ಕಾಲುವೆ ಕಳಪೆ ಕಾಮಗಾರಿ ಸರಿಪಡಿಸಲು ಸೂಚನೆ
Team Udayavani, Jul 7, 2019, 4:10 PM IST
ಗಂಗಾವತಿ: ಕಾಮಗಾರಿ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.
ಗಂಗಾವತಿ: ಎಡದಂಡೆ ಕಾಲುವೆ ದುರಸ್ತಿ ಕಾರ್ಯದಲ್ಲಿ ನಿಯಮ ಉಲ್ಲಂಘಿಸಿ ಕಾಮಗಾರಿ ನಡೆಸುವ ಕುರಿತು ಆರೋಪದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಶನಿವಾರ ಕಾರ್ಯಪಾಲಕ ಅಭಿಯಂತರ ರಾಜಶೇಖರ ಶೆಟ್ಟರ್ ಭೇಟಿ ನೀಡಿ ಯೋಜನೆಯಂತೆ ಕಾಮಗಾರಿ ನಿರ್ವಹಿಸಬೇಕು. ಸ್ಥಳದಲ್ಲೇ ಮುಕ್ಕಾಂ ಹೂಡಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಕಿರಿಯ ಅಭಿಯಂತರ ಅಮರೇಶ ಅವರನ್ನು ತರಾಟೆ ತೆಗೆದುಕೊಂಡರು. ಕಾಲುವೆಯ ಎಡ-ಬಲಭಾಗವನ್ನು ಹೊಸ ಮರಂ ಹಾಕಿ ಬಲಪಡಿಸಿ ಲೈನಿಂಗ್ ಹಾಕಬೇಕು. ನಿಯಮ ಉಲ್ಲಂಘಿಸಿದರೆ ಸರಕಾರಕ್ಕೆ ವರದಿ ಮಾಡಲಾಗುತ್ತದೆ. ಬಿಲ್ ತಡೆಯಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಸ್ಥಳದಲ್ಲಿ ಸಹಾಯಕ ಕಾರ್ಯಪಾಲಕ ಅಭಿಯಂತರ ಎಂ.ಆರ್. ಕಂದಕೂರು, ಕಿರಿಯ ಅಭಿಯಂತರ ಅಮರೇಶ, ಟೆಂಡರ್ ಪಡೆದ ಗುತ್ತಿಗೆದಾರರ ಖಾಸಗಿ ಅಭಿಯಂತರ ಇದ್ದರು.
ರೈತರ ನಿಯೋಗ ಭೇಟಿ: ಕಾಲುವೆ ಕಾಮಗಾರಿ ಯೋಜನೆಯಂತೆ ನಡೆದಿಲ್ಲ ಎಂಬ ‘ಉದಯವಾಣಿ’ ವರದಿ ಹಿನ್ನೆಲೆಯಲ್ಲಿ ರೈತ ಮುಖಂಡರಾದ ಟಿ. ಸತ್ಯನಾರಾಯಣ, ಸಿ. ರಾಮಕೃಷ್ಣ, ಮರಿವಾಡ ಸತ್ಯನಾರಾಯಣ ಸೇರಿ ಪ್ರಮುಖ ರೈತರು ಕಾಮಗಾರಿ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಗುಣಮಟ್ಟದ ಕಾಮಗಾರಿ ಮಾಡಬೇಕು. ಇಲ್ಲದಿದ್ದರೆ ಜಲಸಂಪನ್ಮೂಲ ಸಚಿವರಿಗೆ ದಾಖಲೆ ಜತೆ ದೂರು ನೀಡಲಾಗುತ್ತದೆ. ಕಾಲುವೆಯ 2 ಭಾಗಗಳನ್ನು ಉತ್ತಮ ಮರಂ ಮಣ್ಣಿನಿಂದ ಬಲಗೊಳಿಸಿ ಟೆವೆಲ್ಸ್ ನಿರ್ಮಿಸಿ ಲೈನಿಂಗ್ ಹಾಕಬೇಕು. ಕಾಲುವೆಯಲ್ಲಿ ನೀರು ನಿಲ್ಲಿಸಿ ಮೂರು ತಿಂಗಳು ಕಳೆದ ನಂತರ ಕಾಮಗಾರಿ ನಡೆಸಲಾಗುತ್ತಿದೆ. ಗುಣಮಟ್ಟ ಕಾಪಾಡಲು ಹೇಗೆ ಸಾಧ್ಯ. ಹಗಲು ರಾತ್ರಿ ಕಾಮಗಾರಿ ನಿರ್ವಹಿಸಿ ಗುಣಮಟ್ಟದ ಕಾಮಗಾರಿ ಮಾಡಬೇಕೆಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ
Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ
Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು
“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