ಯಾರನ್ನೂ ಟೀಕೆ ಮಾಡಲ್ಲ- 40 ಕ್ಷೇತ್ರಗಳಲ್ಲಿ ಕೆಆರ್ಪಿಪಿ ಪಕ್ಷ ಗೆಲ್ಲಲಿದೆ: ಜನಾರ್ದನ ರೆಡ್ಡಿ ವಿಶ್ವಾಸ
ಗಂಗಾವತಿ ಕ್ಷೇತ್ರದಿಂದ ಗೆಲ್ಲುವ ವಿಶ್ವಾಸವಿದೆ....
Team Udayavani, Jan 12, 2023, 9:30 AM IST
ಗಂಗಾವತಿ: ಅಭಿಮಾನಿಗಳ ಉತ್ಸಾಹ ನೋಡುತ್ತಿದ್ದರೆ ಕಲ್ಯಾಣ ರಾಜ್ಯ ಪ್ರಗತಿ ಪಾರ್ಟಿ ರಾಜ್ಯದ 40 ಕ್ಷೇತ್ರಗಳಲ್ಲಿ ಗೆಲ್ಲುವ ನಿರೀಕ್ಷೆ ಇದೆ. ಹಿಂದೂಗಳ ಪವಿತ್ರ ಶಕ್ತಿ ಕೇಂದ್ರ ಕಿಷ್ಕಿಂದಾ ಅಂಜನಾದ್ರಿಯನ್ನು ಸಮಗ್ರ ಅಭಿವೃದ್ಧಿ ತಮ್ಮ ವಿಷನ್ ಆಗಿದ್ದು ಯುವ ಕಾರ್ಯಕರ್ತರ ಬೆಂಬಲ ಸಹಕಾರದಿಂದ ಗಂಗಾವತಿ ಕ್ಷೇತ್ರದಿಂದ ಗೆಲ್ಲುವ ವಿಶ್ವಾಸವಿದೆ ಎಂದು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹೇಳಿದರು.
ಇದನ್ನೂ ಓದಿ : ಗಾಲಿ ಜನಾರ್ದನ ರೆಡ್ಡಿ ಜನ್ಮದಿನ: ಬೈಕ್ ರ್ಯಾಲಿ; ಎರಡು ತಾಸು ಟ್ರಾಫಿಕ್ ಜಾಮ್
ಅವರು ಕನಕಗಿರಿ ರಸ್ತೆಯಲ್ಲಿ ತಮ್ಮ ನಿವಾಸದ ವೇದಿಕೆಯಲ್ಲಿ ಜನ್ಮದಿನದ ನಿಮಿತ್ತ ಅಭಿಮಾನಿಗಳಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಗಂಗಾವತಿ ಜನತೆಯ ಆಶೀರ್ವಾದದಿಂದ 56 ನೇ ಜನ್ಮ ದಿನವನ್ನು ಇಲ್ಲಿ ಆಚರಿಸಿಕೊಳ್ಳಲು ಅಭಿಮಾನಿ ಯುವ ಜನತೆ ಬೈಕ್ ರ್ಯಾಲಿಯ ಮೂಲಕ ಅಭೂತಪೂರ್ವ ಪ್ರೀತಿ ಗೌರವ ತೋರಿಸಿದ್ದಾರೆ. ಇಡೀ ನಗರದ ರಸ್ತೆಗಳಲ್ಲಿ ಹಬ್ಬದ ವಾತಾವರಣದಲ್ಲಿ ಹೂವಿನ ಮಳೆಗರೆಯುವ ಮೂಲಕ ಮೆರವಣಿಗೆಯಲ್ಲಿ ಇಡೀ ನಗರದ ತಂದೆ ತಾಯಿಂದಿರ ಆಶೀರ್ವಾದ ಕೊಡಿಸಿದ್ದಾರೆ. ಇವರ ಋಣ ತೀರಿಸುವ ಕಾರ್ಯ ಮಾಡುತ್ತೇನೆ.ಗಂಗಾವತಿ, ಬಳ್ಳಾರಿ, ಕೊಪ್ಪಳ ಮತ್ತು ರಾಯಚೂರು ಬೇರೆ ಬೇರೆ ಎಂದು ಎಲ್ಲಿಯೂ ನಾನು ಹೇಳಿಲ್ಲ. ಇಡೀ ಕಲ್ಯಾಣ ಕರ್ನಾಟಕ ಉತ್ತರ ಕರ್ನಾಟಕ ಸೇರಿ ಕನ್ನಡ ನಾಡಿನ ಜನರು ನನ್ನನ್ನು ಸಹೋದರ ಹಾಗೂ ಮಗನಂತೆ ನಾನು ಕಷ್ಟದಲ್ಲಿದ್ದಾಗ ಪ್ರೀತಿ ತೋರಿಸಿದ್ದಾರೆ. ಗಂಗಾವತಿಯಿಂದ ಗೆದ್ದು ಕಿಷ್ಕಿಂದಾ ಅಂಜನಾದ್ರಿ ಅಭಿವೃದ್ಧಿಪಡಿಸಿ ಇವರ ಋಣ ತೀರಿಸಿಕೊಳ್ಳುತ್ತೇನೆ ಎಂದರು.
ಹಿರೇಜಂತಗಲ್ ಶ್ರೀಪ್ರಸನ್ನ ಪಂಪಾವಿರೂಪಾಕ್ಷೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಅಭಿಮಾನಿಗಳ ಬೈಕ್ ರ್ಯಾಲಿಯಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ತೆರೆದ ಕಾರಿನ ಮೆರವಣ ಗೆಯ ಮೂಲಕ ರೆಡ್ಡಿ ಸಾಗಿದರು.ಇವರ ಜತೆಗೆ ಯಮನೂರ ಚೌಡ್ಕಿ, ಬೆಟದಪ್ಪ ಬೆಣಕಲ್, ಶಿವು ಹೊಸಳ್ಳಿ, ಜಿಲಾನಿ ಪಾಷಾ, ದಳಪತಿ ಸೇರಿ ನೂರಾರು ಅಭಿಮಾನಿಗಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa: ನೇಪಾಳ ಮೇಯರ್ ಪುತ್ರಿ, ಓಶೋ ಅನುಯಾಯಿ ಗೋವಾದಲ್ಲಿ ನಾಪತ್ತೆ
Sikkim Poll:ಸಿಎಂ ತಮಾಂಗ್ 2 ಕ್ಷೇತ್ರಗಳಲ್ಲಿ ಸ್ಪರ್ಧೆ,ಪತ್ನಿ ಮಾಜಿ ಸಿಎಂ ವಿರುದ್ಧ ಕಣಕ್ಕೆ
BJP: ಇದು ಪೂರ್ವ ಜನ್ಮದ ಪುಣ್ಯ: ಬಿಜೆಪಿ ಸೇರ್ಪಡೆಯಾದ ಜನಾರ್ದನ ರೆಡ್ಡಿ ಮಾತು
BJP ವರಿಷ್ಠರು ನನ್ನ ಮೇಲೆ ವಿಶ್ವಾಸವಿಟ್ಟಿದ್ದಾರೆ: ಜಗದೀಶ ಶೆಟ್ಟರ್ ಹರ್ಷ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್
MUST WATCH
ಹೊಸ ಸೇರ್ಪಡೆ
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು