ದೇಶದ ಜಿಡಿಪಿ ಕುಸಿದು ಹೋಗಿದೆ, ಮೋದಿ ಸರ್ಕಾರದಲ್ಲಿ ಆರ್ಥಿಕ ಶಿಸ್ತಿಲ್ಲ : ಸಿದ್ದರಾಮಯ್ಯ


Team Udayavani, Jun 3, 2020, 1:43 PM IST

ದೇಶದ ಜಿಡಿಪಿ ಕುಸಿದು ಹೋಗಿದೆ, ಮೋದಿ ಸರ್ಕಾರದಲ್ಲಿ ಆರ್ಥಿಕ ಶಿಸ್ತಿಲ್ಲ : ಸಿದ್ದರಾಮಯ್ಯ

ಕೊಪ್ಪಳ: ಕಳೆದ 2019-20ರಲ್ಲಿ ದೇಶದ ಜಿಡಿಪಿ 6% ಇತ್ತು. ಈ ಪ್ರಸಕ್ತ ವರ್ಷದಲ್ಲಿ ಋಣಾತ್ಮಕ ಬೆಳವಣಿಗೆ ಕಾಣಲಿದೆ. ಇದು ಮೋದಿ ಅವರ ಸಾಧನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮೋದಿ ಆಡಳಿತ ಟೀಕಿಸಿದರು.

ಕೊಪ್ಪಳದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ದೇಶದ ಜಿಡಿಪಿ ಕುಸಿದು ಹೋಗಿದೆ. ಮೋದಿಗೆ ಆರ್ಥಿಕ ಶಿಸ್ತು ಇಲ್ಲ. ರಾಜ್ಯ ಸರ್ಕಾರದ ಖಜಾನೆ ದಿವಾಳಿಯಾಗಿದೆ ಎಂದರು.

ವಸತಿ ಸಚಿವ ಸೋಮಣ್ಣನಿಗೆ ಆರ್ಥಿಕ ವ್ಯವಸ್ಥೆ ಬಗ್ಗೆ ಗೊತ್ತಿಲ್ಲ. ನಮ್ಮ ಸರ್ಕಾರದ ಅವಧಿಯಲ್ಲಿ ಆರ್ಥಿಕ ಶಿಸ್ತಿನಲ್ಲಿ ರಾಜ್ಯ ಸರಕಾರ ಮೊದಲ ಸ್ಥಾನದಲ್ಲಿತ್ತು. ಆಗ ಕೆಂದ್ರದ ವರದಿಯೇ ಇದನ್ನು ಹೇಳಿತ್ತು. ಆರ್ಥಿಕ ತಜ್ಞ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರೂ ಹೇಳಿದ್ದಾರೆ.  ಇನ್ಮುಂದೆ ದೇಶದ ಜಿಡಿಪಿ ಮೈನಸ್ ಆಗುತ್ತಾ ಹೋಗಲಿದೆ ನೋಡಿ ಎಂದರು.

ಸೋಮಣ್ಣ ಯಾವ ಆರ್ಥಿಕ ತಜ್ಞ ಎಂದರಲ್ಲದೆ, ರಾಜ್ಯದ ಆರ್ಥಿಕ ಸ್ಥಿತಿ ದಿವಾಳಿಯಾಗಿದೆ. ನೌಕರರಿಗೆ ಸಂಬಳ ಕೊಡಲು ದುಡ್ಡಿಲ್ಲ. ಇದು ಕರ್ನಾಟಕದ ಕಥೆ ಮಾತ್ರವಲ್ಲ, ಇಡೀ ದೇಶದ ಸ್ಥಿತಿಯೇ ಹೀಗಾಗಿದೆ. ಕೋವಿಡ್-19 ಬರುವುದಕ್ಕಿಂತ ಮುಂಚೆಯೂ ಆರ್ಥಿಕ ಸ್ಥಿತಿ ಹಾಳಾಗಿದೆ ಎಂದರು.

