ಕಾರಟಗಿಯಲ್ಲಿ ಲಾಕ್ಡೌನ್ಗೆ ಕ್ಯಾರೇ ಎನ್ನದ ಜನ
Team Udayavani, Jul 27, 2020, 10:39 AM IST
ಕಾರಟಗಿ: ಪಟ್ಟಣದಲ್ಲಿ ಕೋವಿಡ್ 19 ರ ನಿಯಂತ್ರಣಕ್ಕೆ ಪ್ರತಿ ಭಾನುವಾರ ಸಂಪೂರ್ಣ ಲಾಕ್ಡೌನ್ ಜಾರಿಗೊಳಿಸಿದ್ದು, ಜು.26 ರಂದು ಭಾನುವಾರ ಲಾಕ್ಡೌನ್ ಹೆಸರಿಗೆ ಮಾತ್ರ ಎಂಬತ್ತಾಗಿತ್ತು.
ಮೊದಲನೆಯ ಲಾಕ್ಡೌನ್ ಮಾತ್ರ ಸಂಪೂರ್ಣವಾಗಿ ಎಲ್ಲಾ ಅಂಗಡಿ ಮುಂಗಟ್ಟುಗಳು ಬಂದ್ ಮಾಡಿ ರಸ್ತೆಗಳು ಬಿಕೋ ಎನ್ನುತ್ತಿದ್ದವು. ಲಾಕ್ಡೌನ್ ಬೈಕ್ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ಮೀಸಲಾಗಿದ್ದಂತಿತ್ತು. ಅಲ್ಲಲ್ಲಿ ಹೋಟೆಲ್, ಪಾನ್ಶಾಪ್, ಹಣ್ಣು, ಹೂವಿನ ಅಂಗಡಿ ಇತ್ಯಾದಿಗಳು ತೆರೆದು ವ್ಯಾಪಾರ ವಹಿವಾಟು ನಡೆಸಿದವು. ನಂತರ ರಸ್ತೆಗಳಲ್ಲಿ ಸಾರ್ವಜನಿಕರ ಓಡಾಟ ಗುಂಪುಗೂಡಿ ನಿಲ್ಲುವುದು ಜೋರಾಗಿಯೇ ನಡೆದಿತ್ತು. ಸಣ್ಣಪುಟ್ಟ ಹೋಟೆಲ್, ಪಾನ್ಶಾಪಗಳು ಎಂದಿನಂತೆ ಕಾರ್ಯನಿರ್ವಹಿಸಿದವು.
ಕೆಲ ಗಂಟೆಗಳ ನಂತರ ಪೊಲೀಸರು ರಸ್ತೆಗಿಳಿದರು ಆಗ ಸ್ವಲ್ಪ ಓಡಾಟ ಕಡಿಮೆಯಾಗಿ ನಂತರ ಮತ್ತೆ ಆರಂಭಗೊಂಡಿತು. ಜಿಲ್ಲಾಧಿಕಾರಿ ವಿಕಾಸ ಕಿಶೋರ ಸುರಳಕರ ಜು.25ರಂದು ಗಂಗಾವತಿಯಲ್ಲಿ ನಡೆದ ವಿವಿಧ ಇಲಾಖೆಯ ಅಧಿಕಾರಿಗಳ ಕೋವಿಡ್ 19 ಟಾಸ್ಕ್ಫೋರ್ಸ್ ಸಮಿತಿ ಸಭೆಯಲ್ಲಿ ಲಾಕ್ಡೌನ್ ಸಮಯದಲ್ಲಿ ಮಾಸ್ಕ್ ಧರಿಸದೆ ಅನವಶ್ಯಕವಾಗಿ ಒಡಾಡುವವರ ಮೇಲೆ ಕ್ರಮ ಕೈಗೊಳ್ಳುವಂತೆಯೂ ಸೂಚಿಸಿದ್ದಾರೆ. ಆದರೆ ಯಾವ ಕ್ರಮವನ್ನು ಜರುಗಿಸಿಲ್ಲಾ. ಸರಕಾರ ಕೋವಿಡ್ 19 ನಿಯಂತ್ರಣಕ್ಕೆ ಸಾರ್ವಜನಿಕರ ಆರೋಗ್ಯ ಒಳಿತಿಗಾಗಿ ಹಲವಾರು ಕ್ರಮ ಕೈಗೊಳ್ಳುತ್ತಲಿದೆ. ಆದರೂ ಕೂಡ ಜನತೆ ಮಾತ್ರ ಎಚ್ಚೆತ್ತುಕೊಳ್ಳುತ್ತಿಲ್ಲ. ಪಟ್ಟಣದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆಯಾಗಿ ಸಾವು ಕೂಡ ಸಂಭವಿಸಿವೆ. ವಿವಿಧ ಗ್ರಾಮಗಳಲ್ಲೂ ಕೋವಿಡ್ ಪಾಸಿಟಿವ್ ಪ್ರಕರಣಗಳು ದಿನದಿಂದ ದಿನಕ್ಕೆ ದೃಢಪಡುತ್ತಲಿವೆ. ಈಗಲಾದರೂ ಜನತೆ ಎಚ್ಚೆತ್ತುಕೊಳ್ಳಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavati: ಜೈ ಶ್ರೀರಾಮ್ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
MUST WATCH
ಹೊಸ ಸೇರ್ಪಡೆ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು