ಎಲ್ಲದಕ್ಕೂ ವಿಪಕ್ಷದವರ ವಿರೋಧ ತರವಲ್ಲ: ಪಾಟೀಲ
Team Udayavani, Jun 21, 2020, 2:44 PM IST
ಕೊಪ್ಪಳ: ವಿಪಕ್ಷದಲ್ಲಿದ್ದವರು ಆಡಳಿತ ಪಕ್ಷದ ತಪ್ಪುಗಳನ್ನು ತಿದ್ದಬೇಕು. ಆದರೆ ಅದನ್ನು ಬಿಟ್ಟು ಎಲ್ಲದಕ್ಕೂ ವಿರೋಧ ಮಾಡುವುದು ಸರಿಯಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಬಿಎಸ್ ವೈಗೆ ಕೇಂದ್ರದಿಂದ ಅನುದಾನ ತರುವ ಧಮ್ ಇಲ್ಲ ಎಂದು ಹೇಳಿದ್ದು ಸರಿಯಲ್ಲ. ಧಮ್ಮು-ಕೆಮ್ಮು… ಏನ್ರೀ ಇವೆಲ್ಲಾ.. ಏನ್ ಭಾಷೆ ಬಳಸುತ್ತಾರೆ. ಇದೊಂದು ಒಳ್ಳೆ ಭಾಷೆನಾ? ವಿಪಕ್ಷದಲ್ಲಿರುವ ಅವರು ಆಡಳಿತ ಪಕ್ಷದಲ್ಲಿನ ತಪ್ಪು ಹೇಳಲಿ. ಅದನ್ನು ಬಿಟ್ಟು ಎಲ್ಲದಕ್ಕೂ ವಿರೋಧ ಮಾಡುವುದು ತರವಲ್ಲ. ಸಿಎಂ ಬಿಎಸ್ವೈ ಅವರಷ್ಟು ಮಾಡಿದ ಸಭೆಗಳನ್ನು ಬೇರೆ ಯಾವ ಸಿಎಂ ಮಾಡಿಲ್ಲ. ಸಿಎಂ ಸಮರ್ಥವಾಗಿ ಆಡಳಿತ ನಡೆಸುತ್ತಿದ್ದಾರೆ. ಕೋವಿಡ್-19 ತಡೆಗಟ್ಟುವ ವಿಚಾರದಲ್ಲಿ ಸಿಎಂ ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದರು.
ನನ್ನದು ಕೃಷಿ ಇಲಾಖೆ ಆಗಿರುವುದರಿಂದ ಕೃಷಿ ಕಾಯಕ ಮಾಡುವ ಮೂಲಕ ವಾರ್ಷಿಕೋತ್ಸವ ಆಚರಿಸುವೆ. ಇನ್ನುಳಿದವರಿಗೆ ಅವರವರ ಖಾತೆಯೇ ಮನೆ ದೇವರು. ಆ ದೇವರ ಕೆಲಸವನ್ನು ನಿರ್ವಹಿಸುವ ಮೂಲಕ ವಾರ್ಷಿಕೋತ್ಸವ ಆಚರಿಸುತ್ತಾರೆ ಎಂದರು.
ಕೊಪ್ಪಳ ತಾಲೂಕಿನ ಕಾಸನಕಂಡಿ, ಬಗನಾಳದಲ್ಲಿ ರಸ್ತೆ ಸಮಸ್ಯೆಯಾಗಿದೆ. ಕಾರ್ಖಾನೆಯವರಿಗೆ ರಸ್ತೆ ನಿರ್ಮಾಣ ಮಾಡಲು ಸೂಚಿಸಲಾಗಿದೆ. ಕೆಲವರು ಟೋಲ್ ಹಣ ಉಳಿಸಲು ಗ್ರಾಮದ ರಸ್ತೆ ಬಳಸುತ್ತಿರುವುದು ಗಮನಕ್ಕಿದೆ. ಅದನ್ನು ಸರಿಪಡಿಸಲಾಗುವುದು. ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್-19ಗೆ ಚಿಕಿತ್ಸೆಯ ದರಪಟ್ಟಿ ವಿಚಾರದ ಕುರಿತು ಪ್ರತಿಕ್ರಿಯಿಸಿ, ಬದುಕು ಎಲ್ಲಕ್ಕಿಂತಲೂ ದೊಡ್ಡದು. ದರದ ಬಗ್ಗೆ ಮರು ಪರಿಶೀಲನೆ ಮಾಡಲಾಗುವುದು ಎಂದರು.
ಆರ್ಎಸ್ಕೆಗಳನ್ನು ಪ್ರಬಲ ಮಾಡಬೇಕು ಎಂಬ ಯೋಚನೆ ಇದೆ. ಕೃಷಿ ಮೊಬೈಲ್ ಹೆಲ್ತ್ ಕ್ಲಿನಿಕ್ ಕೊಪ್ಪಳದಿಂದ ಪೈಲಟ್ ಪ್ರೋಗ್ರಾಂ ಆಗಿ ಮಾಡ್ತಿವಿ. ಪ್ರತಿ ಆರ್ಎಸ್ಕೆಗೆ ಒಂದರಂತೆ ವಾಹನ ನೀಡಲಾಗುವುದು. ಒಂದು ವಾಹನಕ್ಕೆ ಸುಮಾರು 20 ಲಕ್ಷ ರೂಪಾಯಿ ಖರ್ಚಾಗಬಹುದು ಎಂದು ವಿವರಿಸಿದರು. ಈ ವೇಳೆ ಸಂಸದ ಸಂಗಣ್ಣ ಕರಡಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ
MUST WATCH
ಹೊಸ ಸೇರ್ಪಡೆ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
Udupi: ರಮಾಬಾಯಿ ಕೊಚ್ಚಿಕಾರ್ ಪೈ ನಿಧನ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