ಕೋವಿಡ್‌ ಪರೀಕ್ಷಾ ಲ್ಯಾಬ್‌ ಉದ್ಘಾಟನೆ


Team Udayavani, Jun 6, 2020, 3:15 PM IST

ಕೋವಿಡ್‌ ಪರೀಕ್ಷಾ ಲ್ಯಾಬ್‌ ಉದ್ಘಾಟನೆ

ಕೊಪ್ಪಳ: ನಗದರ ಕಿಮ್ಸ್‌ನಲ್ಲಿ ಕೋವಿಡ್‌-19 ಸ್ಕ್ರೀನಿಂಗ್‌ ಪರೀಕ್ಷೆ ಹಾಗೂ ಆರ್‌ಟಿಪಿಸಿಆರ್‌ ಪ್ರಯೋಗಾಲಯದಿಂದ ಕೋವಿಡ್‌ ನೆಗೆಟಿವ್‌ ಮತ್ತು ಇತರೆ ಲಕ್ಷಣಗಳನ್ನು ತಿಳಿದುಕೊಳ್ಳಲು ಅನುಕೂಲವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ ಹೇಳಿದರು.

ನಗರದ ಕಿಮ್ಸ್‌ನಲ್ಲಿ ವೈರಾಣು ಸಂಶೋಧನೆ ಮತ್ತು ರೋಗ ನಿರ್ಣಯ ಪ್ರಯೋಗಾಲಯ ಉದ್ಘಾಟನೆ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ಪ್ರಯೋಗಾಲಯಕ್ಕೆ ಎಸ್‌ಡಿಆರ್‌ ಎಫ್‌ ನಿಧಿಯಲ್ಲಿ ಸಿವಿಲ್‌ ಕಾಮಗಾರಿಗೆ 23.70 ಲಕ್ಷ ರೂ. ಉಪಕರಣಗಳ ಖರೀದಿಗೆ 111.93 ಲಕ್ಷ ರೂ. ಖರ್ಚಾಗಿದೆ. ಟ್ರೂನಾಟ್‌ ಉಪಕರಣದಲ್ಲಿ ಪ್ರತಿ ಶಿಫ್ಟ್‌ಗೆ 20ರಿಂದ 25 ಜನ ಹಾಗೂ ಪ್ರತಿ ದಿನ 40ರಿಂದ 50 ಪರೀಕ್ಷೆಗಳನ್ನು ಮಾಡಲಾಗುತ್ತದೆ. ಆರ್‌ಟಿಪಿಸಿಆರ್‌ ಉಪಕರಣದಲ್ಲಿ ಪ್ರತಿ ಶಿಫ್ಟ್‌ಗೆ 70-75 ಜನರು ಹಾಗೂ ಪ್ರತಿದಿನ 140-145 ಪರೀಕ್ಷೆಗಳನ್ನು ಮಾಡಲಾಗುವುದು. ಸ್ಕ್ರೀನಿಂಗ್‌ ಪರೀಕ್ಷೆ (ಟ್ರೂನಾಟ್‌), ಆರ್‌ಟಿಪಿಸಿಆರ್‌ ಪರೀಕ್ಷೆಗಳನ್ನು ಸಂಶೋಧನಾ ವಿಜ್ಞಾನಿಗಳು, ಸಂಶೋಧನಾ ಸಹಾಯಕರು, ಪ್ರಯೋಗಶಾಲಾ ತಜ್ಞರು ಮಾಡುತ್ತಾರೆ ಎಂದರು.

ಈಗಾಗಲೆ 55 ಪರೀಕ್ಷೆಗಳನ್ನು ಮಾಡಿದ್ದು, ಎಲ್ಲಾ 55 ಪರೀಕ್ಷೆಗಳು ನೆಗೆಟಿವ್‌ ಬಂದಿವೆ. ಕೋವಿಡ್ ಸೋಂಕು ಹೆಚ್ಚಾಗುತ್ತಿದ್ದರೂ ಯಾರೂ ಗಾಬರಿ ಪಡಬೇಕಾಗಿಲ್ಲ. ಏಕೆಂದರೆ ರೋಗನಿರೋಧಕ ಶಕ್ತಿ ಕಡಿಮೆ ಇರುವವರು ಮತ್ತು ವಯಸ್ಸಾದವರು ಮರಣ ಹೊಂದುತ್ತಿದ್ದರೂ, ಮರಣ ಪ್ರಮಾಣ ಬಹಳ ಕಡಿಮೆಯಿದೆ. ಕೆಲವೊಬ್ಬರಿಗೆ ಯಾವುದೇ ಕೋವಿಡ್‌-19  ಲಕ್ಷಣಗಳು ಕಂಡುಬರದಿದ್ದರೂ ಅವರಿಗೆ ಪರೀಕ್ಷೆ ಮಾಡಿಸಿದಾಗ ಪಾಸಿಟಿವ್‌ ಬಂದಿರುವುದು ಕಂಡುಬಂದಿವೆ. ಇದು ಬಹುತೇಕ ಮಹಾರಾಷ್ಟ್ರದಿಂದ ಬಂದವರಿಂದಲೇ ಕಂಡುಬಂದಿದೆ ಎಂದರು.

