ಒಗ್ಗಟ್ಟಿನಿಂದ ಹೋರಾಡಿದರೆ ಮೀಸಲಾತಿ ಸಾಧ್ಯ  

ಸಾಮಾಜಿಕ-ಶೈಕ್ಷಣಿಕ ಪ್ರಗತಿಗಾಗಿ ಮೀಸಲಾತಿ­! ಸ್ವಾಮಿಗಳಿಗೆ ಕೈಜೋಡಿಸಿ ಶಕ್ತಿ ಪ್ರದರ್ಶಿಸಿ

Team Udayavani, Feb 8, 2021, 7:58 PM IST

Panchamasali

ಕಾರಟಗಿ: ಪಂಚಮಸಾಲಿ ಸಮುದಾಯದ 2ಎ ಮೀಸಲಾತಿ ಹೋರಾಟ ಈಗಾಗಲೇ ನಿರ್ಣಾಯಕ ಘಟ್ಟ ತಲುಪಿದ್ದು, ಸರ್ಕಾರ 2ಎ ಮೀಸಲಾತಿ ನೀಡಬೇಕಾದರೆ ಸಮುದಾಯದವರೆಲ್ಲರೂ ಒಗ್ಗೂಡಿ ಹೋರಾಟ ಮಾಡಬೇಕಿದೆ ಎಂದು ಪಂಚಮಸಾಲಿ ಸಮಾಜದ ತಾಲೂಕು ಅಧ್ಯಕ್ಷ ಚನ್ನಬಸಪ್ಪ ಸುಂಕದ ಹೇಳಿದರು.

ಪಟ್ಟಣದ ಎಲ್‌ವಿಟಿ ಕಲ್ಯಾಣ ಮಂಟಪದಲ್ಲಿ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಲು ಒತ್ತಾಯಿಸಿ ತಾಲೂಕು ಪಂಚಮಸಾಲಿ ಸಮುದಾಯದಿಂದ ರವಿವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಸಮುದಾಯಕ್ಕೆ ಮೀಸಲಾತಿ ಪಡೆಯಲು ಹರಿಹರ ಪೀಠದ ವಚನಾನಂದ ಸ್ವಾಮೀಜಿ ಹಾಗೂ ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಸ್ವಾಮಿಗಳು ಒಂದಾಗಿದ್ದಾರೆ. ಈ ಮೂಲಕ ನಮ್ಮಲ್ಲಿ ಭಿನ್ನಭಿಪ್ರಾಯಗಳಿಲ್ಲ ಎಂಬ ಸಂದೇಶ ಸಾರಿದ್ದಾರೆ. ನಾವೆಲ್ಲರೂ ಅವರಿಗೆ ಕೈ ಜೋಡಿಸುವ ಮೂಲಕ ಹೋರಾಟಕ್ಕೆ ಬಲ ತುಂಬಬೇಕಿದೆ. ಸಾಮಾಜಿಕ ಹಾಗೂ ಶೈಕ್ಷಣಿಕ ಅಭಿವೃದ್ಧಿಗಾಗಿ ಮೀಸಲಾತಿ ಕೇಳುತ್ತಿದ್ದೇವೆ. ಈವರೆಗೆ ಶಾಂತಿಯುತ ಹೋರಾಟ ಹಮ್ಮಿಕೊಂಡಿದ್ದೇವೆ. ಸರ್ಕಾರ ಸಮುದಾಯದ ತಾಳ್ಮೆ ಪರೀಕ್ಷಿಸಬಾರದು.

ಸಮುದಾಯದ ಶಾಸಕರು ಹಾಗೂ ಸಂಸದರು ಮೀಸಲಾತಿ ವಿಚಾರದಲ್ಲಿ ಯಾವ ಮುಲಾಜಿಗೂ ಬಗ್ಗದೆ ಸರ್ಕಾರದ ಮೇಲೆ ಒತ್ತಡ ತರುವ ಕಾರ್ಯ ಮಾಡಬೇಕು. ಜನಪ್ರತಿನಿ ಧಿಗಳು, ಸಮುದಾಯದ ಮುಖಂಡರು ಒಗ್ಗಟ್ಟಿನ ಹೋರಾಟ ಮಾಡಿದರೆ ಜಯ ಖಂಡಿತ ದೊರೆಯುತ್ತದೆ ಎಂದರು.

