ಪರಿಹಾರ ಕೇಳಿದ್ದು 200 ಕೋಟಿ, ಕೊಟ್ಟಿದ್ದು 50 ಕೋಟಿ!


Team Udayavani, Nov 4, 2019, 3:09 PM IST

Udayavani Kannada Newspaper

ಕೊಪ್ಪಳ: ಮಳೆಯಿಲ್ಲದೇ ಬರದಿಂದ ಬೆಂದು ನೊಂದು, ನಷ್ಟ ಅನುಭವಿಸಿ ಸರ್ಕಾರದ ಮುಂದೆ ಬರ ಪರಿಹಾರಕ್ಕೆ ಕೈ ಚಾಚಿ ನಿಂತ ರೈತ ಸಮೂಹಕ್ಕೆ ರಾಜ್ಯ ಸರ್ಕಾರ ಪುಡಿಗಾಸು ಹಣ ನೀಡಿ ಕೈತೊಳೆದುಕೊಂಡಿದೆ. ಜಿಲ್ಲಾಡಳಿತ 2018-19ನೇ ಸಾಲಿನ ಬರ ಪರಿಹಾರ 200 ಕೋಟಿ ರೂ. ಕೇಳಿದ್ದರೆ, ಸರ್ಕಾರ ಈವರೆಗೂ ಬರಿ 50 ಕೋಟಿ ಕೊಟ್ಟಿದೆ.

ಜಿಲ್ಲೆಯು ಪದೇ ಪದೆ ಬರಕ್ಕೆ ತುತ್ತಾಗುತ್ತಿದೆ. ವರ್ಷದಿಂದ ವರ್ಷಕ್ಕೆ ಮಳೆ ಕಡಿಮೆಯಾಗುತ್ತಿದ್ದು, ಕೃಷಿ ವಲಯವು ದೊಡ್ಡ ಗಂಡಾಂತರ ಎದುರಿಸುತ್ತಿದೆ. ಅಂತರ್ಜಲ ಮಟ್ಟ ಕುಸಿತ ಕಾಣುತ್ತಿದ್ದು, ರೈತ ಸಮೂಹಕ್ಕೆ ದಿಕ್ಕು ತಿಳಿಯದಂತಾಗುತ್ತಿದೆ.

ಕಳೆದ 18 ವರ್ಷದ ಲೆಕ್ಕಾಚಾರದಲ್ಲಿ ಜಿಲ್ಲೆ 12 ವರ್ಷ ಬರವನ್ನೇ ಕಂಡಿದೆ ಎಂಬುದನ್ನು ಇಲಾಖೆ ಅಂಕಿ ಅಂಶವೇ ಹೇಳುತ್ತಿದೆ. ಬರದ ಸ್ಥಿತಿಯಲ್ಲಿ ಬೆಳೆ ನಷ್ಟ ಅನುಭವಿಸಿದ ರೈತರಿಗೆ ಸರ್ಕಾರ ಪುಡಿಗಾಸು ನೀಡಿ ಕೈತೊಳೆದುಕೊಳ್ಳುತ್ತಿರುವುದು ನಾಚಿಕೆಗೇಡಿನ ಸಂಗತಿ. ಇದಕ್ಕೆ ಸಾಕ್ಷಿ ಎಂಬಂತೆ ಕಳೆದ 2018-19ನೇ ಸಾಲಿನಲ್ಲಿ ಮಳೆ ಕೊರತೆಯಿಂದ ಜಿಲ್ಲೆಯಲ್ಲಿ ಬರದ ಪರಿಸ್ಥಿತಿ ಎದುರಾಯಿತು. 2.50 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಮಾಡಿದ ಬೆಳೆ ಸಂಪೂರ್ಣ ಹಾನಿಯಾಗಿ ಬಿತ್ತನೆ ಮಾಡಿದ ಖರ್ಚು ಸಹಿತ ರೈತರಿಗೆ ಸಿಗದಂತಹ ಸ್ಥಿತಿ ಎದುರಾಗಿ ಅನ್ನದಾತ ಕಣ್ಣೀರಿಡುವಂತಾಯಿತು.

