ಸಂಚಾರಿ ನಿಯಮ ಉಲ್ಲಂಘಿಸಿದ್ರೆ ಮನೆಗೆ ಬರುತ್ತೆ ನೋಟಿಸ್‌

ಪೊಲೀಸ್‌ ಇಲಾಖೆಯಿಂದ ವಿನೂತನ ಪ್ರಯತ್ನ ; ಗಂಗಾವತಿ, ಕೊಪ್ಪಳ ತಾಲೂಕಿನಲ್ಲಿ ಪ್ರಾಯೋಗಿಕ ಜಾರಿ ; ಎಚ್ಚರ ತಪ್ಪಿದರೆ ಬೀಳುತ್ತೆ ದಂಡ

Team Udayavani, Jun 15, 2022, 4:40 PM IST

17

ಕೊಪ್ಪಳ: ಸಂಚಾರಿ ನಿಯಮ ಉಲ್ಲಂಘಿಸಿ ಪೊಲೀಸರ ಕಣ್ತಪ್ಪಿಸಿ ಸುತ್ತಾಡುವ ವಾಹನ ಸವಾರರಿಗೆ ಬಿಸಿ ಮುಟ್ಟಿಸಲು ಕೊಪ್ಪಳ ಪೊಲೀಸ್‌ ಇಲಾಖೆಯು ವಿಶಿಷ್ಟವಾದ ಪ್ರಯತ್ನಕ್ಕೆ ಮುಂದಾಗಿದೆ. ನಿಯಮ ಉಲ್ಲಂಘಿಸುವ ವಾಹನದ ಫೋಟೋ ಸಮೇತ ವಾಹನದ ಮಾಲೀಕನ ಮನೆಗೆ ನೋಟಿಸ್‌ ಜಾರಿಗೊಳಿಸುವ ಯೋಜನೆಯನ್ನು ಕೊಪ್ಪಳ, ಗಂಗಾವತಿ ಟ್ರಾಫಿಕ್‌ ವಿಭಾಗದಲ್ಲಿ ಪ್ರಾಯೋಗಿಕವಾಗಿ ಆರಂಭಿಸಲಾಗಿದೆ.

ಪೊಲೀಸ್‌ ಇಲಾಖೆಯಿಂದ ಮನೆಗೆ ನೋಟಿಸ್‌ ಕಳಿಸುವ ಯೋಜನೆಯು ಬೆಂಗಳೂರು ಸೇರಿ ದೊಡ್ಡ ದೊಡ್ಡ ನಗರಗಳಲ್ಲಿ ಜಾರಿಯಲ್ಲಿದೆ. ಆದರೆ ಕೊಪ್ಪಳದಲ್ಲಿ ಈ ಪ್ರಯತ್ನ ನಡೆದಿರಲಿಲ್ಲ. ಈಗ ಜನದಟ್ಟಣೆ ಹಾಗೂ ವಾಹನ ಸಂಚಾರದ ಸಂಖ್ಯೆ ಹೆಚ್ಚುತ್ತಿರುವ ಪ್ರಯುಕ್ತ ಪ್ರತಿಯೊಂದು ವಾಹನಗಳ ಮೇಲೆ ನಿಗಾ ಇರಿಸಲು, ನಿಯಮ ಪಾಲಿಸಲು ಪೊಲೀಸ್‌ ಪಡೆ ತಂತ್ರಜ್ಞಾನದ ಮೊರೆ ಹೋಗಿದೆ.

