ಅಂಗವಿಕಲರಿಗೆ ಉದ್ಯೋಗ ಖಾತ್ರಿ ಆಸರೆ

ಬದುಕಿಗೆ ಹೊಸ ಭರವಸೆ ಮೂಡಿಸಿದ ನರೇಗಾ

Team Udayavani, May 22, 2022, 3:04 PM IST

10

ಕಾರಟಗಿ: ತಾಲೂಕಿನ ಯರಡೊಣಾ ಗ್ರಾಮದ ಒಬ್ಬೊಬ್ಬ ಅಂಗವಿಕಲರದ್ದು ಒಂದೊಂದು ಕಥೆ. ಅವರ ಎಲ್ಲ ಸಮಸ್ಯೆಗಳ ಪಯಣಕ್ಕೆ ನರೇಗಾ ಯೋಜನೆ ಊರುಗೋಲು ಆಗಿದೆ.

ತಾಲೂಕಿನ ಯರಡೋಣ ಗ್ರಾಪಂ ವ್ಯಾಪ್ತಿಯಲ್ಲಿ ನರೇಗಾದಡಿ 62 ಅಂಗವಿಕಲರಿಗೆ ಪ್ರತ್ಯೇಕವಾಗಿ ಎನ್‌ಎಂಆರ್‌ ತೆಗೆದು ಕಾಲುವೆ ಹೂಳೆತ್ತುವ ಕೆಲಸ ನೀಡಲಾಗಿತ್ತು. ಈ ಕೆಲಸದಲ್ಲಿ ದೈಹಿಕ ನ್ಯೂನ್ಯತೆ ಎದುರಿಸುತ್ತಿರುವ ಅಂಧರು, ಬುದ್ಧಿಮಾಂದ್ಯರು, ಕಾಲು ಇಲ್ಲದವರು, ಕುಷ್ಠರೋಗ ನಿವಾರಿತರು, ಮೂಗರು, ಕಿವುಡರು, ಕುಬ್ಜರು ಹೀಗೆ ಕಷ್ಟದ ಬದುಕು ಸವೆಸುತ್ತಿರುವ ವಿಕಲಚೇತನರು ನರೇಗಾದಡಿ ಕೆಲಸ ನಿರ್ವಹಿಸಿದರು.

ಈ ವಿಕಲಚೇತನರು ತಿಂಗಳ ಮಾಸಾಶನದಲ್ಲೇ ಜೀವನ ನಡೆಸುತ್ತಿದ್ದರು. ಇವರಿಗೆ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳಲು ನೆರವಾಗಿದೆ. ಯರಡೋಣ ಗ್ರಾಪಂ ವ್ಯಾಪ್ತಿಯಲ್ಲಿ ನರೇಗಾ ಐಇಸಿ ಚಟುವಟಿಕೆಯಡಿ ವಿಕಲಚೇತನರಿಗೆ ಇರುವ ಸೌಲಭ್ಯಗಳ ಕುರಿತು ವ್ಯಾಪಕ ಪ್ರಚಾರ ಹಾಗೂ ವಿಕಲಚೇತನರ ಸರ್ವೇ ನಡೆಸಿ ಉದ್ಯೋಗ ಚೀಟಿ ಇಲ್ಲದವರಿಗೆ ಉದ್ಯೋಗ ಚೀಟಿ ನೀಡಲಾಗಿತ್ತು. ಇದರಿಂದ ಅಂಗವಿಕಲರು ಹೆಚ್ಚಿನ ಸಂಖ್ಯೆಯಲ್ಲಿ ನರೇಗಾದಡಿ ಕೆಲಸ ಮಾಡಲು ಅನುಕೂಲವಾಯಿತು.

