ತೆರವುಗೊಳ್ಳುವ ಶಾಲೆ ವಿಲೀನಕ್ಕೆ ವಿರೋಧ

ರೈಲ್ವೇ ನಿಲ್ದಾಣಕ್ಕಾಗಿ ತೆರವುಗೊಳ್ಳಲಿದೆ ಶಾಲೆ

Team Udayavani, May 3, 2022, 4:03 PM IST

19

ಕುಷ್ಟಗಿ: ಪಟ್ಟಣದ ಹೊರವಲಯದ ಅಲೆಮಾರಿ ಬುಡಕಟ್ಟು ಜನಾಂಗದವರು ವಾಸವಾಗಿರುವ ಸಂತ ಶಿಶುನಾಳ ಶರೀಫ್‌ ನಗರದಲ್ಲಿ ತಳಕಲ್‌-ವಾಡಿ ರೈಲು ಮಾರ್ಗದ ರೈಲ್ವೇ ನಿಲ್ದಾಣ ನಿರ್ಮಾಣವಾಗುತ್ತಿದೆ. ಈ ಹಿನ್ನೆಲೆಯಲ್ಲಿ ತೆರವುಗೊಳ್ಳುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಅಂಗನವಾಡಿಯನ್ನು ಸಂತ ಶಿಶುನಾಳ ಶರೀಫ್‌ ನಗರಕ್ಕೆ ಹೊಂದಿಕೊಂಡಿರುವ ಸ್ಥಳದಲ್ಲೇ ನಿರ್ಮಿಸಬೇಕೆಂಬ ಬೇಡಿಕೆ ವ್ಯಕ್ತವಾಗಿದೆ.

ಚತುಷ್ಪಥ ರಾಷ್ಟ್ರೀಯ ಹೆದ್ದಾರಿ-50 ಹಾಗೂ ಕಂದಕೂರು ರಸ್ತೆಯ ಮಧ್ಯೆ ಭಾಗದಲ್ಲಿ ನೈರುತ್ಯ ವಲಯದ ರೈಲ್ವೇ ನಿಲ್ದಾಣ ನಿರ್ಮಿಸುವ ಯೋಜನೆ ಇದೆ. ಈ ಹಿನ್ನೆಲೆಯಲ್ಲಿ ಸಂತ ಶಿಶುನಾಳ ಶರೀಫ್‌ ನಗರದ 35 ಮನೆಗಳು, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಅಂಗನವಾಡಿ ತೆರವುಗೊಳಿಸಲಾಗುತ್ತಿದೆ.

ಈಗಾಗಲೇ 35 ಮನೆಗಳಿಗೆ ತಲಾ 3 ಲಕ್ಷ ರೂ. ಪರಿಹಾರ ನೀಡಲಾಗಿದ್ದು, ಶಾಲೆಗೂ 12 ಲಕ್ಷ ರೂ. ರೈಲ್ವೆ ಇಲಾಖೆ ನಿಗದಿಪಡಿಸಿದೆ. ಆದರೆ ಶಾಲೆ ನಿರ್ಮಾಣಕ್ಕೆ ಜಾಗೆಯ ತೊಂದರೆ ಇದೆ. ಸಂತ ಶಿಶುನಾಳ ಶರೀಫ್‌ ನಗರದ ಉತ್ತರ, ಪೂರ್ವ ಹಾಗೂ ದಕ್ಷಿಣ ದಿಕ್ಕಿನಲ್ಲಿ ರೈತರ ಜಮೀನು ಇದ್ದು, ಪಶ್ಚಿಮ ಭಾಗದಲ್ಲಿ ಸ.ನಂ. 59ರಲ್ಲಿ ರಾಜ್ಯಪಾಲರ ಹೆಸರಿನಲ್ಲಿ ನೋಂದಣಿಯಾಗಿರುವ ಕೆಐಡಿಬಿಯ 25 ಗುಂಟೆ ಜಾಗೆ ಇದೆ.

ಶಾಲೆ ನಿರ್ಮಿಸುವ ಸಂಬಂಧ ಕೆಐಡಿಬಿಯ ಸದ್ಯಕ್ಕೆ 11 ಗುಂಟೆಯಾದರೂ ಬಿಟ್ಟು ಕೊಟ್ಟರೆ ಶಾಲೆ ನಿರ್ಮಿಸಲು ಅನಕೂಲವಾಗಲಿದೆ. ಇದೇ ಸ.ನಂ.ಗೆ ಹೊಂದಿಕೊಂಡಿರುವ ರೈತರ ಜಮೀನಿನಲ್ಲಿ ಶಾಲೆಗೆ ಅಗತ್ಯವಿರುವ ಜಾಗೆ ಖರೀದಿಸಬೇಕು. ಈ ಶಾಲೆಯನ್ನು ಕೃಷ್ಣಗಿರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಮಾರುತಿ ನಗರದ ಶಾಲೆಯಲ್ಲಿ ವಿಲೀನಗೊಳಿಸುವ ಪ್ರಯತ್ನ ಮಾಡಬಾರದು ಎನ್ನುವುದು ಸ್ಥಳೀಯರ ಬೇಡಿಕೆಯಾಗಿದೆ.

