ಜಿಲ್ಲೆಯಲ್ಲಿ ಆಕ್ಸಿಜನ್‌ ಬಸ್‌ ಸೇವೆ ಆರಂಭ

ಅಭಿನವ ಗವಿಶ್ರೀ, ಡಿಸಿಎಂ ಸವದಿ ಚಾಲನೆ, ­ಪ್ರಥಮ ಚಿಕಿತ್ಸೆ ಗಾಗಿ ಆಕ್ಸಿಜನ್‌ ಬಸ್‌ ಬಳಕೆ

Team Udayavani, May 25, 2021, 9:03 PM IST

24kpl-2

ಕೊಪ್ಪಳ: ಎನ್‌ಇಕೆಎಸ್‌ಆರ್‌ಟಿಸಿ ಮೂಲಕ ನೂತನವಾಗಿ ನಿರ್ಮಿಸಿದ ಆಕ್ಸಿಜನ್‌ ಬಸ್‌ ಅನ್ನು ಡಿಸಿಎಂ ಲಕ್ಷ ¾ಣ ಸವದಿ ಅವರು ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಚಾಲನೆ ನೀಡಿದರು.

ಈ ವೇಳೆ ಗವಿಮಠದ ಶ್ರೀ ಗವಿಸಿದ್ದೇಶ್ವರ ಸ್ವಾಮಿಗಳು ಸಾನಿಧ್ಯ ವಹಿಸಿದ್ದರು. ಬಳಿಕ ಡಿಸಿಎಂ ಲಕ್ಷ¾ಣ ಸವದಿ ಮಾತನಾಡಿ, ಬೆಂಗಳೂರು ಮಾದರಿಯಲ್ಲಿ ಗುಜರಿಗೆ ಹಾಕುವ ಬಸ್‌ಗಳನ್ನೇ ಸೋಂಕಿತರ ಜೀವ ಉಳಿಸಲು ತುರ್ತು ಆಕ್ಸಿಜನ್‌ ಬಸ್‌ಗಳನ್ನಾಗಿ ಬಳಕೆ ಮಾಡಿಕೊಳ್ಳುತ್ತಿದ್ದೇವೆ. ಜಿಲ್ಲೆಯಲ್ಲಿ ತಾಲೂಕಿಗೆ ಒಂದರಂತೆ ಶಾಸಕರ ನಿಧಿ ಬಳಕೆ ಮಾಡಿ ಆಕ್ಸಿಜನ್‌ ಯುಕ್ತ ಬಸ್‌ ಸೇವೆಗೆ ಒದಗಿಸಿ ಎಂದು ಕೆಎಸ್‌ಆರ್‌ ಟಿಸಿ ಕೊಪ್ಪಳ ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಎ. ಮುಲ್ಲಾ ಅವರಿಗೆ ಸೂಚಿಸಿದರು.

ರಾಜ್ಯದಲ್ಲಿ 10 ಲಕ್ಷ ಕಿ.ಮೀ.ಗೂ ಹೆಚ್ಚು ಓಡಿದ ಬಸ್‌ಗಳನ್ನು ಗುಜರಿಗೆ ಹಾಕಬೇಕು. ಆದರೆ ಅಂತಹ ಬಸ್‌ಗಳನ್ನು ಆಧುನೀಕರಿಸಿ, ಆಕ್ಸಿಜನ್‌ಯುಕ್ತ ಬಸ್‌ಗಳನ್ನಾಗಿ ಪರಿವರ್ತಿಸಿದ್ದೇವೆ. ಆಸ್ಪತ್ರೆಗಳಲ್ಲಿ ಬೆಡ್‌ಗಳು ಭರ್ತಿಯಾದ ವೇಳೆ ಈ ಬಸ್‌ಗಳಲ್ಲಿ ತುರ್ತು ಚಿಕಿತ್ಸೆ ನೀಡಲಾಗುತ್ತದೆ. ಇದರಿಂದ ರೋಗಿಗಳಿಗೆ ಅನುಕೂಲ ಆಗುತ್ತದೆ. ರಾಜ್ಯದಲ್ಲಿ 100 ಆಮ್ಲಜನಕಯುಕ್ತ ಬಸ್‌ಗಳನ್ನು ತಯಾರಿಸಲು ಯೋಚಿಸಲಾಗಿದೆ. ಮುಂದಿನ ದಿನಗಳಲ್ಲಿ ಎಲ್ಲ ಜಿಲ್ಲೆಗಳಿಗೆ ಹಾಗೂ ದೊಡ್ಡ ದೊಡ್ಡ ತಾಲೂಕುಗಳಿಗೂ ಆಮ್ಲಜನಕಯುಕ್ತ ಬಸ್‌ ಒದಗಿಸಲಾಗುತ್ತದೆ. ಈ ಬಸ್‌ 5 ಆಕ್ಸಿಜನ್‌ ಬೆಡ್‌ ಹಾಗೂ 1 ವೆಂಟಿಲೇಟರ್‌ ಬೆಡ್‌ ಹೊಂದಿದೆ. ಫ್ಯಾನ್‌ ಕೂಡ ಅಳವಡಿಸಲಾಗಿದೆ. ಇದರಲ್ಲಿ ಒಬ್ಬ ವೈದ್ಯರು, ನರ್ಸ್‌, ಸಿಬ್ಬಂದಿ ಇರುತ್ತಾರೆ.

ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಸೇರಿದಂತೆ ಸಾರಿಗೆ ಇಲಾಖೆ ಅಡಿ ಬರುವ ಎಲ್ಲ ನಿಗಮಗಳ ಬಸ್‌ಗಳನ್ನು ಬಳಸಿಕೊಳ್ಳಲಾಗುತ್ತಿದೆ. ಇದೊಂದು ಉತ್ತಮ ಯೋಜನೆಯಾಗಿದ್ದು, ಬೇರೆ ಬೇರೆ ರಾಜ್ಯದವರು ಇದರ ಮಾಹಿತಿ ಪಡೆದು, ತಮ್ಮ ರಾಜ್ಯದಲ್ಲೂ ಇಂತಹ ಆಮ್ಲಜನಕಯುಕ್ತ ಬಸ್‌ ತಯಾರಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಸಂಸದ ಸಂಗಣ್ಣ ಕರಡಿ, ಶಾಸಕರಾದ ಕೆ. ರಾಘವೇಂದ್ರ ಹಿಟ್ನಾಳ, ಪರಣ್ಣ ಮುನವಳ್ಳಿ, ಹಾಲಪ್ಪ ಆಚಾರ್‌ ಹಾಗೂ ಬಸವರಾಜ ದಢೇಸುಗೂರು, ತುಂಗಭದ್ರಾ ಕಾಡಾ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಾಂತೇಶ ಪಾಟೀಲ, ಜಿಲ್ಲಾಧಿಕಾರಿ ವಿಕಾಸ್‌ ಕಿಶೋರ್‌ ಸುರಳ್ಕರ್‌, ಜಿಪಂ ಸಿಇಒ ರಘುನಂದನ್‌ ಮೂರ್ತಿ, ಎಸ್ಪಿ ಟಿ. ಶ್ರೀಧರ, ಡಿಎಚ್‌ಒ ಡಾ| ಟಿ. ಲಿಂಗರಾಜು, ಸಿ.ವಿ. ಚಂದ್ರಶೇಖರ, ಎಂ.ಎ. ಮುಲ್ಲಾ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.