ಭತ್ತ ಖರೀದಿ ಕೇಂದ್ರಕ್ಕೆ ಅಂಟಿದ ಶಾಪ ತೊಲಗೀತೇ?

ಕಳೆದ ಬಾರಿ ಐವರಿಂದಲೇ ಖರೀದಿ, ಇತಿಹಾಸದಲ್ಲೇ ಮೊದಲು ­ಕೇಂದ್ರ ತೆರೆದರೂ ಬೆದರು ಗೊಂಬೆಯೆಂಬ ಪಟ್ಟವೇ ಕಾಯಂ

Team Udayavani, Apr 24, 2021, 6:35 PM IST

hfghfghf

ವರದಿ : ಯಮನಪ್ಪ ಪವಾರ

ಸಿಂಧನೂರು: ತುಂಗಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ಹೇರಳವಾಗಿ ಭತ್ತ ಬೆಳೆಯಲಾಗುತ್ತಿದ್ದರೂ ಬೆಂಬಲ ಬೆಲೆಯಡಿ ಖರೀದಿಸುವಲ್ಲಿ ಯಶಸ್ಸನ್ನೇ ಕಂಡಿಲ್ಲ. ಖರೀದಿ ಕೇಂದ್ರಗಳು ತೆರೆದರೂ ಬೆದರಗೊಂಬೆಗಳೆಂಬ ಶಾಪಕ್ಕೆ ಗುರಿಯಾಗಿದ್ದು, ಈ ಬಾರಿಯಾದರೂ ಶಾಪ ವಿಮೋಚನೆಯಾದೀತೇ? ಎಂಬ ಪ್ರಶ್ನೆ ಎದ್ದಿದೆ.

ಎಂದಿನಂತೆ ಈ ಬಾರಿಯೂ ಸರಕಾರ 2021-22ನೇ ಸಾಲಿಗೆ ಕನಿಷ್ಠ ಬೆಂಬಲ ಬೆಲೆಯಡಿ ಭತ್ತ ಖರೀದಿ ಕೇಂದ್ರ ತೆರೆಯಲು ಹಸಿರು ನಿಶಾನೆ ತೋರಿಸಲಾಗಿದೆ. ಸಹಜವಾಗಿಯೇ ರೈತರಲ್ಲಿ ಮತ್ತೆ ನಿರೀಕ್ಷೆ ಗರಿಗೆದರಿದೆ. ಕಳೆದ ಎರಡು ದಶಕಗಳಿಂದ ಹೋರಾಟದ ಬಳಿಕ ಖರೀದಿ ಕೇಂದ್ರಗಳನ್ನು ತೆರೆಯಲಾಗುತ್ತಿತ್ತು. ಸರಕಾರ ವಿಧಿ ಸಿದ ಷರತ್ತುಗಳನ್ನು ಪೂರೈಸಲಾಗದ ಹಿನ್ನೆಲೆಯಲ್ಲಿ ರೈತರು ಖಾಸಗಿ ವರ್ತಕರ ಕಡೆಗೆ ಮುಖ ಮಾಡುತ್ತಿದ್ದರು. ಸರಕಾರ ತೆರೆದ ಅಂಗಡಿಗಳು ಆಟಕ್ಕುಂಟು ಲೆಕ್ಕಕ್ಕಿಲ್ಲದಂತಾಗುತ್ತಿದ್ದವು. 3.50 ಲಕ್ಷ ಕ್ವಿಂಟಲ್‌ನಷ್ಟು ಜೋಳವನ್ನು ಖರೀದಿ ಮಾಡಿರುವುದರಿಂದ ಅದೇ ಹುಮ್ಮಸ್ಸಿನಲ್ಲಿ ಭತ್ತವನ್ನು ಕೂಡ ಖರೀದಿ ಮಾಡುತ್ತೇವೆ ಎಂಬ ಅಭಿಪ್ರಾಯಗಳು ಆಡಳಿತ ವರ್ಗದಿಂದ ಕೇಳಿಬಂದಿದ್ದು, ಚರ್ಚೆಗೆ ನಾಂದಿ ಹಾಡಿದೆ.