ರೈಲ್ವೇ ನಿಲ್ದಾಣ ನಿರ್ಮಿಸುವ ಹಿನ್ನೆಲೆಯಲ್ಲಿ ಶಾಲೆ, ಅಂಗನವಾಡಿ ತೆರವುಗೊಳಿಸುವುದಾದರೆ, ರೈಲ್ವೇ ಇಲಾಖೆಯವರೇ ಕೆಐಡಿಬಿಯಿಂದ ಶಾಲೆಗಾಗಿ 25 ಗುಂಟೆಯಲ್ಲಿ ಜಮೀನು ಸ್ವಾಧೀನಪಡಿಸಿಕೊಳ್ಳಬೇಕಿದೆ. ರೈಲ್ವೇ ಇಲಾಖೆ ಶಾಲೆಗೆ ಬರೀ 12 ಲಕ್ಷ ರೂ. ಪರಿಹಾರ ನೀಡಿದ್ದು, ಇದು ಕನಿಷ್ಟ ಪರಿಹಾರ. ಯಾಕೆಂದರೆ ಎನ್‌.ಎ. (ಭೂ ಪರಿವರ್ತನೆ) ನಿವೇಶನ ಆಗಿದ್ದು, ಹೆಚ್ಚಿನ ಪರಿಹಾರ ಸಿಗಬೇಕಿದೆ. ಈ ಕುರಿತು ಸಂಬಂಧಿಸಿದ ಕೆಐಡಿಬಿ ಅಧಿಕಾರಿ ಹಾಗೂ ರೈಲ್ವೇ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸುವೆ. -ಗಂಗಾಧರಸ್ವಾಮಿ ಹಿರೇಮಠ, ಪುರಸಭೆ ಅಧ್ಯಕ್ಷ

ಭಿಕ್ಷೆ ಬೇಡಿ, ಹಾವು ಆಡಿಸಿ, ಪ್ಲಾಸ್ಟಿಕ್‌ ಕೊಡ ಮಾರಿ ಜೀವನ ನಡೆಸುತ್ತಿದ್ದವರಿಗೆ ಸರ್ಕಾರ ಜಾಗೆ ಖರೀದಿಸಿ 100 ಮನೆಗಳನ್ನು ನಿರ್ಮಿಸಿ, ಮಕ್ಕಳ ಶಿಕ್ಷಣಕ್ಕೆ ಶಾಲೆ, ಅಂಗನವಾಡಿ ನಿರ್ಮಿಸಲಾಗಿದೆ. ಈಗ ಅದನ್ನು ರೈಲ್ವೇ ನಿಲ್ದಾಣ ನಿರ್ಮಿಸುವ ಸಂಬಂಧ ಸರ್ಕಾರ ಕಸಿದುಕೊಂಡಿದೆ. ಈ ಶಾಲೆ ನಿರ್ಮಿಸಿದ್ದರಿಂದ ನಮ್ಮ ಮಕ್ಕಳು ಈ ಶಾಲೆಯಲ್ಲಿ ಶಿಕ್ಷಣ ಕಲಿತು ಪಿಯುಸಿವರೆಗೆ ಓದುತ್ತಿದ್ದಾರೆ. 80ಕ್ಕೂ ಅಧಿಕ ಮಕ್ಕಳು ಬೇರೆಡೆ ಕಲಿಯುವುದು ಅಸಾಧ್ಯ. ಶಾಲೆ ತೆರವುಗೊಂಡರೆ ನಮ್ಮ ಬಡಾವಣೆಯ ಪಕ್ಕದಲ್ಲಿ ಶಾಲೆ, ಅಂಗನವಾಡಿ ನಿರ್ಮಿಸಬೇಕು. ಹಲವು ಹೋರಾಟದಿಂದ ಮನೆ ನಿರ್ಮಿಸಿಕೊಂಡಿದ್ದು, ಶಾಲೆಯನ್ನು ಇಲ್ಲಿಯೇ ಉಳಿಸಿಕೊಳ್ಳುವ ಹೋರಾಟ ಅನಿವಾರ್ಯ ಆಗಲಿದೆ. –ಮಹಿಬೂಬಸಾಬ್‌ ಮದಾರಿ, ಅಲೆಮಾರು ಬುಡಕಟ್ಟು ಸಮಾಜದ ಅಧ್ಯಕ್ಷ

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.