ಮದ್ಯದ ಅಂಗಡಿ ಕಳ್ಳತನ ತಡೆಗೆ ಸೆಕ್ಯೂರಿಟಿ ಗಾರ್ಡ್ ನೇಮಕಕ್ಕೆ ಸೂಚನೆ
Team Udayavani, Apr 8, 2020, 5:42 PM IST
ಕೊಪ್ಪಳ: ಕೋವಿಡ್-19 ಹಿನ್ನಲೆಯಲ್ಲಿ ಇಡೀ ದೇಶವೇ ಲಾಕ್ ಡೌನ್ ಆಗಿದೆ. ಈ ವೇಳೆ ಮದ್ಯಪ್ರೀಯರು ಮದ್ಯಕ್ಕಾಗಿ ಪರಿತಪಿಸುವಂತಾಗಿವೆ. ರಾಜ್ಯದ ವಿವಿದೆಡೆಯೂ ಮದ್ಯದ ಅಂಗಡಿಗಳಲ್ಲಿ ಕಳ್ಳತನ ಪ್ರಕರಣಗಳು ವರದಿಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯಲ್ಲಿನ ಮದ್ಯದ ಅಂಗಡಿಗಳ ಕಳ್ಳತನವನ್ನು ತಡೆಯಲು ಎಲ್ಲಾ ಮದ್ಯದ ಅಂಗಡಿಗೆ ಭದ್ರತೆ ಒದಗಿಸಿ ಸೆಕ್ಯೂರಿಟಿ ಗಾರ್ಡ್ಗಳನ್ನು ನೇಮಿಸಿಕೊಳ್ಳುವಂತೆ ಜಿಲ್ಲಾ ಅಬಕಾರಿ ಅಧಿಕಾರಿ ಸೂಚನೆ ನೀಡಿದ್ದಾರೆ.
ಜಿಲ್ಲೆಯು ಲಾಕ್ಡೌನ್ ಆಗಿರುವ ಹಿನ್ನೆಲೆಯಲ್ಲಿ ಮದ್ಯ ಮಾರಾಟವನ್ನು ಸಂಪೂರ್ಣ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಹೀಗಾಗಿ ಮದ್ಯದ ಅಂಗಡಿಗಳಿಗೆ ಬೀಗಮುದ್ರೆ ಬಿದ್ದಿದೆ. ಇದರಿಂದ ಮದ್ಯಪ್ರೀಯರು ಚಡಪಡಿಸುವಂತಾಗುತ್ತಿದೆ. ಹಲವೆಡೆ ಬಾರ್ಗಳು ಹಾಗೂ ಮದ್ಯದ ಅಂಗಡಿಗಳಿಗೆ ಖದೀಮರು ರಾತ್ರೋ ರಾತ್ರಿ ನುಗ್ಗಿ ಮದ್ಯದ ಬಾಟಲಿಗಳನ್ನು ಹೊತ್ತೊಯ್ಯುತ್ತಿದ್ದಾರೆ. ಕೊಪ್ಪಳದ ಗವಿಮಠ ರಸ್ತೆಯ ಸಾಯಿ ಟ್ರೇಡರ್ಸ್ ಅಂಗಡಿಯಲ್ಲಿ ಇತ್ತೀಚೆಗೆ ಅಂಗಡಿ ಬಾಗಿಲು ಮುರಿದು 80 ಲೀಟರ್ನಷ್ಟು 40 ಸಾವಿರ ಮೌಲ್ಯದ ಮದ್ಯವನ್ನ ಕಳ್ಳತನ ಮಾಡಿದ್ದರು. ನಗರ ಪೊಲೀಸ್ ಠಾಣೆಯಲ್ಲೂ ಪ್ರಕರಣ ದಾಖಲಾಗಿದೆ.
ಇದನ್ನು ಅರಿತ ಜಿಲ್ಲಾ ಅಬಕಾರಿ ಅಧಿಕಾರಿಯವರು ಎಲ್ಲ ಸನ್ನದುದಾರರು ತಮ್ಮ ಅಂಗಡಿಗಳಿಗೆ ಭದ್ರತೆ ಕಲ್ಪಿಸುವ ಜೊತೆಗೆ ಸೆಕ್ಯೂರಿಟಿ ಗಾರ್ಡ್ ನೇಮಕ ಮಾಡಿಕೊಳ್ಳಬೇಕೆಂದು ಸೂಚನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು
ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?