವ ಕುರಿತು ಶ್ರೀಗಳ ಗಮನಕ್ಕೆ ತಂದಿದ್ದರು. ಶ್ರೀಗಳು ಹೊಸಕೆರೆ ಸ್ಥಳಕ್ಕೆ ತೆರಳಿ 5-6 ಕಿ.ಮೀ. ಗುಡ್ಡದಲ್ಲಿ ಸುತ್ತಾಡಿ ಗಮನಿಸಿದ್ದರು.

ಹೊಟ್ಟೆಬೆನಕನ ನಾಲೆ ತಿರುವು ದುರಸ್ತಿ: 1984ರ ಅವಧಿಯಲ್ಲಿ ಹೊಸ ಕೆರೆ ನಿರ್ಮಿಸಿದ್ದರೂ ನಾಲ್ಕೆದು ಬಾರಿ ಮಾತ್ರ ನೀರು ತುಂಬಿತ್ತು. ಬಳಿಕ ಕೆರೆಯ ನಾಲೆ ಮುಚ್ಚಿ ಹೋಗಿದ್ದರಿಂದ ಇತ್ತ ಯಾರೂ ಲಕ್ಷ ಕೊಟ್ಟಿರಲಿಲ್ಲ. ಇಂದರಗಿ ಮತ್ತು ಬೊಮ್ಮಸಾಗರ ತಾಂಡಾ ಗ್ರಾಮಗಳ ಅರಣ್ಯ ಪ್ರದೇಶದ ನೀರು ಹೊಟ್ಟೆಬೆನಕನ ನಾಲೆ ಮೂಲಕ ನೀರು ಹರಿದು ಹೋಗಿ ಮುಕ್ಕುಂಪಿ ಗ್ರಾಮದತ್ತ ಸಾಗಿ ವ್ಯರ್ಥವಾಗಿ ಹೋಗುತ್ತಿತ್ತು. ಈ ವಿಷಯವನ್ನು ಶ್ರೀಗಳ ಗಮನಕ್ಕೆ ತಂದಾಗ ನಾಲೆ ದುರಸ್ತಿ ಕೈಗೊಳ್ಳಲು ಮಾರ್ಗದರ್ಶನ ಮಾಡಿದ್ದರು. 25 ಟ್ರಾಕ್ಟರ್‌ ಹಾಗೂ 5 ಜೆಸಿಬಿಗಳು 24 ದಿನಗಳ ಕಾಲ ನಾಲೆ ದುರಸ್ತಿ ಕಾರ್ಯದಲ್ಲಿ ತೊಡಗಿದ್ದವು. ಸ್ವತಃ ಗ್ರಾಮಸ್ಥರೇ ಯಾರಿಂದಲೂ ಹಣ ಪಡೆಯದೇ ಸ್ವಯಂ ಹಣ ಸಂಗ್ರಹಿಸಿ ಕೆರೆಗೆ ನಾಲೆ ಜೋಡಣೆ ಕಾರ್ಯ ಮಾಡಿದ್ದರು.

12 ವರ್ಷದ ಬಳಿಕ ಕೆರೆಗೆ ನೀರು: ಸರ್ಕಾರ, ಜನಪ್ರತಿನಿಧಿಗಳು, ಅಧಿಕಾರಿಗಳು ಮಾಡದ ಕಾರ್ಯವನ್ನು ಸ್ವತಃ ಗ್ರಾಮಸ್ಥರೇ ಮಾಡಿ ತೋರಿಸಿದ್ದರಿಂದ ಕೆರೆಗೆ ನೀರು ಹರಿಯುವಂತಾಗಿದೆ. ಗವಿಸಿದ್ದೇಶ್ವರ ಶ್ರೀ ಮಾರ್ಗದರ್ಶನ ಹಾಗೂ ಗ್ರಾಮಸ್ಥರ ಪ್ರಯತ್ನ ಕೈ ಹಿಡಿದಿದೆ.12 ವರ್ಷಗಳ ಹಿಂದೆ ಕೆರೆಗೆ ನೀರು ಹರಿದು ಬಂದಿತ್ತು. ತರುವಾಯ ನೀರು ಸಂಗ್ರಹವಾಗಿರಲಿಲ್ಲ. 12 ವರ್ಷಗಳ ಬಳಿಕ ಕೆರೆಗೆ ಮತ್ತೆ ಜೀವಕಳೆ ಬಂದಿದೆ.

 

-ದತ್ತು ಕಮ್ಮಾರ

ಟಾಪ್ ನ್ಯೂಸ್

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.