ಇನ್ನೂ ಸೋಮಣ್ಣ ಕಾಂಗ್ರೆಸ್ ನಾಯಕರ ಬಗ್ಗೆ ಕೆಟ್ಟ ಪದ ಬಳಕೆ ವಿಚಾರದಲ್ಲಿ, ಬಿಜೆಪಿಯವರ ಹಾಗೆ ನಾನು ಕೀಳು ಮಟ್ಟಕ್ಕೆ ಇಳಿಯಲ್ಲ ಎಂದರು. ನನ್ನ ಮತ್ತು ಡಿಕೆಶಿ ನಡುವೆ ಅತ್ಯುತ್ತಮ ಬಾಂಧವ್ಯ, ಸಂಬಂಧ ಇದೆ. ನಮ್ಮ ನಡುವೆ ಸರಿ ಇಲ್ಲ ಅನ್ನೋದೆಲ್ಲ ಶುದ್ಧ ಸುಳ್ಳು ಎಂದರು.

ಸಿದ್ದರಾಮಯ್ಯ ಕೋವಿಡ್ ಬಗ್ಗೆ ಯಾವಾಗ ಪಿಎಚ್ ಡಿ ಪಡೆದರು ಎಂಬ  ಬಿ ಸಿ ಪಾಟೀಲ್ ಹೇಳಿಕೆಗೆ ಪ್ರತಿಕ್ರಿಯಿಸಿ, ಕೋವಿಡ್ ಬಗ್ಗೆ ಕಾಮನ್ ಸೆನ್ಸ್ ಇದ್ದರೆ ಸಾಕು ಅದಕ್ಕೆ ಪಿಎಚ್ ಡಿ ಮಾಡಬೇಕಿಲ್ಲ ಎಂದು ತಿರುಗೇಟು ನೀಡಿದರು.

ಬಿಜೆಪಿಯಲ್ಲಿ ಭಿನ್ನಮತ ಇರೋದು ಸತ್ಯ. ಬಿಜೆಪಿಯಲ್ಲಿ ಭಿನ್ನಮತ ಮುಂದುವರಿಯುತ್ತದೆ. ಕೆಲ ಅಸಮಾಧಾನಿತ ಬಿಜೆಪಿ ಶಾಸಕರು ನನ್ನ ಭೇಟಿ ಮಾಡಿದ್ದು ನಿಜ, ಇದರಲ್ಲಿ ಹೊಸದೇನು ಇಲ್ಲ. ಬಿಜೆಪಿ ಬಿನ್ನಮತದಲ್ಲಿ ನಾವು ಕೈ ಹಾಕಲ್ಲ. ಸರಕಾರ ಅದಾಗದೆ ಬಿದ್ದು ಹೋದರೆ ನೋಡೋಣ ಎಂದರು.

ಬಿಜೆಪಿಯಲ್ಲಿ ಸಂವಿಧಾನಿಕ ಸಿಎಂ ಬಿಎಸ್ವೈ, ಅಸಂವಿಧಾನಾತ್ಮಕ ಸಿಎಂ ವಿಜಯೇಂದ್ರ ಇದ್ದಾರೆ ಅಂತ ನಾವಲ್ಲ ಜನ ಹೇಳ್ತಾರೆ. ಯಡಿಯೂರಪ್ಪ ಹೆಸರಿಗಷ್ಟೇ ಸಿಎಂ, ಎಲ್ಲ ಮಾಡೋದು ವಿಜಯೇಂದ್ರ ಎಂದರು. ಗ್ರಾ. ಪಂಗೆ ನಾಮನಿರ್ದೇಶನಕ್ಕೆ ನಾವು ವಿರೋಧಿಸಿದ್ದೇವೆ. ಒಂದು ವೇಳೆ ಹಾಗಾದರೆ ನಾವು ಕಾನೂನು ಹೋರಾಟಕ್ಕೂ ಸಿದ್ಧ ಎಂದರು.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

ಸಂಸದ ಸಂಗಣ್ಣ ಕರಡಿ ಮನೆಗೆ ಲಕ್ಷ್ಮಣ ಸವದಿ ಭೇಟಿ

Koppal ಸಂಸದ ಸಂಗಣ್ಣ ಕರಡಿ ಮನೆಗೆ ಲಕ್ಷ್ಮಣ ಸವದಿ ಭೇಟಿ

1-qweqw-ew

High Court ಆದೇಶದಂತೆ ಏ.17,18 ರಂದು ನವವೃಂದಾವನಗಡ್ಡಿಯಲ್ಲಿ ಆರಾಧನೆ

1-waddasd

Gangavati; ಈದ್ಗಾ ಮೈದಾನದಲ್ಲಿ ರಾಜಕೀಯ: ಅನ್ಸಾರಿ-ಗಾಲಿ ರೆಡ್ಡಿ ಸಮರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.