ಸವಳ್ಯಾರಲ್ಲಿ ಕೋವಿಡ್ ದೂರ


Team Udayavani, May 27, 2021, 9:03 PM IST

story photo

 

­ಬೆಟ್ಟದ ಮೇಲಿನ ಕ್ಯಾಂಪಿನಲ್ಲಿಲ್ಲ ಕೋವಿಡ್‌ ಭಯ! ­ಗಮನ ಸೆಳೆದ ಜನಜೀವ

ವರದಿ: ದತ್ತು ಕಮ್ಮಾರ

ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ಸಸವಳ್ಯಾರು ಕ್ಯಾಂಪ್‌ನಲ್ಲಿ ಈವರೆಗೂ ಕೋವಿಡ್‌ ಭಯವಿಲ್ಲದೇ ಜನರು ನೆಮ್ಮದಿಯಿಂದ ಜೀವನ ಸಾಗಿಸುತ್ತಿದ್ದಾರೆ. ಇಲ್ಲಿನ ಕುಟುಂಬದ ಸದಸ್ಯರೆಲ್ಲ ವರ್ಷ ಪೂರ್ತಿ ಹೋಂ ಕ್ವಾರೆಂಟೈನ್‌ನಲ್ಲಿ ಇದ್ದಂತೆ ಇರುತ್ತಾರೆ. ಇದು ಜಿಲ್ಲೆಯ ಜನರ ಗಮನ ಸೆಳೆದಿದೆ.

ಕೊರೊನಾ ಮಹಾಮಾರಿಯು ಜಗತ್ತಿನಲ್ಲಿ ಕಾಣಿಸಿಕೊಂಡು ವರ್ಷವೇ ಗತಿಸಿ ಇಡೀ ಜನ ಸಮೂಹವನ್ನೆ ಬೆಚ್ಚಿ ಬೀಳಿಸಿದೆ. ಆದರೆ ಸವಳ್ಯಾರು ಬೆಟ್ಟದ ಮೇಲಿರುವ ಕುಟುಂಬಸ್ಥರಿಗೆ ಮಾತ್ರ ಕೊರೊನಾ ಬಗ್ಗೆ ಭಯ ಇಲ್ಲದೆ ನೆಮ್ಮದಿಯಿಂದ ಜೀವನದ ಬಂಡಿ ಸಾಗಿಸುತ್ತಿದ್ದಾರೆ.

ಸವಳ್ಯಾರ ಕ್ಯಾಂಪಿನಲ್ಲಿ 10-12 ಮನೆಗಳಿದ್ದು 100 ಜನರಿದ್ದಾರೆ. ಇವರಿಗೆ ಇಂದಿಗೂ ಶುದ್ಧ ಕುಡಿಯುವ ನೀರಿಲ್ಲ. ಸರಿಯಾದ ವಿದ್ಯುತ್‌ ವ್ಯವಸ್ಥೆಯೂ ಇಲ್ಲ. ಗುಡ್ಡದ ಪ್ರದೇಶದಲ್ಲಿ ಬಾವಿಯಿದ್ದು, ಈ ಬಾವಿಯ ನೀರೇ ಇವರಿಗೆ ವರ್ಷಪೂರ್ತಿ ಜೀವನಕ್ಕೆ ಆಧಾರ. ಇದೇ ನೀರನ್ನೇ ನಿತ್ಯದ ಜೀವನಕ್ಕೆ ಬಳಕೆ ಮಾಡುತ್ತಿದ್ದಾರೆ. ಈ ಬೆಟ್ಟದಲ್ಲಿ ಕೊರೊನಾ ಸುಳಿದಿಲ್ಲ. ಯಾರೊಬ್ಬರಿಗೂ ಸೋಂಕಿನ ಲಕ್ಷಣವೂ ಇಲ್ಲದಿರುವುದು ನಿಜಕ್ಕೂ ಖುಷಿಯ ವಿಚಾರ.