ನಗರ ಪ್ರದೇಶದಲ್ಲಿ ಟ್ರಾಫಿಕ್‌ ಪೊಲೀಸ್‌ ಪಡೆಯಲ್ಲಿ ಎರಡು ತಂಡ ರಚನೆ ಮಾಡಲಾಗಿದೆ. ಇದಕ್ಕೆ ಪಿಎಸ್‌ಐ ನೇತೃತ್ವ ವಹಿಸಿರುತ್ತಾರೆ. ಅಲ್ಲದೇ, ವಿವಿಧ ಪ್ರದೇಶಗಳಿಗೆ ಕರ್ತವ್ಯಕ್ಕೆ ತೆರಳುವ ಪೊಲೀಸರು ನಗರ ಪ್ರದೇಶದಲ್ಲಿ ಸಂಚಾರಿ ನಿಯಮ ಉಲ್ಲಂಘಿಸಿದ್ದರೆ, ಪಾರ್ಕಿಂಗ್‌ ಇಲ್ಲದ ಸ್ಥಳದಲ್ಲಿ ವಾಹನ ನಿಲ್ಲಿಸಿದ್ದರೆ, ತ್ರಿಬಲ್‌ ರೈಡಿಂಗ್‌ ಮಾಡಿದ್ದರೆ ಅಥವಾ ಇನ್ನಿತರ ನಿಯಮ ಉಲ್ಲಂಘಿಸಿದರೆ ಅಂತಹ ವಾಹನಗಳ ಫೋಟೋ ತೆಗೆದು ಪೊಲೀಸ್‌ ವಾಟ್ಸ್‌ಆ್ಯಪ್‌ ಗ್ರೂಪ್‌ನಲ್ಲಿ ಶೇರ್‌ ಮಾಡಲಾಗುತ್ತದೆ. ಗ್ರೂಪ್‌ನಲ್ಲಿನ ಪೊಲೀಸ್‌ ತಂಡವು ಆ ವಾಹನದ ಮಾಲೀಕ ಯಾರು? ಎನ್ನುವ ಮಾಹಿತಿಯನ್ನು ತಂತ್ರಜ್ಞಾನದ ಮೂಲಕ ಪಡೆದು, ಆ ಪೋಟೋ ಸಮೇತ ಎಲ್ಲಿ ನಿಯಮ ಉಲ್ಲಂಘನೆ ಮಾಡಲಾಗಿದೆ? ಯಾವ ಸಮಯಕ್ಕೆ? ಹಾಗೂ ಹೇಗೆ ಉಲ್ಲಂಘಿಸಲಾಗಿದೆ? ಎನ್ನುವ ವಿವರವನ್ನು ನೋಟಿಸ್‌ನಲ್ಲಿ ನಮೂದಿಸಿ, ಉಲ್ಲಂಘಿಸಿದ ವಾಹನದ ಪೋಟೋ ಸಮೇತ ವಾಹನದ ಮಾಲೀಕನ ಮನೆಗೆ ಪೊಲೀಸ್‌ ಇಲಾಖೆಯಿಂದಲೇ ರಿಜಿಸ್ಟರ್‌ ಪೋಸ್ಟ್‌ ಮೂಲಕ ನೋಟಿಸ್‌ ಕಳಿಸಲಾಗುತ್ತದೆ.

ಆ ನೋಟಿಸ್‌ ತಲುಪಿದ ಏಳು ದಿನಗಳೊಳಗಾಗಿ ವಾಹನದ ಮಾಲೀಕನು ಸಂಬಂಧಿಸಿದ ಟ್ರಾಫಿಕ್‌ ಪೊಲೀಸ್‌ ಠಾಣೆಗೆ ಆಗಮಿಸಿ ದಾಖಲೆಗಳನ್ನು ಹಾಜರು ಮಾಡಿ ಅದಕ್ಕೆ ವಿವರಣೆ ನೀಡಬೇಕು. ನಿಯಮ ಉಲ್ಲಂಘಿಸಿದ ಪ್ರಕರಣದ ಅನ್ವಯ ವಾಹನದ ಮೇಲೆ ಕೇಸ್‌ ದಾಖಲಾಗುತ್ತದೆ. ಅಲ್ಲದೇ, ಅಗತ್ಯ ದಂಡ ವಿಧಿಸುವ ಕಾರ್ಯವೂ ನಡೆಯಲಿದೆ.

ಪ್ರಾಯೋಗಿಕವಾಗಿ ಕೊಪ್ಪಳ ಹಾಗೂ ಗಂಗಾವತಿ ಪೊಲೀಸ್‌ ಠಾಣೆಯಲ್ಲಿ ಇದನ್ನು ಜಾರಿ ಮಾಡಲಾಗಿದೆ. ಈ ಪ್ರಯತ್ನ ಯಾವ ರೀತಿ ಕಾರ್ಯನಿರ್ವಹಿಲಿದೆ ಎನ್ನುವುದನ್ನು ನೋಡಿಕೊಂಡು ಉಳಿದ ತಾಲೂಕಿಗೂ ಇದನ್ನು ವಿಸ್ತರಿಸಲು ಪೊಲೀಸ್‌ ಇಲಾಖೆ ಯೋಜಿಸಿದೆ.

