ಪ್ರಾಥಮಿಕ ಸಂಪರ್ಕಿತರ ಪರೀಕ್ಷೆ ಒಂದೇ ಬಾರಿ

ಒಂದೇ ಬಾರಿ ಪರೀಕ್ಷೆಗೆ ನಿರ್ಧರಿಸಿದ ಸರ್ಕಾರ

Team Udayavani, May 25, 2020, 5:19 PM IST

ಪ್ರಾಥಮಿಕ ಸಂಪರ್ಕಿತರ ಪರೀಕ್ಷೆ ಒಂದೇ ಬಾರಿ

ಕೊಪ್ಪಳ: ಕೋವಿಡ್ ಸೋಂಕಿತ ವ್ಯಕ್ತಿಯ ಜೊತೆಗೆ ಪ್ರಾಥಮಿಕ ಸಂಪರ್ಕಕ್ಕೆ ಬಂದಿರುವ ವ್ಯಕ್ತಿಗಳನ್ನು ಸರ್ಕಾರ ಮೊದಲು ಎರಡೆರೆಡು ಬಾರಿ ಪರೀಕ್ಷೆಗೆ ಒಳಪಡಿಸುತ್ತಿತ್ತು. ಆದರೆ ಇನ್ಮುಂದೆ ಪ್ರಾಥಮಿಕ ಸಂಪರ್ಕಿತರ ಗಂಟಲು ದ್ರವ ಪರೀಕ್ಷೆಯನ್ನು ಒಂದೇ ಬಾರಿ ಮಾಡಲಿದೆ.

ಕೋವಿಡ್ ಮಹಾಮಾರಿ ಇಡೀ ವಿಶ್ವವನ್ನೇ ತಲ್ಲಣಗೊಳಿಸಿದೆ. ಸೋಂಕು ನಿಯಂತ್ರಣಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರವು ಹಲವು ಕ್ರಮಗಳನ್ನು ಕೈಗೊಂಡಿವೆ. ಆದರೂ ಕೆಲ ದಿನಗಳ ಹಿಂದೆ ಸೋಂಕಿತರ ಜೊತೆ ಪ್ರಾಥಮಿಕ ಸಂಪರ್ಕಕ್ಕೆ ಬಂದಿರುವ ವ್ಯಕ್ತಿಗಳಲ್ಲೇ ಒಂದೊಮ್ಮೆ ಪಾಸಿಟಿವ್‌, ಮತ್ತೂಮ್ಮೆ ನೆಗೆಟಿವ್‌ ವರದಿ ಬಂದಿದ್ದರಿಂದ ಅವರನ್ನು 2-3 ಬಾರಿ ಪರೀಕ್ಷೆಗೆ ಒಳಪಡಿಸಿ ನಿಗಾದಲ್ಲಿರಿಸಲಾಗುತ್ತಿತ್ತು. ಇದು ಸರ್ಕಾರಕ್ಕೂ ತಲೆನೋವಾಗಿತ್ತು.

ಸೋಂಕಿತ ವ್ಯಕ್ತಿ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿರುವ ವ್ಯಕ್ತಿಗಳನ್ನು ಮೊದಲ ಬಾರಿ ಪರೀಕ್ಷೆಗೆ ಒಳಪಡಿಸಿ ಅವರನ್ನು ಕ್ವಾರಂಟೈನ್‌ ನಲ್ಲಿರಿಸಿ, 2ನೇ ಬಾರಿ ಅವರ ಗಂಟಲು ದ್ರವ ಪರೀಕ್ಷೆ ಮಾಡುತ್ತಿತ್ತು. ಮೊದಲ ನೆಗೆಟಿವ್‌ ಬಂದಿದ್ದರೆ, ಎರಡನೇ ಬಾರಿ ಪಾಸಿಟಿವ್‌ ವರದಿ ಬಂದ ಹಿನ್ನೆಲೆಯಲ್ಲಿ ಸರ್ಕಾರ ಎಚ್ಚೆತ್ತು ಸೋಂಕಿತರ ಜೊತೆ ಪ್ರಾಥಮಿಕ ಸಂಪರ್ಕಿತ ವ್ಯಕ್ತಿಗಳ ಮೇಲೆಯೇ ಹೆಚ್ಚು ನಿಗಾ ಇರಿಸಲಾರಂಭಿಸಿತು. ಪ್ರಾಥಮಿಕ ಸಂಪರ್ಕಿತರನ್ನು ಎರಡು ಬಾರಿ ಪರೀಕ್ಷೆಗೆ ಒಳಪಡಿಸಿ ಗಂಟಲು ದ್ರವ ಪಡೆದು ವರದಿ ಪಡೆಯಬೇಕೆಂದು ಸರ್ಕಾರ ನಿಯಮ ಜಾರಿಗೊಳಿಸಿತ್ತು. ಪ್ರಸ್ತುತ ಸರ್ಕಾರ ನಿಯಮವನ್ನು ಬದಲಿಸಿದ್ದು, ಪ್ರಾಥಮಿಕ ಸಂಪರ್ಕಿತರ ಗಂಟಲು ದ್ರವ ಪರೀಕ್ಷೆಯನ್ನು ಒಂದೇ ಬಾರಿ ಮಾಡಿದರೆ ಸಾಕು, ಅದರಲ್ಲಿ ವರದಿ ನೆಗೆಟಿವ್‌ ಬಂದರೆ, ಅವರನ್ನು ಕ್ವಾರಂಟೈನ್‌ನಲ್ಲಿಸಿರಿ ನಂತರ ಬಿಡುಗಡೆ ಮಾಡಲು ನಿರ್ಧರಿಸಿದೆ. ಪ್ರಾಥಮಿಕ ಸಂಪರ್ಕಿತ ವ್ಯಕ್ತಿಗಳಿಗೆ 2ನೇ ಬಾರಿ ಟೆಸ್ಟ್‌ ಮಾಡುವ ಅಗತ್ಯವಿಲ್ಲ ಎಂದು ಸರ್ಕಾರ ನಿರ್ಧಾರಕ್ಕೆ ಬಂದಿದ್ದು, ಮೇ 22ರಂದು ಎಲ್ಲ ಜಿಲ್ಲೆಗಳಿಗೆ ಆದೇಶ ಮಾಡಿದೆ.

