ಬೂತ್‌ಮಟ್ಟದಲ್ಲಿ ಪಕ್ಷ ಸಂಘಟಿಸಿ

• ಸ್ವಾತಂತ್ರ್ಯಕ್ಕೆ ಬಿಜೆಪಿ ಏನೂ ಮಾಡಿಲ್ಲ•ಚುನಾವಣೆಯಲ್ಲಿ ಸೋಲು-ಗೆಲುವು ಸಹಜ

Team Udayavani, Jul 6, 2019, 11:39 AM IST

kopala-tdy-1..

ಕೊಪ್ಪಳ: ಖಾಸಗಿ ಹೋಟೆಲ್ನಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಬೃಹತ್‌ ಕೈಗಾರಿಕೆ ಸಚಿವ ಕೆ.ಜೆ. ಜಾರ್ಜ್‌ ಮಾತನಾಡಿದರು.

ಕೊಪ್ಪಳ: ಕಾಂಗ್ರೆಸ್‌ ಪಕ್ಷಕ್ಕೆ ನೂರಾರು ವರ್ಷಗಳ ಇತಿಹಾಸವಿದೆ. ಬಿಜೆಪಿ ಅಧಿಕಾರ ಹಿಡಿಯಲು ಮಾಡಬಾರದ್ದನ್ನೆಲ್ಲ ಮಾಡಿದ್ದರಿಂದ ನಮಗೆ ಸೋಲಾಗಿದೆ. ಬಿಜೆಪಿಯಿಂದ ಕಾಂಗ್ರೆಸ್‌ ಮುಕ್ತ ಮಾಡಲು ಸಾಧ್ಯವೇ ಇಲ್ಲ. ಕಾರ್ಯಕರ್ತರು ಬೂತ್‌ ಮಟ್ಟದಲ್ಲಿ ಪಕ್ಷ ಸಂಘಟಿಸಬೇಕು ಎಂದು ಬೃಹತ್‌ ಕೈಗಾರಿಕೆ ಸಚಿವ ಕೆ.ಜೆ. ಜಾರ್ಜ್‌ ಹೇಳಿದರು.

ನಗರದ ಖಾಸಗಿ ಹೋಟೆಲ್ನಲ್ಲಿ ಜಿಲ್ಲಾ ಕಾಂಗ್ರೆಸ್‌ ಸಮಿತಿಯಿಂದ ನಡೆದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್‌ ಪಕ್ಷ ದೇಶದ ಸ್ವಾತಂತ್ರ್ಯಕ್ಕಾಗಿ ಹಲವು ಹೋರಾಟ ಮಾಡಿದೆ. ನಮ್ಮ ಪಕ್ಷಕ್ಕೆ ಯಾವ ಜಾತಿಯಿಲ್ಲ. ಸೋಲು ಸಹಜ 1969ರಲ್ಲಿ ಕಾಂಗ್ರೆಸ್‌ಗೆ ಸೋಲಾಗಿದೆ. ದೇವರಾಜ ಅರಸು ಸೇರಿ ಇತರೆ ನಾಯಕರು ರಾಜ್ಯ ಸುತ್ತಿ ಪಕ್ಷ ಸಂಘಟಿಸಿದರು. ಹಲವು ಬಾರಿ ಕಾಂಗ್ರೆಸ್‌ ಇಬ್ಭಾಗವಾಗಿದೆ. ಕಾಂಗ್ರೆಸ್‌ಗೆ ಜನರು ಮುಖ್ಯವೇ ಹೊರತು. ನಾಯಕರು ಮುಖ್ಯವಲ್ಲ. ಸೋಲು ಅನುಭವಿಸಿದಾಗ ಹಿಂಜೆರಿಯುವುದು. ಗೆದ್ದಾಗ ಅಧಿಕಾರಕ್ಕೆ ಬಡಿದಾಡುವುದು ಮುಖ್ಯವಲ್ಲ. ಜನರ ಕೆಲಸ ಮಾಡಿಕೊಡುವುದು ಮುಖ್ಯ ಎಂದರು.

ಸೋನಿಯಾ ಗಾಂಧಿ ಅವರು ಪ್ರಧಾನಿ ಹುದ್ದೆಯನ್ನೇ ಬೇಡ ಅಂದರು. ಆದರೆ ವಿಪಕ್ಷಗಳು ನೆಹರೂ ಕುಟುಂಬದ ಬಗ್ಗೆ ಮಾತನಾಡುತ್ತಿವೆ. ನೆಹರು ಕುಟುಂಬ ದೇಶಕ್ಕೆ ದೊಡ್ಡ ತ್ಯಾಗ ಮಾಡಿದೆ. ನೆಹರು ಕುಟುಂಬದವರು ದೊಡ್ಡ ಶ್ರೀಮಂತವಾಗಿದ್ದರು. ಅವರು ಬ್ರಿಟೀಷರ ಗುಂಡಿಗೂ ಹೆದರದೆ ಹೋರಾಟ ಮಾಡಿದರು. ಕಾಂಗ್ರೆಸ್‌ನ ಹಲವು ನಾಯಕರು ಜೈಲು ಸೇರಿದ್ದಾರೆ. ಆದರೆ ಬಿಜೆಪಿಗೆ ಪೂಜೆ ಮಾಡಲು ಒಬ್ಬರೇ ನಾಯಕರಿಲ್ಲ. ವಲ್ಲಬಾಯಿ ಪಟೇಲ್ ನಮ್ಮ ನಾಯಕ ಎನ್ನುತ್ತಿದ್ದಾರೆ. ಈಗ ಅಧಿಕಾರಕ್ಕಾಗಿ ಏನೇನೋ ಮಾಡುತ್ತಿದ್ದಾರೆ. ನಾವು ಮಾಡಿದ್ದನ್ನು ಹೇಳಿಲ್ಲ, ದೇಶದ ಭದ್ರತೆ ವಿಷಯದಲ್ಲಿ ನಾವು ರಾಜಕೀಯ ಮಾಡಿಲ್ಲ. ಆದರೆ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದರು.

