ಗ್ಯಾಸ್‌ ಪೈಪ್‌ಲೈನ್‌ ಅಳವಡಿಕೆಗೆ ಪರ-ವಿರೋಧ

ಸಂಸ್ಥೆ ವೈಖರಿಗೆ ಗುಡುಗಿದ ಸಂಸದ ; ಸ್ಥಳ ಪರಿಶೀಲನೆ ನಡೆಸಿದ ಬಳಿಕ ಕಾಮಗಾರಿ ಆರಂಭಿಸಿ

Team Udayavani, Jun 14, 2022, 4:51 PM IST

18

ಕೊಪ್ಪಳ: ಎಜಿಎಂಡ್‌ಪಿ ಪ್ರಥಮ್‌ ಕಂಪನಿಯಿಂದ ಸೋಮವಾರ ಜಿಲ್ಲಾಡಳಿತ ಭವನದ ಅಡಿಟೋರಿಯಂ ಹಾಲ್‌ನಲ್ಲಿ ನೈಸರ್ಗಿಕ ಅನಿಲ ಸರಬರಾಜು ಕುರಿತ ಪ್ರಸ್ತುತಿ ಕಾರ್ಯಕ್ರಮದಲ್ಲಿ ಅನುಷ್ಠಾನ ಸಂಸ್ಥೆಯ ವೈಖರಿ ಬಗ್ಗೆ ನಗರಸಭೆ ಸದಸ್ಯರು ಪರ, ವಿರೋಧ ಅಭಿಪ್ರಾಯ ವ್ಯಕ್ತಪಡಿಸಿದರು.

ಸಂಸದ ಸಂಗಣ್ಣ ಕರಡಿ ಅವರು ಕಾಮಗಾರಿ ಸ್ಥಳ ಪರಿಶೀಲನೆ ನಡೆಸಿದ ಬಳಿಕ ಕಾಮಗಾರಿ ಆರಂಭಿಸುವಂತೆ ಸೂಚನೆ ನೀಡಿದ ಘಟನೆ ನಡೆಯಿತು.

ಕೇಂದ್ರ ಸರ್ಕಾರವು ಮನೆ ಮನೆಗೆ ನೈಸರ್ಗಿಕ ಗ್ಯಾಸ್‌ ಪೈಪ್‌ ಅಳವಡಿಕೆಗೆ ಯೋಜನೆ ರೂಪಿಸಿ ಖಾಸಗಿ ಸಂಸ್ಥೆಯ ನೇತೃತ್ವದಲ್ಲಿ ಕಾಮಗಾರಿ ಆರಂಭಿಸಲು ಮುಂದಾಗಿದೆ. ಹಾಗಾಗಿ ಎಜಿಎಂಡ್‌ಪಿ ಸಂಸ್ಥೆ ಕಾಮಗಾರಿ ಉಸ್ತುವಾರಿ ನೋಡಿಕೊಳ್ಳುತ್ತಿದೆ. ಈಚೆಗೆ ನಗರಸಭೆಯಲ್ಲಿ ಸದಸ್ಯರು ನೈಸರ್ಗಿಕ ಅನೀಲ ಪೈಪ್‌ಲೈನ್‌ ಕಾಮಗಾರಿ ಕುರಿತು ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ನಗರದ ಜಿಲ್ಲಾಡಳಿತ ಭವನದ ಅಡಿಟೋರಿಯಂ ಹಾಲ್‌ನಲ್ಲಿ ಸಂಸ್ಥೆಯ ಪ್ರತಿನಿ ಗಳ ಹಾಗೂ ಜನಪ್ರತಿನಿಧಿಗಳಿಗೆ ಮಾಹಿತಿ ನೀಡುವ ಕಾರ್ಯಕ್ರಮ ಜರುಗಿತು.