ಇವರಲ್ಲಿ ಕೆಲವರಿಗೆ ಮನೆ ಪ್ರೀತಿ, ಕಾಳಜಿ ಇಲ್ಲವಾಗಿದೆ. ಇನ್ನೂ ಕೆಲವರಿಗೆ ಯಾರ ಪೋಷಣೆ, ಸಹಾಯ ಸಿಗುತ್ತಿಲ್ಲ. ಬಾಡಿಗೆ ಮನೆಯಲ್ಲಿ ಜೀವನ ನಡೆಸುತ್ತಿದ್ದಾರೆ. ಕಷ್ಟದ ಜೀವನ ನಡೆಸುತ್ತಿರುವ ಕೆಲವರಿಗೆ, ನಾನು ವಿಕಲಾಂಗನಾಗಿ ಹುಟ್ಟಿದ್ದೇ ತಪ್ಪಾಯ್ತಾ ಎಂಬ ಭಾವ ಮೂಡಿತ್ತು. ಆದರೆ ನರೇಗಾ ಯೋಜನೆ ಅವರಲ್ಲಿ ಬದುಕಿನ ಭರವಸೆ, ಪ್ರೀತಿ ಜೊತೆಗೆ ಕಾಳಜಿ ನೀಡಿದೆ. ಈ ಗ್ರಾಪಂ ವ್ಯಾಪ್ತಿಯ ವಿಕಲಚೇತನರು ಒಟ್ಟಾಗಿ ನರೇಗಾ ಕೆಲಸ ಮಾಡುತ್ತಾರೆ. ನರೇಗಾ ಕೆಲಸ ನೀಡಿದ ದಿನಗಳಲ್ಲಿ ಕೆಲಸ ಮುಗಿದ ನಂತರ ತಲಾ 20 ರೂ. ಹಣ ಹಾಕಿ ತಾವೇ ಊಟ ಸಿದ್ಧಪಡಿಸಿಕೊಂಡು ಗುಂಪಾಗಿ ಕುಳಿತು ಊಟ ಮಾಡುತ್ತ ಒಬ್ಬರಿಗೊಬ್ಬರು ಪರಸ್ಪರ ಕಾಳಜಿ ತೋರುತ್ತಾರೆ. ನರೇಗಾ ಯೋಜನೆ ನಮಗೆ ಕೆಲಸ ಹಾಗೂ ಹೆಚ್ಚಿನ ಕೂಲಿ ನೀಡುವುದರ ಜೊತೆಗೆ ನೆಮ್ಮದಿಯೂ ನೀಡುತ್ತಿದೆ ಎಂದು ಖುಷಿ ಹಂಚಿಕೊಳ್ಳುತ್ತಾರೆ ಈ ಅಂಗವಿಕಲರು.

ಬೇಸಿಗೆ ಅವಧಿಯಲ್ಲಿ ದುಡಿಯೋಣ ಬಾ ಅಭಿಯಾನದಡಿ ನಿರಂತರ ನರೇಗಾ ಕೆಲಸ ನೀಡುತ್ತಿದ್ದರಿಂದ ವಿಕಲಚೇತನರಿಗೆ ಇದ್ದೂರಲ್ಲೇ ಕೆಲಸ ಸಿಗುತ್ತಿದೆ. ಜೊತೆಗೆ ಅರ್ಧ ಕೆಲಸ ಪೂರ್ತಿ ಕೂಲಿಯೂ ಸಿಗುತ್ತಿದೆ. ನರೇಗಾ ಕೂಲಿ ದಿನಕ್ಕೆ 309 ರೂ.ಗೆ ಹೆಚ್ಚಿಸಿದ್ದರಿಂದ ಅಂಗವಿಕಲರು ಖುಷಿಯಿಂದ ನರೇಗಾ ಕೆಲಸ ಮಾಡುತ್ತಾ ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ.