ನಂತರ ಉಪನ್ಯಾಸ ಶಿವಾನಂದ ಮೇಟಿ ಮಾತನಾಡಿ, ಮೀಸಲಾತಿ ಪಡೆಯುವುದರಿಂದ ಮುಂದಿನ ಪೀಳಿಗೆಗೆ ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ಅನುಕೂಲವಾಗುತ್ತದೆ ಹಾಗಾಗಿ ಸಮಾಜ ಬಾಂಧವರು ಸಮಾಜದ ಸ್ವಾಮಿಗಳ ಜೊತೆಯಲ್ಲಿ ಕೈಜೋಡಿಸಿ ನಮ್ಮ ಶಕ್ತಿಯನ್ನು ಪ್ರದರ್ಶನ ಮಾಡಬೇಕಾಗಿದೆ. ಹೀಗಾಗಿ ಸಮಾಜ  ಬಾಂಧವರು ಸಮಾವೇಶದಲ್ಲಿ ಹೆಚ್ಚಿನ  ಸಂಖ್ಯೆಯಲ್ಲಿ ಪಾಲ್ಗೊಂಡು ಶಾಂತಿಯುತವಾಗಿ ಹೋರಾಟ ಮಾಡುವ ಮೂಲಕ ಮೀಸಲಾತಿ ಪಡೆದುಕೊಳ್ಳೊಣ ಎಂದರು.

ಸಮುದಾಯದ ಮುಖಂಡರಾದ ವಿರೂಪಾಕ್ಷಪ್ಪ ಕಟಾಂಬ್ಲಿ, ಕರಿಬಸಪ್ಪ ಶೀಲವಂತರ, ಗುರುಸಿದ್ದಪ್ಪ ಯರಕಲ್‌, ಅಮರೇಶ ಕುಳಗಿ, ಶರಣೇಗೌಡ ಬೂದಗುಂಪಾ, ಪರನಗೌಡ ಸೇರಿದಂತೆ ಇತರರು ಮಾತನಾಡಿ, ಸರಕಾರ ಸಮದಾಯದ ತಾಳ್ಮೆ, ಸಹನೆ ಪರೀಕ್ಷಿಸುವ ಕೆಲಸ ಮಾಡಬಾರದು. ಸರಕಾರದ ಮೇಲೆ ಭರವಸೆ ಇಟ್ಟು ಶಾಂತಿಯುತವಾಗಿ ಹೋರಾಟ ಮಾಡುತ್ತೇವೆ. ಇದು ಇಂದು ನಿನ್ನೆಯ ಬೇಡಿಕೆಯಲ್ಲ, ಬಹುದಿಗಳ ಬೇಡಿಕೆಯಾಗಿದ್ದು ಸರಕಾರಗಳು ಕೇವಲ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತ ಬಂದಿವೆ. ಈಗ ಅವೆಲ್ಲವನ್ನು ಬಿಟ್ಟು ಈ ಕೂಡಲೇ ಸರಕಾರ ಪಂಚಮಸಾಲ ಸಮಾಜಕ್ಕೆ 2ಎ ಮೀಸಲಾಯಿತಿ ನೀಡಬೇಕು. ಒಂದು ವೇಳೆ ಮೀಸಲಾತಿ ನೀಡದಿದ್ದರೆ ಮುಂದಿನ ದಿನ ಹೋರಾಟ ಉಗ್ರ ಸ್ವರೂಪ ತಾಳಲಿದೆ ಎಂದು ಸರಕಾರಕ್ಕೆ ಎಚ್ಚರಿಕೆ ನೀಡಿದರು.

ಇದನ್ನೂ ಓದಿ :ಕಸಾಪ ಜನಪರ ಮಾಡುವೆ: ಜೋಶಿ

ಸಮಾಜದ ಮುಖಂಡರಾದ ಗುಂಡಪ್ಪ ಕುಳಗಿ, ಬಸವರಾಜಪ್ಪ ಚಳ್ಳೂರು, ಚಂದ್ರಶೇಖರ  ಪೊಲೀಸಪಾಟೀಲ್‌, ಎಪಿಎಂಸಿ ಅಧ್ಯಕ್ಷ ಸೋಮಶೇಖರಗೌಡ, ನಾಗಪ್ಪ ಎಲ್‌ವಿಟಿ, ಎಚ್‌. ಈಶಪ್ಪ, ಆನಂದಪ್ಪ ಅಬ್ಬಿಗೇರಿ, ರವಿಕುಮಾರ ಗುಂಡೂರು, ನಾಗರಾಜ ಬರಗೂರು, ಸಿದ್ಧನಗೌಡ ಕತ್ತಿ, ವೀರಣ್ಣ ಗೋನಾಳ, ಬಜಾರ ಲಿಂಗಪ್ಪ ಸೇರಿದಂತೆ ತಾಲೂಕಿನ ಸಮಾಜದ ಹಿರಿಯರು, ಯುವಕರು, ಮಹಿಳೆಯರು ಇತರರಿದ್ದರು.

 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.