ತುತ್ತಿನ ದುಡಿಮೆಗೆ ದೂರದ ಊರಿಗೆ ಗುಳೆ ಹೋಗಿ ಹೊಟ್ಟೆ ಜೀವನ ತುಂಬಿಸಕೊಳ್ಳುವಂತಹ ಪರಿಸ್ಥಿತಿ ಎದುರಾಯಿತು. ಜಿಲ್ಲಾಡಳಿತ ಸರ್ವೇ ಮಾಡಿ ಆಗ ಜಿಲ್ಲೆಯಲ್ಲಿನ ಬೆಳೆ ಹಾನಿ ಲೆಕ್ಕಾಚಾರ ಹಾಕಿ ಸರ್ಕಾರಕ್ಕೆ ವರದಿ ಸಲ್ಲಿಸಿತು. ಸರ್ಕಾರ ಕೇಂದ್ರದ ಗಮನ ಸೆಳೆದಾಗ ಕೇಂದ್ರ ಬರ ಅಧ್ಯಯನ ತಂಡವು ಜಿಲ್ಲೆಗೆ ಆಗಮಿಸಿ ಜಿಲ್ಲೆಯಲ್ಲಿನ ವಾಸ್ತವ ಸ್ಥಿತಿ ಅರಿತು ಕೇಂದ್ರಕ್ಕೂ ವರದಿ ನೀಡಿತು.

ಜಿಲ್ಲಾಡಳಿತ ಮುಂಗಾರಿನ 1,92,542 ಹೆಕ್ಟೇರ್‌ ಬೆಳೆ ಹಾನಿಗೆ 120 ಕೋಟಿ ರೂ. ಪರಿಹಾರ, ಹಿಂಗಾರಿನಲ್ಲಿ 1,21,608 ಹೆಕ್ಟೇರ್‌ ಬೆಳೆ ಹಾನಿಗೆ 80 ಕೋಟಿ ರೂ. ಪರಿಹಾರ ಬಿಡುಗಡೆಗೆ ಸರ್ಕಾರಕ್ಕೆ ವರದಿ ಮಾಡಿತ್ತು. ಅಂದರೆ ಹಿಂಗಾರು-ಮುಂಗಾರು ಸೇರಿ ಜಿಲ್ಲೆಗೆ 200 ಕೋಟಿ ರೂ. ಪರಿಹಾರ ಬೇಡಿಕೆಯನ್ನು ಸರ್ಕಾರದ ಮುಂದಿಟ್ಟಿತ್ತು. ಆದರೆ ಸರ್ಕಾರ ಕೇಳಿದ್ದರಲ್ಲಿ ಶೇ.25 ಮಾತ್ರ ಪರಿಹಾರ ನೀಡಿದೆ. ಜಿಲ್ಲಾಡಳಿತ ಕೇಳಿದ್ದ 200 ಕೋಟಿ ಪರಿಹಾರಕ್ಕೆ ಸರ್ಕಾರ 50 ಕೋಟಿಯಷ್ಟು ಪರಿಹಾರ ಮಾತ್ರ ಈವರೆಗೂ ರೈತರ ಖಾತೆಗೆ ಜಮೆ ಮಾಡಲಾಗಿದೆ. ಉಳಿದಂತೆ 150 ಕೋಟಿಯಷ್ಟು ಪರಿಹಾರ ಬರುತ್ತದೆ ಎನ್ನುವ ಮಾತು ಕೇಳಲಾಗಿದೆ ವಿನಃ ಇನ್ನೂ ಪರಿಪೂರ್ಣ ಪರಿಹಾರ ರೈತರ ಖಾತೆಗೆ ಬಂದಿಲ್ಲ.

ಮುಂಗಾರಿನಲ್ಲಿ 27,890 ರೈತರಿಗೆ 24.34 ಕೋಟಿ ಬಿಡುಗಡೆ ಮಾಡಿದ್ದರೆ, ಹಿಂಗಾರಿನಲ್ಲಿ 43,865 ರೈತರಿಗೆ 29.70 ಕೋಟಿ ರೂ. ಪರಿಹಾರ ಬಂದಿದೆ. ಸರ್ಕಾರವು ಎನ್‌ಡಿಆರ್‌ಎಫ್‌ ನಿಯಮಾವಳಿ ಪ್ರಕಾರ, ಪ್ರತಿ ಹೆಕ್ಟೇರ್‌ಗೆ 10,800 ನಂತೆ ಪರಿಹಾರ ಮೊತ್ತವನ್ನು ಬಿಡುಗಡೆ ಮಾಡಿದೆ.

 

-ದತ್ತು ಕಮ್ಮಾರ

ಟಾಪ್ ನ್ಯೂಸ್

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ

Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ

Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ

Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.