ಈ ಗ್ರಾಮದಲ್ಲಿನ ಜನರು ಸಂತೆ ಮಾರುಕಟ್ಟೆಗೆ ಬರಬೇಕೆಂದರೂ ಗುಡ್ಡ ಇಳಿದು ಕೆಳಗೆ ಬರಬೇಕು. ಇವರು ವಾರಕ್ಕೊಮ್ಮೆ ತಮಗೆ ಬೇಕಾದ ಸಂತೆ ಸೇರಿ ಇತರೆ ಅಗತ್ಯ ವಸ್ತುಗಳೊಂದಿಗೆ ಬೆಟ್ಟವನ್ನೇರಿ ಮನೆ ಸೇರುತ್ತಾರೆ. ಇಲ್ಲಿಗೆ ಯಾರೂ ಹೋಗುವುದಿಲ್ಲ. ಈ ಗ್ರಾಮವು ಹಂಪಸದುರ್ಗ ಗ್ರಾಮದಿಂದ 3-4 ಕಿಮೀ ದೂರದಲ್ಲಿದೆ. ಇವರ ಜೀವನ ಶೈಲಿಯೂ ಇನ್ನೂ ಹಳೇ ಕಾಲದಲ್ಲಿದ್ದಂತೆಯೇ ಇದೆ. ಬೆಟ್ಟದ ಮೇಲೆಯೇ ಭೂಮಿ ಸಮತಟ್ಟು ಮಾಡಿ ಕೃಷಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಕೆಲವರು ಕೋಳಿ, ಕುರಿ ಸಾಕಾಣಿಕೆಯನ್ನೂ ಮಾಡಿ ಜೀವನದ ಬಂಡಿ ದೂಡುತ್ತಿದ್ದಾರೆ. ಅದರಿಂದ ಬಂದ ಆದಾಯದಲ್ಲಿಯೇ ಉಪ ಜೀವನ ನಡೆಯುತ್ತಿದೆ.

ಇವರೆಲ್ಲ ದೇವದುರ್ಗ ತಾಲೂಕಿನವರು: ಸವಳ್ಯಾರ್‌ ಕಂಪನಿನ ಜನರೆಲ್ಲ ಮೂಲತಃ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನವರು. ಅಲ್ಲಿ ಕುಟುಂಬದ ಕಲಹ ನಡೆದಾಗ ಅಲ್ಲಿಂದ ಇತ್ತ ಜೀವನೋಪಾಯಕ್ಕೆ ಬಂದು ನೆಲೆಸಿದ್ದಾರೆ. ಹೇಗೋ ಕಷ್ಟಪಟ್ಟು ಜೀವನ ಕಟ್ಟಿಕೊಂಡು ಇಂದಿಗೂ ನೆಮ್ಮದಿಯಿಂದ ಇದ್ದಾರೆ. ಸದ್ಯ ಸರ್ಕಾರದಿಂದ ದೊರೆಯುವ ಕೆಲವೊಂದು ವೈಯಕ್ತಿಕ ಸೌಲಭ್ಯ ಪಡೆದುಕೊಂಡಿದ್ದಾರೆ. ಗ್ರಾಮದಲ್ಲಿ ವಿದ್ಯುತ್‌ ಸಮಸ್ಯೆಯಿದ್ದ ಕಾರಣ ಸೋಲಾರ್‌ ಅಳವಡಿಸಿಕೊಂಡಿದ್ದಾರೆ.

ಕೊರೊನಾ ಭಯವಿಲ್ಲದ ಗ್ರಾಮ: ಪ್ರಸ್ತುತ ಎಲ್ಲ ಗ್ರಾಮದಲ್ಲೂ ಕೊರೊನಾ ಆರ್ಭಟವಿದೆ. ಮನೆಯ ಪಕ್ಕದವರನ್ನೂ ಹೋಗಿ ಮಾತನಾಡಿಸದ ಸಂಕಷ್ಟದ ಸ್ಥಿತಿ ಎದುರಾಗಿದೆ. ಆದರೆ ಸವಳ್ಯಾರ ಕ್ಯಾಂಪಿನ ಜನ ಮಾತ್ರ ಕೊರೊನಾ ಭಯವಿಲ್ಲದೇ ತಮ್ಮ ನಿತ್ಯದ ಕಾಯಕದಲ್ಲಿ ಎಲ್ಲರೂ ತೊಡಗಿದ್ದಾರೆ. ವರ್ಷದಿಂದಲೂ ಕೊರೊನಾ ಇಲ್ಲಿ ಸುಳಿವೇ ಇಲ್ಲ. ಇವರು ತಮ್ಮಷ್ಟಕ್ಕೆ ತಾವು ಜಾಗೃತರಾಗಿದ್ದಾರೆ. ಕೊರೊನಾ ಬಗ್ಗೆಯೂ ಇವರು ಅಷ್ಟೊಂದು ಭಯಬೀತರಾಗಿಲ್ಲ. ಇಲ್ಲಿನ ಕೆಲವು ಜನರು ಗುಳೆ ಹೋಗಿದ್ದು, ಕೋವಿಡ್‌ ಹಿನ್ನೆಲೆಯಲ್ಲಿ ಸ್ವ ಗ್ರಾಮಕ್ಕೆ ಬರಲೂ ಆಗಿಲ್ಲ. ಹಾಗಾಗಿ ಇರುವ ಕುಟುಂಬಗಳೇ ನೆಮ್ಮದಿಯಿಂದ ಇವೆ.

ಟಾಪ್ ನ್ಯೂಸ್

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.