ಮನೆಯಲ್ಲಿ ನಾನು, 85 ವರ್ಷದ ನಮ್ಮ ತಾಯಿ ಇದ್ದೇವೆ. ಅವ್ವ ಊರಲ್ಲಿ ಕಟ್ಟಿಗೆ ತರಲು ಹೋದಾಗ ಬಿದ್ದು ಗಾಯ ಮಾಡಿಕೊಂಡು ಮನೆಯಲ್ಲೇ ಇದ್ದಾರೆ. ಅಣ್ಣಂದಿರು ಬೇರೆಯಾಗಿದ್ದಾರೆ. ನನಗೆ ಕಾಲುಗಳಿಲ್ಲ. ಎರಡು ಸ್ಟಿಕ್‌ನಿಂದಲೇ ನಡೆಯೋದು, ನರೇಗಾ ಯೋಜನೆ ದುಡಿಯಲು ಅವಕಾಶ ನೀಡಿದೆ. ಜೀವನ ನಿರ್ವಹಣೆ ಹಾಗೂ ಅವ್ವನ ಔಷಧಿ ಗೆ ಕೂಲಿ ಹಣ ಖರ್ಚು ಮಾಡುತ್ತಿರುವೆ. –ಹೆಸರೇಳಲಿಚ್ಛಿಸದ ಅಂಗವಿಕಲ ಮಹಿಳೆ, ಯರಡೋಣ

ನಾನು ವಿಕಲಚೇತನಳಾಗಿದ್ದು, ಡಿಇಡಿ ವಿದ್ಯಾಭ್ಯಾಸ ಪೂರ್ಣಗೊಳಿಸಿ ಅತಿಥಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದೆ. ಕೋವಿಡ್‌ ವೇಳೆ ಕೆಲಸ ಹೋಯ್ತು. ಪತಿ ಸೆಕ್ಯೂರಿಟಿ ಕೆಲಸ ಮಾಡುತ್ತಿದ್ದು, ಅವರ ಸಂಬಳದಲ್ಲೇ ಜೀವನ ನಡೆಯುತ್ತಿತ್ತು. ನಾನು ಮನೆಯಲ್ಲಿ ಖಾಲಿ ಇರುತ್ತಿದ್ದೆ. ನರೇಗಾದಡಿ ವಿಕಲಚೇತನರಿಗೆ ದುಡಿಯಲು ಅವಕಾಶ ಕಲ್ಪಿಸಿದ್ದರಿಂದ ನಾನು ಕೆಲಸ ಮಾಡುತ್ತಾ ಸ್ವಾವಲಂಬಿಯಾಗಿ ಬದುಕುತ್ತಿರುವೆ. -ಶೋಭಾ, ಅಂಗವಿಕಲ ಮಹಿಳೆ, ಯರಡೋಣ

ಕಾರಟಗಿ ತಾಲೂಕಿನ ಯರಡೋಣ ಗ್ರಾಪಂ ವ್ಯಾಪ್ತಿಯ ಅಂಗವಿಕಲರಿಗೆ ನರೇಗಾದಡಿ ಪ್ರತ್ಯೇಕ ಎನ್‌ಎಂಆರ್‌ ತೆಗೆದು ಕೆಲಸ ನೀಡಲಾಗಿದೆ. ಅಂಗವಿಕಲರು ಖುಷಿಯಿಂದ ಕೆಲಸ ನಿರ್ವಹಿಸುತ್ತಿದ್ದಾರೆ. ಅವರು ಮಾಡಬಹುದಾದ ಕೆಲಸಗಳನ್ನು ಮಾತ್ರ ನರೇಗಾದಡಿ ನೀಡಲಾಗುತ್ತಿದೆ. ಅವರ ಸ್ವಾವಲಂಬಿ ಜೀವನಕ್ಕೆ ನರೇಗಾ ಆಸರೆಯಾಗಿದೆ. -ಡಾ| ಡಿ. ಮೋಹನ್‌, ತಾಪಂ ಇಒ

ಟಾಪ್ ನ್ಯೂಸ್

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ

Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ

BJP-SSS

Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ

Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು

Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು

“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ

“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.