“ಎರಡು ಎತ್ತು ಬೇಕಾರ ತಗೋರಿ” ಈ ಲಸಿಕೆ ಮಾತ್ರ ಬೇಡ: ಲಸಿಕೆಗೆ ಹಿಂಜರಿದ ವಯೋವೃದ್ಧರು


Team Udayavani, Jan 23, 2022, 6:11 PM IST

“ಎರಡು ಎತ್ತು ಬೇಕಾರ ತಗೋರಿ” ಈ ಲಸಿಕೆ ಮಾತ್ರ ಬೇಡ: ಲಸಿಕೆಗೆ ಹಿಂಜರಿದ ವಯೋವೃದ್ಧರು

ಕುಷ್ಟಗಿ: ಸೂಜಿ ಹಾಕಿಸಿಕೊಂಡು ಸತ್ ಹೋದ್ರ ಏನ್ ಮಾಡ್ಲಿ.. ಸೂಜಿ ಮಾಡಕ ಬಂದೋರು ನಾಲ್ಕು ಜನ ಹಾಳ್ಯಾಗ ಬರೆದುಕೊಡ್ರೀ ನಾನೇನಾದ್ರು ಸೂಜಿ ಮಾಡಿಸಿಕೊಂಡು ನಾ.. ಸತ್ತರ ನಿಮ್ಮ ಜವಾಬ್ದಾರಿ ನಿಮ್ಮನ್ನ ಹಿಡಕೊಂಡ್ ಹೋಗಬೇಕು..

ಇದು ಕುಷ್ಟಗಿ ತಾಲೂಕಿನ ಅಡವಿಬಾವಿ ಗ್ರಾಮದ ವಯೋವೃಧ್ಧೆ ಹನಮವ್ವ ತಳವಾರ ಅವರು, ಕೋವಿಡ್ ಲಸಿಕಾಕರಣದ ಸಿಬ್ಬಂದಿಗೆ ಲಸಿಕೆ ಹಾಕಿಸಿಕೊಳ್ಳದೇ ವಾದಿಸಿ ರಂಪಾಟ ಸೃಷ್ಟಿಸಿದ ಪರಿ ಇದು.

ಕೋವಿಡ್ ಲಸಿಕಾ ಮೇಳದ ನೋಡಲ್ ಅಧಿಕಾರಿ, ಜಿ.ಪಂ. ಮುಖ್ಯ ಲೆಕ್ಕಾಧಿಕಾರಿ ಅಮೀನ್ ಅತ್ತಾರ, ತಾ.ಪಂ. ಇಓ ಡಾ. ಜಯರಾಮ್ ಚೌವ್ಹಾಣ ಸೇರಿದಂತೆ ತಾ.ಪಂ. ಸಿಬ್ಬಂದಿ ಸೇರಿದಂತೆ ಆರೋಗ್ಯ ಇಲಾಖೆ, ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ 112 ಜನರಿಗೆ ಕೋವಿಡ್ ಲಸಿಕೆ ಹಾಕಿಸಿದರು. ಇದೇ ವೇಳೆ ಇಬ್ಬರು ಲಸಿಕಾಕರಣ ತಂಡಕ್ಕೆ ಕಿರಿಕ್ ಮಾಡಿದರು.