ಎಚ್ಚರ ತಪ್ಪಿದರೆ ದಂಡ: ಯಾರೋ ವಾಹನದ ಮಾಲೀಕರು ಇನ್ಯಾರಿಗೋ ಗೋ ವಾಹನ ಕೊಟ್ಟು ಸುಮ್ಮನೆ ಕುಳಿತುಕೊಳ್ಳುವಂತಿಲ್ಲ. ನಿಮ್ಮ ವಾಹನವನ್ನು ಯಾರೋ ಬಳಕೆ ಮಾಡಿಕೊಂಡು ಟ್ರಾಫಿಕ್‌ ನಿಯಮ ಉಲ್ಲಂಘನೆ ಮಾಡಿದರೆ ನಿಮ್ಮ ಮನೆಗೆ ಇನ್ಮುಂದೆ ನೋಟಿಸ್‌ ಜಾರಿಯಾಗಲಿದೆ. ಅದಕ್ಕೆ ಉತ್ತರ ನೀವೇ ಕೊಡಬೇಕಾಗುತ್ತದೆ. ದಂಡ ತೆರುವ ಪರಿಸ್ಥಿತಿ ಎದುರಾದರೂ ಅಚ್ಚರಿ ಪಡಬೇಕಿಲ್ಲ. ಹಾಗಾಗಿ ಪೊಲೀಸ್‌ ಇಲಾಖೆಯ ಟ್ರಾಫಿಕ್‌ ನಿಯಮದ ಬಗ್ಗೆ ನೀವು ಮೊದಲೇ ಎಚ್ಚೆತ್ತು ವಾಹನ ಚಲಾವಣೆ ಮಾಡುವ ಅಗತ್ಯವಿದೆ. ನಿಯಮ ಉಲ್ಲಂಘಿಸಿದರೆ ಕೇಸ್‌, ಕೋರ್ಟ್‌ಗೆ ಅಲೆದಾಡಬೇಕಾಗುತ್ತದೆ.

ಜಿಲ್ಲೆಯಲ್ಲಿ ಕೊಪ್ಪಳ ಹಾಗೂ ಗಂಗಾವತಿ ತಾಲೂಕಿನಲ್ಲಿ ವಾಹನ ಸವಾರರು ಟ್ರಾಫಿಕ್‌ ನಿಯಮ ಉಲ್ಲಂಘಿಸಿದರೆ ಅಂತಹ ವಾಹನಗಳ ಪೋಟೋ ತೆಗೆದು ಆ ವಾಹನದ ಮಾಲೀಕರ ಮನೆಗೆ ನೋಟಿಸ್‌ ಕಳುಹಿಸಲಾಗುತ್ತದೆ. ನಿಯಮ ಉಲ್ಲಂಘಿಸಿದ ಅನ್ವಯ ಕೇಸ್‌ ದಾಖಲಿಸಲಾಗುತ್ತೆ. ಆ ವಾಹನದ ಮಾಲೀಕರು ಏಳು ದಿನದ ಒಳಗಾಗಿ ಠಾಣೆಗೆ ಹಾಜರಾಗಿ ಉತ್ತರ ಕೊಡಬೇಕು. ಇಲ್ಲದಿದ್ದರೆ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಮೊದಲು ಎರಡು ತಾಲೂಕಿನಲ್ಲಿ ಈ ಪ್ರಯತ್ನ ನಡೆದಿದೆ. ಮುಂದೆ ಎಲ್ಲ ತಾಲೂಕಿಗೂ ಇದನ್ನು ವಿಸ್ತರಿಸಲಾಗುವುದು. –ಅರುಣಾಂಗ್ಷು ಗಿರಿ, ಕೊಪ್ಪಳ ಎಸ್‌ಪಿ

-ದತ್ತು ಕಮ್ಮಾರ

ಟಾಪ್ ನ್ಯೂಸ್

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ

Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ

BJP-SSS

Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ

Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು

Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು

“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ

“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.