ಸಭೆಯಲ್ಲಿ ನಗರಸಭೆ ಸದಸ್ಯರಾದ ಮುತ್ತು ಕುಷ್ಟಗಿ, ಅಮ್ಜದ್‌ ಪಟೇಲ್‌, ಮಹೇಂದ್ರ ಛೋಪ್ರಾ ಮಾತನಾಡಿ, ನೈಸರ್ಗಿಕ ಗ್ಯಾಸ್‌ ಪೈಪ್‌ ಅಳವಡಿಕೆಗೆ ನಮ್ಮ ವಿರೋಧವಿಲ್ಲ. ಅಭಿವೃದ್ಧಿಗೆ ನಮ್ಮ ಸಹಕಾರವಿದೆ. ಆದರೆ ಈ ಯೋಜನೆಯ ಬಗ್ಗೆ ಯಾರಿಗೂ ಸರಿಯಾದ ಮಾಹಿತಿಯೇ ಇಲ್ಲ. ನಗರದಲ್ಲಿ ಬಿ.ಟಿ. ಪಾಟೀಲ್‌ ನಗರ ಸೇರಿ ವಿವಿಧ ಬಡವಾಣೆಗಳಲ್ಲಿ ರಸ್ತೆಗಳ ಕಿತ್ತುಹಾಕಿ ಪೈಪ್‌ಲೈನ್‌ ಕಾಮಗಾರಿ ನಡೆಸಲಾಗುತ್ತಿದೆ. ಕೆಲವು ವರ್ಷಗಳ ಹಿಂದೆ ಯುಜಿಡಿ ಕಾಮಗಾರಿಯಿಂದಾಗಿ ಜನ ರೋಸಿ ಹೋಗಿದ್ದರು. ಈಗ ನಗರದ ರಸ್ತೆಗಳು ಸುಂದರವಾಗಿವೆ. ಮತ್ತೆ ಅವುಗಳನ್ನು ಕಿತ್ತುಹಾಕುವ ಕೆಲಸ ನಡೆದಿದೆ. ಆದರೆ ಅವುಗಳ ಪುನರ್‌ ನಿರ್ಮಾಣದ ಮಾಹಿತಿಯಿಲ್ಲ. ಜಿಯೋ ಕೇಬಲ್‌, ಬಿಎಸ್‌ಎನ್‌ಎಲ್‌ ಕೇಬಲ್‌ ಸೇರಿ ನೀರಿನ ಪೈಪ್‌ಗಳಿವೆ. ಅದರ ಪಕ್ಕದಲ್ಲೇ ಇವುಗಳನ್ನು ಹಾಕಲಾಗುತ್ತಿದೆ. ಬೆಂಕಿಯ ಜೊತೆಗೆ ನಾವು ಆಟವಾಡುವುದಲ್ಲ. ಇದರ ಸುರಕ್ಷತೆಯ ಬಗ್ಗೆ ಸ್ಪಷ್ಟತೆಯಿಲ್ಲ. ಏನಾದರೂ ಅವಘಡ ನಡೆದರೆ ಇದಕ್ಕೆ ಯಾರು ಹೊಣೆ? ಜನರ ಜೀವದ ಭದ್ರತೆ, ವಿಮಾ ವ್ಯವಸ್ಥೆ, ಹಾನಿಯ ಪರಿಹಾರದ ಜವಾಬ್ದಾರಿ ಯಾರು ಎಂದು ಪ್ರಶ್ನೆ ಮಾಡಿದರು.

ಇನ್ನು ಅಕ್ಬರ್ ಪಾಷಾ, ಚನ್ನಪ್ಪ ಕೊಟ್ಯಾಳ, ರಾಜಶೇಖರ ಆಡೂರು ಮಾತನಾಡಿ, ಈ ಯೋಜನೆ ನೈಸರ್ಗಿಕ ಸ್ನೇಹಿ ಯೋಜನೆಯಾಗಿದೆ. ನಗರಸಭೆಯಿಂದ ಪರವಾನಗಿ ಪಡೆದುಕೊಂಡೇ ಕಾಮಗಾರಿ ಆರಂಭಿಸಿದ್ದಾರೆ. ಕಾನೂನು ಅಡಿಯಲ್ಲಿಯೇ ಅವರು ಕೆಲಸ ನಿರ್ವಹಿಸುತ್ತಿದ್ದಾರೆ. ಸಕಾಲಕ್ಕೆ ಕಾಮಗಾರಿ ನಿರ್ಮಿಸಲಿ ಎನ್ನುವ ಸಲಹೆ ನೀಡಿದರು.