ವೃದ್ಧೆ ಹನಮವ್ವ ತಳವಾರ್ ಅವರಿಗೆ ಲಸಿಕೆ ಹಾಕಿಸಿಕೊಳ್ಳಲು ಎಷ್ಟೇ ಮನವೋಲೈಸಿದರೂ ಲಸಿಕೆ ಹಾಕಿಸಿಕೊಳ್ಳಲಿಲ್ಲ. ಇಂತಹ ಸೂಜಿ ಬಾಳ ಹಾಕಿಸಿಕೊಂಡೀನಿ ಈ ಸೂಚಿ ಬೇಡವೇ ಬೇಡ ಎಂದಾಗ ಆರೋಗ್ಯ ಸಿಬ್ಬಂದಿ ಒಮ್ಮೆ ಮಾಡಿಸಿಕೊಳ್ಳಿ ಎಂದಾಗ ಒಂದೂ ಬೇಡ, ಅರ್ಧವೂ ಬೇಡ ಈ ಎಣ್ಣಿ ಆಗಿ ಬರಲ್ಲ ಇನ್ನ ನಮ್ಮ ಮಕ್ಕಳಿಗೆ ಹಾಕಸ್ತೀನಿ ನಾ ಹಾಕಿಸಿಕೊಳ್ಳುವುದಿಲ್ಲ ವಲ್ಲೇ ಪಾ ಎಪ್ಪಾ..ನಾ ಸೂಜಿ ಮಾಡ್ಸಂಗೀಲ್ಲ.  ಇಷ್ಟು ಬಲವಂತ ಮಾಡಕತ್ತೀರಿ ಅಂದ್ರ ಇದರಲ್ಲಿ ನಿಮಗ ಏನಾ ಸಿಗಕತೈತೀ ಎಂದು ವಾದಿಸಿದರು. ವಯೋವೃದ್ಧೆ ಹನಮವ್ವಳ ವಾದಕ್ಕೆ ಸುಸ್ತಾದ ಅಧಿಕಾರಿಗಳು ಲಸಿಕೆ ಹಾಕದೇ ವಾಪಸ್ಸಾದರು.

ಸೂಜಿ ಹಾಕ್ಸಂಗಿಲ್ಲ ಅಂತ ಪ್ರತಿಜ್ಞೆ ಮಾಡೀನಿ..

ಇದೇ ವೇಳೆ ಅದೇ ಗ್ರಾಮದ ಹನಮಪ್ಪ ಹನುಮಸಾಗರ ಅವರು, ಎರಡು ಎತ್ತು ಒಂದು ಬಂಡಿ, ಒಂದು ಎಮ್ಮಿ ಕಾಳು ಎಷ್ಟು ಅದಾವು ಎಲ್ಲವೂ ತಗೋರಿ ಲಸಿಕೆ ಮಾತ್ರ ಬೇಡ ನಮಗ ಕಡಾ ಬೇಡ್ರಿ ಈ ಸೂಜಿ ನಮಗ ಆಗಿ ಬರಂಗೀಲ್ಲ ಈ ಸೂಜಿ ಮಾಡಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿನೀ ಲಸಿಕಾ ತಂಡಕ್ಕೆ ಖಾರವಾಗಿ ಪ್ರತಿಕ್ರಿಯಿಸಿದರು.

ಕಾಲು ಪೆಟ್ಟು ಮಾಡಿಕೊಂಡ ಪಿಡಿಓ :

ಅಡವಿಬಾವಿಯಲ್ಲಿ ಕೋವಿಡ್ ಲಸಿಕಾಕರಣದ ಮೇಳದಲ್ಲಿ ಪಿಡಿಓ ವೆಂಕಟೇಶ ನಾಯಕ್, ಲಸಿಕೆ ಹಾಕಿಸಿಕೊಳ್ಳದ ವ್ಯಕ್ತಿಗೆ ಮನವೋಲೈಸಲು ಮುಂದಾದರು. ಆಗ ವ್ಯಕ್ತಿ ತಪ್ಪಿಸಿಕೊಂಡು ಓಡಲು ಯತ್ನಿಸಿದಾಗಾ ಪಿಡಿಓ ವೆಂಕಟೇಶ ನಾಯಕ್ ಸದರಿ ವ್ಯಕ್ತಿಯನ್ನು ಹಿಡಿಯಲು ಹೋಗಿ ಮುಗ್ಗರಿಸಿ ಬಿದ್ದರು. ಪಿಡಿಓ ವೆಂಕಟೇಶಗೆ ಮೊಣಕಾಲಿಗೆ ತರಚು ಗಾಯಗಳಾಗಿದೆ.

-ಮಂಜುನಾಥ ಮಹಾಲಿಂಗಪುರ ಕುಷ್ಟಗಿ

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ

Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ

Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ

Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

7

Kundapur: ಬೈಕ್‌ ಢಿಕ್ಕಿ; ಸ್ಕೂಟರ್‌ ಸವಾರೆಗೆ ಗಾಯ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.