ಕೋವಿಡ್‌ ವೇಳೆ ಕೇಂದ್ರವು 20 ಲಕ್ಷ ಕೋಟಿ ಆರ್ಥಿಕ ಪ್ಯಾಕೆಜ್‌ ಘೋಷಣೆ ಮಾಡಿದೆ. ರಾಜ್ಯ ಸರ್ಕಾರ ಸಂಕಷ್ಟದಲ್ಲಿರುವ ವಿವಿಧ ವರ್ಗಕ್ಕೆ ಪ್ಯಾಕೇಜ್‌ ಘೋಷಣೆ ಮಾಡಿದೆ. ಮೆಕ್ಕೆಜೋಳಕ್ಕಾಗಿ ರೂ. 500 ಕೋಟಿ ಅನುದಾನ ಘೋಷಿಸಿದೆ. ರೈತರು ತಮ್ಮ ಚಾಲ್ತಿ ಬ್ಯಾಂಕ್‌ ಖಾತೆಗೆ ಆಧಾರ್‌ ಕಾರ್ಡ್‌ ಜೋಡಣೆ ಮಾಡಬೇಕು. ಕೆಲವೊಂದು ರೈತರು ಖಾತೆಯ ಸರಿಯಾದ ಮಾಹಿತಿ ನೀಡದ ಕಾರಣದಿಂದ ರೈತರ ಖಾತೆಗೆ ಹಾಕಿದ ಹಣ ಬೇರೆ ಬೇರೆ ಖಾತೆಗೆ ಸಂದಾಯವಾದ ದೂರುಗಳು ಕೇಳಿಬಂದಿವೆ ಎಂದರು.

ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ಇರುವವರನ್ನ ಕೆಲಸದಿಂದ ತೆಗೆಯುವುದಿಲ್ಲ. ಯಾವುದೇ ವದಂತಿಗಳಿಗೆ ಕಿವಿಗೊಡಬಾರದು. ಕಳೆದ ಕೆಲವು ವರ್ಷಗಳಿಂದ ರೈತರ ಬೆಳೆ ವಿಮೆ ಬಂದಿಲ್ಲ. ಈ ಕುರಿತು ಅಧಿಕಾರಿಗಳ ಜೊತೆ ಚರ್ಚಿಸಿದ್ದೇನೆ. ಬೆಳೆ ಸರ್ವೇ ಮಿಸ್‌ ಮ್ಯಾಚ್‌ ಆಗಿದ್ದರಿಂದ ಸರಿಪಡಿಸಿ ವಿಮಾ ಮೊತ್ತ ಬಿಡುಗಡೆಗೆ ಈಗಾಗಲೇ ಸೂಚನೆ ನೀಡಿದ್ದೇನೆ ಎಂದರು.

ಈ ವೇಳೆ ಜಿಪಂ ಅಧ್ಯಕ್ಷ ಎಚ್‌. ವಿಶ್ವನಾಥ ರೆಡ್ಡಿ, ಸಂಸದ ಸಂಗಣ್ಣ ಕರಡಿ, ಶಾಸಕರಾದ ಅಮರೇಗೌಡ ಬಯ್ನಾಪೂರ, ಪರಣ್ಣ ಮುನವಳ್ಳಿ, ಬಸವರಾಜ ದಢೇಸೂಗೂರು, ಡಿಸಿ ಪಿ. ಸುನೀಲ್‌ ಕುಮಾರ್‌, ಜಿಪಂ ಸಿಇಒ ರಘುನಂದನ್‌ ಮೂರ್ತಿ ಸೇರಿ ಇತರರು ಇದ್ದರು.

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.