ಸಭೆಯಲ್ಲಿ ಸಂಸದ ಸಂಗಣ್ಣ ಕರಡಿ ಮಾತನಾಡಿ, ನೈಸರ್ಗಿಕ ಅನಿಲ ಪೈಪ್‌ಲೈನ್‌ ಅಳವಡಿಕೆಯು ಒಂದು ಉತ್ತಮ ಯೋಜನೆಯಾಗಿದೆ. ಆದರೆ ಈ ಯೋಜನೆಯ ಬಗ್ಗೆ ನಮಗೆ ಯಾವುದೇ ಸರಿಯಾದ ಮಾಹಿತಿಯೂ ಇಲ್ಲ. ಅಧಿಕಾರಿಗಳು ಪರವಾನಗಿ ನೀಡಿದ್ದಾರೆ. ಜಿಲ್ಲಾಧಿಕಾರಿಗೂ ಸಹ ಈ ಬಗ್ಗೆ ಮಾಹಿತಿಯಿಲ್ಲ. ಮೊದಲು ಸಂಸ್ಥೆ ಎಲ್ಲ ಜನಪ್ರತಿನಿಧಿಗಳಿಗೆ ಯೋಜನೆಯ ಕಾರ್ಯ ನಿರ್ವಹಣೆ ಬಗ್ಗೆ ಸಮಗ್ರ ಮಾಹಿತಿ ನೀಡಲಿ. ನಂತರದಲ್ಲಿ ಸಾಧಕ, ಬಾಧಕ ವಿವರಿಸಲಿ. ಜನರಿಗೆ ಆಗುವ ಅನುಕೂಲದ ಕುರಿತು ಮಾಹಿತಿ ನೀಡಲಿ. ಸಂಸ್ಥೆಯ ಕೆಲವು ಪ್ರತಿನಿಧಿಗಳಿಗೆ ಈ ಬಗ್ಗೆ ಪೂರ್ಣ ಮಾಹಿತಿಯಿಲ್ಲ. ಎಲ್ಲವನ್ನೂ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಒಂದು ಸಭೆಯನ್ನು ನಡೆಸಿ ನಂತದಲ್ಲಿ ಕಾಮಗಾರಿ ಆರಂಭಿಸಿ, ನಾವು ಕೆಲವೊಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವೆವು. ಆ ಬಳಿಕ ನಗರದಲ್ಲಿ ಕಾಮಗಾರಿ ಆರಂಭಿಸಿ. ಅಲ್ಲಿವರೆಗೂ ಯಾವುದೇ ಕಾಮಗಾರಿ ನಿರ್ವಹಿಸಬೇಡಿ ಎಂದು ಸಂಸ್ಥೆಯ ಪ್ರತಿನಿಧಿಗಳಿಗೆ ಸೂಚನೆ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವಿಕಾಸ್‌ ಕಿಶೋರ್‌, ನಗರಸಭೆ ಅಧ್ಯಕ್ಷೆ ಶಿವಗಂಗಾ ಬೊಮ್ಮಕ್ಕನವರ್‌, ನಗರಸಭೆ ಉಪಾಧ್ಯಕ್ಷೆ ಆಯೇಷಾ ರುಬಿನಾ, ನಗರಸಭೆಯ ಎಇಇ ಮಂಜುನಾಥ, ಎಜಿಪಿ ಪ್ರಥಮ್‌ ಕಂಪನಿಯ ವಿಭಾಗೀಯ ಮುಖ್ಯಸ್ಥ ಸುವೇಂದು ಮೊಪಾತ್ರ ಸೇರಿದಂತೆ ಸದಸ್ಯರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.