1974ರಲ್ಲಿ ಬಿಜೆಪಿಯ ಬೆರಳೆಣಿಕೆ ಶಾಸಕರಿದ್ದರು. ಈಗ ತಮ್ಮ ಬಲ ಹೆಚ್ಚಿಸಿಕೊಂಡಿದ್ದಾರೆ. ಆದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಸಂಖ್ಯಾ ಬಲದ ಮೇಲೆ ಅಧಿಕಾರ ನಡೆಸುತ್ತಿದೆ. ಬಿಜೆಪಿ ನಾಯಕರು ನಮ್ಮ ಒಬ್ಬೊಬ್ಬ ಶಾಸಕರಿಗೆ 40-50 ಕೋಟಿ ಆಫರ್‌ ಕೊಡ್ತಿದ್ದಾರೆ. ಆ ಹಣ ಏಲ್ಲಿಂದ ಬಂತು? ಒಬ್ಬೊಬ್ಬರ ಮನೆಯಲ್ಲಿ ನೋಟು ಎಣಿಕೆ ಮಾಡುವ ಯಂತ್ರ ಸಿಕ್ಕಿದೆ ಎಂದು ಗುಡುಗಿದರು.

ಕಾಂಗ್ರೆಸ್‌ ಪಕ್ಷ ಅಧಿಕಾರದಲ್ಲಿದ್ದಾಗ ಬಡವರಿಗೆ ಅನ್ನಭಾಗ್ಯ ಸೇರಿದಂತೆ ಹಲವು ಯೋಜನೆ ಜಾರಿ ಮಾಡಿದೆ. ನಮ್ಮ ಯೋಜನೆಗಳು ಜನತೆಗೆ ಗೊತ್ತಾಗಬೇಕು. ಅಂತಹ ಯೋಜನೆಗಳನ್ನು ಕಾರ್ಯಕರ್ತರು ಜನತೆಗೆ ತಲುಪಿಸಬೇಕು. ಬೂತ್‌ಗಳಲ್ಲಿ ನಮಗೆ ಮತ ಬಂದ್ರೆ ನಾವು ಎಲ್ಲ ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ. ಆದರೆ ಕಾರ್ಯಕರ್ತರು ಬೂತ್‌ ಮಟ್ಟದಲ್ಲಿ ಹೋಗುತ್ತಿಲ್ಲ. ನಾವು ಬರಿ ಚುನಾವಣೆ ಬಂದಾಗ ಅವರ ಮನೆಗೆ ತೆರಳಬಾರದು.

ಬಿ ಫಾರಂ ಸಿಕ್ಕಾಗ ಜನರೊಂದಿಗೆ ನಂಟು ಬೆಳೆಸಬಾರದು. ನಿರಂತರ ಅವರೊಂದಿಗೆ ಕೆಲಸ ಮಾಡಬೇಕೆಂದರು.

ಜಿಲ್ಲಾ ಉಸ್ತುವಾರಿ ಸಚಿವ ಈ. ತುಕಾರಾಂ ಮಾತನಾಡಿ, ಜಿಲ್ಲೆಯಲ್ಲಿ ಕೆಲವು ಶಾಸಕರು ಸೋತಿದ್ದಾರೆ. ಸೋಲೆ ಗೆಲುವಿನ ಮೆಟ್ಟಿಲು ಎಂದು ಮುನ್ನುಗ್ಗಿ ಪಕ್ಷ ಸಂಘಟನೆಗೆ ಮುಂದಾಗಬೇಕು. ಈ ಹಿಂದಿನ ಸರ್ಕಾರದಲ್ಲಿ ಹಲವು ಯೋಜನೆಗಳು ಬಂದಿವೆ. ಅವುಗಳ ಕುರಿತು ಜನತೆಗೆ ತಿಳಿಸೋಣ. ಮೈತ್ರಿ ಸರ್ಕಾರವೂ ಹೊಸ ಕಾರ್ಯಕ್ರಮಗಳನ್ನು ಜಾರಿ ಮಾಡಲಿದೆ. ಇತ್ತೀಚೆಗೆ ಎಲ್ಲ ಮಕ್ಕಳಿಗೂ ಲ್ಯಾಪ್‌ಟಾಪ್‌ ಕೊಡುವ ಕುರಿತು ಸಚಿವ ಸಂಪುಟದಲ್ಲಿ ಒಪ್ಪಿಗೆ ಸಿಕ್ಕಿದೆ ಎಂದರು. ರಾಜಶೇಖರ ಹಿಟ್ನಾಳ, ಎಸ್‌.ಬಿ. ನಾಗರಳ್ಳಿ, ಮಾಲತಿ ನಾಯಕ್‌, ವಿಶ್ವನಾಥರಡ್ಡಿ, ಇಂದಿರಾ ಬಾವಿಕಟ್ಟಿ, ಸುರೇಶ ಭೂಮರಡ್ಡಿ, ಜನಾರ್ದನ ಹುಲಿಗಿ, ಟಿ. ರತ್ನಾಕರ, ಕಾಟನ ಪಾಷಾ, ಬಾಲಚಂದ್ರನ್‌ ಇತರರಿದ್ದರು.

ಟಾಪ್ ನ್ಯೂಸ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

crime (2)

Koppal: ಕಾಣೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

10-uv-fusion

Theater: ಅಳಿವು ಉಳಿವಿನ ದವಡೆಯಲ್ಲಿ ರಂಗಭೂಮಿ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.