ಇತಿಹಾಸದಲ್ಲೇ ಮೊದಲು, ಐದೇ ರೈತರು: ಮಾರುಕಟ್ಟೆಯಲ್ಲಿ ಬೆಲೆ ಚೇತರಿಕೆಗೆ ಪೂರಕವೆಂಬ ಕಾರಣಕ್ಕೆ ಬೆದುರುಗೊಂಬೆಯಂತೆ ಈ ಕೇಂದ್ರಗಳನ್ನು ಬಳಸಿಕೊಳ್ಳಲಾಗುತ್ತಿತ್ತು. ಈ ಬಾರಿ ಖರೀದಿ ಮಾಡೇ ತೀರುತ್ತೇವೆ ಎಂದು ಸ್ವತಃ ಅ ಧಿಕಾರಿಗಳು ಕಳೆದ ವರ್ಷ ರೈತರ ಜಮೀನುಗಳಿಗೆ ಹೋಗಿದ್ದರು. ಅಭಿಯಾನ ಮಾದರಿಯಲ್ಲಿ ಪ್ರತಿದಿನ ರೈತರ ಜಮೀನುಗಳಿಗೆ ಹೋಗಿ ಮನವೊಲಿಸಿ ಬಗ್ಗೆಯೂ ಹೇಳಿಕೊಂಡಿದ್ದರು. ಈ ಎಲ್ಲ ಕಸರತ್ತಿನ ಬಳಿಕ ಐವರು ರೈತರಿಂದ ಮಾತ್ರ ತಲಾ 75 ಕ್ವಿಂಟಲ್‌ನಂತೆ 375 ಕ್ವಿಂಟಲ್‌ ಖರೀದಿ ಮಾಡುವ ಮೂಲಕ ಒಂದೇ ಚೀಲ ಭತ್ತ ಖರೀದಿಸುವುದಿಲ್ಲವೆಂಬ ಅಪವಾದಿಂದ ಮುಕ್ತವಾಗಿದ್ದರು.

ಈ ಬಾರಿ ಮತ್ತೆ ನಿರೀಕ್ಷೆ: 2021-22ನೇ ಸಾಲಿಗೆ ಸಂಬಂಧಿ ಸಿ ಖರೀದಿ ಕೇಂದ್ರ ತೆರೆಯಲು ಸೂಚನೆ ನೀಡಲಾಗಿದೆ. ಸಾಮಾನ್ಯ ಭತ್ತ ಪ್ರತಿ ಕ್ವಿಂಟಲ್‌ಗೆ 1,868 ರೂ., ಎ.ಗ್ರೇಡ್‌ ಭತ್ತ ಕ್ವಿಂಟಲ್‌ಗೆ 1,888 ರೂ.ನಂತೆ ಖರೀದಿಸಬೇಕಿದೆ. ಕರ್ನಾಟಕ ಆಹಾರ ನಿಗಮದ 5 ಮಳಿಗೆಗಳು ಸೇರಿದಂತೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳನ್ನು ಒಳಗೊಂಡು ಜಿಲ್ಲೆಯಲ್ಲಿ 35 ಕೇಂದ್ರಗಳನ್ನು ನೋಂದಣಿಗೆ ಗುರುತಿಸಲಾಗಿದೆ. ಏ.1ರಿಂದಲೇ ಅನ್ವಯಿಸುವಂತೆ ಕೃಷಿ ಇಲಾಖೆಯ  ಐಡಿಯ ಪ್ರಕಾರ ಹೆಸರುಗಳನ್ನು ರೈತರು ನಮೂದಿಸಬೇಕಿದೆ.

ಏ.1ರಿಂದ ಜೂನ್‌, 30, 2021ರ ತನಕ ಖರೀದಿ ನಡೆಯಲಿದೆ. ಮಾರುಕಟ್ಟೆಯಲ್ಲಿ ಆರ್‌ಎನ್‌ಆರ್‌ ದರ ಪ್ರತಿ ಕ್ವಿಂಟಲ್‌ಗೆ 1,650 ರೂ. ನಂತಿದ್ದರೆ, ಕಾವೇರಿ ಸೋನಾಕ್ಕೆ 1,700 ರೂ. ಸಿಗುತ್ತಿದೆ. ಬೆಂಬಲ ಬೆಲೆಗೂ ಮುಕ್ತ ಮಾರುಕಟ್ಟೆಯ ದರಕ್ಕೂ ವ್ಯತ್ಯಾಸ ಇರುವುದರಿಂದ ಖರೀದಿ ನಡೆದರೆ, ರೈತರಿಗೆ ಅನುಕೂಲವಾಗಲಿದೆ. ಕಳೆದ ಬಾರಿ ಸಮರೋಪಾದಿಯಲ್ಲಿ ಕೆಲಸ ಆರಂಭಿಸಿದಾಗಲೂ ವಿಫಲವಾಗಿದ್ದ ಆಡಳಿತ ವರ್ಗ, ಈ ಸಲವಾದರೂ ಭತ್ತ ಖರೀದಿಯ ಮೂಲಕ ರೈತರಲ್ಲಿ ನಿರೀಕ್ಷೆ ಮೂಡಿಸುವುದೇ? ಎಂಬುದನ್ನು ಕಾದು ನೋಡಬೇಕಿದೆ.

 

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.