183 ಜನ ಪ್ರಾಥಮಿಕ ಸಂಪರ್ಕಿತರು: ಜಿಲ್ಲೆಯಲ್ಲಿ ಬೇರೆ ಬೇರೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರಾಥಮಿಕ ಸಂಪರ್ಕಿತರಿದ್ದಾರೆ. ಈ ಪೈಕಿ 183 ಜನರು ಸೋಂಕಿತರ ಸಂಪರ್ಕಕ್ಕೆ ಬಂದಿದ್ದಾರೆ. ಇವರಲ್ಲಿ ಕೆಲವರ ಗಂಟಲು ದ್ರವ ಎರಡೆರಡು ಬಾರಿ ಪರೀಕ್ಷೆಗೆ ಒಳಪಡಿಸಿದೆ. ಎರಡೂ ಬಾರಿ ನೆಗೆಟಿವ್‌ ಬಂದಿದ್ದರಿಂದ ಅವರನ್ನ ಕ್ವಾರಂಟೈನ್‌ನಿಂದ ಬಿಡುಗಡೆಗೊಳಿಸಿದೆ. ಬಾದಾಮಿ ಗರ್ಭಿಣಿ ಕೇಸ್‌ನಲ್ಲಿ ಸಂಪರ್ಕಕ್ಕೆ ಬಂದಿದ್ದ ಜಿಲ್ಲೆಯ ನಿಲೋಗಲ್‌ ಗ್ರಾಮದ 18 ಜನರ ಗಂಟಲು ದ್ರವ ಎರಡು ಬಾರಿ ಪಡೆದು ಪರೀಕ್ಷೆ ಮಾಡಿತ್ತು. ಪ್ರಾಥಮಿಕ ಸಂಪರ್ಕಿತರಿಗೆ ಒಂದೇ ಬಾರಿ ಪರೀಕ್ಷೆ ಸಾಕೆಂದಿರುವ ಸರ್ಕಾರದ ನಿಯಮ ಜಿಲ್ಲಾಡಳಿತಕ್ಕೂ ನೆರವಾಗಿದೆ. ಜಿಲ್ಲಾಡಳಿತ 183 ಜನರ ವರದಿಯನ್ನು ಒಂದು ಬಾರಿ ಪಡೆದಿದ್ದು ಎಲ್ಲರ ವರದಿ ನೆಗಟಿವ್‌ ಎಂದು ಬಂದಿವೆ.

ಜಿಲ್ಲೆಯಲ್ಲಿ ಈ ಮೊದಲು ಪ್ರಾಥಮಿಕ ಸಂಪರ್ಕಿತರಿಂದ ಎರಡು ಬಾರಿ ಗಂಟಲು ದ್ರವ ಪಡೆದು ಪರೀಕ್ಷೆಗೊಳಪಡಿಸಿತ್ತು. ಆದರೆ ಸರ್ಕಾರ ಮೇ 22ಕ್ಕೆ ಪ್ರಾಥಮಿಕ ಸಂಪರ್ಕಿತರ ಗಂಟಲು ದ್ರವ ಒಂದೇ ಬಾರಿ ಪಡೆದು ಪರೀಕ್ಷೆಗೆ ಒಳಪಡಿಸಿ ಎಂದು ನಿರ್ದೇಶನ ನೀಡಿದ್ದರಿಂದ ಇನ್ಮುಂದೆ ಒಂದೇ ಬಾರಿ ಪರೀಕ್ಷೆ ನಡೆಯಲಿದೆ. ಈಗಾಗಲೇ ಜಿಲ್ಲೆಯಲ್ಲಿ 183 ಪ್ರಾಥಮಿಕ ಸಂಪರ್ಕಿತರ ವರದಿ ನೆಗೆಟಿವ್‌ ಎಂದು ಬಂದಿವೆ. –ಸುನೀಲ್‌ ಕುಮಾರ, ಕೊಪ್ಪಳ ಜಿಲ್ಲಾಧಿಕಾರಿ

 

ದತ್ತು ಕಮ್ಮಾರ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.